Karnataka Budget 2023: ಬಜೆಟ್ ಮಂಡನೆ ಮುಗಿಸಿದ ಸಿಎಂ, ಸೋಮವಾರಕ್ಕೆ ಕಲಾಪ ಮುಂದೂಡಿಕೆ

Karnataka Budget 2023 Basavaraj Bommai Speech Live Updates

ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಆದ್ಯತೆ ನೀಡಿರುವ ಸಿಎಂ ಬೊಮ್ಮಾಯಿ, ವಿದ್ಯಾರ್ಥಿನಿಯರಿಗೆ ಉಚಿತ ಪಾಸ್ ನೀಡುವ ಜೊತೆಗೆ ಹಲವೆಡೆ ವಿದ್ಯಾರ್ಥಿಗಳಿಗೆ ವಿಶೇಷ ಹಾಸ್ಟೆಲ್ ವ್ಯವಸ್ಥೆ ಮಾಡಲಾಗುವುದು ಎಂದಿದ್ದಾರೆ. ಚಿಕ್ಕಮಗಳೂರಿನ ಬಹು ದಿನಗಳ ಬೇಡಿಕೆಯಾದ ಪ್ರತ್ಯೇಕ ವಿಶ್ವವಿದ್ಯಾಲಯ ಘೋಷಿಸಿದ ಸಿಎಂ, ತುಮಕೂರಿಗೆ ತೋಟಗಾರಿಕಾ ವಿಶ್ವವಿದ್ಯಾಲಯವನ್ನು ಘೋಷಿಸಿದ್ದಾರೆ. ಮೋದಿಯಂತೆ ಸಿಎಂ ಬೊಮ್ಮಾಯಿ ಸಹ ರೈತರ ಸ್ವಾವಲಂಬನೆಗೆ ತಂತ್ರಜ್ಞಾನದ ಮೊರೆ ಹೋಗಿದ್ದು, ಕೃಷಿ ಆಧಾರಿತ ತಂತ್ರಜ್ಞಾನ ಅಭಿವೃದ್ಧಿಗೆ ಅಲ್ಪ ಮಟ್ಟದ ಅನುದಾನ ಮೀಸಲಿಟ್ಟಿದ್ದಾರೆ. ನೀರಾವರಿ ಯೋಜನೆಗಳನ್ನು ಕಡೆಗಣಿಸಿದ ಹಾವೇರಿ ಮೂಲದ ಬೊಮ್ಮಾಯಿ, ಉತ್ತರ ಕರ್ನಾಟಕವನ್ನು ಗಮನದಲ್ಲಿಟ್ಟುಕೊಂಡು ಕೆಲವು ನೀರಾವರಿ ಯೋಜನೆಗಳಿಗೆ ಅಲ್ಪ ಮಟ್ಟದ ಅನುದಾನವನ್ನು ಮೀಸಲಿಟ್ಟಿದ್ದಾರೆ.  ಈ ಬಾರಿಯ ಕರ್ನಾಟಕ ಬಜೆಟ್ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ.

2:49 PM IST

ಕಾಂಗ್ರೆಸ್ಸಿಗರ ಕಿವಿಯಲ್ಲಿ ಹೂವು: ಕೀಳು ಮಟ್ಟದ ರಾಜಕೀಯ

ಉಡುಪಿ: ಬಜೆಟ್ ಮಂಡನೆ ಸಂದರ್ಭದಲ್ಲಿ ಕಿವಿಗೆ ಹೂವು ಇಟ್ಟು ಹೋದ ಸಿದ್ದರಾಮಯ್ಯ ಡಿಕೆಶಿ. ಸಿದ್ದರಾಮಯ್ಯ ಡಿಕೆಶಿ ಬಾಲಿಶವಾದ ಕೀಳು ಮಟ್ಟದ ರಾಜಕೀಯ ಮಾಡಿದ್ದಾರೆ. ವಿರೋಧ ಪಕ್ಷವಾಗಿ ತಮ್ಮ ಜವಾಬ್ದಾರಿ ಮರೆತಿದ್ದಾರೆ. ಇಂದು ನಡೆದಿರೋದು ಕಾಂಗ್ರೆಸ್ ನ ಸಣ್ಣತನದ ಪ್ರದರ್ಶನ. ಮುಂದಿನ ಚುನಾವಣೆಯಲ್ಲಿ ಜನ ಇವರ ಎರಡು ಕಿವಿಗೆ ಹೂ ಇಡುತ್ತಾರೆ. ಎರಡು ಕಿವಿಗೆ ಹೂ ಇಟ್ಟು ಮಂಡೆ ಬೋಳಿಸಿ ನಾಮ ಹಾಕುತ್ತಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲ ಸದನಕ್ಕೆ ಗೌರವ ಹೇಗೆ ಕೊಡಬೇಕು ಎಂದು ಕಾಂಗ್ರೆಸ್ ನಾಯಕರಿಗೆ ಗೊತ್ತಿಲ್ಲ. ಬಾಲಿಶವಾದ ನಡತೆಯಿಂದ ಕಾಂಗ್ರೆಸ್ ಸದನದಲ್ಲಿ ಬೆತ್ತಲಾಗಿದೆ. ಮಂಗಳೂರು ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ ಹೇಳಿಕೆ

2:28 PM IST

ಬೊಮ್ಮಾಯಿ.

2023_24 ರ ಬಜೆಟ್ ಮಂಡನೆ ಮಾಡಿದ್ದೇನೆ ಕೋವಿಡ್ ಕಾಲದಲ್ಲಿ ಆರ್ಥಿಕ  ಹಿಂಜರಿತ ಉಂಟಾಗಿತ್ತು. ಆರ್ಥಿಕ ತಜ್ಞರು ಕರ್ನಾಟಕ ಬಜೆಟ್ ಹಳಿಗೆ ಬರಲು ಐದಾರು ವರ್ಷ ಬೇಕು ಅಂತಾ ಹೇಳಿದ್ರು. ಆದ್ರೆ ಕೇವಲ ಎರಡೇ ವರ್ಷ ದಲ್ಲಿ ಸುಧಾರಣೆ ಆಗಿದೆ. ರೆವಿನ್ಯೂ ಎಕ್ಸಪೆಂಡಿಚರ್ ಅನ್ನು ಇಷ್ಟು ದೊಡ್ಡ ಪ್ರಮಾಣದಲ್ಲಿ ಯಾವ ಸರ್ಕಾರ ಕೂಡಾ ಮಾಡಿರಲಿಲ್ಲ. ಕಳೆದ ಬಾರಿ ಘೋಷಣೆ ಮಾಡಿದ್ದರಲ್ಲಿ ಶೇ 90 ರಷ್ಟು ಸರ್ಕಾರಿ ಆದೇಶಗಳಾಗಿವೆ. ಇನ್ನೂ ಕೆಲವು ಅನುಷ್ಟಾನ ಆಗೋದರಲ್ಲಿ ಇವೆ.

2:03 PM IST

3,22,000 ಕೋಟಿ ಸಾಲ ಹೆಚ್ಚಾಗಿದೆ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಿಯಾಕ್ಷನ್!

ಒಟ್ಟು ಸಾಲ 5,64,896 ಕೋಟಿ ಆಗತ್ತೆ ಅಂತ ಅವರೇ ಹೇಳಿದ್ದಾರೆ. ಈ ವರ್ಷದ ಅಂತ್ಯಕ್ಕೆ. ನಾನು ಬಿಟ್ಟಾಗ 2,47000 ಕೋಟಿ ಇತ್ತು. 3,22,000 ಕೋಟಿ ಸಾಲ ಹೆಚ್ಚಾಗಿದೆ. ಸಮ್ಮಿಶ್ರ ಸರ್ಕಾರ ಇದ್ದಾಗ 41914  ಕೋಟಿ ಸಾಲ ಮಾಡಲಾಗಿತ್ತು. ನಾಲ್ಕು ವರ್ಷದಲ್ಲಿ 2,54,760 ಕೋಟಿ ಬಿಜೆಪಿ ಸರ್ಕಾರ ಸಾಲ ಮಾಡಿದೆ. 1,16,512 ಕೋಟಿ ಸಾಲ ನಾವು ಐದು ವರ್ಷದಲ್ಲಿ ಸಾಲ ಮಾಡಿದ್ವಿ. ಇವ್ರು 2,54,760 ಕೋಟಿ ಸಾಲ ಮಾಡಿದ್ದಾರೆ ನಾಲ್ಕು ವರ್ಷಕ್ಕೆ. ಇವ್ರು ರಾಜ್ಯವನ್ನ ಸಾಲದ ಸುಳಿಗೆ ಸಿಲುಕಿಸಿದ್ದಾರೆ. 34 ಸಾವಿರ ಕೋಟಿ ಬಡ್ಡಿ ಕಟ್ಟಬೇಕಾಗುತ್ತದೆ. ಇವ್ರು ಯದ್ವಾ ತದ್ವಾ ಸಾಲ ಮಾಡಿ.ರಾಜ್ಯದ ಜನರನ್ನು ಸಾಲಗಾರರನ್ನಾಗಿ ಮಾಡಿದ್ದಾರೆ. ಕೊಟ್ಟ ಭರವಸೆ ಈಡೇರಿಸಿಲ್ಲ. ಸಾಲ ಹೆಚ್ಚು ಮಾಡಿದ್ದಾರೆ. ಹೆಚ್ಚು ಬಡ್ಡಿ ಕಟ್ಡಿದ್ದರೆ ಅಭಿವೃದ್ಧಿ ಆಗುವುದಿಲ್ಲ. 77,750 ಕೋಟಿ ಮುಂದಿನ ವರ್ಷ ಸಾಲ ಮಾಡುತ್ತೇವೆ ಅಂತ ಹೇಳಿದ್ದಾರೆ. ಸಾಲದ ಪ್ರಮಾಣ 95% ಹೆಚ್ಚಳ ಆಗತ್ತೆ. ಹೀಗಿರುವಾಗ ರಾಜ್ಯದ ಅಭಿವೃದ್ಧಿ ಹೇಗಾಗುತ್ತದೆ? ಮಕ್ಕಳನ್ನ ಸಾಕುವ ಜವಾಬ್ದಾರಿ ಇಲ್ಲದೇ ಇದ್ದರೂ, ಎಷ್ಟು ಮಕ್ಕಳಾದ್ರೂ ಆಗಲೀ ಎಂಬಂತಿದೆ ಈ ಬಜೆಟ್. ಅನುಷ್ಠಾನಗೊಳಿಸುವ ಇಚ್ಚಾಶಕ್ತಿ ಇಲ್ಲದೇ ಇದ್ದರೆ, ಎಷ್ಟು ಬೇಕಾದ್ರೂ ಭರವಸೆ ಕೊಡಬಹುದು. ಈ ಸರ್ಕಾರದಲ್ಲಿ ಇದೇ ಆಗುತ್ತಿದೆ. ಯಾವಾಗಲೂ ಚುನಾಯಿತ ಸರ್ಕಾರ ಪಾರದರ್ಶಕ ಹಾಗೂ ಜನರಿಗೆ ಉತ್ತರದಾಯಿತ್ವ ಆಗಿರಬೇಕು. ಮತದಾರರಿಂದ ಯಾವುದನ್ನೂ ಮುಚ್ಚಿಡಲು ಹೋಗಬಾರದು

1:55 PM IST

ಚಿಕ್ಕಮಗಳೂರು ಜಿಲ್ಲೆಗೆ ಹೊಸ ವಿವಿ

ಚಿಕ್ಕಮಗಳೂರು ಜಿಲ್ಲೆಗೆ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಬಂಪರ್‌ ಘೋಷಣೆ ಮಾಡಿದ್ದಾರೆ. ಹೊಸ ವಿಶ್ವವಿದ್ಯಾಲಯವನ್ನು ಜಿಲ್ಲೆಯಲ್ಲಿ ಸ್ಥಾಪನೆ ಮಾಡುವುದಾಗಿ ಪ್ರಕಟಿಸಿದ್ದರೆ, ತುಮಕೂರಿನಲ್ಲಿ ಹೊಸ ಪಾಲಿಟೆಕ್ನಿಕ್‌ ಕಾಲೇಜು ಸ್ಥಾಪನೆ ಮಾಡುವುದಾಗಿ ತಿಳಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಹೊಸ ವಿವಿ, ತುಮಕೂರಿನಲ್ಲಿ ಹೊಸ ಪಾಲಿಟೆಕ್ನಿಕ್‌ ಕಾಲೇಜು!

1:39 PM IST

ನೀರಾವರಿಗೆ 11,236 ಕೋಟಿ ಕೊಡುಗೆ

ನೀರಾವರಿಗೆ ಆದ್ಯತೆ ದೃಷ್ಟಿಯಿಂದ 2022-23ನೇ ಸಾಲಿನಲ್ಲಿ 11,236 ಕೋಟಿ ರೂ. ಮೊತ್ತದ 38 ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಜಲಸಂಪನ್ಮೂಲ ಇಲಾಖೆಯ ವತಿಯಿಂದ 1.5 ಲಕ್ಷ ಎಕರೆ ನೀರಾವರಿ ಸಾಮರ್ಥ್ಯ ಸೃಜಿಸಲಾಗುವುದು.

ಸುದ್ದಿಗೆ ಇಲ್ಲಿ ಕ್ಲಿಕ್ಕಿಸಿ

 

 

1:22 PM IST

ಮೈಕ್ರೋ ಸ್ಮಾಲ್ ಇಂಡಸ್ಟ್ರಿಗೆ ಕೊಡಲಿಲ್ಲ ಒತ್ತು: ಎಫ್ ಕೆಸಿಸಿಐ ಅಧ್ಯಕ್ಷ ಗೋಪಾಲರೆಡ್ಡಿ

ಬೊಮ್ಮಾಯಿ ಬಜೆಟ್ ಮಂಡನೆ ಹಿನ್ನಲೆಯಲ್ಲಿ ಎಫ್‌ಕೆಸಿಸಿಐ ಅಧ್ಯಕ್ಷ ಬಿ.ವಿ. ಗೋಪಾಲರೆಡ್ಡಿ ಪತ್ರಿಕಾಗೋಷ್ಠಿ

ರಾಜ್ಯ ಬಜೆಟ್‌ಗೆ ಸ್ವಾಗತ. ಅಗ್ರಿಕಲ್ಚರ್, ರೂರಲ್ ಡೆವಲಪ್ಮೆಂಟ್ ಗೆ ಒತ್ತುಕೊಟ್ಟಿದ್ದಾರೆ. ಮಹಿಳಾ ಸಬಲೀಕರಣಕ್ಕೂ ಆದ್ಯತೆ ನೀಡಿದ್ದಾರೆ. ಬೆಂಗಳೂರು ರಿಂಗ್ ರಸ್ತೆ, ಮೆಟ್ರೋಗೆ ಹಣ ನೀಡಿರೋದು ಸ್ವಾಗತಾರ್ಹ. ಪ್ರೊಫೆಷನಲ್ ಟ್ಯಾಕ್ಸ್ 30 ಸಾವಿರದ ಲಿಮಿಟ್ ಕೇಳಿದ್ವಿ. 25 ಸಾವಿರಕ್ಕೆ ಏರಿಸಿದ್ದಾರೆ. ಇದು ಒಳ್ಳೆಯ ಬೆಳವಣಿಗೆ. ಮೈಕ್ರೋ ಸ್ಮಾಲ್ ಇಂಡಸ್ಟ್ರೀಸ್ ಗೆ ಒತ್ತುಕೊಡಲು ಕೇಳಿದ್ವಿ. ಎಪಿಎಂಸಿ ಒಳಗೆ ಹೊರಗೆ ಬೇರೆ ಕಾನೂನು ಇದೆ. ಇದನ್ನ ಸರಿಪಡಿಸೋಕೆ ಕೇಳಿಕೊಂಡಿದ್ವಿ. ಈ ಎರಡೂ ವಿಚಾರ ಪ್ರಸ್ತಾಪ ಆಗಿಲ್ಲ ಹೀಗಾಗಿ ಸ್ವಲ್ಪ ಬೇಸರ ಇದೆ. ನಮ್ಮ ಒಟ್ಟು 8 ಬೇಡಿಕೆ ಇಟ್ಟಿದ್ವಿ ಇದರಲ್ಲಿ 4 ಬೇಡಿಕೆ ಈಡೇರಿದೆ. ಇದು ಚುನಾಚಣೆ ಮುಂದಿಟ್ಟುಕೊಂಡ ಬಜೆಟ್ ಅನ್ನೋದು ಗೊತ್ತಾಗ್ತಿದೆ. ಬೆಂಗಳೂರು ಟ್ರಾಫಿಕ್, ವೈಟ್ ಟಾಪಿಂಗ್ ಗೆ ಒತ್ತುಕೊಟ್ಟಿದ್ದಾರೆ ಇದು ಸ್ವಾಗತಾರ್ಹ.

.

1:17 PM IST

ಕಿವಿ ಮೇಲೆ ಹೂ ಇಡುವ ಬಜೆಟ್: ದಿನೇಶ್ ಗುಂಡೂರಾವ್

ದಿನೇಶ್ ಗುಂಡೂರಾವ್ ಹೇಳಿಕೆ,

ಈ ಬಜೆಟ್ ಬಗ್ಗೆ ಈಗಾಗಲೇ ಹೇಳಿದ್ದಾರೆ. ಕಿವಿ ಮೇಲೆ ಹೂ ಇಡುವ ಬಜೆಟ್. ಇದು ಚುನಾವಣಾ ಬಜೆಟ್. ಕಳೆದ‌ಬಾರಿ ನೋಡಿದ್ರೆ ಯಾವುದೂ ಜಿಓ ಇಂಪ್ಲಿಮೆಂಟ್ ಆಗಿಲ್ಲ. ಕಳೆದ ವರ್ಷ ಘೋಷಿಸಿದ ಬಜೆಟ್ ಇಂಪ್ಲಿಮೆಂಟ್ ಆಗದೆ, ಈ ಬಜೆಟ್ ಹೇಗೆ ಜಾರಿಗೆ ಬರಲಿದೆ.. ಮುಂದೆ ಸರ್ಕಾರ ಯಾವುದು ಬರುತ್ತೋ, ಅವರು ಬಜೆಟ್ ಮಂಡಿಸ್ತಾರೆ. ಇದನ್ನ ನಾವು ಸಂಪೂರ್ಣ ತಿರಸ್ಕರಿಸ್ತೇವೆ. ಇದು ಯಾವುದೂ ಕೂಡ ಅನುಷ್ಠಾನ ಆಗುವುದಿಲ್ಲ. ಬಿಜೆಪಿ ವ್ಯರ್ಥ ಪ್ರಯತ್ನ ಮಾಡಿದೆ.

1:13 PM IST

ಬೆಂಗಳೂರು ಸಮಗ್ರ ಅಭಿವೃದ್ಧಿ ಭರ್ಜರಿ ಕೊಡುಗೆ..

ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡಲು 13,139 ಕೋಟಿ ರೂ. ವೆಚ್ಚದಲ್ಲಿ 288 ಕಿ.ಮೀ ಉದ್ದದ ಸ್ಯಾಟಲೈಟ್ ಟೌನ್ ರಿಂಗ್​ರೋಡ್ ನಿರ್ಮಿಸಲು ಕೇಂದ್ರ ಸರ್ಕಾರದ ಅನುಮೋದನೆ ದೊರೆತಿದೆ.ಅದಲ್ಲದೇ 150 ಕೋಟಿ ರೂ. ವೆಚ್ಚದಲ್ಲಿ 75 ಜಂಕ್ಷನ್‌ ಅಭಿವೃದ್ಧಿಪಡಿಸಲಾಗುವುದು.ಬೈಯಪ್ಪನಹಳ್ಳಿ ನಮ್ಮ ಮೆಟ್ರೋ ಸುತ್ತಮುತ್ತ ರಸ್ತೆ ಅಭಿವೃದ್ಧಿ, ಟ್ರಾಫಿಕ್‌ ಕಂಟ್ರೋಲ್‌ಗೆ 300 ಕೋಟಿ ರೂ. ಅನುದಾನವನ್ನು ನೀಡಲಾಗಿದೆ.

1:04 PM IST

ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟದ ಎಚ್ಚರಿಕೆ

ರಾಯಚೂರು: ಬಜೆಟ್ ನಲ್ಲಿ ಜಿಲ್ಲೆಗೆ ಏಮ್ಸ್ ಮಾದರಿ ಆಸ್ಪತ್ರೆ ಘೋಷಣೆಗೆ ಖಂಡನೆ. ಕೇಳಿದ್ದು ಏಮ್ಸ್ ನೀಡಿದ್ದು ಮಾದರಿ ಆಸ್ಪತ್ರೆ. ಮಾತು ತಪ್ಪಿದ ಸಿಎಂ ಬಸವರಾಜ ಬೊಮ್ಮಾಯಿ. ನಗರದಲ್ಲಿ ಏಮ್ಸ್ ಹೋರಾಟ ಸಮಿತಿ ಪ್ರಧಾನ ಸಂಚಾಲಕ ಡಾ.ಬಸವರಾಜ ಕಳಸ ಆಕ್ರೋಶ. ನಮಗೆ ಏಮ್ಸ್ ಮಾದರಿ ಬೇಡ, ಸರ್ಕಾರ ಘೋಷಣೆ ತಿರಸ್ಕಾರ. ನಗರದಲ್ಲಿ 281 (31 ದಿನ ಸರದಿ ಉಪವಾಸ) ದಿನಗಳಿಂದ ನಡೆಯುತಿರುವ ಹೋರಾಟಕ್ಕೆ ಬೆಲೆ ನೀಡದ ಸರ್ಕಾರ. ಮುಂದಿನ ದಿನಗಳಲ್ಲಿ ತೀವ್ರ ಸ್ವರೂಪದ ಹೋರಾಟ. ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟದ ಎಚ್ಚರಿಕೆ ನೀಡಿದ ಏಮ್ಸ್ ಹೋರಾಟ ಸಮಿತಿ ಪ್ರಧಾನ ಸಂಚಾಲಕ ಡಾ.ಬಸವರಾಜ ಕಳಸ.

12:59 PM IST

ಬಜೆಟ್ ಮಂಡನೆ ಮುಗಿಸಿದ ಸಿಎಂ

2 ಗಂಟೆ 35 ನಿಮಿಷಗಳ ಕಾಲ‌ ಬಜೆಟ್ ಓದಿದ ಸಿಎಂಗೆ ಕಿವಿಯಲ್ಲಿ ಹೂ ಹಿಡಿದುಕೊಂಡು ಸಿಎಂ ಬಳಿಗೆ ಹೋಗಿ ಬೊಮ್ಮಾಯಿಗೆ ಶುಭಾಶಯ ಹೇಳಿದ ಡಿ ಕೆ ಶಿವಕುಮಾರ್. ಭಾರತ್ ಮಾತಾಕೀ ಜೈ ಘೋಷಣೆ ಹಾಕಿದ ಬಿಜೆಪಿ ಶಾಸಕರು. ಸೋಮವಾರ 10-30 ಕ್ಕೆ ಸದನ ಮುಂದೂಡಿಕೆ.ಸಿಎಂ ಗೆ ಅಭಿನಂದನೆ ಸಲ್ಲಿಸಿದ ಸಚಿವರು, ಶಾಸಕರು

 

12:52 PM IST

ಆ‍್ಯಸಿಡ್‌ ದಾಳಿ ಸಂತ್ರಸ್ಥರಿಗೆ ಮಾಶಾಸನ 10,000ಕ್ಕೆ ಏರಿಕೆ

ಶೂನ್ಯ ಬಡ್ಡಿದರದಲ್ಲಿ ಮಹಿಳೆಯರಿಗೆ ಸಾಲ ಸೌಲಭ್ಯ ಯೋಜನೆ. ಗೃಹಿಣಿಯರಿಗೆ ತಿಂಗಳಿಗೆ 500 ರೂ. ಗಳ ಸಹಾಯಧನ. ರಾಜ್ಯದಲ್ಲಿ ಗೃಹಿಣಿ ಶಕ್ತಿ ಯೋಜನೆ ಶೀಘ್ರದಲ್ಲೇ ಜಾರಿ. ಆ‍್ಯಸಿಡ್‌ ದಾಳಿ ಸಂತ್ರಸ್ಥರಿಗೆ ಮಾಶಾಸನ 10,000ಕ್ಕೆ ಏರಿಕೆ.

12:43 PM IST

ಆರೋಗ್ಯ ಕ್ಷೇತ್ರಕ್ಕೆ ಬಜೆಟ್​ನಲ್ಲಿ ಸಿಕ್ಕಿದ್ದೇನು?

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  2023-24ನೇ ಸಾಲಿನ ಬಜೆಟ್​ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಒತ್ತು ನೀಡಿದ್ದಾರೆ.ಬೆಂಗಳೂರಿನಲ್ಲಿ ಒಟ್ಟು 243 ವಾರ್ಡ್ ಗಳಲ್ಲಿ 27 ಸ್ಮಾರ್ಟ್ ವರ್ಚ್ಯುವಲ್ ಕ್ಲಿನಿಕ್ ಗೆ ಅನುಮೋದನೆ ನೀಡಲಾಗಿದ್ದು ಹೆಲ್ತ್ ಸಿಸ್ಟಮ್ಸ್ ಅನ್ನು ಪುನರಚನೆ ಮಾಡಲು ನಿರ್ಧರಿಸಲಾಗಿದೆ.ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಅಡಿಯಲ್ಲಿ ಹೆಚ್ಚಿನ ಖಾಸಗಿ ಆಸ್ಪತ್ರೆಗಳನ್ನು ಸೇರ್ಪಡೆಗೊಳಿಸಲು ಕ್ರಮ ಕೈಗೊಳ್ಳಲಾಗುವುದು.


 

12:36 PM IST

ಉತ್ತರ ಕರ್ನಾಟಕಕ್ಕೆ ಮತ್ಸ್ಯಘಮ, ಮೀನುಗಾರಿಕೆ ದೋಣಿಗೆ ಹಣ!

ರಾಜ್ಯದ ಮೀನುಗಾರರಿಗೆ ನೆರವಾಗುವ ದೃಷ್ಟಿಯಿಂದ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಹೊಸ ಯೋಜನೆಗಳನ್ನು ಪ್ರಕಟಿಸಿದ್ದಾರೆ. ಅದರಂತೆ ಹಾವೇರಿಯಲ್ಲಿ ಮೀನು ಪಾಲನಾ ಕೇಂದ್ರ ಹಾಗೂ ಬೈಂದೂರಿನಲ್ಲಿ ಸೀಫುಡ್‌ ಪಾರ್ಕ್‌ ಸ್ಥಾಪನೆ ಮಾಡುವುದಾಗಿ ತಿಳಿಸಿದ್ದಾರೆ.

