Asianet Suvarna News Asianet Suvarna News

'ಜಿಎಸ್‌ಟಿ ವ್ಯಾಪ್ತಿಗೆ ಪೆಟ್ರೋಲಿಯಂ ಉತ್ಪನ್ನ, ರಾಜ್ಯಗಳ ಪಾಲಿಗೆ ಮರಣಶಾಸನ'

ಒಂದೆಡೆ ತೈಲ ಬೆಲೆ ಏರಿಕೆಯಿಂದ ಗ್ರಾಹಕರು ಕಂಗಾಲು| ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೊಳಪಡಿಸುವುದು ಬೇಡ ಎಂದ ಎಚ್‌ಡಿಕೆ| ಪೆಟ್ರೋಲಿಯಂ ಉತ್ಪನ್ನಗಳೇನಾದರೂ GSTಗೆ ಒಳಪಟ್ಟರೆ ಅದು ರಾಜ್ಯಗಳ ಪಾಲಿಗೆ ಮರಣಶಾಸನ

HD Kumaraswamy opposes Bringing Petroleum products under GST pod
Author
Bangalore, First Published Mar 7, 2021, 12:18 PM IST

ಬೆಂಗಳೂರು(ಮಾ.07): ಒಂದೆಡೆ ತೈಲ ಬೆಲೆ ಏರಿಕೆ ಗ್ರಾಹಕರನ್ನು ಕಂಗಾಲುಗೊಳಿಸಿದೆ. ಹೀಗಿರುವಾಗಲೇ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೊಳಪಡಿಸಬೇಕೆಂಬ ಮಾತುಗಳೂ ಕೇಳಿ ಬಂದಿದೆ. ಹೀಗಿರುವಾಗಲೇ ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಸರಣಿ ಟ್ವೀಟ್‌ಗಳನ್ನು ಮಾಡಿ, ಇಂತಹುದ್ದೊಂದು ನಿರ್ಧಾರ ಜಾರಿಗೊಳಿಸದಂತೆ ಮನವಿ ಮಾಡಿದ್ದಾರೆ. ಅಲ್ಲದೇ ಪೆಟ್ರೋಲಿಯಂ ಉತ್ಪನ್ನಗಳೇನಾದರೂ GSTಗೆ ಒಳಪಟ್ಟರೆ ಅದು ರಾಜ್ಯಗಳ ಪಾಲಿಗೆ ಮರಣಶಾಸನವಾಗಲಿದೆ ಎಂದೂ ಎಚ್ಚರಿಸಿದ್ದಾರೆ.

ತೈಲ ಬೆಲೆ ಏರಿಕೆ ನಡುವೆ, ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿಗೊಳಪಡಿಸಬೇಕೆಂಬ ಕೂಗಿನ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಎಚ್. ಡಿ. ಕುಮಾರಸ್ವಾಮಿ ತೈಲ ದರ ಏರಿಕೆ ವಿರುದ್ಧ ಜನರ ಆಕ್ರೋಶವನ್ನೇ ಬಳಸಿಕೊಂಡು, ದರ ಇಳಿಸುವ ನೆಪದಲ್ಲಿ ಪೆಟ್ರೋಲಿಯಂ ಉತ್ಪನ್ನಗಳನ್ನು GSTಗೆ ಸೇರಿಸುವ ಹುನ್ನಾರವನ್ನು ಕೇಂದ್ರ ಸರ್ಕಾರ ವ್ಯವಸ್ಥಿತವಾಗಿ ನಡೆಸುತ್ತಿದೆ. ಈ ಬಗೆಗಿನ ಚರ್ಚೆಗಳನ್ನು ಹುಟ್ಟುಹಾಕುತ್ತಿದೆ. ಪೆಟ್ರೋಲಿಯಂ ಉತ್ಪನ್ನಗಳೇನಾದರೂ GSTಗೆ ಒಳಪಟ್ಟರೆ ಅದು ರಾಜ್ಯಗಳ ಪಾಲಿಗೆ ಮರಣಶಾಸನವಾಗಲಿದೆ ಎಂದು ಎಚ್ಚರಿಸಿದ್ದಾರೆ.

