Asianet Suvarna News Asianet Suvarna News

National Start-up Day ಐಟಿ-ಬಿಟಿಯಲ್ಲಿ ದೇಶದಲ್ಲೇ ಕರ್ನಾಟಕ ಪ್ರಥಮ ಸ್ಥಾನ

* ಸ್ಟಾರ್ಟ್ ಅಪ್ ದಿನಾಚರಣೆಯ ಭಾಷಣ ಮುಖ್ಯಾಂಶಗಳು
* ಐಟಿ-ಬಿಟಿಯಲ್ಲಿ ದೇಶದಲ್ಲೇ ಕರ್ನಾಟಕ ಪ್ರಥಮ ಸ್ಥಾನ
* ನವೋದ್ಯಮಿಗಳಿಗೆ ಆರ್ಥಿಕ ನೆರವು ಘೋಷಿಸಿದ ಸಿಎಂ

CM Basavaraj Bommai Speech on  National Start up Day rbj
Author
Bengaluru, First Published Jan 16, 2022, 11:33 PM IST

ಬೆಂಗಳೂರು, (ಜ.16): ಭವಿಷ್ಯದಲ್ಲಿ ದೇಶದ ಆರ್ಥಿಕತೆಯಲ್ಲಿ ಕರ್ನಾಟಕ(Karnataka) ದೊಡ್ಡ ಪಾತ್ರವನ್ನು ವಹಿಸಲಿದೆ. ದೇಶದ 54000 ಸ್ಟಾರ್ಟ್ ಅಪ್​ಗಳಲ್ಲಿ 13000 ಕರ್ನಾಟಕದಲ್ಲಿ ಪ್ರಾರಂಭವಾಗಿರುವುದು ಹೆಮ್ಮೆಯ ವಿಷಯ. ಸ್ಟಾರ್ಟ್ ಅಪ್​ಗಳ (Start up) ಸ್ಥಾಪನೆಯ ಉತ್ತೇಜನಕ್ಕಾಗಿ ಕರ್ನಾಟಕ ಸರ್ಕಾರ ಹಲವಾರು ಕ್ರಮಗಳನ್ನು ತೆಗೆದುಕೊಂಡಿದ್ದು, ಸ್ಟಾರ್ಟ್ ಅಪ್ (Start up) ಸೆಲ್ ಮೂಲಕ ಮಾರ್ಗದರ್ಶನ, ವೈಜ್ಞಾನಿಕ ಬೆಂಬಲ ನೀಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಈ ಮೂಲಕ ನವಭಾರತಕ್ಕಾಗಿ, ನವಕರ್ನಾಟಕ ನಿರ್ಮಾಣದ ಪರಿಕಲ್ಪನೆಯನ್ನು ಸಾಕಾರಗೊಳಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದ್ದಾರೆ.

ಇಂದು(ಸೋಮವಾರ) ಸ್ಟಾರ್ಟ್ ಅಪ್ ದಿನಾಚರಣೆಯ (Start up Day ) ಅಂಗವಾಗಿ ಆನ್​ಲೈನ್​ ಮೂಲಕ ಸಿಎಂ ಬಸವರಾಜ​ ಬೊಮ್ಮಾಯಿ ಪ್ರತಿಕ್ರಿಯಿಸಿ, ಪ್ರಧಾನಮಂತ್ರಿಯವರ ಅಭಿಲಾಷೆಯಂತೆ ಸ್ಟಾರ್ಟ್ ಅಪ್ ದಿನಾಚರಣೆಯನ್ನು  ರಾಜ್ಯದಲ್ಲಿ ಇಂದು ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಬರುವ ವರ್ಷದಲ್ಲಿ ಸರ್ಕಾರ ನವೋದ್ಯಮಗಳಿಗೆ, ಉದ್ಯಮಶೀಲತೆಗೆ, ವೈಜ್ಞಾನಿಕ ಚಿಂತನೆಗೆ ಸಂಪೂರ್ಣ ಬೆಂಬಲ ನೀಡುವುದು ಈ ವೇಳೆ ಎಂದು ಹೇಳಿದರು.