ಉತ್ತರ ಕರ್ನಾಟಕಕ್ಕೆ ಮತ್ಸ್ಯಘಮ

 



 

12:21 PM IST

ಕಿವಿ ಮೇಲೆ ಹೂವಿಟ್ಟು ಸಿಎಂ ಬಜೆಟ್‌ಗೆ ವಿರೋಧಿಸಿದ ಕಾಂಗ್ರೆಸ್ಸಿಗರು

ಸಿಎಂ ಬೊಮ್ಯಾಯಿ ಕಳೆದ ಬಜೆಟ್‌ನಲ್ಲಿ ನೀಡಿದ ಭರವಸೆಗಳನ್ನೇ ಈಡೇರಿಸಿಲ್ಲ. ಇದೀಗ ಮತ್ತೊಂದು ಸುಳ್ಳು ಯೋಜನೆಗಳ ಬಜೆಟ್ ಮಂಡಿಸುತ್ತಿದ್ದಾರೆಂದು, ಕಾಂಗ್ರೆಸ್ಸಿಗರು ಸದನಕ್ಕೆ ಕಿವಿ ಮೇಲೆ ಹೂವಿಟ್ಟುಕೊಂಡು ಬಂದದ್ದು, ವಿಶೇಷವಾಗಿತ್ತು. 

12:16 PM IST

ತೆರಿಗೆ ಮತ್ತು ಆಯವ್ಯಯ ಅಂದಾಜು ಹೇಗಿರಲಿದೆ?

 

12:13 PM IST

110 ಹಳ್ಳಿಗಳಿಗೆ ಕಾವೇರಿ ನೀರು ಲಭ್ಯ

ರಾಜ್ಯ ಬಜೆಟ್‌ನಲ್ಲಿ ಬೆಂಗಳೂರಿಗೆ ಬರೋಬ್ಬರಿ 9,698 ಕೋಟಿ ರೂ. ಅನುದಾನ ನೀಡಲಾಗಿದೆ. ಹವಾಮಾನ ಬದಲಾವಣೆಯ ಪರಿಣಾಮ ತಗ್ಗಿಸಲು ಮತ್ತು ಪ್ರವಾಹವನ್ನು ನಿಯಂತ್ರಿಸಲು 3,000 ಕೋಟಿ ರೂ. ಯೋಜನೆ ಅನುಷ್ಠಾನ ಮಾಡಲಾಗುತ್ತದೆ. ಈ ವರ್ಷ ಕಾವೇರಿ ಕುಡಿಯುವ ನೀರು ಎಲ್ಲರುಗೂ ಲಭ್ಯವಾಗಲಿದೆ.

ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

12:12 PM IST

ಬಜೆಟ್ ಮಂಡನೆ ವೇಳೆ ಹೈ ಡ್ರಾಮಾ: ಕೆಣಕಿದ ಬೊಮ್ಮಾಯಿಗೆ ಕುಟುಕಿದ ಸಿದ್ದು

ಕಾಂಗ್ರೆಸ್'ನವರು ಕಿವಿ ಮೇಲೆ ಹೂವಿಟ್ಟುಕೊಳ್ಳುತ್ತೇನೆ ಎಂದರೆ ಬೇಡ ಎನ್ನುವುದಿಲ್ಲ, ಜನರ ಮೇಲೆ ಕಿವಿ ಮೇಲೆ ಹೂವಿಡುತ್ತಿದ್ದರು. ಈಗ ಜನರೇ ಕಾಂಗ್ರೆಸ್ ಕಿವಿ ಮೇಲೆ ಹೂವಿಡುತ್ತಿದ್ದಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಬಜೆಟ್ ಮಂಡನೆ ವೇಳೆ ಅವರು, ಕಾಂಗ್ರೆಸ್'ಗೆ ಟಾಂಗ್ ನೀಡಿದರು. ಸಿಎಂ ಮಾತಿಗೆ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದು, ಇದೇನು ಬಜೆಟ್ ಭಾಷಣವೇ ಎಂದು ಅವರು ಕಿಡಿ ಕಾರಿದರು. 600 ಭರವಸೆಗಳಲ್ಲಿ 50 ಭರವಸೆಗಳನ್ನೂ ಈಡೇರಿಸಲು ಆಗಿಲ್ಲ ಎಂದು ವಾಗ್ದಾಳಿ ನಡೆಸಿದರು. ಸಿಎಂ ಬಜೆಟ್ ಮಂಡನೆ ವೇಳೆ ಹೈಡ್ರಾಮಾ ನಡೆದಿದ್ದು, ಆಡಳಿತ- ವಿಪಕ್ಷಗಳ ನಡುವೆ ಮಾತಿನ ಚಕಮಕಿ ಏರ್ಪಟ್ಟಿತ್ತು. 

12:10 PM IST

ಈ ಬಾರಿ 70295 ಕೋಟಿ ರೂ ಸಾಲ ಮಾಡಲು ತಿರ್ಮಾನ..

ಈ ಬಾರಿ 70295 ಕೋಟಿ ರೂ ಸಾಲ ಮಾಡಲು ತಿರ್ಮಾನ...
ಇದೇ ವರ್ಷ 17997 ಕೋಟಿ ರೂ ಸಾಲ ಮರುಪಾವತಿಗೆ ನಿಗದಿ....
ಕೋರೋನಾ ಕಾಲದಲ್ಲಿ ರಾಜ್ಯದ ಜನರ ತಲಾ ಆದಾಯ 2.04 ಲಕ್ಷ ರೂ..
ಈ ವರ್ಷ ಜನರ ತಲಾ ಆದಾಯ - 3.32 ಕೋಟಿ ರೂ ಗಳಿಗೆ ಏರಿಕೆ..
ಶಿಶುಮರಣ ಮತ್ತು ತಾಯಿ‌ಮರಣದ ಪ್ರಮಾಣ ರಾಜ್ಯದಲ್ಲಿ ಗಣನೀಯ ಇಳಿಕೆ....

12:07 PM IST

ರಾಮನಗರದಲ್ಲಿ ಭವ್ಯ ರಾಮಮಂದಿರ

ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ ರಾಮನಗರದ ರಾಮದೇವರ ಬೆಟ್ಟದಲ್ಲಿ ಭವ್ಯ ರಾಮಮಂದಿರ ನಿರ್ಮಾಣ ಮಾಡುವ ಬಗ್ಗೆ ಬಜೆಟ್‌ನಲ್ಲಿ ಘೋಷಣೆಯಾಗಿದೆ. ಅದರೊಂದಿಗೆ ರಾಜ್ಯದ ವಿವಿಧ ದೇವಸ್ಥಾನ ಹಾಗೂ ಮಠಗಳ ಜೀರ್ಣೋದ್ದಾರಕ್ಕೆ ಮುಂದಿನ 2 ವರ್ಷಗಳಲ್ಲಿ 1 ಸಾವಿರ ಕೋಟಿ ನೀಡುವುದಾಗಿ ಘೋಷಣೆಯಾಗಿದೆ.

ರಾಮನಗರದಲ್ಲಿ ರಾಮಮಂದಿರ

12:05 PM IST

ರೈತರ ಆರ್ಥಿಕ ಸ್ಥಿತಿ ಸುಧಾರಣೆಗೆ ಒತ್ತು

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ 2023ನೇ ಆರ್ಥಿಕ ಸಾಲಿನ ರಾಜ್ಯ ಬಜೆಟ್ ನಲ್ಲಿ ಕೃಷಿ ಕ್ಷೇತ್ರದ ಆರ್ಥಿಕ ಬೆಳವಣಿಗೆಗೆ ಹೆಚ್ಚಿನ ಒತ್ತು ನೀಡಿದ್ದಾರೆ. ರೈತರಿಗೆ ವಿವಿಧ ಸಹಾಯಧನಗಳ ಘೋಷಣೆ ಜೊತೆಗೆ ಭೂ ಸಿರಿ ಎಂಬ ನೂತನ ಯೋಜನೆಯನ್ನು ಕೂಡ ಘೋಷಿಸಿದ್ದಾರೆ. 

ರೈತರಿಗೆ ದಕ್ಕಿದ್ದೇನು? ಇಲ್ಲಿ ಕ್ಲಿಕ್ಕಿಸಿ

 

 

12:01 PM IST

ಆದಾಯದ ಹಂಚಿಕೆ ಹೇಗೆ?

ಆದಾಯವನ್ನು ಬೊಮ್ಮಾಯಿ ಹೇಗೆ ಹಂಚುತ್ತಿದ್ದಾರೆ?

 

 

11:59 AM IST

ಕಾರ್ಯಕರ್ತರ ಗೌರವ ಧನ ಸಾವಿರ ಏರಿಕೆ, ಸಂತೋಷ ಆದರೆ ಸಾಲದು ಎಂದ ನಾಗಲಕ್ಷ್ಮಿ ಬಾಯಿ

ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರಿಗೆ 1 ಸಾವಿರ ಸಹಾಯಧನ ಹೆಚ್ಚು ಮಾಡಿದ್ದಾರೆ. ಇದನ್ನ ಸ್ವಾಗತ ಮಾಡಿದ‌ ಸಂಘಟನೆ. ಕೊರೋನಾ‌ ಸಂದರ್ಭದಲ್ಲಿ ಆಶಾ ಕಾರ್ಯಕರ್ತರು ಪ್ರಾಣ ಪಣಕ್ಕಿಟ್ಟು ಕೆಲಸ ಮಾಡಿದ್ದಾರೆ. ನಿರಂತರ ಹೋರಾಟ ಮಾಡಿದ್ದರ ಪರಿಣಾಮ 1 ಸಾವಿರ ಹೆಚ್ಚು ಮಾಡಿದ್ದಾರೆ. ಇಂತ ಬೆಲೆಏರಿಕೆ ಸಂದರ್ಭದಲ್ಲಿ ಒಂದು ಸಾವಿರ ತುಂಬಾ ಕಡಿಮೆಯಾಗಿದೆ. ಕನಿಷ್ಠ 12 ಸಾವಿರವಾದ್ರೂ ಆಶಾ ಕಾರ್ಯಕರ್ತೆಯರಿಗೆ ನಿಗದಿಯಾಗಬೇಕಿತ್ತು. ಸರ್ಕಾರದಿಂದ 5 ಸಾವಿರದಿಂದ 6 ಸಾವಿರವಾಗಿದೆ. ಕೇಂದ್ರ ಸರ್ಕಾರದಿಂದ ಮೂರ್ನಾಲ್ಕು ಸಾವಿರ ಬರುತ್ತೆ. ಒಟ್ಟು 8 ರಿಂದ 9 ಸಾವಿರವಷ್ಟೇ ಆಗುತ್ತೆ. ಕನಿಷ್ಠ 12 ಸಾವಿರ ಅನ್ನೋದು ಆಶಾ ಕಾರ್ಯಕರ್ತೆಯರ ಬೇಡಿಕೆಯಾಗಿತ್ತು. ಆರೋಗ್ಯ ವಿಚಾರಕ್ಕೆ ಹಲವು ಬೇಡಿಕೆಗಳನ್ನ ಇಡಲಾಗಿದೆ. ಅದ್ರೆ ಇಂದಿನ ಬಜೆಟ್ ನಲ್ಲಿ ಆಶಾ ಕಾರ್ಯಕರ್ತೆಯರ ಆರೋಗ್ಯಕ್ಕೆ ಬಜೆಟ್ ಇಡಬೇಕಿತ್ತು. 1 ಸಾವಿರ ಹೆಚ್ಚಳ ಸಂತೋಷದ ವಿಚಾರವೇ. ಮುಂದಿನ ದಿನಗಳಲ್ಲಿ ಅದು ಇನ್ನಷ್ಟು ಹೆಚ್ಚಳವಾಗಬೇಕಿದೆ. ರಾಜ್ಯ ಆಶಾ ಕಾರ್ಯಕರಗತೆಯರ ಸಂಘದ ಅಧ್ಯಕ್ಷೆ ನಾಗಲಕ್ಷ್ಮಿ ಬಾಯಿ ಹೇಳಿಕೆ

11:53 AM IST

ಎಲ್ಲಿಂದ ಎಷ್ಟು ಆದಾಯ ತರುತ್ತಾರೆ ಬೊಮ್ಮಾಯಿ?

ಆದಾಯ ಮೂಲ ಎಲ್ಲಿಯದ್ದು ಎಂದು ವಿವರಿಸಿದ ಮೋದಿ
 

 

11:49 AM IST

ಕ್ಯಾನ್ಸರ್ ರೋಗ ತಡೆಗೆ ಜೀವಸುಧೆ ತಪಸಣಾ ಶಿಬಿರ

6 ಹೊಸ ಇಎಸ್‌ಐ ಆಸ್ಪತ್ರೆ, ಮನೆ ಮನೆಗೆ ಆರೋಗ್ಯ ಹೆಸರಲ್ಲಿ ಹಳ್ಳಿಗಳಲ್ಲಿ ಆರೋಗ್ಯ ಶಿಬಿರ. ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳ ಸಂಖ್ಯೆ ಹೆಚ್ಚಳ. ಉತ್ತರ ಕನ್ನಡ ಜಿಲ್ಲೆಯ ಜನತೆಯ ಬಹುದಿನಗಳ ಬೇಡಿಕೆಯಾದ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯನ್ನು ಈ ಸಲದ ಬಜೆಟ್‌ನಲ್ಲಿ ಸಿಎಂ ಘೋಷಿಸಿದ್ದಾರೆ. ಇದಲ್ಲದೆ ಕ್ಷಯ ರೋಗಿಗಳ ತಪಾಸಣೆಗೆ ಯಂತ್ರಗಳ ಘೋಷಣೆ. ಕ್ಯಾನ್ಸರ್‌ ರೋಗ ತಡೆಗೆ ಜೀವಸುಧೆ ಎಂಬ ತಪಾಸಣಾ ಶಿಬಿರ

11:46 AM IST

ಬೆಂಗಳೂರಲ್ಲಿ ಮತ್ತೊಂದಿಷ್ಟು ನಮ್ಮ ಕ್ಲಿನಿಕ್, ಕೆಲವೆಡೆ ಸ್ಮಾರ್ಟ್ ವರ್ಚುಯಲ್ ಕ್ಲಿನಿಕ್

ಬೆಂಗಳೂರಿನಲ್ಲಿ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆಗಳನ್ನು ದೊರಕಿಸುವುದು ಸರ್ಕಾರದ ಆದ್ಯತೆಯಾಗಿದೆ. ಈ ಉದ್ದೇಶಕ್ಕಾಗಿ 2022-23 ನೇ ಸಾಲಿನಲ್ಲಿ 243 ವಾರ್ಡ್‌ಗಳಲ್ಲಿ ನಮ್ಮ ಕ್ಲಿನಿಕ್ ಮತ್ತು 27 ಸ್ಮಾರ್ಟ್ ವರ್ಚುಯಲ್ ಕ್ಲಿನಿಕ್‌ಗಳನ್ನು ಅನುಮೋದಿಸಲಾಗಿದೆ.

11:44 AM IST

ಅಂತರ್ಜಲ ಮಟ್ಟ ಹೆಚ್ಚಿಸಲು ಜಲನಿಧಿ ಯೋಜನೆ

ರೈತರ ಜಮೀನುಗಳಲ್ಲಿ ಜಲಹೊಂಡ ನಿರ್ಮಿಸಿ ನೀರು ಸಂರಕ್ಷಣಾ ಕಾಮಗಾರಿಗಳಿಂದ ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಜಲನಿಧಿ ಎಂಬ ಯೋಜನೆಯನ್ನು ಪ್ರಾರಂಭಿಸಲಾಗುವುದು. ನರೇಗಾ ಯೋಜನೆಯ ಸಮನ್ವಯದೊಂದಿಗೆ ಜಲಹೊಂಡವನ್ನು ನಿರ್ಮಿಸಲು ಪ್ರೋತ್ಸಾಹಿಸಲಾಗುವುದು.

11:43 AM IST

ಸಮುದಾಯಗಳತ್ತ ಬೊಮ್ಮಾಯಿ ಚಿತ್ತ, ಬಂಜಾರ ಅಕಾಡೆಮಿ ಸ್ಥಾಪಿಸುವುದಾಗಿ ಘೋಷಣೆ

ಕರ್ನಾಟಕದ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನಮ್ಮ ಸರ್ಕಾರವು ಬದ್ಧವಾಗಿದೆ. ಈ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಬಂಜಾರ ಸಂಸ್ಕೃತಿ ಮತ್ತು ಅಕಾಡೆಮಿಯನ್ನು ಹಾಗೂ ಯಕ್ಷರಂಗಾಯಣವನ್ನು ಸ್ಥಾಪಿಸಲಿದೆ.

11:42 AM IST

ಗಡಿನಾಡಲ್ಲಿ ಕನ್ನಡವೇ ಸಾರ್ವಭೌಮ, ಭಾಷಾ ಬೆಳವಣಿಗೆಗೆ ಆದ್ಯತೆ

ಗಡಿನಾಡು ಪ್ರದೇಶದಲ್ಲಿ ಕನ್ನಡ ಭಾಷೆ, ಕಲೆ, ಶಿಕ್ಷಣ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಪ್ರಾಶಸ್ತ್ಯವನ್ನು ನೀಡುವುದಕ್ಕಾಗಿ ಹಾಗೂ ಗಡಿ ಪ್ರದೇಶಗಳ ರಸ್ತೆಗಳ ಹಾಗೂ ಸಮಗ್ರ ಅಭಿವೃದ್ಧಿಗೆ ವಿವಿಧ ಇಲಾಖೆಗಳ ಮುಖಾಂತರ 150 ಕೋಟಿ ರೂ. ಅನುದಾನ.

11:40 AM IST

ಪ್ರವಾಸೋದ್ಯಮಕ್ಕೂ ಅಲ್ಪ ಸ್ವಲ್ಪ ನೀಡಿದ ಬೊಮ್ಮಾಯಿ

ನಂದಿ ಗಿರಿಧಾಮ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆ, ನಂದಿಬೆಟ್ಟಕ್ಕೆ ಖಾಸಗಿ-ಸರ್ಕಾರಿ ಸಹಭಾಗಿತ್ವದಲ್ಲಿ ರೋಪ್‌ ವೇ ನಿರ್ಮಾಣ, ಪ್ರವಾಸಿ ಗೈಡ್‌ಗಳ ಮಾಸಿಕ ಪ್ರೋತ್ಸಾಹ ಧನ 2 ರಿಂದ 5 ಸಾವಿರಕ್ಕೆ ಏರಿಕೆ, ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ರೂ. ಕೋಟಿ

11:36 AM IST

'ಮುಖ್ಯಮಂತ್ರಿ ವಿದ್ಯಾಶಕ್ತಿ' ಯೋಜನೆ ಆರಂಭ

 ರಾಜ್ಯದ ಶಿಕ್ಷಣ ವಲಯದಲ್ಲಿ ಈ ದಿನ ಅವಿಸ್ಮರಣೀಯ ದಿನವಾಗಲಿದೆ. ರಾಜ್ಯದ ಎಲ್ಲಾ ಪ್ರೌಢ ಶಾಲಾ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಹೊಂದಲು ಅನುವು ಮಾಡಿಕೊಡುವ ದೃಷ್ಟಿಯಿಂದ 'ಮುಖ್ಯಮಂತ್ರಿ ವಿದ್ಯಾಶಕ್ತಿ' ಯೋಜನೆಯನ್ನು ಪ್ರಾರಂಭಿಸಲಾಗುತ್ತಿದೆ. ಇದರಡಿಯಲ್ಲಿ ಸರ್ಕಾರಿ ಪದವಿಪೂರ್ವ ಮತ್ತು ಸರ್ಕಾರಿ ಪದವಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ ನೀಡಲಾಗುವುದು. ಈ ಉಚಿತ ಉನ್ನತ ಶಿಕ್ಷಣದಿಂದ ರಾಜ್ಯದ 8 ಲಕ್ಷ ವಿದ್ಯಾರ್ಥಿಗಳು, ಅನುಕೂಲ ಪಡೆಯಲಿದ್ದಾರೆ.

- ರಾಜ್ಯದಲ್ಲಿ ಈಗಾಗಲೇ 19 ಲಕ್ಷ ಶಾಲಾ-ಕಾಲೇಜು ವಿದ್ಯಾರ್ಥಿಗಳು ತಮ್ಮ ಶಿಕ್ಷಣಕ್ಕಾಗಿ ಸಾರ್ವಜನಿಕ ಬಸ್ ಸೇವೆಯನ್ನು ಅವಲಂಬಿಸಿರುತ್ತಾರೆ. ಇಂತಹ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ವರ್ಷದಲ್ಲಿ ಸಾರಿಗೆ ನಿಗಮಗಳ ಮೂಲಕ 100 ಕೋಟಿ ರೂ. ವೆಚ್ಚದಲ್ಲಿ 1,000 ಹೊಸ ಕಾರ್ಯಾಚರಣೆಗಳನ್ನು ಮಾಡಲು 'ಮಕ್ಕಳ ಬಸ್ಸು' ಎಂಬ ಯೋಜನೆಯನ್ನು ಪ್ರಾರಂಭಿಸಲಾಗುವುದು. ಇದರಿಂದ ಹೆಚ್ಚುವರಿಯಾಗಿ 2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

- ರಾಜ್ಯ ಸರ್ಕಾರವು ಶಾಲಾ ಕಾಲೇಜುಗಳಲ್ಲಿ ಅಗತ್ಯ ಮೂಲ ಸೌಕರ್ಯ ಒದಗಿಸುವ ಮೂಲಕ ವಿದ್ಯಾರ್ಥಿಗಳಿಗೆ ಕಲಿಕಾ ವಾತಾವರಣ ಕಲ್ಪಿಸುವ ಉದ್ದೇಶ ಹೊಂದಿದೆ. ನಿಟ್ಟಿನಲ್ಲಿ ವಿವೇಕ ಯೋಜನೆಯಡಿಯಲ್ಲಿ 7,601 ಶಾಲೆಗಳ ಅಭಿವೃದ್ಧಿ.

11:27 AM IST

ಮಹಿಳೆಯರಿಗೆ ಬಂಪರ್

ರಾಜ್ಯದ ಮಹಿಳಾ ಕಾರ್ಮಿಕರಿಗೆ ತಲಾ 500 ರೂ. ಸಹಾಯಧನ ಹಾಗೂ ಉಚಿತ ಬಸ್‌ ಪಾಸ್‌ ನೀಡಲಾಗುವುದು. ಮತ್ತೊಂದೆಡೆ ಎಲ್ಲ ಶಾಲಾ- ಕಾಲೇಜು ವಿದ್ಯಾರ್ಥಿನಿಯರಿಗೂ ಉಚಿತ ಬಸ್‌ ಪಾಸ್‌ ನೀಡಲಾಗುವುದು.
 

ಮಹಿಳೆಯರಿಗೆ ಬಜೆಟ್‌ನಲ್ಲಿ ಸಿಕ್ಕಿದ್ದೇನು?

11:21 AM IST

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಾಲ್ಗೊಳ್ಳಲು ಯುವಸ್ನೇಹಿ ಯೋಜನೆ

ಪದವಿ ಶಿಕ್ಷಣವನ್ನು ಮುಗಿಸಿ, ಮೂರು ವರ್ಷಗಳ ನಂತರವೂ ಯಾವುದೇ ಉದ್ಯೋಗ ದೊರೆಯದ ಯುವಕರಿಗೆ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹ ನೀಡಲು 'ಯುವಸ್ನೇಹಿ' ಎಂಬ ಹೊಸ ಯೋಜನೆಯಡಿ ತಲಾ 2,000 ರೂ. ಗಳ ಒಂದು ಈ ಬಾರಿಯ ಆರ್ಥಿಕ ನೆರವು

11:19 AM IST

ಯಾವ್ಯಾವ ಇಲಾಖೆಗೆ ಎಷ್ಟೆಷ್ಟು ಅನುದಾನ ಹಂಚಿಕೆ

ಶಿಕ್ಷಣ: 37,960 ಕೋಟಿ
ಜಲಸಂಪನ್ಮೂಲ: 22,854 ಕೋಟಿ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್: 20,494 ಕೋಟಿ
ನಗರಾಭಿವೃದ್ಧಿ: 17,938 ಕೋಟಿ
ಕಂದಾಯ: 15,943 ಕೋಟಿ
ಆರೋಗ್ಯ: 15,151 ಕೋಟಿ
ಒಳಾಡಳಿತ ಮತ್ತು ಸಾರಿಗೆ: 14509 ಕೋಟಿ
ಇಂಧನ: 13,803 ಕೋಟಿ
ಸಮಾಜ ಕಲ್ಯಾಣ: 11,163 ಕೋಟಿ
ಲೋಕೋಪಯೋಗಿ: 10,741 ಕೋಟಿ
ಕೃಷಿ ಮತ್ತು ತೋಟಗಾರಿಕೆ: 9,456 ಕೋಟಿ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ: 5,676 ಕೋಟಿ
ಆಹಾರ ಮತ್ತು ನಾಗರೀಕ ಸರಬರಾಜು: 4,600 ಕೋಟಿ
ವಸತಿ: 3,787 ಕೋಟಿ
ಇತರೆ: 1,16,968 ಕೋಟಿ

11:09 AM IST

ಕೃಷಿಯಲ್ಲಿ ತಂತ್ರಜ್ಞಾನ ಅಳವಡಿಕೆಗೆ ಆದ್ಯತೆ

ಕೃಷಿ ಕ್ಷೇತ್ರದಲ್ಲಿ ನಮ್ಮ ಸರ್ಕಾರ ಹಲವು ಮಹತ್ವಪೂರ್ಣ ಕ್ರಮಗಳನ್ನು ಕೈಗೊಂಡಿದೆ. ತಂತ್ರಜ್ಞಾನ ಹಾಗೂ ವೈಜ್ಞಾನಿಕ ಪದ್ಧತಿ ಅಳವಡಿಕೆಯೊಂದಿಗೆ ರೈತರು ಮಾಹಿತಿಪೂರ್ಣ ನಿರ್ಧಾರ ಕೈಗೊಳ್ಳಲು ಪೂರಕ ಕ್ರಮಗಳನ್ನು ಸರ್ಕಾರ ಜಾರಿಗೊಳಿಸಲಿದೆ. ಇದಲ್ಲದೆ, ಕೃಷಿಯನ್ನು ಲಾಭದಾಯಕವಾಗಿಸಲು ಕೃಷಿ ಉತ್ಪನ್ನಗಳ ಮೌಲ್ಯ ವರ್ಧನೆ ಮತ್ತು ರಫ್ತಿಗೆ ಒತ್ತು ನೀಡಲಾಗುತ್ತಿದೆ. ಸಮಗ್ರ ಕೃಷಿ ಪದ್ಧತಿಯನ್ನು ಪ್ರೋತ್ಸಾಹಿಸುವ ಮೂಲಕ ರೈತರ ಆದಾಯದಲ್ಲಿ ಸ್ಥಿರತೆ ತರಲು ನಮ್ಮ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.

