ಕರ್ನಾಟಕದಲ್ಲಿ ರೈಲ್ವೆ ಯೋಜನೆಗಳಿಗಾಗಿ 7524 ಕೋಟಿ ರೂಪಾಯಿಗಳನ್ನು ಕೇಂದ್ರ ಸರ್ಕಾರ ಮೀಸಲಿಟ್ಟಿದೆ. 2009 ರಿಂದ 2014ರ ಬಜೆಟ್ಗೆ ಹೋಲಿಸಿದರೆ, ಈ ಬಾರಿಯ ಬಜೆಟ್ನಲ್ಲಿ 805 ಕೋಟಿ ರೂಪಾಯಿ ಏರಿಕೆಯಾಗಿದೆ.


ಈ ಮೊದಲೇ ತಿಳಿಸಿದಂತೆ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರು ಯಾವುದೇ ಭರ್ಜರಿ ಘೋಷಣೆಗಳನ್ನೂ ಮಾಡಿಲ್ಲ. ಮಧ್ಯಂತರ ಬಜೆಟ್ ಇದಾಗಿದ್ದು, ಚುನಾವಣೆ ಗಮನದಲ್ಲಿಟ್ಟುಕೊಂಡು ಮತ ಸೆಳೆಯಲು ಏನಾದರೂ ಹೊಸ ಘೋಷಣೆ ಇರಬಹುದೆಂದು ಅಂದಾಜಿಸಲಾಗಿತ್ತು. ಆದರೆ, ಯಾವುದೇ ಫ್ರೀ ಘೋಷಣೆಯೂ ಇಲ್ಲ. ಕೇಂದ್ರ ಬಜೆಟ್ನಲ್ಲಿ ಯುವ ಜನಾಂಗದ ಅಭಿವೃದ್ಧಿ ಅವರ ಸಂಶೋಧನೆ ಆವಿಷ್ಕಾರಗಳಿಗೆ ನೆರವು ನೀಡುವ ನಿಟ್ಟಿನಲ್ಲಿ ಕೆಲ ಘೋಷಣೆಗಳನ್ನು ಮಾಡಲಾಗಿದ್ದರೆ, ಮಹಿಳಾ ಕಲ್ಯಾಣದ ನಿಟ್ಟಿನಲ್ಲಿ 'ಲಖ್ಪತಿ ದೀದಿ' ಸೇರಿದಂತೆ ಗೆಲುವು ಯೋಜನೆಗಳನ್ನು ಘೋಷಣೆ ಮಾಡಿದೆ. ಒಟ್ಟಾರೆಯಾಗಿ ಇದೊಂದು ಭರವಸೆಯ ಬಜೆಟ್ ಆಗಿದ್ದು, ಮುಂದಿನ ಜುಲೈನಲ್ಲಿ ವಿಕಸಿತ ಭಾರತದ ನೀಲನಕ್ಷೆಯ ಬಜೆಟ್ ಮಂಡಿಸುವುದಾಗಿ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ರೈಲ್ವೆ ಯೋಜನೆಗಳಿಗಾಗಿ 7524 ಕೋಟಿ ರೂಪಾಯಿಗಳನ್ನು ಕೇಂದ್ರ ಸರ್ಕಾರ ಮೀಸಲಿಟ್ಟಿದೆ. 2009 ರಿಂದ 2014ರ ಬಜೆಟ್ಗೆ ಹೋಲಿಸಿದರೆ, ಈ ಬಾರಿಯ ಬಜೆಟ್ನಲ್ಲಿ 805 ಕೋಟಿ ರೂಪಾಯಿ ಏರಿಕೆಯಾಗಿದೆ.