National Startup Day: 200 ಸ್ಟಾರ್ಟ್ ಅಪ್ ಗಳಿಗೆ ತಲಾ 50 ಲಕ್ಷದವರೆಗೆ ಮೂಲನಿಧಿ, ಅಶ್ವತ್ಥ್ ನಾರಾಯಣ

ಪ್ರಧಾನಮಂತ್ರಿಯವರ ದೂರದೃಷ್ಟಿಯ ಫಲವಾಗಿ ದೇಶದಲ್ಲಿ 500 ರ ಆಸುಪಾಸಿನಲ್ಲಿದ್ದ ಸ್ಟಾರ್ಟ್ ಅಪ್​ಗಳ  ಇಂದು 54000ದ ಗಡಿ ದಾಟಿದೆ. ಸರ್ಕಾರದ ಕಟ್ಟುಪಾಡುಗಳಿಂದ ಮುಕ್ತಿಗೊಳಿಸಿ ಇನ್ನೊವೇಶನ್, ನವೋದ್ಯಮಗಳಿಗೆ ಸಹಾಯ ಒದಗಿಸಲು ಒಂದು ವೇದಿಕೆಯನ್ನು ಸ್ಟಷ್ಟಿ ಮಾಡುವ ಮೂಲಕ ಸ್ಟಾರ್ಟ್ ಅಪ್​ಗಳ ಸ್ಥಾಪನೆಗೆ ಪ್ರೋತ್ಸಾಹಿಸಿದ್ದಾರೆ. ಕರ್ನಾಟಕದಲ್ಲಿ ಅತಿ ಹೆಚ್ಚು ಸ್ಟಾರ್ಟ್ ಅಪ್​ಗಳ ಬೆಳವಣಿಗೆಗೆ ಮಾನ್ಯ ಪ್ರಧಾನಮಂತ್ರಿಗಳೇ ಪ್ರೇರಣೆಯಾಗಿದ್ದಾರೆ. ಸ್ಟಾರ್ಟ್ ಅಪ್​ಗಳಲ್ಲಿ ತೊಡಗಿರುವ ರಾಜ್ಯದ ಎಲ್ಲ ಯುವಕರ ಪರವಾಗಿ ಪ್ರಧಾನಮಂತ್ರಿಗಳಿಗೆ ಧನ್ಯವಾದಗಳನ್ನು ಅರ್ಪಿಸುವೆ ಎಂದರು.

ಐಟಿಬಿಟಿಯಲ್ಲಿ ದೇಶದಲ್ಲಿ ಕರ್ನಾಟಕ ಪ್ರಥಮ ಸ್ಥಾನ
ಕರ್ನಾಟಕ ಐಟಿಬಿಟಿ ಕ್ಷೇತ್ರದಲ್ಲಿ ದೇಶದಲ್ಲಿ ಮೊದಲ ಸ್ಥಾನದಲ್ಲಿದೆ. 80 ರ ದಶಕದಲ್ಲಿ ಮೊದಲ ಸಾಫ್ಟ್ ವೇರ್ ಕಂಪನಿ ಕರ್ನಾಟಕದಲ್ಲಿ ಪ್ರಾರಂಭವಾಯಿತು. ಅಂದಿನಿಂದ ಇಂದಿನವರೆಗೂ ರಾಜ್ಯದಲ್ಲಿ ಈ ಕ್ಷೇತ್ರದಲ್ಲಿ ಬೆಳೆದಿದ್ದು, ಐಟಿಬಿಟಿಗಳ ರಫ್ತು ಕರ್ನಾಟಕದಿಂದ ಹೆಚ್ಚಿನ ಪ್ರಮಾಣದಲ್ಲಿ ಆಗುತ್ತಿದೆ ಎಂದು ಸಿಎಂ ಬೊಮ್ಮಾಯಿ  ವಿವರಿಸಿದರು.

ನವೋದ್ಯಮಿಗಳಿಗೆ ಆರ್ಥಿಕ ನೆರವು
ಎಲಿವೇಟ್ 100, ಎಸ್​ಸಿಎಸ್​ಟಿಯವರಿಗೆ ಎಲಿವೇಟ್ ಉನ್ನತಿ ಕಾರ್ಯಕ್ರಮಗಳ ಮೂಲಕ ನವೋದ್ಯಮಿಗಳಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ. ಅಮೃತ ನವೋದ್ಯಮ ಯೋಜನೆಯಡಿ ಓಬಿಸಿ ಹಾಗೂ ಅಲ್ಪಸಂಖ್ಯಾತರ 75 ಸ್ಟಾರ್ಟ್ ಅಪ್​ಗಳಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ. ಮಹಿಳಾ ನವೋದ್ಯಮಿಗಳಿಗೆ ಉತ್ತೇಜಿಸಲು ಎಲಿವೇಟ್ 25 ಸ್ಟಾರ್ಟ್ ಅಪ್​ಗಳಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ. ರಾಜ್ಯದಲ್ಲಿ 482 ಸ್ಟಾರ್ಟ್ ಅಪ್​ಗಳಿಗೆ 120 ಕೋಟಿ ರೂ.ಗಳ ಆರ್ಥಿಕ ನೆರವು ನೀಡಲಾಗಿದೆ ಎಂದು ಸಿಎಂ ಬಸವರಾಜ್​ ಬೊಮ್ಮಾಯಿ ತಿಳಿಸಿದ್ದಾರೆ.