11:07 AM IST

ಕಳಸಾ ಬಂಡೂರಿ ಯೋಜನೆಗೆ 80 ಕೋಟಿ ರೂ.

ನರೇಗಾ ಯೋಜನೆ - 1,000 ಕೋಟಿ
ಕಳಸಾ ಬಂಡೂರಿ - 80 ಕೋಟಿ ರೂ.
ಗಂಗಾ ಕಲ್ಯಾಣ್ 675 ಕೋಟಿ
ಮಹದಾಯಿ - 1,000 ಕೋಟಿ
ಬೆಂಗಳೂರು ಟ್ರಾಫಿಕ್ - 150 ಕೋಟಿ
ಅಂಜನಾದ್ರಿ ಬೆಟ್ಟ - 100 ಕೋಟಿ

ನೀರಾವರಿ ಕ್ಷೇತ್ರ - 25 ಸಾವಿರ ಕೋಟಿ
ಪ್ರಾಣಿ ಕಲ್ಯಾಣ ಮಂಡಳಿ - 5 ಕೋಟಿ ರೂ.
ಬಳ್ಳಾರಿ ಮೆಗಾ ಡೈರಿ - 100 ಕೋಟಿ ರೂ.
-------------
ಬಸ್ ಖರೀದಿ - 500 ಕೋಟಿ 
ಸಾರಿಗೆ ಇಲಾಖೆ - 8,007 ಕೋಟಿ ರೂ
ಗಣಿ ಮತ್ತು ಭೂವಿಜ್ಞಾನ - 7,500 ಕೋಟಿ 
--------------
ಒಟ್ಟು 6 ವಲಯವಾರು ವಿಂಗಡಣೆ
ಆಡಳಿತ ಸುಧಾರಣೆ ಸಾರ್ವಜನಿಕ ಸೇವೆಗಳು..
ಸಂಸ್ಕೃತಿ ನೈಸರ್ಗಿಕ ಸಂಪನ್ಮೂಲಗಳ ರಕ್ಷಣೆ..
ಬೆಂಗಳೂರು ಸಮಗ್ರ ಅಭಿವೃದ್ಧಿ..
ಆರ್ಥಿಕ ಅಭಿವೃದ್ಧಿ..
ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ..
ಕೃಷಿ ಮತ್ತು ಪೂರಕ ಚಟುವಟಿಕೆ ‌..
ಒಟ್ಟು ಬಜೆಟ್ ಗಾತ್ರ 309182 ಕೋಟಿ

11:05 AM IST

ಬೆಂಗಳೂರು ನಗರದಲ್ಲಿ ಶ್ರೀ ಭುವನೇಶ್ವರಿ ಥೀಂ ಪಾರ್ಕ್

ಗ್ರಾಮ ಸಹಾಯಕರ ಗೌರವ ಧನ ಮಾಸಿಕ 13ರಿಂದ 14 ಸಾವಿರಕ್ಕೆ ಏರಿಕೆ
ಗ್ರಾಮ ಸಹಾಯಕರ ಹುದ್ದೆಗೆ ಜನಸೇವಕ ಎಂದು ಮರುನಾಮಕರಣ
ವನ್ಯಜೀವಿಗಳ ಪ್ರಾಣ ಹಾನಿ ಪರಿಹಾರ 7.5 ಲಕ್ಷದಿಂದ 15 ಲಕ್ಷ ರೂ.ಗೆ ಏರಿಕೆ
+++++++++
ಪದವಿ ಮುಗಿಸಿ ಉದ್ಯೋಗವಿಲ್ಲದ ಯುವಕರಿಗೆ ಯುವ ಸ್ನೇಹಿ ಯೋಜನೆ
ನಿರುದ್ಯೋಗಿ ಪದವೀಧರರಿಗೆ ಮಾಸಿಕ 2 ಸಾವಿರ ಆರ್ಥಿಕ ನೆರವು
+++++++
ಐಟಿಐ 3 ತಿಂಗಳ ತರಬೇತಿಗೆ 1,500 ರೂ. ಶಿಷ್ಯವೇತನ
ಐಟಿಐ ಅಪ್ರೆಂಟಿಸ್ ಕಾರ್ಯಕ್ರಮ ತಿಂಗಳಿಗೆ 1,500 ಶಿಷ್ಯವೇತನ
ಬದುಕುವ ದಾರಿ ಯೋಜನೆಯಡಿ ಹೊಸ ಯೋಜನೆ ಘೋಷಣೆ
+++++
ಗ್ರಾಮೀಣ ಸ್ವಯಂ ಉದ್ಯೋಗ ಮಾಡುವವರಿಗೆ ಪ್ರೋತ್ಸಾಹ ಧನ
ಒಂದು ಲಕ್ಷದಿಂದ 5 ಲಕ್ಷದವರೆಗೆ ಸಹಾಯಧನ, ಸುತ್ತುನಿಧಿ ಪ್ರೋತ್ಸಾಹ
++++++++
ಬೆಂಗಳೂರು ನಗರದಲ್ಲಿ ಶ್ರೀ ಭುವನೇಶ್ವರಿ ಥೀಂ ಪಾರ್ಕ್
+++++++
ಬೆಂಗಳೂರು ನಗರದಲ್ಲಿ 250  ಶಿ ಟಾಯ್ಲೆಟ್ ನಿರ್ಮಾಣಕ್ಕೆ 50 ಕೋಟಿ
ಫೀಡಿಂಗ್ ರೂಂ, ಮೊಬೈಲ್ ಚಾರ್ಜಿಂಗ್, ತುರ್ತು ಎಸ್ಒಸಿ ಸೌಲಭ್ಯ ಒದಗಿಸಲು ಆದ್ಯತೆ.
___
ಬೆಂಗಳೂರಿಗೆ 243 ವಾರ್ಡ್‌ಗಳಲ್ಲಿ ನಮ್ಮ ಕ್ಲಿನಿಕ್
27 ಸ್ಮಾರ್ಟ್ ವರ್ಚುವಲ್ ಕ್ಲಿನಿಕ್
50 ಡಯಾಲಿಸಿಸ್ ಹಾಸಿಗೆ, 300 ಹಾಸಿಗೆಗಳ ಆಸ್ಪತ್ರೆ
ಬೆಂಗಳೂರು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ 180 ಕೋಟಿ
+++++++++
ಬಿಬಿಎಂಪಿ ವ್ಯಾಪ್ತಿಯ 110 ಗ್ರಾಮಗಳಿಗೆ ಕುಡಿಯುವ ನೀರು : 200 ಕೋಟಿ
ಹೊನ್ನಾವರದಲ್ಲಿ ಚೆನ್ನೈಭೈರಾದೇವಿ ಸ್ಮಾರಕ ನಿರ್ಮಾಣ
ಕರ್ನಾಟಕದ ಗೋಲ್ ಗುಂಬಜ್, 
ಅಬಕಾರಿ ತೆರಿಗೆ : ಜೂನ್ ಒಳಗೆ ಮುಂಚಿತವಾಗಿ ಪಾವತಿಸಿದ್ದರೆ ಬಡ್ಡಿ, ದಂಡ ವಿನಾಯಿತಿ
ವೃತ್ತಿ ತೆರಿಗೆ ವಿನಾಯಿತಿ : ಸಂಬಳದಾರರಿಗೆ ಮಾಸಿಕ 15ರಿಂದ 25 ಸಾವಿರದವರೆಗೆ ಏರಿಕೆ
ಟಯರ್ 2 ನಗರಗಳಲ್ಲಿ ಮಿನಿ ಥಿಯೇಟರ್ ನಿರ್ಮಾಣಕ್ಕೆ ಪ್ರೋತ್ಸಾಹ ಧನ

11:03 AM IST

ಕಾಡುಪ್ರಾಣಿ ದಾಳಿಯಿಂದ ಪ್ರಾಣ ಕೊಳೆದು ಕೊಂಡವರಿಗೆ ಪರಿಹಾರ ಹೆಚ್ಚಳ

ಕಾಡುಪ್ರಾಣಿ ದಾಳಿಯಿಂದ ಪ್ರಾಣ ಕೊಳೆದು ಕೊಂಡವರಿಗೆ 7.50 ಲಕ್ಷದಿಂದ 15 ಲಕ್ಷಕ್ಕೆ ಪರಿಹಾರ  ಹೆಚ್ಚಳ
ಬೆಳೆಹಾನಿಗೆ ನೀಡುವ ಪರಿಹಾರ ಧನವೂ ದ್ವಿಗುಣ, ಮೈಸೂರು, ಮಂಡ್ಯ ಜಿಲ್ಲೆಯಲ್ಲಿ ಚಿರತೆ ಹಾವಳಿ ತಡೆಯಲು ಸಿಬ್ಬಂದಿ ನೇಮಕ
ಚಿರತೆ ಹಾವಳಿ ತಡೆಗೆ 199 ಸಿಬ್ಬಂದಿಗಳ ನೇಮಕ
ಕಲಬುರಗಿ ಜಿಲ್ಲೆಯ ಮಳಖೇಡ ಕೋಟೆ ಸಂಸ್ಕರಣೆಗೆ 20 ಕೋಟಿ ರೂ. ಅನುದಾನ
ರಕ್ಕಸಗಿ, ತಂಗಡಗಿ, ತಾಳಿಕೋಟೆ ಐತಿಹಾಸಿಕ ತಾಣಗಳ ಅಭಿವೃದ್ಧಿ
ಚಾಮುಂಡಿ ಬೆಟ್ಟದಲ್ಲಿ 10 ಕೋಟಿ ವೆಚ್ಚದಲ್ಲಿ ಮ್ಯೂಸಿಯಂ, ಕಲಾ ಗ್ಯಾಲರಿ ನಿರ್ಮಾಣ
ಹೊನ್ನಾವರದಲ್ಲಿ ಚನ್ನಭೈರಾದೇವಿ ಸ್ಮಾರಕ ಪಾರ್ಕ್ ನಿರ್ಮಾಣ
ರಾಮನಗರ ಜಿಲ್ಲೆ ಮಂಚನಬೆಲೆ ಡ್ಯಾಂ ಬಳಿ 10 ಎಕರೆಯಲ್ಲಿ 10 ಕೋಟಿ ವೆಚ್ಚದಲ್ಲಿ ರೆಸಾರ್ಟ್ ನಿರ್ಮಾಣ.

11:02 AM IST

‘ನಮ್ಮ ನೆಲೆ’ ಹೊಸ ಯೋಜನೆಯಡಿ ಆರ್ಥಿಕ ದುರ್ಬಲವರಿಗೆ 10 ಸಾವಿರ ನಿವೇಶನ

60 ತಾಲೂಕುಗಳಲ್ಲಿ ತಲಾ ಒಂದು ಪದವಿ ಪೂರ್ವ ಕಾಲೇಜು ಅಭಿವೃದ್ಧಿಗೆ ಕ್ರಮ
ಕಸ್ತೂರಬಾ ಗಾಂಧಿ ಬಾಲಕಿಯರ ವಸತಿ ನಿಲಯಗಳಲ್ಲಿ Dormitory ನಿರ್ಮಾಣ
47 ವಸತಿ ಶಾಲೆಗಳ ದುರಸ್ತಿ ಮತ್ತು ಸ್ಮಾರ್ಟ್ ಕ್ಲಾಸ್‌ರೂಮ್ ಗಳ ಅಭಿವೃದ್ಧಿ.
73 ಕರ್ನಾಟಕ ಪಬ್ಲಿಕ್ ಶಾಲೆಗಳು, 50 ಆದರ್ಶ ವಿದ್ಯಾಲಯಗಳಲ್ಲಿ 15 ಕೋಟಿ ರೂ. ವೆಚ್ಚದಲ್ಲಿ 'ಸೃಷ್ಟಿ' ಟಿಂಕರಿಂಗ್ ಲ್ಯಾಬ್ ಸ್ಥಾಪನೆ
23 ತಾಲೂಕುಗಳಲ್ಲಿ ಹೊಸದಾಗಿ ಕರ್ನಾಟಕ ಪಬ್ಲಿಕ್ ಶಾಲೆ ಆರಂಭ
46 ಶಾಲೆಗಳ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ 
ವಿದೇಶದಲ್ಲಿ ವ್ಯಾಸಂಗ ಮಾಡುವ ಮುಸ್ಲಿಂ ವಿದ್ಯಾರ್ಥಿಗಳಿಗೆ 20 ಲಕ್ಷ ರೂ. ಸಾಲ
ಶೂನ್ಯ ಬಡ್ಡಿ ದರದಲ್ಲಿ 20 ಲಕ್ಷ ರೂವರೆಗೂ ಸಾಲ
ಎಸ್ಸಿ/ ಎಸ್ಟಿ ಗುತ್ತಿಗೆದಾರರಿಗೆ ಕಾಮಗಾರಿ ಮೀಸಲಾತಿ ಹೆಚ್ಚಳ
50 ಲಕ್ಷದಿಂದ 1 ಕೋಟಿ ರೂ.ಗೆ ಹೆಚ್ಚಳ
ಐಐಟಿ/ ಐಐಎಂ, ಐಐಎಸ್ಸಿ/ ಎನ್ಐಟಿ ಸಂಸ್ಥೆಗಳಿಗೆ ಪ್ರವೇಶ ಪಡೆಯುವ 
ಎಸ್ಸಿ/ ಎಸ್ಟಿ ವಿದ್ಯಾರ್ಥಿಗಳ ಪ್ರೋತ್ಸಾಹ ಧನ 4 ಲಕ್ಷಕ್ಕೆ ಏರಿಕೆ
ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳ ಮಾಸಿಕ ಭೋಜನ ವೆಚ್ಚ 150 ರೂ.ಗೆ ಏರಿಕೆ

11:01 AM IST

ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರ್ಯಾಜುಯಿಟಿ ಕೊಡಲು ಅನುದಾನ ಮೀಸಲು

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸೇವೆಯನ್ನು ಗುರುತಿಸಿರುವ ರಾಜ್ಯ ಸರ್ಕಾರವು 2023-24ನೇ ಸಾಲಿನಿಂದ ಅವರಿಗೆ ಉಪಧನವನ್ನು (Gratuity) ನೀಡಲು ನಿರ್ಧರಿಸಲಾಗಿದೆ. ಇದಕ್ಕಾಗಿ 40 ಕೋಟಿ ರೂ. ಗಳ ಅನುದಾನ ಮೀಸಲಿಡಲಾಗಿದೆ.

25 ವರ್ಷಗಳ ಅರ್ಹತಾ ಸೇವೆಯನ್ನು ಪೂರ್ಣಗೊಳಿಸಿದ ಹಾಗೂ ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ 50,000 ರೂ. ಗಳು ಹಾಗೂ ಅಂಗನವಾಡಿ ಸಹಾಯಕಿಯರಿಗೆ 30,000 ರೂ. ಗಳ ಆರ್ಥಿಕ ಭದ್ರತೆಯನ್ನು ಒಂದು ಬಾರಿಗೆ ನೀಡಿ ಸ್ವಯಂ ನಿವೃತ್ತಿಗೆ ಅವಕಾಶ ಕಲ್ಪಿಸಲಾಗುವುದು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯನ್ನು ವಿಭಜಿಸಿ ಮಕ್ಕಳ ಪೌಷ್ಟಿಕತೆ ಕುರಿತು ಒಂದು ಪ್ರತ್ಯೇಕ ಇಲಾಖೆ ಮತ್ತು ಮಹಿಳಾ ಸಬಲೀಕರಣ ಇಲಾಖೆಯನ್ನು ರೂಪಿಸಲು ನಿರ್ಧರಿಸಿದೆ.

ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಮಹಿಳೆಯರು ದುಡಿಮೆಯಲ್ಲಿ ತೊಡಗಿಸಿಕೊಳ್ಳಲು ಉತ್ತಮ ಶಿಶುಪಾಲನಾ ಸೌಲಭ್ಯಗಳು ಅಗತ್ಯವಾಗಿದೆ. ಇದಕ್ಕಾಗಿ 2022-23ನೇ ಸಾಲಿನ ಆಯವ್ಯಯದಲ್ಲಿ ಪ್ರಸ್ತಾಪಿಸಿದ್ದ ಕಾರ್ಯಕ್ರಮವನ್ನು ವಿಸ್ತರಿಸಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗಾಗಿ ನಗರ ಪ್ರದೇಶದಲ್ಲಿ 4,000 ಶಿಶುಪಾಲನಾ ಕೇಂದ್ರಗಳು ಮತ್ತು ಗ್ರಾಮೀಣ ಭಾಗದಲ್ಲಿ ನರೇಗಾ

10:59 AM IST

ಒಟ್ಟು 6 ವಲಯವಾರು ವಿಂಗಡಣೆ

ಆಡಳಿತ ಸುಧಾರಣೆ ಸಾರ್ವಜನಿಕ ಸೇವೆಗಳು..
ಸಂಸ್ಕೃತಿ ನೈಸರ್ಗಿಕ ಸಂಪನ್ಮೂಲಗಳ ರಕ್ಷಣೆ..
ಬೆಂಗಳೂರು ಸಮಗ್ರ ಅಭಿವೃದ್ಧಿ..
ಆರ್ಥಿಕ ಅಭಿವೃದ್ಧಿ..
ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ..
ಕೃಷಿ ಮತ್ತು ಪೂರಕ ಚಟುವಟಿಕೆಗಳಿಗೆ ಆದ್ಯತೆ.

10:58 AM IST

ಶಕ್ತಿ ಯೋಜನೆಯಡಿ ಮಹಿಳಾ ಕೃಷಿ ಕಾರ್ಮಿಕರ ಕಾಳಜಿ

ಶಕ್ತಿ ಯೋಜನೆಯನ್ನು ಜಾರಿಗೊಳಿಸಲು ನಿರ್ಧರಿಸಿದೆ. ಇದರಡಿಯಲ್ಲಿ: ಕುಟುಂಬ ನಿರ್ವಹಣೆಯೊಂದಿಗೆ ಮನೆಯ ಆರ್ಥಿಕ ಸುಧಾರಣೆಗಾಗಿ ಶ್ರಮಿಸುವ ಮಹಿಳಾ ಕೃಷಿ ಕಾರ್ಮಿಕರ ಕುರಿತು ನಮ್ಮ ಸರ್ಕಾರ ಹೊಂದಿರುವ ಕಾಳಜಿಯ ಪ್ರತೀಕವಾಗಿ, ಶ್ರಮ ಶಕ್ತಿ ಎಂಬ ಹೊಸ ಯೋಜನೆಯನ್ನು ಜಾರಿಗೆ ತರಲಾಗುವುದು. ಈ ಯೋಜನೆಯಡಿ ರಾಜ್ಯ ಸರ್ಕಾರವು ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಪ್ರತಿ ತಿಂಗಳು ತಲಾ 500 ರೂ. ಗಳ ಸಹಾಯ ಧನವನ್ನು ಡಿ.ಬಿ.ಟಿ. ಮೂಲಕ ನೀಡಲಿದೆ. Industry ಪ್ರಾರಂಭಿಸಲು ಗೃಹಿಣಿಯರಿಗೆ ಮನೆಯಲ್ಲಿಯೇ ಲಾಭದಾಯಕ ಉದ್ಯಮ (Home based) ಅನುವಾಗುವಂತೆ ಪ್ರಸಕ್ತ ವರ್ಷದಲ್ಲಿ ಒಂದು ಲಕ್ಷ ಮಹಿಳೆಯರಿಗೆ ಉಚಿತವಾಗಿ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡಲಾಗುವುದು.

* ಬಾಲಕಿಯರು ಮತ್ತು ಮಹಿಳೆಯರ ಸಬಲೀಕರಣದ ಕುರಿತು life cycle approach ಹೊಂದಲು ನಿರ್ಧರಿಸಲಾಗಿದೆ. ಅಪೌಷ್ಟಿಕತೆ ಮತ್ತು ರಕ್ತಹೀನತೆ ತಡೆಯಲು ಆರೋಗ್ಯ ಪುಷ್ಟಿ' ಯೋಜನೆಯಡಿ ಮಾತೃಪೂರ್ಣ ಯೋಜನೆಯಂತೆ ಅರ್ಹ ವಿವಾಹಿತ ಮಹಿಳೆಯರಿಗೆ ಅಂಗನವಾಡಿಗಳಲ್ಲಿ ಬಿಸಿಯೂಟ ಮತ್ತು Prophylactic IFA ಮಾತ್ರೆಗಳನ್ನು ಜೀವಿತಾವಧಿಯಲ್ಲಿ ಒಂದು ಬಾರಿ ಗರಿಷ್ಠ 6 ತಿಂಗಳ ಅವಧಿಗೆ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಒದಗಿಸಲಾಗುವುದು. ಈ ಯೋಜನೆಯಡಿ ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಿಗೆ ಒತ್ತು ನೀಡಲಾಗುವುದು.

10:55 AM IST

ಮಹಿಳೆಯರು ಆರ್ಥಿಕವಾಗ ಸ್ವಾವಲಂಬಿಯಾಗಲು ವಿಶೇಷ ಯೋಜನೆ

ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆರ್ಥಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದನ್ನು ಉತ್ತೇಜಿಸಲು ಸರ್ಕಾರ ಒತ್ತು ನೀಡಿದೆ. ಸ್ವಸಹಾಯ ಗುಂಪುಗಳಿಗೆ ಪ್ರಮಾಣಿತ ಉತ್ಪನ್ನಗಳನ್ನು ತಯಾರಿಸಲು ನೆರವಾಗುವ ಸ್ತ್ರೀ ಸಾಮರ್ಥ್ಯ ಯೋಜನೆಯಡಿ 50 ಸಾವಿರ ಸ್ವಸಹಾಯ ಗುಂಪುಗಳಿಗೆ ತಲಾ ಒಂದು ಲಕ್ಷ ರೂ. ನಂತೆ ಒಟ್ಟು 500 ಕೋಟಿ ರೂ. ಗಳ ಸಮುದಾಯ ಬಂಡವಾಳ ನಿಧಿ ನೀಡಲು ಕ್ರಮ ವಹಿಸಲಾಗುತ್ತಿದೆ. ವಿವಿಧ ಸ್ವಯಂ ಉದ್ಯೋಗ ಯೋಜನೆಗಳಡಿ 7,239 ಸ್ವಸಹಾಯ ಸಂಘಗಳಿಗೆ 108 ಕೋಟಿ ರೂ. ಸಮುದಾಯ ಬಂಡವಾಳ ನಿಧಿ ಹಾಗೂ 5.68 ಲಕ್ಷ ಸ್ವಸಹಾಯ ಗುಂಪುಗಳಿಗೆ ಬ್ಯಾಂಕ್ ಸಂಪರ್ಕದಡಿ 11,391 ಕೋಟಿ ರೂ. ಸಾಲವನ್ನು ಒದಗಿಸಲಾಗಿದೆ. ವೈಯಕ್ತಿಕ ಮತ್ತು ಗುಂಪುಗಳನ್ನೊಳಗೊಂಡ 9,688 ಫಲಾನುಭವಿಗಳಿಗೆ ಕಿರು ಉದ್ದಿಮೆ ಪ್ರಾರಂಭಿಸಲು ಬ್ಯಾಂಕ್‌ ಮೂಲಕ ಸಾಲ ಸೌಲಭ್ಯವನ್ನು ಒದಗಿಸಲಾಗಿದೆ.

10:53 AM IST

ಕ್ಯಾನ್ಸರ್, ಕಿಡ್ನಿ ಸಮಸ್ಯೆಗೆ ಬಜೆಟ್‌ನಲ್ಲಿ ಔಷಧಿ

ಕೋಟಿ ರೂ. ವೆಚ್ಚದಲ್ಲಿ ಮೈಸೂರು, ಶಿವಮೊಗ್ಗ ಮತ್ತು ಕಲಬುರಗಿಗಳಲ್ಲಿ ಕಿದ್ವಾಯಿ ಸಂಸ್ಥೆಯಡಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಮುಂದುವರೆದು, ಪ್ರಸಕ್ತ ವರ್ಷದಲ್ಲಿ ರಾಯಚೂರಿನಲ್ಲಿ AIIMS ಮಾದರಿಯ ಆಸ್ಪತ್ರೆ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಲಾಗುವುದು.
ಬೆಂಗಳೂರು, ಹುಬ್ಬಳ್ಳಿ, ಮೈಸೂರು ಮತ್ತು ಕಲಬುರಗಿಯ 4 ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ IVF ಕ್ಲಿನಿಕ್‌ಗಳನ್ನು 6 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು.
ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಸಂಪೂರ್ಣ ಸ್ವಯಂಚಾಲಿತ ಮತ್ತು ಕೇಂದ್ರೀಕೃತ ರಕ್ತನಿಧಿ ನಿರ್ವಹಣಾ ವ್ಯವಸ್ಥೆಯನ್ನು ಸ್ಥಾಪಿಸಲಾಗುವುದು.
ಬೆಂಗಳೂರಿನಲ್ಲಿ ದೇಶದ ಪ್ರಪ್ರಥಮ Gastroenterology ಮತ್ತು ಮರುಜೋಡಣೆಗೆ ಸಮರ್ಪಿತವಾದ ಸರ್ಕಾರಿ Institute of Gastroenterology and Organ Transplant ಕಾರ್ಯನಿರ್ವಹಿಸುತ್ತಿದೆ. ಜೀವನ ಸಾರ್ಥಕತೆ ಸಂಸ್ಥೆಯ ಮೂಲಕ 151 ದೇಹಗಳನ್ನು ಸಂಗ್ರಹಿಸಿದ್ದು, 503 ರೋಗಿಗಳಿಗೆ ಸಹಾಯವಾಗಿರುತ್ತದೆ. 