2014ಕ್ಕೂ ಮುನ್ನ ಅಧಿಕಾರದಲ್ಲಿದ್ದ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ದೇಶದ ಆರ್ಥಿಕತೆಯನ್ನು ಯಾವ ರೀತಿ ದುರಪಯೋಗಪಡಿಸಿಕೊಂಡಿತ್ತು ಎನ್ನುವುದನ್ನು ತಿಳಿಸುವ ನಿಟ್ಟಿನಲ್ಲಿ ಶ್ವೇತ ಪತ್ರ ಹೊರಡಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಬಗ್ಗೆ ಬಜೆಟ್ನಲ್ಲಿ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಭಾರತದ ನಂ.1 ಚೆಸ್ ಪಟು ಎನಿಸಿಕೊಂಡಿರುವ ಆರ್ ಪ್ರಜ್ಞಾನಂದ ಕಳೆದ ವರ್ಷ ವಿಶ್ವ ಚಾಂಪಿಯನ್ ಆಗಿರುವ ಮ್ಯಾಗ್ನಸ್ ಕಾರ್ಲ್ಸನ್ ಎದುರು ಫೈನಲ್ನಲ್ಲಿ ಚಾಂಪಿಯನ್ ಪಟ್ಟಕ್ಕಾಗಿ ಜಿದ್ದಾಜಿದ್ದಿನ ಪೈಪೋಟಿ ನೀಡಿದ್ದರು.
ಇಲ್ಲಿದೆ ಲಿಂಕ್ಸ್

ಈ ಬಾರಿಯ ಕೇಂದ್ರ ಬಜೆಟ್ನಲ್ಲಿ ರಕ್ಷಣಾ ಕ್ಷೇತ್ರಕ್ಕೆ ಅತೀ ಹೆಚ್ಚಿನ ಮೊತ್ತ ಹಂಚಿಕೆ ಮಾಡಲಾಗಿದೆ. ಕಳೆದ ಆರ್ಥಿಕ ವರ್ಷಕ್ಕೆ ಹೋಲಿಸಿದರೆ ಶೇಕಡಾ 1.5 ರಷ್ಟು ಹೆಚ್ಚಳ ಮಾಡಲಾಗಿದೆ. ಬರೋಬ್ಬರಿ 6.25 ಲಕ್ಷ ಕೋಟಿ ರೂಪಾಯಿ ಹಣದಲ್ಲಿ ಗಡಿಯಲ್ಲಿ ಫೆನ್ಸಿಂಗ್, ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಈ ಬಾರಿಯ ರಕ್ಷಣಾ ಕ್ಷೇತ್ರಕ್ಕೆ ಬಜೆಟ್ ಕೊಡುಗೆ ಏನು?
ಇಲ್ಲಿದೆ ಲಿಂಕ್

ಇದು ಮಧ್ಯಂತರ ಬಜೆಟ್ ಆಗಿದ್ದು, ನಿರ್ಮಲಾ ಸೀತರಾಮನ್ ತಮ್ಮ ಭಾಷಣದಲ್ಲಿ ಜುಲೈನಲ್ಲಿ ಮತ್ತೆ ಬಜೆಟ್ ಮಂಡಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಈಗ ಯಾವ ಸಚಿವಾಲಯಕ್ಕೆಷ್ಟು ಅನುದಾನ ಸಿಕ್ಕಿದೆ? 
ನಿರ್ಮಾಲಾ ಸೀತಾರಾಮನ್ ಮಂಡಿಸಿದ ಬಜೆಟ್ ಕುರಿತು ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿ ಮಾತನಾಡಿದ್ದಾರೆ. ಇದೇ ವೇಳೆ ಸಮಾಜ ಪ್ರತಿಯೊಬ್ಬರಿಗೂ ಅನಕೂಲ ಮಾಡಿಕೊಡುವ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್ಗೆ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿಗೆ ಇಲ್ಲಿ ಕ್ಲಿಕ್ಕಿಸಿ

ಕೇಂದ್ರ ಮಧ್ಯಂತರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿದ್ದು, ಮಹಿಳೆಯರಿಗೆ ಸಂಬಂಧಿಸಿ ಯಾವುದೇ ಹೊಸ ಯೋಜನೆ ಘೋಷಣೆಯಾಗಿಲ್ಲ. ಅದರೆ, ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಲಾಗಿದೆ.
ಸುದ್ದಿಗೆ ಇಲ್ಲಿ ಕ್ಲಿಕ್ಕಿಸಿ