ಅಲ್ಲದೇ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಸೆಸ್‌ ರಾಜ್ಯಗಳ ಪ್ರಮುಖ ಆದಾಯದ ಮೂಲಗಳಲ್ಲೊಂದು. ಕೇಂದ್ರ ಸರ್ಕಾರ ಮಿತಿ ಮೀರಿದ ತೆರಿಗೆ ವಿಧಿಸುತ್ತದೆ ಮತ್ತು ರಾಜ್ಯಗಳಿಗಿಂತಲೂ ಅಧಿಕ ಆದಾಯವನ್ನು ಸಂಗ್ರಹಿಸುತ್ತದೆ. ಈಗ ಅದೂ ಸಾಲದು ಎಂಬಂತೆ ಪೆಟ್ರೋಲಿಯಂ ಅನ್ನು GSTಗೆ ತಂದು ರಾಜ್ಯಗಳು ಪಡೆಯುತ್ತಿರುವ ಆದಾಯವನ್ನೂ ಲಪಟಾಯಿಸುವ ತಂತ್ರವನ್ನು ಮಾಡಿದೆ ಎಂದು ಕೇಂದ್ರದ ನಡೆಯನ್ನು ಖಂಡಿಸಿದ್ದಾರೆ.


ಇಷ್ಟೇ ಅಲ್ಲದೇ ಈಗಾಗಲೇ ಜಿಎಸ್‌ಟಿ ಬಾಕಿ ಉಳಿಸಿಕೊಂಡು ರಾಜ್ಯಗಳನ್ನು ಸತಾಯಿಸುತ್ತಿರುವ ಕೇಢಂದ್ರದ ನಡೆಯನ್ನೂ ಉಲ್ಲೇಖಿಸಿರುವ ಎಚ್‌ಡಿಕೆ ರಾಜ್ಯಗಳು GST ವ್ಯವಸ್ಥೆಗೆ ಒಪ್ಪಿಗೆ ನೀಡಿದ ನಂತರ ನೀಡಬೇಕಿದ್ದ ಪಾಲು, ಪರಿಹಾರವನ್ನು ಕೇಂದ್ರ ಈ ವರೆಗೆ ಸರಿಯಾಗಿ ಕೊಟ್ಟೇ ಇಲ್ಲ. ಸಾವಿರಾರು ಕೋಟಿ ಬಾಕಿಯನ್ನು ಇನ್ನೂ ಉಳಿಸಿಕೊಂಡಿದೆ. ಬಾಕಿಗಾಗಿ ರಾಜ್ಯಗಳು ಕೇಂದ್ರವನ್ನು ಬೇಡಾಡಿ ಬಸವಳಿದಿವೆ. ಈಗ ಪೆಟ್ರೋಲಿಯಂ ಆದಾಯವನ್ನು ಕೇಂದ್ರಕ್ಕೆ ಒಪ್ಪಿಸಿದರೆ ರಾಜ್ಯಗಳ ಪಾಡು ಶೋಚನೀಯವಾಗಲಿದೆ ಎಂದು ಪುನರುಚ್ಛರಿಸಿದ್ದಾರೆ.