ಪ್ರಸಕ್ತ ವರ್ಷ NIMHANS ಸಂಸ್ಥೆಯ ಆವರಣದಲ್ಲಿ 146 ಕೋಟಿ ರೂ. ಗಳ ವೆಚ್ಚದಲ್ಲಿ ಅಂಗಾಂಗ ಜೋಡಣೆಗೆ ಮೀಸಲಾದ ದೇಶದ ಪ್ರಥಮ ಸಾರ್ವಜನಿಕ ಆಸ್ಪತ್ರೆಯನ್ನು ಸ್ಥಾಪಿಸಲು ಕ್ರಮ ವಹಿಸಲಾಗುವುದು.

10:52 AM IST

ಉತ್ತರ ಕನ್ನಡಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಅನುದಾನ

ಕಾರವಾರದಲ್ಲಿ ಪ್ರಗತಿಯಲ್ಲಿರುವ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳ ನಿರ್ಮಾಣವನ್ನು ಪ್ರಸಕ್ತ ವರ್ಷದಲ್ಲಿ ಪೂರ್ಣಗೊಳಿಸಲಾಗುವುದು. ಬೆಂಗಳೂರಿನ ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ 500 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣಕ್ಕೆ ಅನುಮೋದನೆ.

ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಉನ್ನತ ತಂತ್ರಜ್ಞಾನ ಆಧಾರಿತ ಹೈಟೆಕ್ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಹೈಪರ್ OF CHOKE B2, CADCAM, Cone Beam, CT scan ದಂತ ಚಿಕಿತ್ಸೆಗೆ ಸಂಬಂಧಿಸಿದಂತೆ Piezosurgery ಮುಂತಾದ ಹೈಟೆಕ್ ಚಿಕಿತ್ಸಾ ಸೌಲಭ್ಯಗಳನ್ನು ವೈದ್ಯಕೀಯ ಕಾಲೇಜು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಒದಗಿಸಲಾಗುತ್ತಿದೆ. ಜೊತೆಗೆ ಮಾನವ ಹಾಲು ಬ್ಯಾಂಕ್‌ ಮತ್ತು ಚರ್ಮ ಬ್ಯಾಂಕ್, ಕಿಮೋಥೆರಪಿ Infusion ಕೇಂದ್ರಗಳನ್ನು ಹಾಗೂ ಜಿನೋಮಿಕ್ ಸೀಕ್ವೆನ್ಸಿಂಗ್ ಲ್ಯಾಬ್ ಗಳನ್ನು ಸ್ಥಾಪಿಸಲಾಗಿದೆ.

- ಸಾರ್ವಜನಿಕರಿಗೆ ದ್ವಿತೀಯ ಹಾಗೂ ತೃತೀಯ ಆರೈಕೆ ಸೇವೆಗಳನ್ನು ಒದಗಿಸಲು 2022-23ನೇ ಸಾಲಿನಲ್ಲಿ ಶ್ರೀ ಜಯದೇವ ಸಂಸ್ಥೆಯ ಅಡಿಯಲ್ಲಿ 263 ಕೋಟಿ ರೂ. ವೆಚ್ಚದಲ್ಲಿ, ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ 50 ಹಾಸಿಗೆ ಸಾಮರ್ಥ್ಯ ಹಾಗೂ ಹುಬ್ಬಳ್ಳಿಯಲ್ಲಿ 430 ಹಾಸಿಗೆ ಸಾಮರ್ಥ್ಯದ ಹೃದ್ರೋಗ ಚಿಕಿತ್ಸಾ ಆಸ್ಪತ್ರೆಗಳ ಆರಂಭ.

10:49 AM IST

ಸಂತ ಸೇವಾಲಾಲ್ ಜನ್ಮಸ್ಥಳದಲ್ಲಿ ಪ್ರವಾಸಿ ಸೌಲಭ್ಯಕ್ಕೆ 5 ಕೋಟಿ ರೂ.

ಸಂತ ಸೇವಾಲಾಲ್ ಜನ್ಮಸ್ಥಳದಲ್ಲಿ ಪ್ರವಾಸಿ ಸೌಲಭ್ಯಕ್ಕೆ 5 ಕೋಟಿ ರೂ. 
ಷಹಾಜಿ ಮಹಾರಾಜ್ ಸಮಾಧಿ ಸ್ಥಳದ ಅಭಿವೃದ್ಧಿ 5 ಕೋಟಿ ರೂ. 
ದಾವಣಗೆರೆ ಜಿಲ್ಲೆ ಚನ್ನಗಿರಿ ತಾ. ಹೊದಿಗೆರೆಯಲ್ಲಿ ಸಮಾಧಿ ಅಭಿವೃದ್ಧಿ
ಹಾವೇರಿ ಜಿಲ್ಲೆ ಬಂಕಾರಪುದ ನಗರವೇಶ್ವರ ದೇವಾಲಯದ ಅಭಿವೃದ್ಧಿ

ಅಂಜನಾದ್ರಿ ಅಭಿವೃದ್ಧಿಗೂ ಆದ್ಯತೆ
ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದ ಮೂಲಸೌಲಭ್ಯಕ್ಕೆ 100 ಕೋಟಿ ರೂ. ಅನುದಾನ
ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಯಾದ C.R.Z ಮಾನದಂಡಗಳನ್ನು ಸಡಿಲ
ಮಂತ್ರಾಲಯದ 'ಪ್ರಸಾದ್' ಯೋಜನೆ ಅಡಿಯಲ್ಲಿ ಚಾಮುಂಡಿಬೆಟ್ಟ ಅಭಿವೃದ್ಧಿ
ಸ್ವದೇಶ್‌ ದರ್ಶನ್ 2.0 ಅಡಿಯಲ್ಲಿ ಹಂಪಿಯ ಸ್ಮಾರಕ ಅಭಿವೃದ್ಧಿ ಮತ್ತು ಮೈಸೂರಿನ ಕರ್ನಾಟಕ ವಸ್ತು ಪ್ರದರ್ಶನ
24 ಸಾವಿರ ಪೌರಕಾರ್ಮಿಕರ ನೇರ ನೇಮಕಾತಿಗೆ ನಿರ್ಧಾರ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವಿಭಜನೆ
ಮಕ್ಕಳ ಪೌಷ್ಟಿಕತೆಗೆ ಪ್ರತ್ಯೇಕ ಇಲಾಖೆ ರಚನೆ
ತುಮಕೂರಿನಲ್ಲಿ ತೋಟಗಾರಿಕೆ ವಿಶ್ವವಿದ್ಯಾಲಯ

10:47 AM IST

ರಾಮನಗರದಲ್ಲಿ ವಿಶೇಷ ರಾಮ ಮಂದಿರ ಸ್ಥಾಪನೆ

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತವರು ಜಿಲ್ಲೆ ರಾಮನಗರದಲ್ಲಿ ರಾಮ ಮಂದಿರ ಸ್ಥಾಪಸುವುದಾಗಿ ಘೋಷಿಸಿದ ಬೊಮ್ಮಾಯಿ. ಆ ಮೂಲಕ ಸದಾ ಅಲ್ಪಸಂಖ್ಯಾತರ ಓಲೈಕೆಗೆ ಯತ್ನಿಸುವ ಜೆಡಿಎಸ್‌ಗೆ ಟಾಂಗ್ ನೀಡಿದ ಸಿಎಂ.

10:45 AM IST

ಕರಾವಳಿಗರ ಬೇಡಿಕೆಗೆ ಮಣೆ ಹಾಕಿದ ಸಿಎಂ

 ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಯಾದ CRZ ಮಾನದಂಡಗಳನ್ನು ಸಡಿಲಗೊಳಿಸುವುದಕ್ಕೆ ಕೇಂದ್ರ ಸರ್ಕಾರವು ಒಪ್ಪಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ವಲಯ ನಿರ್ವಹಣೆ ಯೋಜನೆಯನ್ನು ಜಾರಿಗೊಳಿಸುವ ಮೂಲಕ ಧಾರ್ಮಿಕ, ಸಾಹಸ ಮತ್ತು ಪರಿಸರ ಸ್ನೇಹಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ರೂಪುರೇಷೆಗಳನ್ನು ತಯಾರಿಸಲಾಗುವುದು.

ಮಂತ್ರಾಲಯದ 'ಪ್ರಸಾದ್'

ಕೇಂದ್ರ ಪ್ರವಾಸೋದ್ಯಮ ಯೋಜನೆಯಡಿ ಮೈಸೂರು ನಗರದ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಹಾಗೂ ಸ್ವದೇಶ್‌ ದರ್ಶನ್ 2.0 ಅಡಿಯಲ್ಲಿ ಹಂಪಿಯ ಸ್ಮಾರಕ ಅಭಿವೃದ್ಧಿ ಮತ್ತು ಮೈಸೂರಿನ ಕರ್ನಾಟಕ ವಸ್ತು ಪ್ರದರ್ಶನ

24 ಸಾವಿರ ಪೌರಕಾರ್ಮಿಕರ ನೇರ ನೇಮಕಾತಿಗೆ ನಿರ್ಧಾರ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವಿಭಜನೆ
ಮಕ್ಕಳ ಪೌಷ್ಟಿಕತೆಗೆ ಪ್ರತ್ಯೇಕ ಇಲಾಖೆ ರಚನೆ
ತುಮಕೂರಿನಲ್ಲಿ  ತೋಟಗಾರಿಕೆ ವಿಶ್ವವಿದ್ಯಾಲಯ

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿರಿಗೆ ಬಂಪರ್
ಗ್ರಾಚುಯಿಟಿ ನೀಡಲು 40 ಕೋಟಿ ರೂ. ಅನುದಾನ
20 ವರ್ಷ ಸೇವೆ ಪೂರೈಸಿ, ಮಾರಣಾಂತಿಕ ಕಾಯಿಲೆಯಿಂದ ಬಳಲುವ ಕಾರ್ಯಕರ್ತೆರಿಗೆ 50 ಸಾವಿರ ರೂ. ಸಹಾಯಧನ
ಸಹಾಯಕರಿಯರಿಗೆ 30 ಸಾವಿರ ರೂ.  ಸಹಾಯಧನ
ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿರಿಗೆ ಸ್ವಯಂ ನಿವೃತ್ತಿಗೆ ಅವಕಾಶ

ಮೈಸೂರು, ಬೆಳಗಾವಿ ಹುಬ್ಬಳ್ಳಿ-ಧಾರವಾಡ
ಕಲಬುರಗಿ, ಮಂಗಳೂರಿನಲ್ಲಿ ಉನ್ನತ ವ್ಯಾಸಂಗಕ್ಕೆ ಪ್ರತ್ಯೇಕ ಹಾಸ್ಟೆಲ್
ತಲಾ 1000 ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ

10:44 AM IST

ವೃತ್ತಿಪರ ಕೋರ್ಸ್‌ಗಳಿಗೆ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸಲು ಕ್ರಮ

- ವಿಜ್ಞಾನ ಮತ್ತು ತಂತ್ರಜ್ಞಾನದ ವೃತ್ತಿಪರ ಕೋರ್ಸ್‌ಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸುವುದಕ್ಕೆ ರಾಜ್ಯದಲ್ಲಿ 100 ಆಯ್ದ ಪದವಿ ಕಾಲೇಜುಗಳಲ್ಲಿ ಪ್ರೊ, ಸಿ.ಎನ್.ಆರ್. ರಾವ್ ವಿಜ್ಞಾನ ಕಾರ್ಯಕ್ರಮದಡಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿ ವಿಜ್ಞಾನ ವಿಭಾಗವನ್ನು ಪ್ರಾರಂಭಿಸಲಾಗುವುದು.

- 'ಹಳ್ಳಿ ಮುತ್ತು' ಎಂಬ ಯೋಜನೆಯಡಿ ಗ್ರಾಮೀಣ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಶಾಲಾ ಶಿಕ್ಷಣವನ್ನು ಪೂರೈಸುವ 500 ಅತ್ಯುತ್ತಮ ವಿದ್ಯಾರ್ಥಿಗಳಿಗೆ ಅವರು CET ಮೂಲಕ ಸರ್ಕಾರಿ ಕೋಟಾದಲ್ಲಿ ಆಯ್ಕೆಯಾದ ವೃತ್ತಿಪರ ಶಿಕ್ಷಣದ ಸಂಪೂರ್ಣ ಶುಲ್ಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಭರಿಸಲಾಗುವುದು.

- ಸಾರ್ವಜನಿಕ ವಿಶ್ವವಿದ್ಯಾಲಯಗಳ ಆಡಳಿತ ವ್ಯವಸ್ಥೆಯನ್ನು ಉತ್ತಮ ಪಡಿಸಲು 10 ಸುಶಾಸನ ಸೂಚ್ಯಂಕಗಳನ್ನು ರಚಿಸಲಾಗಿದೆ. ಇದರನ್ವಯ ಅತ್ಯುತ್ತಮ ಸಾಧನೆ ಮಾಡುವ ವಿಶ್ವವಿದ್ಯಾಲಯಗಳಿಗೆ ತಲಾ 50 ಲಕ್ಷ ರೂ. ಗಳಂತೆ ಪ್ರೋತ್ಸಾಹಧನ ನೀಡಲಾಗುವುದು.

- ಬೆಂಗಳೂರು ನಗರದ ಕೇಂದ್ರ ಭಾಗದ 5 ಕಿ.ಮೀ. ವ್ಯಾಪ್ತಿಯೊಳಗಿರುವ ಪಾರಂಪರಿಕ ಮತ್ತು ಶೈಕ್ಷಣಿಕ ಸಂಸ್ಥೆಗಳನ್ನು ಹೊಂದಿರುವ ಪ್ರದೇಶವನ್ನು ಪಾರಂಪರಿಕ ಮತ್ತು ಶೈಕ್ಷಣಿಕ ಜಿಲ್ಲೆಯಾಗಿ ಘೋಷಿಸುವ ನಿಟ್ಟಿನಲ್ಲಿ ಕಾರ್ಯಸಾಧ್ಯತೆ ಅಧ್ಯಯನ ಮಾಡಲಾಗುವುದು.

10:42 AM IST

ರಾಜ್ಯದ ಕೆಲವೆಡೆ ವಿದ್ಯಾರ್ಥಿಗಳಿಗೆ ವಿಶೇಷ ಹಾಸ್ಟೆಲ್

ಮೈಸೂರು, ಬೆಳಗಾವಿ ಹುಬ್ಬಳ್ಳಿ-ಧಾರವಾಡ
ಕಲಬುರಗಿ, ಮಂಗಳೂರಿನಲ್ಲಿ ಉನ್ನತ ವ್ಯಾಸಂಗಕ್ಕೆ ಪ್ರತ್ಯೇಕ ಹಾಸ್ಟೆಲ್
ತಲಾ 1000 ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ

10:41 AM IST

ಆ್ಯಸಿಡ್ ದಾಳಿಗೊಳಗಾದ ಮಹಿಳೆಯರಿಗೆ ಮಾಸಾಶನ ಹೆಚ್ಚಳ, ಶ್ವಾನ ಪ್ರೇಮ ತೋರಿದ ಸಿಎಂ

ಆ್ಯಸಿಡ್ ದಾಳಿಗೊಳಗಾದ ಮಹಿಳೆಯರಿಗೆ ಮಾಸಾಶನ ಹೆಚ್ಚಳ
ಮಾಸಾಶನ 3 ಸಾವಿರ ದಿಂದ 10 ಸಾವಿರ ರೂ. ಏರಿಕೆ
ರಾಜೀವ್ ವಸತಿ ನಿಗಮದಿಂದ ವಸತಿ ಸೌಲಭ್ಯ
ಆ್ಯಸಿಡ್ ಸಂತ್ರಸ್ತೆಯರಿಗೆ ಬಡ್ಡಿ ರಹಿತ ಸಾಲ ಸೌಲಭ್ಯ

ಕಾಂಗ್ರೆಸ್ ಗೃಹ ಲಕ್ಷ್ಮೀ ಯೋಜನೆಗೆ ಬಿಜೆಪಿ ಠಕ್ಕರ್
ಮಹಿಳೆಯರಿಗಾಗಿ ‘ಗೃಹಿಣಿ ಶಕ್ತಿ’ ಯೋಜನೆ ಘೋಷಣೆ
ಗೃಹ ಲಕ್ಷ್ಮೀಯರಿಗೆ ಬಂಪರ್ ಕೊಡುಗೆ..!

ಪ್ರಾಣಿಗಳ ಹಿಂಸೆ ತಡೆಯಲು- ಪ್ರಾಣಿ ಕಲ್ಯಾಣ ಮಂಡಳಿಗೆ 5 ಕೋಟಿ ರೂ. ಅನುದಾನ 
ನೀಡಲಾಗುವುದು. ಮಂಡಳಿಯ ವತಿಯಿಂದ ಬೆಂಗಳೂರಿನಲ್ಲಿ ನಿರ್ಲಕ್ಷಿತ ಪ್ರಾಣಿಗಳ ಸೂಕ್ತ ಚಿಕಿತ್ಸೆಗಾಗಿ ಸಂಚಾರಿ ಚಿಕಿತ್ಸಾಲಯಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು.

- ರಾಷ್ಟ್ರೀಯ ಪ್ರಾಣಿ ತಳಿ ಸಂಪನ್ಮೂಲ ಬ್ಯೂರೋದಿಂದ ಭಾರತೀಯ ದೇಶಿ ಶ್ವಾನ ತಳಿ ಎಂದು ಮಾನ್ಯತೆ ಪಡೆದ ಮುಧೋಳ ಹೌಂಡ್ ಶ್ವಾನ ತಳಿಯ ಅಭಿವೃದ್ಧಿಗಾಗಿ 5 ಕೋಟಿ ರೂ. ಅನುದಾನ ನೀಡಲಾಗುವುದು.

-ಬೀದಿನಾಯಿಗಳ ಆರೈಕೆ ಮತ್ತು ಪೋಷಣೆಗಾಗಿ ಸಾರ್ವಜನಿಕರು ದತ್ತು ತೆಗೆದುಕೊಳ್ಳಲು ಒಂದು ಆನ್-ಲೈನ್ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗುವುದು. ಇದರಿಂದ ಆಸಕ್ತ ಶ್ವಾನ ಪ್ರೇಮಿಗಳು ತಮ್ಮ ಹೆಸರು ನೋಂದಾಯಿಸಿಕೊಂಡು ದತ್ತು ಪಡೆಯಲು ಅವಕಾಶ ಕಲ್ಪಿಸಿದಂತಾಗುತ್ತದೆ.

- 2022-23ನೇ ಸಾಲಿನಲ್ಲಿ ನಮ್ಮ ಕರ್ನಾಟಕ ರಾಜ್ಯವನ್ನು ಅತ್ಯುತ್ತಮ ಕರಾವಳಿ ರಾಜ್ಯವೆಂದು ಕೇಂದ್ರ ಸರ್ಕಾರವು

ಎಸ್ಸಿ/ಎಸ್ಟಿ ಮನೆ ನಿರ್ಮಾಣದ ಅನುದಾನ ಹೆಚ್ಚಳ
1.75 ಲಕ್ಷದಿಂದ 2 ಲಕ್ಷರೂ.ಗೆ ಏರಿಕೆ
ಎಸ್ಸಿ/ಎಸ್ಟಿ 133 ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ವ್ಯಾಸಂಗಕ್ಕೆ ಧನಸಹಾಯ
ಎಸ್ಸಿ/ಎಸ್ಟಿ/ ಒಬಿಸಿ ವಿದ್ಯಾರ್ಥಿನಿಯರಿಗೆ ಆತ್ಮ ರಕ್ಷಣೆ ತರಬೇತಿ
ಮೆಟ್ರಿಕ್ ನಂತರದ ವಸತಿ ಶಾಲೆಗಳಲ್ಲಿ 30 ಸಾವಿರ ಹೆಚ್ಚುವರಿ ಸೀಟ್
ಜಮೀನಿನಲ್ಲಿ ಆನಧಿಕೃತವಾಗಿ ಸಾಗುವಳಿ ಸಕ್ರಮದ ಅವಧಿ
ಒಂದು ವರ್ಷದ ಅವಧಿಯವರೆಗೆ ವಿಸ್ತರಣೆ

10:40 AM IST

IIT ಮಾದರಿಯಲ್ಲಿ KIT ಉನ್ನತೀಕರಣಕ್ಕೆ ಒತ್ತು

ಕಳೆದ ಆಯವ್ಯಯದಲ್ಲಿ ಘೋಷಿಸಿದಂತೆ ಮುಂದಿನ 5 ವರ್ಷಗಳಲ್ಲಿ ಐಐಟಿ ಮಾದರಿಯಲ್ಲಿ ಕರ್ನಾಟಕ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ (KIT) ಗಳಾಗಿ ಉನ್ನತೀಕರಿಸಲು ಬೆಂಗಳೂರು, ಹಾವೇರಿ, ಹಾಸನ, ಕೆ.ಆರ್.ಪೇಟೆ, ತಳ್ಳಲ್, ರಾಮನಗರ ಹಾಗೂ ಕಾರವಾರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳನ್ನು ಗುರುತಿಸಲಾಗಿದೆ. ಪ್ರೊ. ಸಡಗೋಪನ್ ನೇತೃತ್ವದ ತಜ್ಞರ ಸಮಿತಿಯು ಕೆಐಟಿಗಳಾಗಿ ಅಭಿವೃದ್ಧಿಪಡಿಸಲು ಅಗತ್ಯವಿರುವ ಸೌಲಭ್ಯಗಳು ಮತ್ತು ಮೂಲಸೌಕರ್ಯಗಳ ಕುರಿತು ವರದಿ ಸಲ್ಲಿಸಿದೆ. ಸದರಿ ಸಮಿತಿಯ ಶಿಫಾರಸ್ಸಿನ ಅನ್ವಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಉದ್ದೇಶಕ್ಕಾಗಿ 50 ಕೋಟಿ ರೂ. ಗಳನ್ನು ನೀಡಲಾಗಿದೆ.

ಉನ್ನತ ಶಿಕ್ಷಣ ಪಡೆಯಲು ಇರುವ ಭಾಷೆಯ ತೊಡಕು ನಿವಾರಿಸಲು ಕರ್ನಾಟಕದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಹಾಗೂ ವೃತ್ತಿಪರ ಕೋರ್ಸುಗಳಲ್ಲಿ ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅನುವಾಗುವಂತೆ ವ್ಯಾಪಕ ಬಳಕೆಯಲ್ಲಿರುವ ರೆಫರೆನ್ಸ್ ಪುಸ್ತಕಗಳು ಹಾಗೂ ಪಠ್ಯ ವಿಷಯಗಳನ್ನು ಮುಂದಿನ ಒಂದು ವರ್ಷದಲ್ಲಿ ಭಾಷಾಂತರಿಸಲು ಕ್ರಮ ಕೈಗೊಳ್ಳಲಾಗುವುದು.

10:38 AM IST

ಶಾಳೆಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ. ಚಿಕ್ಕಮಗಳೂರಿಗೆ ವಿವಿ

ನಿರ್ಮಿಸಲು ಮತ್ತು ಕಾರ್ಯನಿರ್ವಹಿಸುತ್ತಿರುವ 46 ಶಾಲೆಗಳ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ ಒದಗಿಸಲಾಗುವುದು.

ಪ್ರಚಲಿತ ವಿದ್ಯಮಾನಗಳ ಕುರಿತು ಆಸಕ್ತಿ ಹಾಗೂ ಅರಿವು ಹೊಂದಲು ಅನುವಾಗುವಂತೆ 24,347 ಶಾಲೆಗಳಲ್ಲಿ 20 ಕೋಟಿ ರೂ. ಅನುದಾನದಲ್ಲಿ ಪುಸ್ತಕ, ಪತ್ರಿಕೆ ಹಾಗೂ ನಿಯತಕಾಲಿಕೆಗಳನ್ನು ಒದಗಿಸುವ ಮೂಲಕ ಗಂಥಾಲಯಗಳ ಬಲವರ್ಧನೆ ಹಾಗೂ ರೀಡಿಂಗ್‌ ಕಾರ್ನ‌್ರಗಳನ್ನು ಸ್ಥಾಪಿಸಲಾಗುವುದು.

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯುವ ಉದ್ದೇಶದಿಂದ 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಜೆ-ಪಾಲ್ ಸಹಯೋಗದೊಂದಿಗೆ ಪರಿಹಾರಾತ್ಮಕ ಚಟುವಟಿಕೆ 'ಅಭ್ಯುದಯ' ಕಾರ್ಯಕ್ರಮ ಅನುಷ್ಠಾನ.

ಬೀದರ್, ಹಾವೇರಿ, ಚಾಮರಾಜನಗರ, ಬಾಗಲಕೋಟೆ, ಕೊಡಗು, ಕೊಪ್ಪಳ - ಮತ್ತು ಹಾಸನ ಜಿಲ್ಲೆಗಳಲ್ಲಿ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗಿದೆ 7 ಮತ್ತು ಮಂಡ್ಯ ವಿಶ್ವವಿದ್ಯಾಲಯವನ್ನು ಸಂಯೋಜಿತ ವಿಶ್ವವಿದ್ಯಾಲಯವನ್ನಾಗಿ ಪರಿವರ್ತಿಸಲಾಗಿದೆ. ಈ ವರ್ಷದಲ್ಲಿ ಚಿಕ್ಕಮಗಳೂರಿನಲ್ಲಿ ಹೊಸ ವಿಶ್ವವಿದ್ಯಾಲಯವನ್ನು ತಂತ್ರಜ್ಞಾನದ ಗರಿಷ್ಠ ಬಳಕೆಗೆ ಒತ್ತು ನೀಡಲಾಗುವುದು. 