ಮಧ್ಯಂತರ ಬಜೆಟ್ನಲ್ಲಿ ಕೇಂದ್ರ ಸರ್ಕಾರ ರೈಲ್ವೆ ಇಲಾಖೆಗೆ 2.55 ಲಕ್ಷ ಕೋಟಿ ರೂಪಾಯಿ ಮೀಸಲಿಟ್ಟಿದೆ. ಅದರೊಂದಿಗೆ ಮೂರು ಪ್ರಮುಖ ರೈಲ್ವೆ ಕಾರಿಡಾರ್ ಯೋಜನೆಗಳನ್ನು ಪ್ರಕಟ ಮಾಡಿದೆ.
ಸುದ್ದಿಗೆ ಇಲ್ಲಿ ಕ್ಲಿಕ್ಕಿಸಿ

ಲಕ್ಷದ್ವೀಪವನ್ನು ಆಕರ್ಷಕ ಹಾಗೂ ಭಾರತೀಯ ಪ್ರವಾಸಿಗರ ತಾಣವಾಗಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ. ಮಾಲ್ಡೀವ್ಸ್ ಜೊತೆಗಿನ ರಾಜತಾಂತ್ರಿಕ ಬಿಕ್ಕಟ್ಟಿನ ಬೆನ್ನಲ್ಲಿಯೇ ಬಜೆಟ್ನಲ್ಲಿ ಕೇಂದ್ರ ಸರ್ಕಾರ ಲಕ್ಷದ್ವೀಪದ ಪ್ರವಾಸೋದ್ಯಮ ಅಭಿವೃದ್ಧಿಯನ್ನು ಘೋಷಣೆ ಮಾಡಿದೆ.
ಪಂಚರಾಜ್ಯ ಚುನಾವಣೆ, ರಾಮ ಮಂದಿರ ಉದ್ಘಾಟನೆ ಬಳಿಕ ಮುಂಬರುವ ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತೇವೆ ಎನ್ನುವ ವಿಶ್ವಾಸದಲ್ಲಿರುವ ಮೋದಿ ಸರ್ಕಾರ, ಮಧ್ಯಂತರ ಬಜೆಟ್ನಲ್ಲಿ ಯಾವುದೇ ಹೊಸ ಘೋಷಣೆಗಳನ್ನು ಮಾಡಿಲ್ಲ. ಆದಾಯ ತೆರಿಗೆ ವಿಚಾರದಲ್ಲಿ ಯಾವುದೇ ಬದಲಾವಣೆಯನ್ನೂ ಮಾಡಿಲ್ಲ.
ಬಡವರ ಪರವಾದ, ಅಭಿವೃದ್ಧಿಗೆ ಪೂರಕವಾದ, ತಂತ್ರಜ್ಞಾನ ಬಳಕೆಗೆ ಅನುಕೂಲಕರವಾದ, ಭಾರತದ ಏಳ್ಗೆಯ ಪರವಾದ ಬಜೇಟ್. ಜಗತ್ತಿನ ಮೂರನೇ ಅತಿ ದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲು ವೇದಿಕೆ ನಿರ್ಮಿಸಿದೆ ಈ ಬಜೆಟ್
- ಆರ್. ಅಶೋಕ್, ವಿಪಕ್ಷ ನಾಯಕ
ಜನಸಂದಣೆ ಹೆಚ್ಚಾಗಿರುವ ನಗರಗಳಲ್ಲಿ ಸಾರಿಗೆ ಸೌಲಭ್ಯ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲ್ಲಿದ್ದು, ಮೆಟ್ರೋ ರೈಲ್ವೆ ಮಾರ್ಗ ವಿಸ್ತರಣೆ ಮಾಡುವುದಾಗಿ ವಿತ್ತ ಸಚಿವರು ಘೋಷಿಸಿದ್ದಾರೆ. ಅಲ್ಲದೇ ವಂದೇ ಭಾರತ್ ಬೋಗಿಗಳಂತೆ ರೈಲ್ವೆ ಭೋಗಿಗಳ ಅಭಿವೃದ್ಧಿಗೆ ಗಮನ ಹರಿಸುವ ಭರವಸೆ ನೀಡಿದ್ದಾರೆ.