ಕೇಮ=ವಲ ರಾಜ್ಯಗಳಿಳು ಮಾತ್ರವಲ್ಲದೇ ಜನಸಾಮಾನ್ಯರೂ ಇದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದಿರುವ ಎಚ್‌ಡಿಕೆ ರಾಜ್ಯಗಳು ಆದಾಯವಿಲ್ಲದೇ, ಅಭಿವೃದ್ಧಿ ಕಾರ್ಯಗಳಿಗೆ ಅನುದಾನವಿಲ್ಲದೇ ಸಂಕಷ್ಟ ಅನುಭವಿಸಬೇಕಾಗುತ್ತದೆ. ಕೊನೆಗೆ ಕೊರತೆ ಬಜೆಟ್‌ ಮಂಡಿಸಬೇಕಾಗುತ್ತದೆ. ಅಥವಾ, ಬಜೆಟ್‌ ಗಾತ್ರವನ್ನೇ ಇಳಿಸಬೇಕಾದ ಸಂದರ್ಭ ಬರಲಿದೆ. ಇದು ಅಭಿವೃದ್ಧಿ ವಿಚಾರದಲ್ಲಿ ಹಿಂದಕ್ಕೆ ಓಡಿದಂತೆ. ಪ್ರತಿಯೊಬ್ಬ ಪ್ರಜೆಯೂ ಇದರ ದುಷ್ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದಿದ್ದಾರೆ. ಇದೇ ವೇಳೆ ಕೇಂದ್ರ ಸರ್ಕಾರ ತೆರಿಗೆ ಇಳಿಸಬೇಕು ಎಂದಿರುವ ಕುಮಾರಸ್ವಾಮಿ ತೈಲ ಬೆಲೆ ಇಳಿಸುವ ಕಾಳಜಿ ಕೇಂದ್ರಕ್ಕೆ ಇದ್ದಲ್ಲಿ ತಾನು ವಿಧಿಸುತ್ತಿರುವ ತೆರಿಗೆಯನ್ನು ಈ ಕೂಡಲೇ ತಗ್ಗಿಸಲಿ. ನಂತರ ರಾಜ್ಯಗಳಿಗೂ ತೆರಿಗೆ ತಗ್ಗಿಸಲು ಹೇಳಲಿ. ಅದು ಬಿಟ್ಟು ರಾಜ್ಯಗಳ ಪಾಲಿನ ಹಣಕ್ಕೂ ಕೇಂದ್ರ ಸರ್ಕಾರ ಕೈ ಇಡಬಾರದು. ರಾಜ್ಯಗಳು ಚೆನ್ನಾಗಿದ್ದರೆ, ದೇಶವೂ ಚೆನ್ನಾಗಿರುತ್ತದೆ. ರಾಜ್ಯಗಳನ್ನು ಶೋಷಿಸಿ ದೇಶ ಕಟ್ಟಲಾಗುತ್ತದೆಯೇ? ಎಂದು ಪ್ರಶ್ನಿಸಿದ್ದಾರೆ. 

ಇನ್ನು ಜಿಎಸ್‌ಟಿ ವ್ಯಾಪ್ತಿಗೊಳಪಡಿಸುವುದಕ್ಕೆ ರಾಜ್ಯದ ಪ್ರಮುಖ ನಾಯಕರು ಈಗಿಇನಿಂದಲೇ ವಿರೋಧ ವ್ಯಕ್ತಪಡಿಸಬೇಕೆಂದು ಮನವಿ ಮಾಡಿಕೊಂಡಿರುವ ಮಾಜಿ ಸಿಎಂ ಕುಮಾರಸ್ವಾಮಿ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವುದಕ್ಕೆ ಹಲವು ರಾಜ್ಯಗಳು ಈಗಾಗಲೇ ವಿರೋಧ ವ್ಯಕ್ತಪಡಿಸಿವೆ. ರಾಜ್ಯದ ಮುಖ್ಯಮಂತ್ರಿಗಳೂ ಈ ವಿಚಾರದಲ್ಲಿ ಆಕ್ಷೇಪಣಾ ಮನೋಭಾವ ತಳೆಯಬೇಕು. ರಾಜ್ಯದ ಪ್ರಮುಖ ನಾಯಕರೂ ಈ ವಿಚಾರವಾಗಿ ಈಗಿನಿಂದಲೇ ಪ್ರತಿರೋಧ ವ್ಯಕ್ತಪಡಿಸಬೇಕು. ಇಲ್ಲವಾದರೆ, ಜಿಎಸ್‌ಟಿ ಕುಣಿಕೆ  ನಮ್ಮನ್ನು ಕಾಡಲಿದೆ ಎಂದು ವಾರ್ನ್ ಮಾಡಿದ್ದಾರೆ. 

Follow Us:
Download App:
  • android
  • ios