10:36 AM IST

ಗ್ರಾಮ ಸಹಾಯಕರ ಹುದ್ದೆಗೆ 'ಜನಸೇವಕ' ಎಂದು ಮರುನಾಮಕರಣ

ಗ್ರಾಮ ಸಹಾಯಕರ ಹುದ್ದೆಯನ್ನು ಜನಸೇವಕ' ಎಂದು ಮರುನಾಮಕರಣ 
ಗ್ರಾಮ ಸಹಾಯಕರ ಮಾಸಿಕ ಗೌರವಧನ ಹೆಚ್ಚಳ
13,000 ರೂ. ಗಳಿಂದ 14,000 ರೂ. ಗಳಿಗೆ ಗೌರವ ಧನ ಹೆಚ್ಚಳ
ಅಂಗನವಾಡಿ, ಆಶಾ ಕಾರ್ಯಕರ್ತೆಯರ ಸಹಾಯಧನ ಏರಿಕೆ
1000 ರೂ.ನಿಂದ 1500 ರೂಗೆ ಸಹಾಯಧನ ಏರಿಕೆ

10:35 AM IST

2022-23ರಲ್ಲಿ ರಾಜ್ಯದ ಆರ್ಥಿಕ ಬೆಳವಣಿಗೆ ಶೇ.7.9

*2022-23ರಲ್ಲಿ ರಾಜ್ಯದ ಆರ್ಥಿಕ ಬೆಳವಣಿಗೆ ಶೇ.7.9 
*ಕೃಷಿ ವಲಯದ ಬೆಳವಣಿಗೆ ಶೇ.5.5
*2022-23ರಲ್ಲಿ ರಾಜ್ಯದ ಹಣಕಾಸು ಸ್ಥಿತಿ ಸದೃಢವಾಗಿದೆ. 
*ತೆರಿಗೆ ಸಂಗ್ರಹದಲ್ಲಿ ಹೆಚ್ಚಳ
*ರಾಜ್ಯ ಸ್ವಂತ ತೆರಿಗೆಗಳ ಸಂಗ್ರಹ ಶೇ.20ರಷ್ಟು ಹೆಚ್ಚಳ

10:33 AM IST

ದೇವಸ್ಥಾನಗಳ ಮತ್ತು ಮಠಗಳ ಜೀರ್ಣೋದ್ಧಾರ ಕಾಮಗಾರಿಗಳಿಗೆ ಒಟ್ಟು 425 ಕೋಟಿ ರೂ. ಅನುದಾನ ನೀಡಲಾಗಿದೆ. ಮುಂದಿನ 2 ವರ್ಷಗಳಲ್ಲಿ ರಾಜ್ಯದಲ್ಲಿನ ವಿವಿಧ ದೇವಸ್ಥಾನ ಮತ್ತು ಮಠಗಳ ಜೀರ್ಣೋದ್ಧಾರಕ್ಕಾಗಿ ನಮ್ಮ ಸರ್ಕಾರ 1,000 ಕೋಟಿ ರೂ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು.

. ಜಗತ್ತಿಗೆ ಸಂಸತ್ತಿನ ಪರಿಕಲ್ಪನೆಯನ್ನು ಪರಿಚಯಿಸಿದ ಬಸವಾದ ಶರಣರು ಸ್ಥಾಪಿಸಿದ ಅನುಭವ ಮಂಟಪದ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಶೀಘ್ರದಲ್ಲಿಯೇ ಪೂರ್ಣಗೊಳಿಸಲಾಗುವುದು. ಧಾರ್ಮಿಕ ದತ್ತಿ ಇಲಾಖೆಯ ಜಮೀನುಗಳ ವರ್ಷಾಶನವನ್ನು 48,000 ರೂ. ಗಳಿಂದ 60,00 ರೂ. ಗಳಿಗೆ ಹೆಚ್ಚಿಸಲಾಗುವುದು. ಈ ಸೌಲಭ್ಯದಿಂದ 3,71 ಸಂಸ್ಥೆಗಳಿಗೆ ಅನುಕೂಲವಾಗಲಿದೆ.

ಉಪನೋಂದಣ ಕಛೇರಿಗಳಾಗಿ ರಾಜ್ಯದ ಎಲ್ಲಾ ಉಪನೋಂದಣಿ ಕಛೇರಿಗಳನ್ನು ಪರಿವರ್ತಿಸಲಾಗುವುದು. ಮೊದಲನೇ ಹಂತದಲ್ಲಿ ಪ್ರಸಕ್ತ ಸಾಲಿನಲ್ಲಿ 8 ಕಛೇರಿಗಳ ಅಭಿವೃದ್ಧಿಪಡಿಸಲಾಗುವುದು.ರಾಷ್ಟ್ರೀಯ ಚಂಡಮಾರುತ ಅಪಾಯ ಉಪಶಮನ ಯೋಜನೆ ಹಂತ-3 ನ್ನು ಅನುಷ್ಠಾನಗೊಳಿಸಲಾಗುವುದು

10:31 AM IST

ಆರ್ಥಿಕವಾಗಿ ಹಿಂದುಳಿದವರಿಗೆ ವಸತಿ ಯೋಜನೆ

ಮಹಿಳಾ ಕಾರ್ಮಿಕರಿಗೆ 500 ರೂ. ಸಹಾಯಧನ
30 ಲಕ್ಷ ಮಹಿಳೆಯರಿಗೆ ಉಚಿತ ಪಾಸ್
ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್
1 ಲಕ್ಷ ಮಹಿಳೆಯರಿಗೆ ಉಚಿತ ಕೌಶಲ್ಯ ತರಬೇತಿ
ಬೊಮ್ಮಾಯಿ ಬಜೆಟ್ನಲ್ಲಿ ಸ್ತ್ರೀ ಸಬಲೀಕರಣಕ್ಕೆ ಬಂಪರ್

10:31 AM IST

ಕಿಸಾನ್ ಕ್ರಿಡಿಟ್ ಕಾರ್ಡ್ ಹೊಂದಿರುವ ರೈತರಿಗೆ ಭೂ ಸಿರಿ ಯೋಜನೆ

ಕಿಸಾನ್ ಕ್ರಿಡಿಟ್ ಕಾರ್ಡ್ ಹೊಂದಿರುವ ರೈತರಿಗೆ ಭೂ ಸಿರಿ ಯೋಜನೆ
ಭೂ ಸಿರಿ ಯೋಜನೆಯಡಿ 10 ಸಾವಿರ ರೂ. ಹೆಚ್ಚುವರಿ ಪ್ರೋತ್ಸಾಹ
ಬೀಜ, ರಸಗೊಬ್ಬರ, ಕ್ರಿಮಿನಾಶಕ ಖರೀದಿಸಲು ಪ್ರೋತ್ಸಾಹ
ಮಹಿಳಾ ಕಾರ್ಮಿಕರಿಗೆ 500 ರೂ. ಸಹಾಯಧನ
30 ಲಕ್ಷ ಮಹಿಳೆಯರಿಗೆ ಉಚಿತ ಪಾಸ್
ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್

10:30 AM IST

ದೇವಸ್ಥಾನ, ಮಠಗಳ ಜೀರ್ಣೋದ್ಧಾರಕ್ಕೆ ಸಾವಿರ ಕೋಟಿ ಅನುದಾನ

ಬಿಜೆಪಿ ಸರಕಾರದಲ್ಲಿ ಮಠ ಮಾನ್ಯ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುತ್ತಿದ್ದು. ಈ ವರ್ಶವೂ ಸಾವಿರ ಕೋಟಿ ಅನುದಾನವನ್ನು ಮೀಸಲಿಡಲಾಗಿದೆ. ದತ್ತಿ ಇಲಾಖೆಗಳ ವರ್ಷದ ಅನುದಾನ 60 ಸಾವಿರಕ್ಕೆ ಹೆಚ್ಚಿಸಲಾಗಿದೆ. 

10:29 AM IST

ನೀರಿನ ಸಂರಕ್ಷಣೆಗೆ ಆದ್ಯತೆ

ಅರೆ ಮಲೆನಾಡು ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ನೀರು ಸಂರಕ್ಷಣೆಗಾಗಿ ಬಾವಿ ಕಿಂಡಿ ಅಣೆ, ನಾಲಾ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಈ ಎರಡೂ ಯೋಜನೆಗಳಿಗೆ 75 ಕೋಟಿ ರೂ. ಅನುದಾನವನ್ನು ಮೀಸಲಿಡಲಾಗಿದೆ.

ರೈತರ ಜಮೀನುಗಳಲ್ಲಿ ಜಲಹೊಂಡ ನಿರ್ಮಿಸಿ ನೀರು ಸಂರಕ್ಷಣಾ ಕಾಮಗಾರಿಗಳಿಂದ ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಜಲನಿಧಿ ಹೊಸ ಯೋಜನೆಯನ್ನು ಪ್ರಾರಂಭಿಸಲಾಗುವುದು. ಇದರಡಿಯಲ್ಲಿ ನರೇಗಾ ಯೋಜನೆಯ ಸಮನ್ವಯದೊಂದಿಗೆ ಎಲ್ಲಾ ರೈತರಿಗೆ ತಮ್ಮ ಜಮೀನಿನಲ್ಲಿ ಜಲಹೊಂಡವನ್ನು ನಿರ್ಮಿಸಲು ಪ್ರೋತ್ಸಾಹಿಸಲಾಗುವುದು. ಕರ್ನಾಟಕವು ತೋಟಗಾರಿಕೆ ವಲಯದಲ್ಲಿ ಅಪಾರ ಸಾಧನೆ ಮಾಡಿ ದೇಶದಲ್ಲಿಯೇ ಅತ್ಯುತ್ತಮ ತೋಟಗಾರಿಕೆ ರಾಜ್ಯ ಎಂದು ಪ್ರಶಸ್ತಿ ಪಡೆದಿದೆ. ರಾಜ್ಯದ 26.21 ಲಕ್ಷ ಹೆಕ್ಟೇರ್ ವಿಸ್ತೀರ್ಣ ಪ್ರದೇಶದ ತೋಟಗಾರಿಕೆ ಬೆಳೆಗಳಿಂದ ಲಭಿಸುವ 242 ಲಕ್ಷ ಮೆಟ್ರಿಕ್‌ ಟನ್‌ ವಾರ್ಷಿಕ ಉತ್ಪನ್ನದ ಮೌಲ್ಯವು 66,263 ಕೋಟಿ ರೂ. ಗಳಾಗಿದ್ದು, ಇದು ರಾಜ್ಯದಲ್ಲಿನ ಸಮಗ್ರ ಕೃಷಿ ವಲಯದ ಒಟ್ಟಾರೆ ಆದಾಯದ ಶೇ.30 ರಷ್ಟಿದೆ.

10:27 AM IST

ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್

ಮಹಿಳಾ ಸಬಲೀಕರಣಕ್ಕೆ ಹೆಚ್ಚು ಆದ್ಯತೆ ನೀಡಿದ ಬೊಮ್ಮಾಯಿ. ವಿದ್ಯಾರ್ಥಿನಿಯರಿಗೆ ಉಚಿತ ಪಾಸ್ ಘೋಷಿಸಿದ ಸಿಎಂ.

10:27 AM IST

ಕೃಷಿ ಮತ್ತು ಪೂರಕ ಚಟುವಟಿಕೆಗಳು

ಮಣ್ಣಿನ ಕೊಡುಗೆಗೆ ನೋವಿಗೆ ನಲಿವಿಗೆ ಕನ್ನಡಿ ಹಿಡಿವಾಸ ಮಾನವ ಹೃದಯದ ಕರುಣೆಗೆ ಒಲವಿಗೆ ದನಿಗೂಡಿಸುವಾಸೆ

- ಕೆ. ಎಸ್‌. ನರಸಿಂಹಸ್ವಾಮಿ

ಕೃಷಿ ಕ್ಷೇತ್ರದಲ್ಲಿ ನಮ್ಮ ಸರ್ಕಾರ ಹಲವು ಮಹತ್ವಪೂರ್ಣ ಕ್ರಮಗಳನ್ನು ಕೈಗೊಂಡಿದೆ. ತಂತ್ರಜ್ಞಾನ ಹಾಗೂ ವೈಜ್ಞಾನಿಕ ಪದ್ಧತಿಗಳ ಅಳವಡಿಕೆಯೊಂದಿಗೆ ರೈತರು ಮಾಹಿತಿಪೂರ್ಣ ನಿರ್ಧಾರ ಕೈಗೊಳ್ಳಲು ಪೂರಕ ಕ್ರಮಗಳನ್ನು ನಮ್ಮ ಸರ್ಕಾರ ಜಾರಿಗೊಳಿಸಲಿದೆ. ಇದಲ್ಲದೆ, ಕೃಷಿಯನ್ನು ಲಾಭದಾಯಕವಾಗಿಸಲು ಕೃಷಿ ಉತ್ಪನ್ನಗಳ ಮೌಲ್ಯ ವರ್ಧನೆ ಮತ್ತು ರಪ್ತಿಗೆ ಒತ್ತು ನೀಡಲಾಗುತ್ತಿದೆ. ಸಮಗ್ರ ಕೃಷಿ ಪದ್ಧತಿಯನ್ನು ಪ್ರೋತ್ಸಾಹಿಸುವ ಮೂಲಕ ರೈತರ ಆದಾಯದಲ್ಲಿ ಸ್ಥಿರತೆಯನ್ನು ತರಲು ನಮ್ಮ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.
 

10:25 AM IST

ಜಿ20 ಶೃಂಗಸಭೆಗೆ ಪೂರಕವಾಗಿ ರಾಜ್ಯದಲ್ಲಿ 4 ಸಭೆಗಳು

*ರಾಜ್ಯದ ಮಾನವ ಅಭಿವೃದ್ಧಿ ಹಾಗೂ ಆರ್ಥಿಕ ಅಭಿವೃದ್ಧಿಗೆ ಸಮಾನ ಆದ್ಯತೆ
*ಅಲ್ಪಸಂಖ್ಯಾತ, ಮಹಿಳೆ ಹಾಗೂ ದುರ್ಬಲ ವರ್ಗದ ಮಹಿಳೆಯರ ಅಭಿವೃದ್ಧಿಗೆ ಒತ್ತು
*24 ಸಾವಿರ ಪೌರಕಾರ್ಮಿಕರ ಉದ್ಯೋಗ ಕಾಯಂ 
*ವಿವಿಧ ಮಾಸಾಶನ ಹೆಚ್ಚಳ

10:24 AM IST

ಬಜೆಟ್‌ನಲ್ಲಿ ರೈತರಿಗೆ ಬಂಪರ್ ಗಿಫ್ಟ್

ರೈತರಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷ ರೂ. ಸಾಲ
3 ಲಕ್ಷದವರೆಗಿನ  ಶೂನ್ಯ ಬಡ್ಡಿದರದ ಸಾಲದ ಮೊತ್ತ 5 ಲಕ್ಷಕ್ಕೆ ಏರಿಕೆ
ಪಿಎಂ-ಕಿಸಾನ್ ಯೋಜನೆಯಡಿ ಕೇಂದ್ರ 10,930 ಕೋಟಿ ರೂ. ಹಾಗೂ ರಾಜ್ಯ ಸರ್ಕಾರದಿಂದ 4,822 ಕೋಟಿ ರೂ. ಒಟ್ಟಾರೆ 15,752 ಕೋಟಿ ರೂ. ಗಳನ್ನು ರೈತರ ಖಾತೆಗೆ ನೇರ ಜಮೆ ಮಾಡಲಾಗಿದೆ.
* ಕಳೆದ ವರ್ಷ ಘೋಷಿಸಿದ ಡೀಸೆಲ್ ಸಬ್ಸಿಡಿ ನೀಡುವ ರೈತ ಶಕ್ತಿ ಯೋಜನೆಗೆ ಒದಗಿಸಲಾಗಿದೆ. 400 ಕೋಟಿ
ಕೃಷಿ ಯಾಂತ್ರೀಕರಣವನ್ನು ಉತ್ತೇಜಿಸಲು 2,037 ಕೋಟಿ ರೂ., ಒದಗಿಸಲಾಗಿದೆ.
* ಕೃಷಿ ಮತ್ತು ತೋಟಗಾರಿಕೆಯಲ್ಲಿ ಹನಿ ನೀರಾವರಿಗಾಗಿ 2,900 ಕೋಟಿ ರೂ., ಮಾರುಕಟ್ಟೆ ನೆರವು ನೀಡಲಾಗಿದೆ.
- ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕ ಮುಂತಾದ ಪರಿಕರಗಳಿಗೆ 962 ಕೋಟಿ ರೂ. ವೆಚ್ಚ ಮಾಡಲಾಗಿದೆ

10:24 AM IST

ಕಿವಿ ಮೇಲೆ ಚೆಂಡು ಹೂ ಇಟ್ಕೊಂಡು ಬಂದ ಕಾಂಗ್ರೆಸ್ಸಿಗರು.

ಕುವೆಂಪು ಕವನ ವಾಚನದೊಂದಿಗೆ ಬಜೆಟ್ ಮಂಡನೆ ಆರಂಭಿಸಿದ ಸಿಎಂ ಬೊಮ್ಮಾಯಿ ವಿರುದ್ಧ ಸದನದಲ್ಲಿ ಘೋಷಣೆಗಳು ಮೊಳಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ಕಿವಿ ಮೇಲೆ ಹೂವಿಟ್ಟುಕೊಂಡು ಬಂದು, ವಿರೋಧ ವ್ಯಕ್ತಪಡಿಸಿದರು. 

10:22 AM IST

ಸದನದಲ್ಲಿ ಕಿವಿ ಮೇಲೆ ಹೂವಿಟ್ಟು ಕುಳಿತುಕೊಂಡ ಕಾಂಗ್ರೆಸ್ ಸದಸ್ಯರು

ಸದನದಲ್ಲಿ ಕಿವಿ ಮೇಲೆ ಹೂವಿಟ್ಟು ಕುಳಿತುಕೊಂಡ ಕಾಂಗ್ರೆಸ್ ಸದಸ್ಯರಿಗೆ ಬಜೆಟ್ ಮಂಡನೆ ವೇಳೆ ಸಿಎಂ ಟಾಂಗ್‌ ನೀಡಿದರು. ಕಾಂಗ್ರೆಸ್‌ನವರು ಕಿವಿ ಮೇಲೆ ಹೂವಿಟ್ಟುಕೊಳ್ಳುವುದು ಬೇಡ. ಹೂವಿಟ್ಟುಕೊಳ್ಳುತ್ತೇನೆ ಎಂದರೆ ಬೇಡ ಎನ್ನುವುದಿಲ್ಲ. ಜನರ ಮೇಲೆ ಕಿವಿ ಮೇಲೆ ಹೂವಿಡುತ್ತಿದ್ದರು. ಈ ಜನರೇ ಕಾಂಗ್ರೆಸ್ ಕಿವಿ ಮೇಲೆ ಹೂವಿಡುತ್ತಿದ್ದಾರೆ.

ಬಜೆಟ್‌ ಮಂಡನೆ ವೇಳೆ ಕಿವಿ ಮೇಲೆ ಹೂವಿಟ್ಟುಕೊಂಡ ಬಂದ ಕಾಂಗ್ರೆಸ್ ನಾಯಕರು!

10:20 AM IST

ಕುವೆಂಪು ಅವರ ಕವನ ವಾಚಿಸಿದ ಮುಖ್ಯಮಂತ್ರಿ

ಕುವೆಂಪು ಅವರ 'ಹಳೆ ಕಾಲ ಹೋಗುತಿದೆ..' ಕವನ ವಾಚನದೊಂದಿಗೆ ಬಜೆಟ್‌ ಮಂಡನೆ ಆರಂಭಿಸಿದ ಬಸವರಾಜ್‌ ಬೊಮ್ಮಾಯಿ. ಬಜೆಟ್‌ನ ಆರಂಭದಲ್ಲಿಯೇ ವಿಪಕ್ಷಗಳಿಂದ ಗಲಾಟೆ

10:18 AM IST

ಬಜೆಟ್‌ ಮಂಡನೆ ಆರಂಭಿಸಿದ ಬಸವರಾಜ್‌ ಬೊಮ್ಮಾಯಿ

ಬಿಜೆಪಿ ಸರ್ಕಾರದ ಕೊನೆ ಬಜೆಟ್‌ ಮಂಡನೆ ಆರಂಭಿಸಿದ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ. ಬೊಮ್ಮಾಯಿ ಅವರು ಮಂಡನೆ ಮಾಡುತ್ತಿರುವ 2ನೇ ಬಜೆಟ್‌ ಇದಾಗಿದೆ.

10:06 AM IST

3.7 ಸಾವಿರ ಕೋಟಿ ಗಾತ್ರದ ಬಜೆಟ್‌ಗೆ ಅನುಮೋದನೆ ಪಡೆದ ಸಿಎಂ

ಬಡವರಿಗೆ ವಿಶೇಷ ಕೊಡುಗೆಗಳು ಇರುತ್ತವೆ ಎನ್ನಲಾದ ಕರ್ನಾಟಕ ಬಜೆಟ್ 2023-24 ಮಂಡನೆಗೆ ಬೊಮ್ಮಾಯಿ ಸಕಲ ಸಿದ್ಧರಾಗಿದ್ದು, ವಿಶೇಷ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದಿದ್ದಾರೆ. ಇನ್ನೇನು ಕೆಲವೇ ನಿಮಿಷಗಳಲ್ಲಿ ಬಜೆಟ್ ಮಂಡನ್ ಆರಂಭವಾಗಲಿದೆ. 

10:03 AM IST

ವಿವಿಧ ಸಮುದಾಯಗಳತ್ತ ಬಿಜೆಪಿ ಸರಕಾರದ ಚಿತ್ತ

ಚುನಾವಣಾ ಬೆನ್ನಲ್ಲೇ ವಿವಿಧ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಅನಿವಾರ್ಯತೆ ಬೊಮ್ಮಾಯಿ ನೇತೃತ್ವದ ಬೊಮ್ಮಾಯಿ ಸರಕಾರಕ್ಕಿದ್ದು, ಅನೇಕ ಯೋಜನೆಗಳನ್ನು ಪ್ರಕಟಿಸುವ ನಿರೀಕ್ಷೆ ಇದೆ. ಆದ್ದರಿಂದ ನಾನಾ ಜಾತಿಗಳ ಅಭಿವೃದ್ಧಿ ನಿಗಮಗಳ ರಚನೆಗೆ ಅಸ್ತು ಎನ್ನಬಹುದು. ಅಲ್ಲದೇ ದೇಶದ ನಾನಾ ರಾಜ್ಯಗಳ ಪೈಕಿ ಬಜೆಟ್ ಗಾತ್ರದಲ್ಲಿ ಮೂರನೇ ದೊಡ್ಡ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮುವ ನಿರೀಕ್ಷೆಯೂ ಇದೆ. ಈ ಸಾಲಿನಲ್ಲಿ ಉತ್ತರ ಪ್ರದೇಶ, ಮಹಾರಾಷ್ಟ್ರ, ತಮಿಳುನಾಡು ಮೊದಲ ಮೂರು ಸ್ಥಾನಗಳಿದ್ದು, ಕರ್ನಾಟಕ ಮೂರನೇ ಸ್ಥಾನಕ್ಕೇರುವ ಲಕ್ಷಣಗಳಿವೆ.

9:47 AM IST

ಜನಸ್ನೇಹಿ ಬಜೆಟ್ ಎಂದು ಕರೆದ ಸಿಎಂ ಬೊಮ್ಮಯಿ

ಕರ್ನಾಟಕ ವಿಧಾನಸಭೆ ಚುನಾವಣೆ  ಇದೇ ಮೇನಲ್ಲಿ ನಡೆಯುತ್ತಿದ್ದು, ಬಹು ನಿರೀಕ್ಷೆಗಳೊಂದಿಗೆ ಮುಖ್ಯಮಂತ್ರಿ ಬೊಮ್ಮಾಯಿ ಬಜೆಟ್ ಮಂಡಿಸುತ್ತಿದ್ದಾರೆ. ಈ ಮೊದಲು ಬಜೆಟ್ ಹೇಗಿದೆ ಎಂದು ಕೇಳಿದಾಗ, ಸ್ವಲ್ಪ ಹೊತ್ತು ಕಾಯಿರಿ ಎಂದಿದ್ದ ಬೊಮ್ಮಾಯಿ, ಇದೀಗ ಜನಸ್ನೇಹಿ ಬಜೆಟ್ ಎಂಬ ಸುಳಿವು ನೀಡಿದ್ದಾರೆ. 

9:40 AM IST

ಬಜೆಟ್‌ನಲ್ಲಿ ಕಳಸಾ- ಬಂಡೂರಿ ಯೋಜನೆಗೆ ಬರಲಿದೆಯೇ ಹೆಚ್ಚಿನ ಅನುದಾನ

ರಾಜ್ಯ ಸರ್ಕಾರ ಪ್ರಸಕ್ತ ಅವಧಿಯ ಕೊನೆಯ ಬಜೆಟ್‌ನ್ನು ಶುಕ್ರವಾರ ಮಂಡಿಸುತ್ತಿದ್ದು, ಜಿಲ್ಲೆಯ ಜನರಲ್ಲಿ ಈ ಬಾರಿಯ ಬಜೆಟ್‌ನಲ್ಲಾದರೂ ಜಿಲ್ಲೆಗೆ ಹಲವಾರು ಯೋಜನೆಗಳು ಘೋಷಣೆಯಾಗುತ್ತವೆ ಎನ್ನುವ ನಿರೀಕ್ಷೆ ಇದೆ. ಜಿಲ್ಲೆಯ ನಾಲ್ಕೈದು ದಶಕಗಳ ಹೋರಾಟವಾದ ಕಳಸಾ- ಬಂಡೂರಿ ಯೋಜನೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿರುವ ಹಿನ್ನೆಲೆಯಲ್ಲಿ ಈ ಯೋಜನೆಗೆ ಹೆಚ್ಚಿನ ಅನುದಾನ ಘೋಷಣೆಯತ್ತ ಎಲ್ಲರ ಚಿತ್ತ ನೆಟ್ಟಿದೆ.

9:36 AM IST

ವಿತ್ತ ಅಧಿಕಾರಿಗಳಿಂದ ಸಿಎಂ ಬಜೆಟ್ ಕಾಪಿ ಹಸ್ತಾಂತರ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಸರಕಾರದ ಕಡೆಯ ಬಜೆಟ್ ಮಂಡಿಸುತ್ತಿದ್ದು, ಈಗಾಗಲೇ ವಿಧಾನಸೌದ ತಲಪಿದ್ದಾರೆ. 10.15 ರಿಂದ ಬಜೆಟ್ ಮಂಡಿಸಲು ಆರಂಭಿಸು ಬೊಮ್ಮಾಯಿಗೆ ವಿತ್ತ ಅಧಿಕಾರಿಗಳು ಬಜೆಟ್ ಕಾಪಿಯನ್ನು ಹಸ್ತಾಂತರಿಸದ್ದಾರೆ. ಈ ಬಾರಿ 3 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡಿಸುತ್ತಿದ್ದು, ಬಜೆಟ್ ಬಗ್ಗೆ ಸಹಜವಾಗಿಯೇ ಶ್ರೀಸಾಮಾನ್ಯನಿಗೆ ಸಾಕಷ್ಟು ನಿರೀಕ್ಷೆಗಳಿವೆ. 