ಮತ್ಸ್ಯಸಂಪದ: ಸಾಗರೋತ್ಪನ್ನಗಳ ಹೆಚ್ಚಳಕ್ಕೆ ಯೋಜನೆ ರೂಪಿಸಲಾಗಿದ್ದು, ಸೀ ಫುಡ್ ಅಭಿವೃದ್ಧಿಗೆ ಒತ್ತು ನೀಡುವುದಾಗಿ ನಿರ್ಮಲಾ ಘೋಷಿಸಿದ್ದಾರೆ. 2014ರ ನಂತರ ಸೀ ಫುಡ್ ರಫ್ತು ಡಬಲ್ ಆಗಿದ್ದು, ಮೀನುಗಾರಿಕೆಯಲ್ಲಿ 55 ಲಕ್ಷ ಹೊಸ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದಾರೆ.

ಯು ವಿನ್ ಪ್ಲಾಟ್ಫಾರ್ಮ್ ಮೂಲಕ ತಾಯಂದಿರಿಗೆ, ನವಜಾತ ಶಿಶುಗಳಿಗೆ ಆರೈಕೆ.
ಆರೋಗ್ಯ ಸೇವೆ ಹೊಸ ಆಸ್ಪತ್ರೆ, ಹೊಸ ವಿಭಾಗಗಳ ಸೃಷ್ಠಿ.
ಹೆಣ್ಣುಮಕ್ಕಳಿಗೆ ಸರ್ವೈಕಲ್ ಕ್ಯಾನ್ಸರ್ ತಡೆಯಲು ವ್ಯಾಕ್ಸಿನೇಷನ್.
9ರಿಂದ 14 ವರ್ಷದ ಬಾಲಕಿಯರಿಗೆ ಲಸಿಕೆ ನೀಡಿ, ಮಾರಾಣಾಂತಿಕ ಕ್ಯಾನ್ಸರ್ನಿಂದ ಮಕ್ಕಳು ಮುಕ್ತರಾಗುವಂತೆ ಕ್ರಮ ಕೈಗೊಳ್ಳಲಾಗುವುದು.
ಮೋದಿ ಲಕ್ಷದ್ವೀಪಕ್ಕೆ ಭೇಟಿ ನೀಡಿ ಫೋಟೋಸ್ ಶೇರ್ ಮಾಡಿಕೊಂಡ ಬೆನ್ನಲ್ಲೇ, ಪಕ್ಕದ ಮಾಲ್ಡೀವ್ಸ್ ತಲ್ಲಣಗೊಂಡಿದೆ. ಒಂದು ದೇಶದ ಆರ್ಥಿಕತೆಯನ್ನು ಬುಡಮೇಲು ಮಾಡುವ ಮಟ್ಟಿಗೆ ಮೋದಿ ಪರೋಕ್ಷ ಕರೆ ಭಾರತೀಯರ ಮೇಲೆ ಪ್ರಭಾವ ಬೀರಿದ್ದು, ಭಾರತೀಯರು ಮಾಲ್ಡೀವ್ಸ್ ಪ್ರವಾಸವನ್ನು ರದ್ದುಗೊಳಿಸಿ ಭಾರತದ ದ್ವೀಪಗಳಿಗೆ ಭೇಟಿ ನೀಡಲು ಮುಂದಾದರು. ನಿರೀಕ್ಷೆಯಂತೆ ಪ್ರವಾಸೋದ್ಯಮ ಅಭಿವೃದ್ಧಿಗೆ ಅನುವಾಗುವಂತೆ ಕೆಲವು ಘೋಷಣೆಗಳು ಬಜೆಟ್ನಲ್ಲಿವೆ.

ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್ ಘೋಷಣೆಯೊಂದಿಗೆ ಈ ಸಾರಿ ಜೈ ಅನುಸಂಧಾನ್ ಎಂಬ ಹೊಸ ಘೋಷ ವಾಕ್ಯ ಸೇರಿಕೊಂಡಿದ್ದು, ತಂತ್ರಜ್ಞಾನ ಸೇರಿ ವಿವಿಧ ಕ್ಷೇತ್ರಗಳಲ್ಲಿ ಸಂಶೋಧನೆಗೆ ಒತ್ತು ನೀಡಲು ಮೋದಿ ಸರಕಾರ ಕಟಿಬ್ಧವಾಗಿದೆ ಎಂಬುದನ್ನು ನಿರ್ಮಲಾ ಸ್ಪಷ್ಟಪಡಿಸಿದ್ದಾರೆ. 
ಸ್ಟಾರ್ಟ್ ಅಪ್ ಅಪ್ ನೆರವು ಸೇರಿ ತಂತ್ರಜ್ಞಾನ ಅಭಿವೃದ್ಧಿಗೆ ಬಡ್ಡಿ ರಹಿತ ಸಾಲ ನೀಡುವುದಾಗಿ ಹೇಳಿರುವ ವಿತ್ತ ಸಚಿವರು ತೆರಿಗೆ ಪದ್ಧತಿಯಲ್ಲಿ ಯಾವುದೇ ಬದಲಾವಣೆಯಿಲ್ಲ ಎಂಬುದನ್ನು ಸ್ಫಷ್ಟಪಡಿಸಿದ್ದಾರೆ. ಮತದಾರರ ಓಲೈಕೆ ಮಾಡಿಕೊಳ್ಳುವಂಥ ಯಾವ ಯೋಜನೆಗಳನ್ನೂ ಘೋಷಿಸದ ನಿರ್ಮಲಾ, ಜುಲೈನಲ್ಲಿ ಪ್ರಸ್ತುತ ಪಡಿಸುವ ಬಜೆಟ್ನಲ್ಲಿ ವಿಕಸಿತ ಭಾರತದ ನೀಲಿ ನಕ್ಷೆಯನ್ನು ಪ್ರಸ್ತುತ ಪಡಿಸುವುದಾಗಿ ಹೇಳುವ ಮೂಲಕ ಮತ್ತೆ ಕೇಂದ್ರದಲ್ಲಿ ಬಿಜೆಪಿ ಸರಕಾರವೇ ಅಧಿಕಾರಕ್ಕೆ ಬರುತ್ತದೆ ಎಂಬ ವಿಶ್ವಾಸವನ್ನು ಪರೋಕ್ಷವಾಗಿ ವ್ಯಕ್ತಪಡಿಸಿದ್ದಾರೆ.
ಚುನಾವಣಾ ವರ್ಷದ ಬಜೆಟ್ ಆಗಿದ್ದರಿಂದ ಇದು ಜನಪ್ರಿಯ ಬಜೆಟ್ ಆಗಲಿದೆ. ಹೊಸ ಯೋಜನೆ ಅತವಾ ಆಕರ್ಷಕ ಯೋಜನೆಗಳನ್ನು ಘೋಷಿಸಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಈ ಮೊದಲೇ ಹೇಳಿದಂತೆ ನಿರ್ಮಲಾ ಸೀತರಾಮನ್ ಭರ್ಜರಿ ಘೋಷಣೆಗಳಿಲ್ಲದೇ ಬಜೆಟ್ ಮಂಡಿಸಿದ್ದಾರೆ. ಮತ್ತದೇ ಮೋದಿ ಸಬ್ ಕಾ ಸಾಥ್, ಸಬಾ ಕಾ ವಿಕಾಸ್ ಧ್ಯೇಯ ವಾಕ್ಯದೊಂದಿಗೆ ಮುನ್ನಡಿ ಇಡುವ ಭರವಸೆ ನೀಡಿದ್ದಾರೆ.
ಚುನಾವಣೆ ವರ್ಷದಲ್ಲಿಯೂ ಯಾವುದೇ ಗ್ಯಾರಂಟಿ ಯೋಜನೆಗಳನ್ನೂ ಘೋಷಿಸಿಲ್ಲ ವಿತ್ತ ಸಚಿವೆ. ಅಲ್ಲದೇ ಯಾವ ಫ್ರೀ ಘೋಷಣೆಯೂ ಇಲ್ಲದ ನಿರೀಕ್ಷೆಗೆ ವಿರುದ್ಧವಾಗಿ ಇದು ಚುನಾವಣಾ ಜನಪ್ರಿಯ ಬಜೆಟ್ ಆಗದಂತೆ ನೋಡಿಕೊಂಡಿದ್ದಾರೆ.