ಬಿಯಾಂಡ್ ಬೆಂಗಳೂರು
ಬಿಯಾಂಡ್ ಬೆಂಗಳೂರು ಯೋಜನೆಯಡಿ ರಾಜ್ಯದ ಜಿಲ್ಲೆಗಳಲ್ಲಿ ನವೋದ್ಯಮ, ಐಟಿ ಬಿಟಿ, ಸ್ಟಾರ್ಟ್ ಅಪ್​ಗಳನ್ನು ಪ್ರಾರಂಭಿಸುವ ಚಿಂತನೆಯಿದೆ. ರಾಜ್ಯದಲ್ಲಿ ನೂತನ ಆರ್ ಎಂಡ್ ಡಿ ನೀತಿಯನ್ನು ಪ್ರಾರಂಭಿಸಿ, ಸಣ್ಣ ಮಟ್ಟದ ಗ್ಯಾರೇಜಿನಿಂದ ಹಿಡಿದು ದೊಡ್ಡ ಕೈಗಾರಿಕೆವರೆಗೂ ವೈಜ್ಞಾನಿಕ ಸಂಶೋಧನೆಗೆ ಸಹಕಾರ ನೀಡಲಾಗುವುದು ಎಂದು ಎಂದು ಸಿಎಂ ಬಸವರಾಜ್​ ಬೊಮ್ಮಾಯಿ ಹೇಳಿದ್ದಾರೆ.

ಶಾಲೆಗಳಲ್ಲಿ ಸಂಶೋಧನೆ ಹಾಗೂ ನವೋದ್ಯಮಕ್ಕೆ ಭದ್ರ ಬುನಾದಿ
ಶಾಲೆಗಳಲ್ಲಿ ವೈಜ್ಞಾನಿಕ ಚಿಂತನೆ, ಉದ್ಯಮಶೀಲತೆಗೆ ಉತ್ತೇಜನ ನೀಡಲು ಶಾಲೆಗಳ ಪಠ್ಯಪುಸ್ತಕದಲ್ಲಿ ಈ ವಿಷಯಗಳನ್ನು ಸೇರಿಸಲು ತೀರ್ಮಾನಿಸಲಾಗಿದೆ. 150 ಐಟಿಐಗಳನ್ನು ಉನ್ನತೀಕರಿಸಲಾಗಿದೆ. ಡಿಪ್ಲೊಮಾ ಕಾಲೇಜುಗಳನ್ನು ಉನ್ನತೀಕರಿಸಲು ಯೋಜಿಸಲಾಗಿದೆ. ಶಾಲೆ ಕಾಲೇಜುಗಳಲ್ಲಿ ವೈಜ್ಞಾನಿಕ ಚಿಂತನೆ ಸಂಶೋಧನೆ ಹಾಗೂ ನವೋದ್ಯಮಕ್ಕೆ ಭದ್ರ ಬುನಾದಿ ಹಾಕುವ ಮಹಾತ್ವಾಕಾಂಕ್ಷೆಯ ಯೋಜನೆಯನ್ನು ಸರ್ಕಾರ ತರಲಿದೆ ಎಂದು ಸಿಎಂ ಬಸವರಾಜ್​ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರು ನಗರದಲ್ಲಿ 180 ಕ್ಕೂ ಹೆಚ್ಚು ವಿವಿಧ ಕ್ಷೇತ್ರಗಳಲ್ಲಿ ಸಂಶೋಧನಾ ಕೇಂದ್ರಗಳಿವೆ. ಕೃಷಿ, ತೋಟಗಾರಿಕೆ, ರೇಷ್ಮೆ ಉದ್ಯಮ, ಹೆಚ್ಚು ಉದ್ಯೋಗ ಸೃಜಿಸುವಂತಹ ಕ್ಷೇತ್ರಗಳಲ್ಲಿ ಸ್ಟಾರ್ಟ್ ಅಪ್​ಗಳು ಬರಬೇಕೆನ್ನುವ ಚಿಂತನೆ ಸರ್ಕಾರ ಹೊಂದಿದೆ. ಸಾಮಾಜಿಕ ಜವಾಬ್ದಾರಿಯಿಂದ ಶಿಕ್ಷಣ, ಆರೋಗ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಕ್ಷೇತ್ರಗಳಲ್ಲಿ ಸ್ಟಾರ್ಟ್ ಅಪ್​ಗಳು ಹೆಚ್ಚು ಬರಬೇಕೆನ್ನುವ ಆಶಯವನ್ನು ಸಿಎಂ ಬೊಮ್ಮಾಯಿ ವ್ಯಕ್ತಪಡಿಸಿದರು.

Follow Us:
Download App:
  • android
  • ios