 

9:19 AM IST

ಜನಪ್ರಿಯ ಘೋಷಣೆಗಳಿರುತ್ತಾ ಬಜೆಟ್‌ನಲ್ಲಿ? ಸಿಎಂ ಉತ್ತರಿಸಿದ್ದು ಹೀಗೆ

ಜನಪ್ರಿಯ ಘೋಷಣೆಗಳಿವೆಯ ಎಂಬ ಪ್ರಶ್ನಗೆ ಇನ್ನೊಂದು ಗಂಟೆ ಕಾಯಿರಿ ಎಂದ ಸಿಎಂ. ರಾಜ್ಯದ ಜನತೆ ಹೆಸರಿನಲ್ಲಿ ಆರ್ಚನೆ ಮಾಡಿಸಿದ್ದೇನೆ. ಇಡಿ ರಾಜ್ಯದ ಜನರಿಗೆ ಒಳ್ಳಯದ್ ಅಗಲಿ ಎಂದು ಪ್ರಾರ್ಥನೆ ಮಾಡಿದ್ದೇನೆ. ಬಹಳಷ್ಟು ನಿರೀಕ್ಷೆಗಳಿವೆ ಎಂಬ ಪ್ರಶ್ನೆಗೆ, ಕಾದು ನೋಡಿ ಎಂದಷ್ಟೇ ಹೇಳಿ ತೆರಳಿದ ಸಿಎಂ. 

ಕೆಲವು ಸಚಿವ ಸಂಪುಟದ ಸಹೋದ್ಯೋಗಿಗಳು ಹಾಗೂ ಅಧಿಕಾರಿಗಳನ್ನು ತಮ್ಮ ಮನೆಯಲ್ಲಿ ಭೇಟಿಯಾದ ಬೊಮ್ಮಾಯಿ. 

8:31 AM IST

ಸಿಎಂ ಬೊಮ್ಮಾಯಿ ಭೇಟಿಗೆ ಆಗಮಿಸಿದ ಆರ್ಥಿಕ ಇಲಾಖೆ ಅಧಿಕಾರಿಗಳು

ಇಂದು ರಾಜ್ಯ ಬಜೆಟ್ ಹಿನ್ನೆಲೆ ಸಿಎಂ ಬೊಮ್ಮಾಯಿ ನಿವಾಸಕ್ಕೆ  ಆರ್ಥಿಕ ಇಲಾಖೆ ಅಧಿಕಾರಿಗಳು ಆಗಮಿಸಿ ಸಿಎಂ ಭೇಟಿ ಮಾಡಿದರು. ಬಜೆಟ್ ಪುಸ್ತಕದ ಜೊತೆಗೆ ಆಯವ್ಯಯ ಮತ್ತು ಸಂಪನ್ಮೂಲ ಕಾರ್ಯದರ್ಶಿ ಏಕ್ ರೂಪ್ ಕೌರ್ ಸಿಎಂ ನಿವಾಸಕ್ಕೆ ಆಗಮಿಸಿದ್ದಾರೆ. 

7:49 AM IST

ಸಿಎಂಗೆ ಶುಭಾಶಯ ಕೋರಲು ಆಗಮಿಸಿದ ಸಚಿವರು, ಶಾಸಕರು

ಸಿಎಂ ಬಸವರಾಜ ಬೊಮ್ಮಾಯಿ‌ಯಿಂದ ಇಂದು ಬಜೆಟ್ ಮಂಡನೆ ಹಿನ್ನೆಲೆ ಸಿಎಂಗೆ ಶುಭಾಶಯ ಕೋರಲುಸಚಿವರು ಹಾಗೂ ಶಾಸಕರು  ಆಗಮಿಸಿದ್ದಾರೆ. ಆರ್. ಟಿ ನಗರದಲ್ಲಿರುವ ಸಿಎಂ ನಿವಾಸಕ್ಕೆ ಆಗಮಿಸಿದ ಸಚಿವ ಬೈರತಿ ಬಸವರಾಜ್ ಹಾಗೂ ಶಾಸಕ ರಾಮದಾಸ್ ಸಿಎಂಗೆ ಬಜೆಟ್ ಮಂಡನೆಗೆ ಶುಭ ಕೋರಿದ್ದಾರೆ. 

7:38 AM IST

ಬಜೆಟ್ ಮಂಡನೆಗೂ ಮುನ್ನ ಪೂಜೆ ಸಲ್ಲಿಸಲಿರುವ ಸಿಎಂ

ಬೆಂಗಳೂರು: ಈ ಸರ್ಕಾರದ ಕೊನೆಯ ಬಜೆಟ್ ಮಂಡಿಸಲಿರುವ ಸಿಎಂ ಇಂದು ಬಜೆಟ್ ಮಂಡನೆಗೂ ಮೊದಲು ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ಶ್ರೀಕಂಠೇಶ್ವರ ದೇವಸ್ಥಾನ ಹಾಗೂ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಸಿಎಂ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಮೊದಲಿಗೆ ಆರ್. ಟಿ ನಗರ ನಿವಾಸದ ಪಕ್ಕದಲ್ಲಿ ಇರುವ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ,  ಬಳಿಕ ಅಲ್ಲಿಂದ ನೇರವಾಗಿ ಬಾಲು ಬ್ರೂಯಿ ಬಳಿ ಇರುವ ಆಂಜನೇಯ ದೇವಸ್ಥಾನಕ್ಕೆ ಸಿಎಂ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. 

Karnataka Budget 2023: ಸಿಎಂ ಬೊಮ್ಮಾಯಿ ಸರ್ಕಾರದ ಕಡೇ ಬಜೆಟ್‌ ಇಂದು ಬೆ.10.15ಕ್ಕೆ

7:13 AM IST

ಚುನಾವಣೆ ಹಿನ್ನೆಲೆ ಮತದಾರರಿಗೆ ಸಾಕಷ್ಟು ಭರವಸೆಗಳನ್ನು ನೀಡುವಂಥ ಬೊಂಬಾಟ್‌ ಬಜೆಟ್‌?

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ತಮ್ಮ ಎರಡನೆಯ ಹಾಗೂ ಈ ಸರ್ಕಾರದ ಕೊನೆಯ ಬಜೆಟ್‌ ಮಂಡಿಸಲಿದ್ದಾರೆ. ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಮತದಾರರಿಗೆ ಸಾಕಷ್ಟು ಭರವಸೆಗಳನ್ನು ನೀಡುವಂಥ ಬೊಂಬಾಟ್‌ ಬಜೆಟ್‌ ಮಂಡಿಸುವುದು ಬಹುತೇಕ ಖಚಿತವಾಗಿದೆ. ರೈತರು, ಬಡವರು, ಮಹಿಳೆಯರು, ಸಾಮಾನ್ಯ ಜನರನ್ನು ದೃಷ್ಟಿಯಲ್ಲಿಟ್ಟುಕೊಂಡು ಜನಪ್ರಿಯ ಯೋಜನೆಗಳನ್ನು ಘೋಷಿಸುವ ಬಜೆಟ್‌ ಇದಾಗಲಿದೆ ಎನ್ನಲಾಗುತ್ತಿದೆ. ಇಂದಿನ ಬಜೆಟ್‌ ಬಗ್ಗೆ ಮತ್ತಷ್ಟು ಕುತೂಹಲಕಾರಿ ವಿಚಾರಗಳು ಇಲ್ಲಿವೆ...

7:02 AM IST

ಬೊಮ್ಮಾಯಿ ಬಜೆಟ್‌ ಮೇಲಿರುವ ನಿರೀಕ್ಷೆಗಳು

- ರೈತರ ಶೂನ್ಯ ಬಡ್ಡಿದರ ಸಾಲ ಮಿತಿ 3 ಲಕ್ಷ ರು.ನಿಂದ 5 ಲಕ್ಷ ರು.ಗೆ ಹೆಚ್ಚಳ
- ಕುಟುಂಬ ನಿರ್ವಹಣೆ ಮಾಡುವ ಮಹಿಳೆಯರಿಗೆ ಗೌರವ ಧನ ನೀಡುವ ಸ್ಕಿಂ
- ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ವರದಿ ಅನುಷ್ಠಾನದ ಭರವಸೆ
- ಬೆಂಗಳೂರಲ್ಲಿ ಮೆಟ್ರೋ ವಿಸ್ತರಣೆ, ಸಂಚಾರದ ದಟ್ಟಣೆ ನಿಯಂತ್ರಣಕ್ಕೆ ಕ್ರಮ
- ಕುಲಕಸುಬು ಆಧಾರಿತ ವೃತ್ತಿ ಮಾಡುವವರಿಗೆ ಪ್ರೋತ್ಸಾಹ ಧನ ಘೋಷಣೆ
- ವಿವಿಧ ಸಮುದಾಯಗಳಿಗೆ ಪ್ರತ್ಯೇಕ ನಿಗಮ, ಅಡಕೆ ಬೆಳೆಗಾರರಿಗೆ ನೆರವು
- ಶಿಕ್ಷಣ, ಆರೋಗ್ಯ, ಮೂಲಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡಲು ಕ್ರಮಗಳು

7:00 AM IST

ಬೆಳಗ್ಗೆ 10.15ಕ್ಕೆ 2023-24ನೇ ಸಾಲಿನ ಬಜೆಟ್‌ ಮಂಡನೆ

ಬೆಳಗ್ಗೆ 10.15ಕ್ಕೆ 2023-24ನೇ ಸಾಲಿನ ಬಜೆಟ್‌ ಮಂಡನೆ ಆರಂಭವಾಗಲಿದೆ. ಬೊಮ್ಮಾಯಿ ಅವರು ಕಳೆದ 2022-23ನೇ ಸಾಲಿನಲ್ಲಿ 2.65 ಲಕ್ಷ ಕೋಟಿ ರು. ಗಾತ್ರದ ಬಜೆಟ್‌ ಮಂಡಿಸಿದ್ದರು. ಈ ಬಾರಿ ಗಾತ್ರ ಸುಮಾರು ಮೂರು ಲಕ್ಷ ಕೋಟಿ ರು.ಗಳಿಗೆ ಹಿಗ್ಗುವ ಸಾಧ್ಯತೆಯಿದೆ ಎನ್ನಲಾಗಿದೆ.

2:49 PM IST:

ಉಡುಪಿ: ಬಜೆಟ್ ಮಂಡನೆ ಸಂದರ್ಭದಲ್ಲಿ ಕಿವಿಗೆ ಹೂವು ಇಟ್ಟು ಹೋದ ಸಿದ್ದರಾಮಯ್ಯ ಡಿಕೆಶಿ. ಸಿದ್ದರಾಮಯ್ಯ ಡಿಕೆಶಿ ಬಾಲಿಶವಾದ ಕೀಳು ಮಟ್ಟದ ರಾಜಕೀಯ ಮಾಡಿದ್ದಾರೆ. ವಿರೋಧ ಪಕ್ಷವಾಗಿ ತಮ್ಮ ಜವಾಬ್ದಾರಿ ಮರೆತಿದ್ದಾರೆ. ಇಂದು ನಡೆದಿರೋದು ಕಾಂಗ್ರೆಸ್ ನ ಸಣ್ಣತನದ ಪ್ರದರ್ಶನ. ಮುಂದಿನ ಚುನಾವಣೆಯಲ್ಲಿ ಜನ ಇವರ ಎರಡು ಕಿವಿಗೆ ಹೂ ಇಡುತ್ತಾರೆ. ಎರಡು ಕಿವಿಗೆ ಹೂ ಇಟ್ಟು ಮಂಡೆ ಬೋಳಿಸಿ ನಾಮ ಹಾಕುತ್ತಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲ ಸದನಕ್ಕೆ ಗೌರವ ಹೇಗೆ ಕೊಡಬೇಕು ಎಂದು ಕಾಂಗ್ರೆಸ್ ನಾಯಕರಿಗೆ ಗೊತ್ತಿಲ್ಲ. ಬಾಲಿಶವಾದ ನಡತೆಯಿಂದ ಕಾಂಗ್ರೆಸ್ ಸದನದಲ್ಲಿ ಬೆತ್ತಲಾಗಿದೆ. ಮಂಗಳೂರು ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ ಹೇಳಿಕೆ

2:28 PM IST:

ಬೊಮ್ಮಾಯಿ.

2023_24 ರ ಬಜೆಟ್ ಮಂಡನೆ ಮಾಡಿದ್ದೇನೆ ಕೋವಿಡ್ ಕಾಲದಲ್ಲಿ ಆರ್ಥಿಕ  ಹಿಂಜರಿತ ಉಂಟಾಗಿತ್ತು. ಆರ್ಥಿಕ ತಜ್ಞರು ಕರ್ನಾಟಕ ಬಜೆಟ್ ಹಳಿಗೆ ಬರಲು ಐದಾರು ವರ್ಷ ಬೇಕು ಅಂತಾ ಹೇಳಿದ್ರು. ಆದ್ರೆ ಕೇವಲ ಎರಡೇ ವರ್ಷ ದಲ್ಲಿ ಸುಧಾರಣೆ ಆಗಿದೆ. ರೆವಿನ್ಯೂ ಎಕ್ಸಪೆಂಡಿಚರ್ ಅನ್ನು ಇಷ್ಟು ದೊಡ್ಡ ಪ್ರಮಾಣದಲ್ಲಿ ಯಾವ ಸರ್ಕಾರ ಕೂಡಾ ಮಾಡಿರಲಿಲ್ಲ. ಕಳೆದ ಬಾರಿ ಘೋಷಣೆ ಮಾಡಿದ್ದರಲ್ಲಿ ಶೇ 90 ರಷ್ಟು ಸರ್ಕಾರಿ ಆದೇಶಗಳಾಗಿವೆ. ಇನ್ನೂ ಕೆಲವು ಅನುಷ್ಟಾನ ಆಗೋದರಲ್ಲಿ ಇವೆ.

2:03 PM IST:

ಸಿದ್ದರಾಮಯ್ಯ ರಿಯಾಕ್ಷನ್!

ಒಟ್ಟು ಸಾಲ 5,64,896 ಕೋಟಿ ಆಗತ್ತೆ ಅಂತ ಅವರೇ ಹೇಳಿದ್ದಾರೆ. ಈ ವರ್ಷದ ಅಂತ್ಯಕ್ಕೆ. ನಾನು ಬಿಟ್ಟಾಗ 2,47000 ಕೋಟಿ ಇತ್ತು. 3,22,000 ಕೋಟಿ ಸಾಲ ಹೆಚ್ಚಾಗಿದೆ. ಸಮ್ಮಿಶ್ರ ಸರ್ಕಾರ ಇದ್ದಾಗ 41914  ಕೋಟಿ ಸಾಲ ಮಾಡಲಾಗಿತ್ತು. ನಾಲ್ಕು ವರ್ಷದಲ್ಲಿ 2,54,760 ಕೋಟಿ ಬಿಜೆಪಿ ಸರ್ಕಾರ ಸಾಲ ಮಾಡಿದೆ. 1,16,512 ಕೋಟಿ ಸಾಲ ನಾವು ಐದು ವರ್ಷದಲ್ಲಿ ಸಾಲ ಮಾಡಿದ್ವಿ. ಇವ್ರು 2,54,760 ಕೋಟಿ ಸಾಲ ಮಾಡಿದ್ದಾರೆ ನಾಲ್ಕು ವರ್ಷಕ್ಕೆ. ಇವ್ರು ರಾಜ್ಯವನ್ನ ಸಾಲದ ಸುಳಿಗೆ ಸಿಲುಕಿಸಿದ್ದಾರೆ. 34 ಸಾವಿರ ಕೋಟಿ ಬಡ್ಡಿ ಕಟ್ಟಬೇಕಾಗುತ್ತದೆ. ಇವ್ರು ಯದ್ವಾ ತದ್ವಾ ಸಾಲ ಮಾಡಿ.ರಾಜ್ಯದ ಜನರನ್ನು ಸಾಲಗಾರರನ್ನಾಗಿ ಮಾಡಿದ್ದಾರೆ. ಕೊಟ್ಟ ಭರವಸೆ ಈಡೇರಿಸಿಲ್ಲ. ಸಾಲ ಹೆಚ್ಚು ಮಾಡಿದ್ದಾರೆ. ಹೆಚ್ಚು ಬಡ್ಡಿ ಕಟ್ಡಿದ್ದರೆ ಅಭಿವೃದ್ಧಿ ಆಗುವುದಿಲ್ಲ. 77,750 ಕೋಟಿ ಮುಂದಿನ ವರ್ಷ ಸಾಲ ಮಾಡುತ್ತೇವೆ ಅಂತ ಹೇಳಿದ್ದಾರೆ. ಸಾಲದ ಪ್ರಮಾಣ 95% ಹೆಚ್ಚಳ ಆಗತ್ತೆ. ಹೀಗಿರುವಾಗ ರಾಜ್ಯದ ಅಭಿವೃದ್ಧಿ ಹೇಗಾಗುತ್ತದೆ? ಮಕ್ಕಳನ್ನ ಸಾಕುವ ಜವಾಬ್ದಾರಿ ಇಲ್ಲದೇ ಇದ್ದರೂ, ಎಷ್ಟು ಮಕ್ಕಳಾದ್ರೂ ಆಗಲೀ ಎಂಬಂತಿದೆ ಈ ಬಜೆಟ್. ಅನುಷ್ಠಾನಗೊಳಿಸುವ ಇಚ್ಚಾಶಕ್ತಿ ಇಲ್ಲದೇ ಇದ್ದರೆ, ಎಷ್ಟು ಬೇಕಾದ್ರೂ ಭರವಸೆ ಕೊಡಬಹುದು. ಈ ಸರ್ಕಾರದಲ್ಲಿ ಇದೇ ಆಗುತ್ತಿದೆ. ಯಾವಾಗಲೂ ಚುನಾಯಿತ ಸರ್ಕಾರ ಪಾರದರ್ಶಕ ಹಾಗೂ ಜನರಿಗೆ ಉತ್ತರದಾಯಿತ್ವ ಆಗಿರಬೇಕು. ಮತದಾರರಿಂದ ಯಾವುದನ್ನೂ ಮುಚ್ಚಿಡಲು ಹೋಗಬಾರದು

1:55 PM IST:

ಚಿಕ್ಕಮಗಳೂರು ಜಿಲ್ಲೆಗೆ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಬಂಪರ್‌ ಘೋಷಣೆ ಮಾಡಿದ್ದಾರೆ. ಹೊಸ ವಿಶ್ವವಿದ್ಯಾಲಯವನ್ನು ಜಿಲ್ಲೆಯಲ್ಲಿ ಸ್ಥಾಪನೆ ಮಾಡುವುದಾಗಿ ಪ್ರಕಟಿಸಿದ್ದರೆ, ತುಮಕೂರಿನಲ್ಲಿ ಹೊಸ ಪಾಲಿಟೆಕ್ನಿಕ್‌ ಕಾಲೇಜು ಸ್ಥಾಪನೆ ಮಾಡುವುದಾಗಿ ತಿಳಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಹೊಸ ವಿವಿ, ತುಮಕೂರಿನಲ್ಲಿ ಹೊಸ ಪಾಲಿಟೆಕ್ನಿಕ್‌ ಕಾಲೇಜು!

1:39 PM IST:

ನೀರಾವರಿಗೆ ಆದ್ಯತೆ ದೃಷ್ಟಿಯಿಂದ 2022-23ನೇ ಸಾಲಿನಲ್ಲಿ 11,236 ಕೋಟಿ ರೂ. ಮೊತ್ತದ 38 ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಜಲಸಂಪನ್ಮೂಲ ಇಲಾಖೆಯ ವತಿಯಿಂದ 1.5 ಲಕ್ಷ ಎಕರೆ ನೀರಾವರಿ ಸಾಮರ್ಥ್ಯ ಸೃಜಿಸಲಾಗುವುದು.

ಸುದ್ದಿಗೆ ಇಲ್ಲಿ ಕ್ಲಿಕ್ಕಿಸಿ

 

 

1:22 PM IST:

ಬೊಮ್ಮಾಯಿ ಬಜೆಟ್ ಮಂಡನೆ ಹಿನ್ನಲೆಯಲ್ಲಿ ಎಫ್‌ಕೆಸಿಸಿಐ ಅಧ್ಯಕ್ಷ ಬಿ.ವಿ. ಗೋಪಾಲರೆಡ್ಡಿ ಪತ್ರಿಕಾಗೋಷ್ಠಿ

ರಾಜ್ಯ ಬಜೆಟ್‌ಗೆ ಸ್ವಾಗತ. ಅಗ್ರಿಕಲ್ಚರ್, ರೂರಲ್ ಡೆವಲಪ್ಮೆಂಟ್ ಗೆ ಒತ್ತುಕೊಟ್ಟಿದ್ದಾರೆ. ಮಹಿಳಾ ಸಬಲೀಕರಣಕ್ಕೂ ಆದ್ಯತೆ ನೀಡಿದ್ದಾರೆ. ಬೆಂಗಳೂರು ರಿಂಗ್ ರಸ್ತೆ, ಮೆಟ್ರೋಗೆ ಹಣ ನೀಡಿರೋದು ಸ್ವಾಗತಾರ್ಹ. ಪ್ರೊಫೆಷನಲ್ ಟ್ಯಾಕ್ಸ್ 30 ಸಾವಿರದ ಲಿಮಿಟ್ ಕೇಳಿದ್ವಿ. 25 ಸಾವಿರಕ್ಕೆ ಏರಿಸಿದ್ದಾರೆ. ಇದು ಒಳ್ಳೆಯ ಬೆಳವಣಿಗೆ. ಮೈಕ್ರೋ ಸ್ಮಾಲ್ ಇಂಡಸ್ಟ್ರೀಸ್ ಗೆ ಒತ್ತುಕೊಡಲು ಕೇಳಿದ್ವಿ. ಎಪಿಎಂಸಿ ಒಳಗೆ ಹೊರಗೆ ಬೇರೆ ಕಾನೂನು ಇದೆ. ಇದನ್ನ ಸರಿಪಡಿಸೋಕೆ ಕೇಳಿಕೊಂಡಿದ್ವಿ. ಈ ಎರಡೂ ವಿಚಾರ ಪ್ರಸ್ತಾಪ ಆಗಿಲ್ಲ ಹೀಗಾಗಿ ಸ್ವಲ್ಪ ಬೇಸರ ಇದೆ. ನಮ್ಮ ಒಟ್ಟು 8 ಬೇಡಿಕೆ ಇಟ್ಟಿದ್ವಿ ಇದರಲ್ಲಿ 4 ಬೇಡಿಕೆ ಈಡೇರಿದೆ. ಇದು ಚುನಾಚಣೆ ಮುಂದಿಟ್ಟುಕೊಂಡ ಬಜೆಟ್ ಅನ್ನೋದು ಗೊತ್ತಾಗ್ತಿದೆ. ಬೆಂಗಳೂರು ಟ್ರಾಫಿಕ್, ವೈಟ್ ಟಾಪಿಂಗ್ ಗೆ ಒತ್ತುಕೊಟ್ಟಿದ್ದಾರೆ ಇದು ಸ್ವಾಗತಾರ್ಹ.

.

1:17 PM IST:

ದಿನೇಶ್ ಗುಂಡೂರಾವ್ ಹೇಳಿಕೆ,

ಈ ಬಜೆಟ್ ಬಗ್ಗೆ ಈಗಾಗಲೇ ಹೇಳಿದ್ದಾರೆ. ಕಿವಿ ಮೇಲೆ ಹೂ ಇಡುವ ಬಜೆಟ್. ಇದು ಚುನಾವಣಾ ಬಜೆಟ್. ಕಳೆದ‌ಬಾರಿ ನೋಡಿದ್ರೆ ಯಾವುದೂ ಜಿಓ ಇಂಪ್ಲಿಮೆಂಟ್ ಆಗಿಲ್ಲ. ಕಳೆದ ವರ್ಷ ಘೋಷಿಸಿದ ಬಜೆಟ್ ಇಂಪ್ಲಿಮೆಂಟ್ ಆಗದೆ, ಈ ಬಜೆಟ್ ಹೇಗೆ ಜಾರಿಗೆ ಬರಲಿದೆ.. ಮುಂದೆ ಸರ್ಕಾರ ಯಾವುದು ಬರುತ್ತೋ, ಅವರು ಬಜೆಟ್ ಮಂಡಿಸ್ತಾರೆ. ಇದನ್ನ ನಾವು ಸಂಪೂರ್ಣ ತಿರಸ್ಕರಿಸ್ತೇವೆ. ಇದು ಯಾವುದೂ ಕೂಡ ಅನುಷ್ಠಾನ ಆಗುವುದಿಲ್ಲ. ಬಿಜೆಪಿ ವ್ಯರ್ಥ ಪ್ರಯತ್ನ ಮಾಡಿದೆ.

1:13 PM IST:

ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡಲು 13,139 ಕೋಟಿ ರೂ. ವೆಚ್ಚದಲ್ಲಿ 288 ಕಿ.ಮೀ ಉದ್ದದ ಸ್ಯಾಟಲೈಟ್ ಟೌನ್ ರಿಂಗ್​ರೋಡ್ ನಿರ್ಮಿಸಲು ಕೇಂದ್ರ ಸರ್ಕಾರದ ಅನುಮೋದನೆ ದೊರೆತಿದೆ.ಅದಲ್ಲದೇ 150 ಕೋಟಿ ರೂ. ವೆಚ್ಚದಲ್ಲಿ 75 ಜಂಕ್ಷನ್‌ ಅಭಿವೃದ್ಧಿಪಡಿಸಲಾಗುವುದು.ಬೈಯಪ್ಪನಹಳ್ಳಿ ನಮ್ಮ ಮೆಟ್ರೋ ಸುತ್ತಮುತ್ತ ರಸ್ತೆ ಅಭಿವೃದ್ಧಿ, ಟ್ರಾಫಿಕ್‌ ಕಂಟ್ರೋಲ್‌ಗೆ 300 ಕೋಟಿ ರೂ. ಅನುದಾನವನ್ನು ನೀಡಲಾಗಿದೆ.

