Asianet Suvarna News Asianet Suvarna News

BSY ಬಜೆಟ್‌ಗೆ ಕಾಂಗ್ರೆಸ್ ನಾಯಕರ ಖಡಕ್ ಪ್ರತಿಕ್ರಿಯೆ!

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಂಡಿಸಿದ 7 ಬಜೆಟ್‌ಗಳ ಪೈಕಿ ಈ ಬಾರಿ ಮಂಡಿಸಿದ ಬಜೆಟ್ ಅತ್ಯಂತ ನೀರಸ ಬಜೆಟ್ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಬಾರಿಯ ಬಜೆಟ್‌ನಲ್ಲಿ ಯಾರಿಗೂ ಯಾವುದೇ ಪ್ರಯೋಜನವಿಲ್ಲ ಎಂದಿದೆ. ಬಜೆಟ್ ಕುರಿತು ಕಾಂಗ್ರೆಸ್ ನಾಯಕ ಪ್ರತಿಕ್ರಿಯೆ ಇಲ್ಲಿದೆ. 

Congress leaders reaction on Karnataka budget 2020
Author
Bengaluru, First Published Mar 5, 2020, 8:40 PM IST

ಬೆಂಗಳೂರು(ಮಾ.05) ರಾಜ್ಯದ ಎಲ್ಲಾ ವರ್ಗದ ಜನರಿಗೆ ಮುಟ್ಟುವಂತ ಯಾವುದೇ ಯೋಜನೆಗಳಿಲ್ಲ. ಸ್ವತಃ ಯಡಿಯೂರಪ್ಪನವರೇ ಕೇಂದ್ರದ ಅನ್ಯಾಯವಾಗಿದೆ ಎಂದು ಬಜೆಟ್ ಮಂಡನೆಯಲ್ಲಿ ಹೇಳಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.

"
ಯಡಿಯೂರಪ್ಪ ಮಂಡಿಸಿರುವ ಬಜೆಟ್ ಅತ್ಯಂತ ನಿರಾಶಾದಾಯಕ ಬಜೆಟ್ ಆಗಿದೆ. ರೈತರ ಹೆಸರಿನಲ್ಲಿ ರೈತರಿಗೆ ಮೋಸ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ಈಶ್ವರ್ ಖಂಡ್ರೆ ಹೇಳಿದ್ದಾರೆ.

"

ಕೋಟಿ ಕೋಟಿ ಮೀಸಲಿಡುತ್ತೇವೆ, ಅತ್ಯುತ್ತಮ ಬಜೆಟ್ ಮಂಡಿಸುತ್ತೇವೆ ಎಂದಿದ್ದ ಬಿಜೆಪಿ ಇದೀಗ ರಾಜ್ಯ ಜನರಿಕೆ ನಿರಾಸೆ ಮಾಡಿದೆ. ನೀರಾವರಿಗೆ ಮೀಸಲಿಟ್ಟ ಹಣ ಎಳ್ಳಷ್ಟು ಸಾಕಾಗುವುದಿಲ್ಲ ಎಂದು ಕಾಂಗ್ರೆಸ್ ನಾಯಕ ಎಂ.ಬಿ ಪಾಟೀಲ್ ಹೇಳಿದ್ದಾರೆ.

"

Follow Us:
Download App:
  • android
  • ios