1:11 PM IST:

ರಾಯಚೂರು: ಬಜೆಟ್ ನಲ್ಲಿ ಜಿಲ್ಲೆಗೆ ಏಮ್ಸ್ ಮಾದರಿ ಆಸ್ಪತ್ರೆ ಘೋಷಣೆಗೆ ಖಂಡನೆ. ಕೇಳಿದ್ದು ಏಮ್ಸ್ ನೀಡಿದ್ದು ಮಾದರಿ ಆಸ್ಪತ್ರೆ. ಮಾತು ತಪ್ಪಿದ ಸಿಎಂ ಬಸವರಾಜ ಬೊಮ್ಮಾಯಿ. ನಗರದಲ್ಲಿ ಏಮ್ಸ್ ಹೋರಾಟ ಸಮಿತಿ ಪ್ರಧಾನ ಸಂಚಾಲಕ ಡಾ.ಬಸವರಾಜ ಕಳಸ ಆಕ್ರೋಶ. ನಮಗೆ ಏಮ್ಸ್ ಮಾದರಿ ಬೇಡ, ಸರ್ಕಾರ ಘೋಷಣೆ ತಿರಸ್ಕಾರ. ನಗರದಲ್ಲಿ 281 (31 ದಿನ ಸರದಿ ಉಪವಾಸ) ದಿನಗಳಿಂದ ನಡೆಯುತಿರುವ ಹೋರಾಟಕ್ಕೆ ಬೆಲೆ ನೀಡದ ಸರ್ಕಾರ. ಮುಂದಿನ ದಿನಗಳಲ್ಲಿ ತೀವ್ರ ಸ್ವರೂಪದ ಹೋರಾಟ. ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟದ ಎಚ್ಚರಿಕೆ ನೀಡಿದ ಏಮ್ಸ್ ಹೋರಾಟ ಸಮಿತಿ ಪ್ರಧಾನ ಸಂಚಾಲಕ ಡಾ.ಬಸವರಾಜ ಕಳಸ.

12:59 PM IST:

2 ಗಂಟೆ 35 ನಿಮಿಷಗಳ ಕಾಲ‌ ಬಜೆಟ್ ಓದಿದ ಸಿಎಂಗೆ ಕಿವಿಯಲ್ಲಿ ಹೂ ಹಿಡಿದುಕೊಂಡು ಸಿಎಂ ಬಳಿಗೆ ಹೋಗಿ ಬೊಮ್ಮಾಯಿಗೆ ಶುಭಾಶಯ ಹೇಳಿದ ಡಿ ಕೆ ಶಿವಕುಮಾರ್. ಭಾರತ್ ಮಾತಾಕೀ ಜೈ ಘೋಷಣೆ ಹಾಕಿದ ಬಿಜೆಪಿ ಶಾಸಕರು. ಸೋಮವಾರ 10-30 ಕ್ಕೆ ಸದನ ಮುಂದೂಡಿಕೆ.ಸಿಎಂ ಗೆ ಅಭಿನಂದನೆ ಸಲ್ಲಿಸಿದ ಸಚಿವರು, ಶಾಸಕರು

 

12:52 PM IST:

ಶೂನ್ಯ ಬಡ್ಡಿದರದಲ್ಲಿ ಮಹಿಳೆಯರಿಗೆ ಸಾಲ ಸೌಲಭ್ಯ ಯೋಜನೆ. ಗೃಹಿಣಿಯರಿಗೆ ತಿಂಗಳಿಗೆ 500 ರೂ. ಗಳ ಸಹಾಯಧನ. ರಾಜ್ಯದಲ್ಲಿ ಗೃಹಿಣಿ ಶಕ್ತಿ ಯೋಜನೆ ಶೀಘ್ರದಲ್ಲೇ ಜಾರಿ. ಆ‍್ಯಸಿಡ್‌ ದಾಳಿ ಸಂತ್ರಸ್ಥರಿಗೆ ಮಾಶಾಸನ 10,000ಕ್ಕೆ ಏರಿಕೆ.

12:43 PM IST:

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  2023-24ನೇ ಸಾಲಿನ ಬಜೆಟ್​ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಒತ್ತು ನೀಡಿದ್ದಾರೆ.ಬೆಂಗಳೂರಿನಲ್ಲಿ ಒಟ್ಟು 243 ವಾರ್ಡ್ ಗಳಲ್ಲಿ 27 ಸ್ಮಾರ್ಟ್ ವರ್ಚ್ಯುವಲ್ ಕ್ಲಿನಿಕ್ ಗೆ ಅನುಮೋದನೆ ನೀಡಲಾಗಿದ್ದು ಹೆಲ್ತ್ ಸಿಸ್ಟಮ್ಸ್ ಅನ್ನು ಪುನರಚನೆ ಮಾಡಲು ನಿರ್ಧರಿಸಲಾಗಿದೆ.ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಅಡಿಯಲ್ಲಿ ಹೆಚ್ಚಿನ ಖಾಸಗಿ ಆಸ್ಪತ್ರೆಗಳನ್ನು ಸೇರ್ಪಡೆಗೊಳಿಸಲು ಕ್ರಮ ಕೈಗೊಳ್ಳಲಾಗುವುದು.


 

12:36 PM IST:

ರಾಜ್ಯದ ಮೀನುಗಾರರಿಗೆ ನೆರವಾಗುವ ದೃಷ್ಟಿಯಿಂದ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಹೊಸ ಯೋಜನೆಗಳನ್ನು ಪ್ರಕಟಿಸಿದ್ದಾರೆ. ಅದರಂತೆ ಹಾವೇರಿಯಲ್ಲಿ ಮೀನು ಪಾಲನಾ ಕೇಂದ್ರ ಹಾಗೂ ಬೈಂದೂರಿನಲ್ಲಿ ಸೀಫುಡ್‌ ಪಾರ್ಕ್‌ ಸ್ಥಾಪನೆ ಮಾಡುವುದಾಗಿ ತಿಳಿಸಿದ್ದಾರೆ.

ಉತ್ತರ ಕರ್ನಾಟಕಕ್ಕೆ ಮತ್ಸ್ಯಘಮ

 



 

12:21 PM IST:

ಸಿಎಂ ಬೊಮ್ಯಾಯಿ ಕಳೆದ ಬಜೆಟ್‌ನಲ್ಲಿ ನೀಡಿದ ಭರವಸೆಗಳನ್ನೇ ಈಡೇರಿಸಿಲ್ಲ. ಇದೀಗ ಮತ್ತೊಂದು ಸುಳ್ಳು ಯೋಜನೆಗಳ ಬಜೆಟ್ ಮಂಡಿಸುತ್ತಿದ್ದಾರೆಂದು, ಕಾಂಗ್ರೆಸ್ಸಿಗರು ಸದನಕ್ಕೆ ಕಿವಿ ಮೇಲೆ ಹೂವಿಟ್ಟುಕೊಂಡು ಬಂದದ್ದು, ವಿಶೇಷವಾಗಿತ್ತು. 

12:16 PM IST:

 

12:13 PM IST:

ರಾಜ್ಯ ಬಜೆಟ್‌ನಲ್ಲಿ ಬೆಂಗಳೂರಿಗೆ ಬರೋಬ್ಬರಿ 9,698 ಕೋಟಿ ರೂ. ಅನುದಾನ ನೀಡಲಾಗಿದೆ. ಹವಾಮಾನ ಬದಲಾವಣೆಯ ಪರಿಣಾಮ ತಗ್ಗಿಸಲು ಮತ್ತು ಪ್ರವಾಹವನ್ನು ನಿಯಂತ್ರಿಸಲು 3,000 ಕೋಟಿ ರೂ. ಯೋಜನೆ ಅನುಷ್ಠಾನ ಮಾಡಲಾಗುತ್ತದೆ. ಈ ವರ್ಷ ಕಾವೇರಿ ಕುಡಿಯುವ ನೀರು ಎಲ್ಲರುಗೂ ಲಭ್ಯವಾಗಲಿದೆ.

ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

12:12 PM IST:

ಕಾಂಗ್ರೆಸ್'ನವರು ಕಿವಿ ಮೇಲೆ ಹೂವಿಟ್ಟುಕೊಳ್ಳುತ್ತೇನೆ ಎಂದರೆ ಬೇಡ ಎನ್ನುವುದಿಲ್ಲ, ಜನರ ಮೇಲೆ ಕಿವಿ ಮೇಲೆ ಹೂವಿಡುತ್ತಿದ್ದರು. ಈಗ ಜನರೇ ಕಾಂಗ್ರೆಸ್ ಕಿವಿ ಮೇಲೆ ಹೂವಿಡುತ್ತಿದ್ದಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಬಜೆಟ್ ಮಂಡನೆ ವೇಳೆ ಅವರು, ಕಾಂಗ್ರೆಸ್'ಗೆ ಟಾಂಗ್ ನೀಡಿದರು. ಸಿಎಂ ಮಾತಿಗೆ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದು, ಇದೇನು ಬಜೆಟ್ ಭಾಷಣವೇ ಎಂದು ಅವರು ಕಿಡಿ ಕಾರಿದರು. 600 ಭರವಸೆಗಳಲ್ಲಿ 50 ಭರವಸೆಗಳನ್ನೂ ಈಡೇರಿಸಲು ಆಗಿಲ್ಲ ಎಂದು ವಾಗ್ದಾಳಿ ನಡೆಸಿದರು. ಸಿಎಂ ಬಜೆಟ್ ಮಂಡನೆ ವೇಳೆ ಹೈಡ್ರಾಮಾ ನಡೆದಿದ್ದು, ಆಡಳಿತ- ವಿಪಕ್ಷಗಳ ನಡುವೆ ಮಾತಿನ ಚಕಮಕಿ ಏರ್ಪಟ್ಟಿತ್ತು. 

12:10 PM IST:

ಈ ಬಾರಿ 70295 ಕೋಟಿ ರೂ ಸಾಲ ಮಾಡಲು ತಿರ್ಮಾನ...
ಇದೇ ವರ್ಷ 17997 ಕೋಟಿ ರೂ ಸಾಲ ಮರುಪಾವತಿಗೆ ನಿಗದಿ....
ಕೋರೋನಾ ಕಾಲದಲ್ಲಿ ರಾಜ್ಯದ ಜನರ ತಲಾ ಆದಾಯ 2.04 ಲಕ್ಷ ರೂ..
ಈ ವರ್ಷ ಜನರ ತಲಾ ಆದಾಯ - 3.32 ಕೋಟಿ ರೂ ಗಳಿಗೆ ಏರಿಕೆ..
ಶಿಶುಮರಣ ಮತ್ತು ತಾಯಿ‌ಮರಣದ ಪ್ರಮಾಣ ರಾಜ್ಯದಲ್ಲಿ ಗಣನೀಯ ಇಳಿಕೆ....

12:07 PM IST:

ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ ರಾಮನಗರದ ರಾಮದೇವರ ಬೆಟ್ಟದಲ್ಲಿ ಭವ್ಯ ರಾಮಮಂದಿರ ನಿರ್ಮಾಣ ಮಾಡುವ ಬಗ್ಗೆ ಬಜೆಟ್‌ನಲ್ಲಿ ಘೋಷಣೆಯಾಗಿದೆ. ಅದರೊಂದಿಗೆ ರಾಜ್ಯದ ವಿವಿಧ ದೇವಸ್ಥಾನ ಹಾಗೂ ಮಠಗಳ ಜೀರ್ಣೋದ್ದಾರಕ್ಕೆ ಮುಂದಿನ 2 ವರ್ಷಗಳಲ್ಲಿ 1 ಸಾವಿರ ಕೋಟಿ ನೀಡುವುದಾಗಿ ಘೋಷಣೆಯಾಗಿದೆ.

ರಾಮನಗರದಲ್ಲಿ ರಾಮಮಂದಿರ

12:04 PM IST:

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ 2023ನೇ ಆರ್ಥಿಕ ಸಾಲಿನ ರಾಜ್ಯ ಬಜೆಟ್ ನಲ್ಲಿ ಕೃಷಿ ಕ್ಷೇತ್ರದ ಆರ್ಥಿಕ ಬೆಳವಣಿಗೆಗೆ ಹೆಚ್ಚಿನ ಒತ್ತು ನೀಡಿದ್ದಾರೆ. ರೈತರಿಗೆ ವಿವಿಧ ಸಹಾಯಧನಗಳ ಘೋಷಣೆ ಜೊತೆಗೆ ಭೂ ಸಿರಿ ಎಂಬ ನೂತನ ಯೋಜನೆಯನ್ನು ಕೂಡ ಘೋಷಿಸಿದ್ದಾರೆ. 

ರೈತರಿಗೆ ದಕ್ಕಿದ್ದೇನು? ಇಲ್ಲಿ ಕ್ಲಿಕ್ಕಿಸಿ

 

 

12:01 PM IST:

ಆದಾಯವನ್ನು ಬೊಮ್ಮಾಯಿ ಹೇಗೆ ಹಂಚುತ್ತಿದ್ದಾರೆ?

 

 

11:59 AM IST:

ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರಿಗೆ 1 ಸಾವಿರ ಸಹಾಯಧನ ಹೆಚ್ಚು ಮಾಡಿದ್ದಾರೆ. ಇದನ್ನ ಸ್ವಾಗತ ಮಾಡಿದ‌ ಸಂಘಟನೆ. ಕೊರೋನಾ‌ ಸಂದರ್ಭದಲ್ಲಿ ಆಶಾ ಕಾರ್ಯಕರ್ತರು ಪ್ರಾಣ ಪಣಕ್ಕಿಟ್ಟು ಕೆಲಸ ಮಾಡಿದ್ದಾರೆ. ನಿರಂತರ ಹೋರಾಟ ಮಾಡಿದ್ದರ ಪರಿಣಾಮ 1 ಸಾವಿರ ಹೆಚ್ಚು ಮಾಡಿದ್ದಾರೆ. ಇಂತ ಬೆಲೆಏರಿಕೆ ಸಂದರ್ಭದಲ್ಲಿ ಒಂದು ಸಾವಿರ ತುಂಬಾ ಕಡಿಮೆಯಾಗಿದೆ. ಕನಿಷ್ಠ 12 ಸಾವಿರವಾದ್ರೂ ಆಶಾ ಕಾರ್ಯಕರ್ತೆಯರಿಗೆ ನಿಗದಿಯಾಗಬೇಕಿತ್ತು. ಸರ್ಕಾರದಿಂದ 5 ಸಾವಿರದಿಂದ 6 ಸಾವಿರವಾಗಿದೆ. ಕೇಂದ್ರ ಸರ್ಕಾರದಿಂದ ಮೂರ್ನಾಲ್ಕು ಸಾವಿರ ಬರುತ್ತೆ. ಒಟ್ಟು 8 ರಿಂದ 9 ಸಾವಿರವಷ್ಟೇ ಆಗುತ್ತೆ. ಕನಿಷ್ಠ 12 ಸಾವಿರ ಅನ್ನೋದು ಆಶಾ ಕಾರ್ಯಕರ್ತೆಯರ ಬೇಡಿಕೆಯಾಗಿತ್ತು. ಆರೋಗ್ಯ ವಿಚಾರಕ್ಕೆ ಹಲವು ಬೇಡಿಕೆಗಳನ್ನ ಇಡಲಾಗಿದೆ. ಅದ್ರೆ ಇಂದಿನ ಬಜೆಟ್ ನಲ್ಲಿ ಆಶಾ ಕಾರ್ಯಕರ್ತೆಯರ ಆರೋಗ್ಯಕ್ಕೆ ಬಜೆಟ್ ಇಡಬೇಕಿತ್ತು. 1 ಸಾವಿರ ಹೆಚ್ಚಳ ಸಂತೋಷದ ವಿಚಾರವೇ. ಮುಂದಿನ ದಿನಗಳಲ್ಲಿ ಅದು ಇನ್ನಷ್ಟು ಹೆಚ್ಚಳವಾಗಬೇಕಿದೆ. ರಾಜ್ಯ ಆಶಾ ಕಾರ್ಯಕರಗತೆಯರ ಸಂಘದ ಅಧ್ಯಕ್ಷೆ ನಾಗಲಕ್ಷ್ಮಿ ಬಾಯಿ ಹೇಳಿಕೆ

11:53 AM IST:

ಆದಾಯ ಮೂಲ ಎಲ್ಲಿಯದ್ದು ಎಂದು ವಿವರಿಸಿದ ಮೋದಿ
 

 

11:49 AM IST:

6 ಹೊಸ ಇಎಸ್‌ಐ ಆಸ್ಪತ್ರೆ, ಮನೆ ಮನೆಗೆ ಆರೋಗ್ಯ ಹೆಸರಲ್ಲಿ ಹಳ್ಳಿಗಳಲ್ಲಿ ಆರೋಗ್ಯ ಶಿಬಿರ. ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳ ಸಂಖ್ಯೆ ಹೆಚ್ಚಳ. ಉತ್ತರ ಕನ್ನಡ ಜಿಲ್ಲೆಯ ಜನತೆಯ ಬಹುದಿನಗಳ ಬೇಡಿಕೆಯಾದ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯನ್ನು ಈ ಸಲದ ಬಜೆಟ್‌ನಲ್ಲಿ ಸಿಎಂ ಘೋಷಿಸಿದ್ದಾರೆ. ಇದಲ್ಲದೆ ಕ್ಷಯ ರೋಗಿಗಳ ತಪಾಸಣೆಗೆ ಯಂತ್ರಗಳ ಘೋಷಣೆ. ಕ್ಯಾನ್ಸರ್‌ ರೋಗ ತಡೆಗೆ ಜೀವಸುಧೆ ಎಂಬ ತಪಾಸಣಾ ಶಿಬಿರ

11:46 AM IST:

ಬೆಂಗಳೂರಿನಲ್ಲಿ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆಗಳನ್ನು ದೊರಕಿಸುವುದು ಸರ್ಕಾರದ ಆದ್ಯತೆಯಾಗಿದೆ. ಈ ಉದ್ದೇಶಕ್ಕಾಗಿ 2022-23 ನೇ ಸಾಲಿನಲ್ಲಿ 243 ವಾರ್ಡ್‌ಗಳಲ್ಲಿ ನಮ್ಮ ಕ್ಲಿನಿಕ್ ಮತ್ತು 27 ಸ್ಮಾರ್ಟ್ ವರ್ಚುಯಲ್ ಕ್ಲಿನಿಕ್‌ಗಳನ್ನು ಅನುಮೋದಿಸಲಾಗಿದೆ.

11:44 AM IST:

ರೈತರ ಜಮೀನುಗಳಲ್ಲಿ ಜಲಹೊಂಡ ನಿರ್ಮಿಸಿ ನೀರು ಸಂರಕ್ಷಣಾ ಕಾಮಗಾರಿಗಳಿಂದ ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಜಲನಿಧಿ ಎಂಬ ಯೋಜನೆಯನ್ನು ಪ್ರಾರಂಭಿಸಲಾಗುವುದು. ನರೇಗಾ ಯೋಜನೆಯ ಸಮನ್ವಯದೊಂದಿಗೆ ಜಲಹೊಂಡವನ್ನು ನಿರ್ಮಿಸಲು ಪ್ರೋತ್ಸಾಹಿಸಲಾಗುವುದು.

11:43 AM IST:

ಕರ್ನಾಟಕದ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನಮ್ಮ ಸರ್ಕಾರವು ಬದ್ಧವಾಗಿದೆ. ಈ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಬಂಜಾರ ಸಂಸ್ಕೃತಿ ಮತ್ತು ಅಕಾಡೆಮಿಯನ್ನು ಹಾಗೂ ಯಕ್ಷರಂಗಾಯಣವನ್ನು ಸ್ಥಾಪಿಸಲಿದೆ.

11:42 AM IST:

ಗಡಿನಾಡು ಪ್ರದೇಶದಲ್ಲಿ ಕನ್ನಡ ಭಾಷೆ, ಕಲೆ, ಶಿಕ್ಷಣ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಪ್ರಾಶಸ್ತ್ಯವನ್ನು ನೀಡುವುದಕ್ಕಾಗಿ ಹಾಗೂ ಗಡಿ ಪ್ರದೇಶಗಳ ರಸ್ತೆಗಳ ಹಾಗೂ ಸಮಗ್ರ ಅಭಿವೃದ್ಧಿಗೆ ವಿವಿಧ ಇಲಾಖೆಗಳ ಮುಖಾಂತರ 150 ಕೋಟಿ ರೂ. ಅನುದಾನ.

11:40 AM IST:

ನಂದಿ ಗಿರಿಧಾಮ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆ, ನಂದಿಬೆಟ್ಟಕ್ಕೆ ಖಾಸಗಿ-ಸರ್ಕಾರಿ ಸಹಭಾಗಿತ್ವದಲ್ಲಿ ರೋಪ್‌ ವೇ ನಿರ್ಮಾಣ, ಪ್ರವಾಸಿ ಗೈಡ್‌ಗಳ ಮಾಸಿಕ ಪ್ರೋತ್ಸಾಹ ಧನ 2 ರಿಂದ 5 ಸಾವಿರಕ್ಕೆ ಏರಿಕೆ, ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ರೂ. ಕೋಟಿ

11:36 AM IST:

 ರಾಜ್ಯದ ಶಿಕ್ಷಣ ವಲಯದಲ್ಲಿ ಈ ದಿನ ಅವಿಸ್ಮರಣೀಯ ದಿನವಾಗಲಿದೆ. ರಾಜ್ಯದ ಎಲ್ಲಾ ಪ್ರೌಢ ಶಾಲಾ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಹೊಂದಲು ಅನುವು ಮಾಡಿಕೊಡುವ ದೃಷ್ಟಿಯಿಂದ 'ಮುಖ್ಯಮಂತ್ರಿ ವಿದ್ಯಾಶಕ್ತಿ' ಯೋಜನೆಯನ್ನು ಪ್ರಾರಂಭಿಸಲಾಗುತ್ತಿದೆ. ಇದರಡಿಯಲ್ಲಿ ಸರ್ಕಾರಿ ಪದವಿಪೂರ್ವ ಮತ್ತು ಸರ್ಕಾರಿ ಪದವಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ ನೀಡಲಾಗುವುದು. ಈ ಉಚಿತ ಉನ್ನತ ಶಿಕ್ಷಣದಿಂದ ರಾಜ್ಯದ 8 ಲಕ್ಷ ವಿದ್ಯಾರ್ಥಿಗಳು, ಅನುಕೂಲ ಪಡೆಯಲಿದ್ದಾರೆ.

- ರಾಜ್ಯದಲ್ಲಿ ಈಗಾಗಲೇ 19 ಲಕ್ಷ ಶಾಲಾ-ಕಾಲೇಜು ವಿದ್ಯಾರ್ಥಿಗಳು ತಮ್ಮ ಶಿಕ್ಷಣಕ್ಕಾಗಿ ಸಾರ್ವಜನಿಕ ಬಸ್ ಸೇವೆಯನ್ನು ಅವಲಂಬಿಸಿರುತ್ತಾರೆ. ಇಂತಹ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ವರ್ಷದಲ್ಲಿ ಸಾರಿಗೆ ನಿಗಮಗಳ ಮೂಲಕ 100 ಕೋಟಿ ರೂ. ವೆಚ್ಚದಲ್ಲಿ 1,000 ಹೊಸ ಕಾರ್ಯಾಚರಣೆಗಳನ್ನು ಮಾಡಲು 'ಮಕ್ಕಳ ಬಸ್ಸು' ಎಂಬ ಯೋಜನೆಯನ್ನು ಪ್ರಾರಂಭಿಸಲಾಗುವುದು. ಇದರಿಂದ ಹೆಚ್ಚುವರಿಯಾಗಿ 2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

- ರಾಜ್ಯ ಸರ್ಕಾರವು ಶಾಲಾ ಕಾಲೇಜುಗಳಲ್ಲಿ ಅಗತ್ಯ ಮೂಲ ಸೌಕರ್ಯ ಒದಗಿಸುವ ಮೂಲಕ ವಿದ್ಯಾರ್ಥಿಗಳಿಗೆ ಕಲಿಕಾ ವಾತಾವರಣ ಕಲ್ಪಿಸುವ ಉದ್ದೇಶ ಹೊಂದಿದೆ. ನಿಟ್ಟಿನಲ್ಲಿ ವಿವೇಕ ಯೋಜನೆಯಡಿಯಲ್ಲಿ 7,601 ಶಾಲೆಗಳ ಅಭಿವೃದ್ಧಿ.

11:27 AM IST:

ರಾಜ್ಯದ ಮಹಿಳಾ ಕಾರ್ಮಿಕರಿಗೆ ತಲಾ 500 ರೂ. ಸಹಾಯಧನ ಹಾಗೂ ಉಚಿತ ಬಸ್‌ ಪಾಸ್‌ ನೀಡಲಾಗುವುದು. ಮತ್ತೊಂದೆಡೆ ಎಲ್ಲ ಶಾಲಾ- ಕಾಲೇಜು ವಿದ್ಯಾರ್ಥಿನಿಯರಿಗೂ ಉಚಿತ ಬಸ್‌ ಪಾಸ್‌ ನೀಡಲಾಗುವುದು.
 

ಮಹಿಳೆಯರಿಗೆ ಬಜೆಟ್‌ನಲ್ಲಿ ಸಿಕ್ಕಿದ್ದೇನು?

11:21 AM IST:

ಪದವಿ ಶಿಕ್ಷಣವನ್ನು ಮುಗಿಸಿ, ಮೂರು ವರ್ಷಗಳ ನಂತರವೂ ಯಾವುದೇ ಉದ್ಯೋಗ ದೊರೆಯದ ಯುವಕರಿಗೆ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹ ನೀಡಲು 'ಯುವಸ್ನೇಹಿ' ಎಂಬ ಹೊಸ ಯೋಜನೆಯಡಿ ತಲಾ 2,000 ರೂ. ಗಳ ಒಂದು ಈ ಬಾರಿಯ ಆರ್ಥಿಕ ನೆರವು

11:19 AM IST:

ಶಿಕ್ಷಣ: 37,960 ಕೋಟಿ
ಜಲಸಂಪನ್ಮೂಲ: 22,854 ಕೋಟಿ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್: 20,494 ಕೋಟಿ
ನಗರಾಭಿವೃದ್ಧಿ: 17,938 ಕೋಟಿ
ಕಂದಾಯ: 15,943 ಕೋಟಿ
ಆರೋಗ್ಯ: 15,151 ಕೋಟಿ
ಒಳಾಡಳಿತ ಮತ್ತು ಸಾರಿಗೆ: 14509 ಕೋಟಿ
ಇಂಧನ: 13,803 ಕೋಟಿ
ಸಮಾಜ ಕಲ್ಯಾಣ: 11,163 ಕೋಟಿ
ಲೋಕೋಪಯೋಗಿ: 10,741 ಕೋಟಿ
ಕೃಷಿ ಮತ್ತು ತೋಟಗಾರಿಕೆ: 9,456 ಕೋಟಿ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ: 5,676 ಕೋಟಿ
ಆಹಾರ ಮತ್ತು ನಾಗರೀಕ ಸರಬರಾಜು: 4,600 ಕೋಟಿ
ವಸತಿ: 3,787 ಕೋಟಿ
ಇತರೆ: 1,16,968 ಕೋಟಿ

11:09 AM IST:

ಕೃಷಿ ಕ್ಷೇತ್ರದಲ್ಲಿ ನಮ್ಮ ಸರ್ಕಾರ ಹಲವು ಮಹತ್ವಪೂರ್ಣ ಕ್ರಮಗಳನ್ನು ಕೈಗೊಂಡಿದೆ. ತಂತ್ರಜ್ಞಾನ ಹಾಗೂ ವೈಜ್ಞಾನಿಕ ಪದ್ಧತಿ ಅಳವಡಿಕೆಯೊಂದಿಗೆ ರೈತರು ಮಾಹಿತಿಪೂರ್ಣ ನಿರ್ಧಾರ ಕೈಗೊಳ್ಳಲು ಪೂರಕ ಕ್ರಮಗಳನ್ನು ಸರ್ಕಾರ ಜಾರಿಗೊಳಿಸಲಿದೆ. ಇದಲ್ಲದೆ, ಕೃಷಿಯನ್ನು ಲಾಭದಾಯಕವಾಗಿಸಲು ಕೃಷಿ ಉತ್ಪನ್ನಗಳ ಮೌಲ್ಯ ವರ್ಧನೆ ಮತ್ತು ರಫ್ತಿಗೆ ಒತ್ತು ನೀಡಲಾಗುತ್ತಿದೆ. ಸಮಗ್ರ ಕೃಷಿ ಪದ್ಧತಿಯನ್ನು ಪ್ರೋತ್ಸಾಹಿಸುವ ಮೂಲಕ ರೈತರ ಆದಾಯದಲ್ಲಿ ಸ್ಥಿರತೆ ತರಲು ನಮ್ಮ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.

11:07 AM IST:

ನರೇಗಾ ಯೋಜನೆ - 1,000 ಕೋಟಿ
ಕಳಸಾ ಬಂಡೂರಿ - 80 ಕೋಟಿ ರೂ.
ಗಂಗಾ ಕಲ್ಯಾಣ್ 675 ಕೋಟಿ
ಮಹದಾಯಿ - 1,000 ಕೋಟಿ
ಬೆಂಗಳೂರು ಟ್ರಾಫಿಕ್ - 150 ಕೋಟಿ
ಅಂಜನಾದ್ರಿ ಬೆಟ್ಟ - 100 ಕೋಟಿ

ನೀರಾವರಿ ಕ್ಷೇತ್ರ - 25 ಸಾವಿರ ಕೋಟಿ
ಪ್ರಾಣಿ ಕಲ್ಯಾಣ ಮಂಡಳಿ - 5 ಕೋಟಿ ರೂ.
ಬಳ್ಳಾರಿ ಮೆಗಾ ಡೈರಿ - 100 ಕೋಟಿ ರೂ.
-------------
ಬಸ್ ಖರೀದಿ - 500 ಕೋಟಿ 
ಸಾರಿಗೆ ಇಲಾಖೆ - 8,007 ಕೋಟಿ ರೂ
ಗಣಿ ಮತ್ತು ಭೂವಿಜ್ಞಾನ - 7,500 ಕೋಟಿ 
--------------
ಒಟ್ಟು 6 ವಲಯವಾರು ವಿಂಗಡಣೆ
ಆಡಳಿತ ಸುಧಾರಣೆ ಸಾರ್ವಜನಿಕ ಸೇವೆಗಳು..
ಸಂಸ್ಕೃತಿ ನೈಸರ್ಗಿಕ ಸಂಪನ್ಮೂಲಗಳ ರಕ್ಷಣೆ..
ಬೆಂಗಳೂರು ಸಮಗ್ರ ಅಭಿವೃದ್ಧಿ..
ಆರ್ಥಿಕ ಅಭಿವೃದ್ಧಿ..
ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ..
ಕೃಷಿ ಮತ್ತು ಪೂರಕ ಚಟುವಟಿಕೆ ‌..
ಒಟ್ಟು ಬಜೆಟ್ ಗಾತ್ರ 309182 ಕೋಟಿ

11:05 AM IST:

ಗ್ರಾಮ ಸಹಾಯಕರ ಗೌರವ ಧನ ಮಾಸಿಕ 13ರಿಂದ 14 ಸಾವಿರಕ್ಕೆ ಏರಿಕೆ
ಗ್ರಾಮ ಸಹಾಯಕರ ಹುದ್ದೆಗೆ ಜನಸೇವಕ ಎಂದು ಮರುನಾಮಕರಣ
ವನ್ಯಜೀವಿಗಳ ಪ್ರಾಣ ಹಾನಿ ಪರಿಹಾರ 7.5 ಲಕ್ಷದಿಂದ 15 ಲಕ್ಷ ರೂ.ಗೆ ಏರಿಕೆ
+++++++++
ಪದವಿ ಮುಗಿಸಿ ಉದ್ಯೋಗವಿಲ್ಲದ ಯುವಕರಿಗೆ ಯುವ ಸ್ನೇಹಿ ಯೋಜನೆ
ನಿರುದ್ಯೋಗಿ ಪದವೀಧರರಿಗೆ ಮಾಸಿಕ 2 ಸಾವಿರ ಆರ್ಥಿಕ ನೆರವು
+++++++
ಐಟಿಐ 3 ತಿಂಗಳ ತರಬೇತಿಗೆ 1,500 ರೂ. ಶಿಷ್ಯವೇತನ
ಐಟಿಐ ಅಪ್ರೆಂಟಿಸ್ ಕಾರ್ಯಕ್ರಮ ತಿಂಗಳಿಗೆ 1,500 ಶಿಷ್ಯವೇತನ
ಬದುಕುವ ದಾರಿ ಯೋಜನೆಯಡಿ ಹೊಸ ಯೋಜನೆ ಘೋಷಣೆ
+++++
ಗ್ರಾಮೀಣ ಸ್ವಯಂ ಉದ್ಯೋಗ ಮಾಡುವವರಿಗೆ ಪ್ರೋತ್ಸಾಹ ಧನ
ಒಂದು ಲಕ್ಷದಿಂದ 5 ಲಕ್ಷದವರೆಗೆ ಸಹಾಯಧನ, ಸುತ್ತುನಿಧಿ ಪ್ರೋತ್ಸಾಹ
++++++++
ಬೆಂಗಳೂರು ನಗರದಲ್ಲಿ ಶ್ರೀ ಭುವನೇಶ್ವರಿ ಥೀಂ ಪಾರ್ಕ್
+++++++
ಬೆಂಗಳೂರು ನಗರದಲ್ಲಿ 250  ಶಿ ಟಾಯ್ಲೆಟ್ ನಿರ್ಮಾಣಕ್ಕೆ 50 ಕೋಟಿ
ಫೀಡಿಂಗ್ ರೂಂ, ಮೊಬೈಲ್ ಚಾರ್ಜಿಂಗ್, ತುರ್ತು ಎಸ್ಒಸಿ ಸೌಲಭ್ಯ ಒದಗಿಸಲು ಆದ್ಯತೆ.
___
ಬೆಂಗಳೂರಿಗೆ 243 ವಾರ್ಡ್‌ಗಳಲ್ಲಿ ನಮ್ಮ ಕ್ಲಿನಿಕ್
27 ಸ್ಮಾರ್ಟ್ ವರ್ಚುವಲ್ ಕ್ಲಿನಿಕ್
50 ಡಯಾಲಿಸಿಸ್ ಹಾಸಿಗೆ, 300 ಹಾಸಿಗೆಗಳ ಆಸ್ಪತ್ರೆ
ಬೆಂಗಳೂರು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ 180 ಕೋಟಿ
+++++++++
ಬಿಬಿಎಂಪಿ ವ್ಯಾಪ್ತಿಯ 110 ಗ್ರಾಮಗಳಿಗೆ ಕುಡಿಯುವ ನೀರು : 200 ಕೋಟಿ
ಹೊನ್ನಾವರದಲ್ಲಿ ಚೆನ್ನೈಭೈರಾದೇವಿ ಸ್ಮಾರಕ ನಿರ್ಮಾಣ
ಕರ್ನಾಟಕದ ಗೋಲ್ ಗುಂಬಜ್, 
ಅಬಕಾರಿ ತೆರಿಗೆ : ಜೂನ್ ಒಳಗೆ ಮುಂಚಿತವಾಗಿ ಪಾವತಿಸಿದ್ದರೆ ಬಡ್ಡಿ, ದಂಡ ವಿನಾಯಿತಿ
ವೃತ್ತಿ ತೆರಿಗೆ ವಿನಾಯಿತಿ : ಸಂಬಳದಾರರಿಗೆ ಮಾಸಿಕ 15ರಿಂದ 25 ಸಾವಿರದವರೆಗೆ ಏರಿಕೆ
ಟಯರ್ 2 ನಗರಗಳಲ್ಲಿ ಮಿನಿ ಥಿಯೇಟರ್ ನಿರ್ಮಾಣಕ್ಕೆ ಪ್ರೋತ್ಸಾಹ ಧನ

11:03 AM IST:

ಕಾಡುಪ್ರಾಣಿ ದಾಳಿಯಿಂದ ಪ್ರಾಣ ಕೊಳೆದು ಕೊಂಡವರಿಗೆ 7.50 ಲಕ್ಷದಿಂದ 15 ಲಕ್ಷಕ್ಕೆ ಪರಿಹಾರ  ಹೆಚ್ಚಳ
ಬೆಳೆಹಾನಿಗೆ ನೀಡುವ ಪರಿಹಾರ ಧನವೂ ದ್ವಿಗುಣ, ಮೈಸೂರು, ಮಂಡ್ಯ ಜಿಲ್ಲೆಯಲ್ಲಿ ಚಿರತೆ ಹಾವಳಿ ತಡೆಯಲು ಸಿಬ್ಬಂದಿ ನೇಮಕ
ಚಿರತೆ ಹಾವಳಿ ತಡೆಗೆ 199 ಸಿಬ್ಬಂದಿಗಳ ನೇಮಕ
ಕಲಬುರಗಿ ಜಿಲ್ಲೆಯ ಮಳಖೇಡ ಕೋಟೆ ಸಂಸ್ಕರಣೆಗೆ 20 ಕೋಟಿ ರೂ. ಅನುದಾನ
ರಕ್ಕಸಗಿ, ತಂಗಡಗಿ, ತಾಳಿಕೋಟೆ ಐತಿಹಾಸಿಕ ತಾಣಗಳ ಅಭಿವೃದ್ಧಿ
ಚಾಮುಂಡಿ ಬೆಟ್ಟದಲ್ಲಿ 10 ಕೋಟಿ ವೆಚ್ಚದಲ್ಲಿ ಮ್ಯೂಸಿಯಂ, ಕಲಾ ಗ್ಯಾಲರಿ ನಿರ್ಮಾಣ
ಹೊನ್ನಾವರದಲ್ಲಿ ಚನ್ನಭೈರಾದೇವಿ ಸ್ಮಾರಕ ಪಾರ್ಕ್ ನಿರ್ಮಾಣ
ರಾಮನಗರ ಜಿಲ್ಲೆ ಮಂಚನಬೆಲೆ ಡ್ಯಾಂ ಬಳಿ 10 ಎಕರೆಯಲ್ಲಿ 10 ಕೋಟಿ ವೆಚ್ಚದಲ್ಲಿ ರೆಸಾರ್ಟ್ ನಿರ್ಮಾಣ.

11:02 AM IST:

60 ತಾಲೂಕುಗಳಲ್ಲಿ ತಲಾ ಒಂದು ಪದವಿ ಪೂರ್ವ ಕಾಲೇಜು ಅಭಿವೃದ್ಧಿಗೆ ಕ್ರಮ
ಕಸ್ತೂರಬಾ ಗಾಂಧಿ ಬಾಲಕಿಯರ ವಸತಿ ನಿಲಯಗಳಲ್ಲಿ Dormitory ನಿರ್ಮಾಣ
47 ವಸತಿ ಶಾಲೆಗಳ ದುರಸ್ತಿ ಮತ್ತು ಸ್ಮಾರ್ಟ್ ಕ್ಲಾಸ್‌ರೂಮ್ ಗಳ ಅಭಿವೃದ್ಧಿ.
73 ಕರ್ನಾಟಕ ಪಬ್ಲಿಕ್ ಶಾಲೆಗಳು, 50 ಆದರ್ಶ ವಿದ್ಯಾಲಯಗಳಲ್ಲಿ 15 ಕೋಟಿ ರೂ. ವೆಚ್ಚದಲ್ಲಿ 'ಸೃಷ್ಟಿ' ಟಿಂಕರಿಂಗ್ ಲ್ಯಾಬ್ ಸ್ಥಾಪನೆ
23 ತಾಲೂಕುಗಳಲ್ಲಿ ಹೊಸದಾಗಿ ಕರ್ನಾಟಕ ಪಬ್ಲಿಕ್ ಶಾಲೆ ಆರಂಭ
46 ಶಾಲೆಗಳ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ 
ವಿದೇಶದಲ್ಲಿ ವ್ಯಾಸಂಗ ಮಾಡುವ ಮುಸ್ಲಿಂ ವಿದ್ಯಾರ್ಥಿಗಳಿಗೆ 20 ಲಕ್ಷ ರೂ. ಸಾಲ
ಶೂನ್ಯ ಬಡ್ಡಿ ದರದಲ್ಲಿ 20 ಲಕ್ಷ ರೂವರೆಗೂ ಸಾಲ
ಎಸ್ಸಿ/ ಎಸ್ಟಿ ಗುತ್ತಿಗೆದಾರರಿಗೆ ಕಾಮಗಾರಿ ಮೀಸಲಾತಿ ಹೆಚ್ಚಳ
50 ಲಕ್ಷದಿಂದ 1 ಕೋಟಿ ರೂ.ಗೆ ಹೆಚ್ಚಳ
ಐಐಟಿ/ ಐಐಎಂ, ಐಐಎಸ್ಸಿ/ ಎನ್ಐಟಿ ಸಂಸ್ಥೆಗಳಿಗೆ ಪ್ರವೇಶ ಪಡೆಯುವ 
ಎಸ್ಸಿ/ ಎಸ್ಟಿ ವಿದ್ಯಾರ್ಥಿಗಳ ಪ್ರೋತ್ಸಾಹ ಧನ 4 ಲಕ್ಷಕ್ಕೆ ಏರಿಕೆ
ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳ ಮಾಸಿಕ ಭೋಜನ ವೆಚ್ಚ 150 ರೂ.ಗೆ ಏರಿಕೆ

11:01 AM IST:

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸೇವೆಯನ್ನು ಗುರುತಿಸಿರುವ ರಾಜ್ಯ ಸರ್ಕಾರವು 2023-24ನೇ ಸಾಲಿನಿಂದ ಅವರಿಗೆ ಉಪಧನವನ್ನು (Gratuity) ನೀಡಲು ನಿರ್ಧರಿಸಲಾಗಿದೆ. ಇದಕ್ಕಾಗಿ 40 ಕೋಟಿ ರೂ. ಗಳ ಅನುದಾನ ಮೀಸಲಿಡಲಾಗಿದೆ.

25 ವರ್ಷಗಳ ಅರ್ಹತಾ ಸೇವೆಯನ್ನು ಪೂರ್ಣಗೊಳಿಸಿದ ಹಾಗೂ ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ 50,000 ರೂ. ಗಳು ಹಾಗೂ ಅಂಗನವಾಡಿ ಸಹಾಯಕಿಯರಿಗೆ 30,000 ರೂ. ಗಳ ಆರ್ಥಿಕ ಭದ್ರತೆಯನ್ನು ಒಂದು ಬಾರಿಗೆ ನೀಡಿ ಸ್ವಯಂ ನಿವೃತ್ತಿಗೆ ಅವಕಾಶ ಕಲ್ಪಿಸಲಾಗುವುದು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯನ್ನು ವಿಭಜಿಸಿ ಮಕ್ಕಳ ಪೌಷ್ಟಿಕತೆ ಕುರಿತು ಒಂದು ಪ್ರತ್ಯೇಕ ಇಲಾಖೆ ಮತ್ತು ಮಹಿಳಾ ಸಬಲೀಕರಣ ಇಲಾಖೆಯನ್ನು ರೂಪಿಸಲು ನಿರ್ಧರಿಸಿದೆ.

ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಮಹಿಳೆಯರು ದುಡಿಮೆಯಲ್ಲಿ ತೊಡಗಿಸಿಕೊಳ್ಳಲು ಉತ್ತಮ ಶಿಶುಪಾಲನಾ ಸೌಲಭ್ಯಗಳು ಅಗತ್ಯವಾಗಿದೆ. ಇದಕ್ಕಾಗಿ 2022-23ನೇ ಸಾಲಿನ ಆಯವ್ಯಯದಲ್ಲಿ ಪ್ರಸ್ತಾಪಿಸಿದ್ದ ಕಾರ್ಯಕ್ರಮವನ್ನು ವಿಸ್ತರಿಸಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗಾಗಿ ನಗರ ಪ್ರದೇಶದಲ್ಲಿ 4,000 ಶಿಶುಪಾಲನಾ ಕೇಂದ್ರಗಳು ಮತ್ತು ಗ್ರಾಮೀಣ ಭಾಗದಲ್ಲಿ ನರೇಗಾ

10:59 AM IST:

ಆಡಳಿತ ಸುಧಾರಣೆ ಸಾರ್ವಜನಿಕ ಸೇವೆಗಳು..
ಸಂಸ್ಕೃತಿ ನೈಸರ್ಗಿಕ ಸಂಪನ್ಮೂಲಗಳ ರಕ್ಷಣೆ..
ಬೆಂಗಳೂರು ಸಮಗ್ರ ಅಭಿವೃದ್ಧಿ..
ಆರ್ಥಿಕ ಅಭಿವೃದ್ಧಿ..
ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ..
ಕೃಷಿ ಮತ್ತು ಪೂರಕ ಚಟುವಟಿಕೆಗಳಿಗೆ ಆದ್ಯತೆ.

10:58 AM IST:

ಶಕ್ತಿ ಯೋಜನೆಯನ್ನು ಜಾರಿಗೊಳಿಸಲು ನಿರ್ಧರಿಸಿದೆ. ಇದರಡಿಯಲ್ಲಿ: ಕುಟುಂಬ ನಿರ್ವಹಣೆಯೊಂದಿಗೆ ಮನೆಯ ಆರ್ಥಿಕ ಸುಧಾರಣೆಗಾಗಿ ಶ್ರಮಿಸುವ ಮಹಿಳಾ ಕೃಷಿ ಕಾರ್ಮಿಕರ ಕುರಿತು ನಮ್ಮ ಸರ್ಕಾರ ಹೊಂದಿರುವ ಕಾಳಜಿಯ ಪ್ರತೀಕವಾಗಿ, ಶ್ರಮ ಶಕ್ತಿ ಎಂಬ ಹೊಸ ಯೋಜನೆಯನ್ನು ಜಾರಿಗೆ ತರಲಾಗುವುದು. ಈ ಯೋಜನೆಯಡಿ ರಾಜ್ಯ ಸರ್ಕಾರವು ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಪ್ರತಿ ತಿಂಗಳು ತಲಾ 500 ರೂ. ಗಳ ಸಹಾಯ ಧನವನ್ನು ಡಿ.ಬಿ.ಟಿ. ಮೂಲಕ ನೀಡಲಿದೆ. Industry ಪ್ರಾರಂಭಿಸಲು ಗೃಹಿಣಿಯರಿಗೆ ಮನೆಯಲ್ಲಿಯೇ ಲಾಭದಾಯಕ ಉದ್ಯಮ (Home based) ಅನುವಾಗುವಂತೆ ಪ್ರಸಕ್ತ ವರ್ಷದಲ್ಲಿ ಒಂದು ಲಕ್ಷ ಮಹಿಳೆಯರಿಗೆ ಉಚಿತವಾಗಿ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡಲಾಗುವುದು.

* ಬಾಲಕಿಯರು ಮತ್ತು ಮಹಿಳೆಯರ ಸಬಲೀಕರಣದ ಕುರಿತು life cycle approach ಹೊಂದಲು ನಿರ್ಧರಿಸಲಾಗಿದೆ. ಅಪೌಷ್ಟಿಕತೆ ಮತ್ತು ರಕ್ತಹೀನತೆ ತಡೆಯಲು ಆರೋಗ್ಯ ಪುಷ್ಟಿ' ಯೋಜನೆಯಡಿ ಮಾತೃಪೂರ್ಣ ಯೋಜನೆಯಂತೆ ಅರ್ಹ ವಿವಾಹಿತ ಮಹಿಳೆಯರಿಗೆ ಅಂಗನವಾಡಿಗಳಲ್ಲಿ ಬಿಸಿಯೂಟ ಮತ್ತು Prophylactic IFA ಮಾತ್ರೆಗಳನ್ನು ಜೀವಿತಾವಧಿಯಲ್ಲಿ ಒಂದು ಬಾರಿ ಗರಿಷ್ಠ 6 ತಿಂಗಳ ಅವಧಿಗೆ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಒದಗಿಸಲಾಗುವುದು. ಈ ಯೋಜನೆಯಡಿ ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಿಗೆ ಒತ್ತು ನೀಡಲಾಗುವುದು.

10:54 AM IST:

ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆರ್ಥಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದನ್ನು ಉತ್ತೇಜಿಸಲು ಸರ್ಕಾರ ಒತ್ತು ನೀಡಿದೆ. ಸ್ವಸಹಾಯ ಗುಂಪುಗಳಿಗೆ ಪ್ರಮಾಣಿತ ಉತ್ಪನ್ನಗಳನ್ನು ತಯಾರಿಸಲು ನೆರವಾಗುವ ಸ್ತ್ರೀ ಸಾಮರ್ಥ್ಯ ಯೋಜನೆಯಡಿ 50 ಸಾವಿರ ಸ್ವಸಹಾಯ ಗುಂಪುಗಳಿಗೆ ತಲಾ ಒಂದು ಲಕ್ಷ ರೂ. ನಂತೆ ಒಟ್ಟು 500 ಕೋಟಿ ರೂ. ಗಳ ಸಮುದಾಯ ಬಂಡವಾಳ ನಿಧಿ ನೀಡಲು ಕ್ರಮ ವಹಿಸಲಾಗುತ್ತಿದೆ. ವಿವಿಧ ಸ್ವಯಂ ಉದ್ಯೋಗ ಯೋಜನೆಗಳಡಿ 7,239 ಸ್ವಸಹಾಯ ಸಂಘಗಳಿಗೆ 108 ಕೋಟಿ ರೂ. ಸಮುದಾಯ ಬಂಡವಾಳ ನಿಧಿ ಹಾಗೂ 5.68 ಲಕ್ಷ ಸ್ವಸಹಾಯ ಗುಂಪುಗಳಿಗೆ ಬ್ಯಾಂಕ್ ಸಂಪರ್ಕದಡಿ 11,391 ಕೋಟಿ ರೂ. ಸಾಲವನ್ನು ಒದಗಿಸಲಾಗಿದೆ. ವೈಯಕ್ತಿಕ ಮತ್ತು ಗುಂಪುಗಳನ್ನೊಳಗೊಂಡ 9,688 ಫಲಾನುಭವಿಗಳಿಗೆ ಕಿರು ಉದ್ದಿಮೆ ಪ್ರಾರಂಭಿಸಲು ಬ್ಯಾಂಕ್‌ ಮೂಲಕ ಸಾಲ ಸೌಲಭ್ಯವನ್ನು ಒದಗಿಸಲಾಗಿದೆ.

10:55 AM IST:

ಕೋಟಿ ರೂ. ವೆಚ್ಚದಲ್ಲಿ ಮೈಸೂರು, ಶಿವಮೊಗ್ಗ ಮತ್ತು ಕಲಬುರಗಿಗಳಲ್ಲಿ ಕಿದ್ವಾಯಿ ಸಂಸ್ಥೆಯಡಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಮುಂದುವರೆದು, ಪ್ರಸಕ್ತ ವರ್ಷದಲ್ಲಿ ರಾಯಚೂರಿನಲ್ಲಿ AIIMS ಮಾದರಿಯ ಆಸ್ಪತ್ರೆ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಲಾಗುವುದು.
ಬೆಂಗಳೂರು, ಹುಬ್ಬಳ್ಳಿ, ಮೈಸೂರು ಮತ್ತು ಕಲಬುರಗಿಯ 4 ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ IVF ಕ್ಲಿನಿಕ್‌ಗಳನ್ನು 6 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು.
ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಸಂಪೂರ್ಣ ಸ್ವಯಂಚಾಲಿತ ಮತ್ತು ಕೇಂದ್ರೀಕೃತ ರಕ್ತನಿಧಿ ನಿರ್ವಹಣಾ ವ್ಯವಸ್ಥೆಯನ್ನು ಸ್ಥಾಪಿಸಲಾಗುವುದು.
ಬೆಂಗಳೂರಿನಲ್ಲಿ ದೇಶದ ಪ್ರಪ್ರಥಮ Gastroenterology ಮತ್ತು ಮರುಜೋಡಣೆಗೆ ಸಮರ್ಪಿತವಾದ ಸರ್ಕಾರಿ Institute of Gastroenterology and Organ Transplant ಕಾರ್ಯನಿರ್ವಹಿಸುತ್ತಿದೆ. ಜೀವನ ಸಾರ್ಥಕತೆ ಸಂಸ್ಥೆಯ ಮೂಲಕ 151 ದೇಹಗಳನ್ನು ಸಂಗ್ರಹಿಸಿದ್ದು, 503 ರೋಗಿಗಳಿಗೆ ಸಹಾಯವಾಗಿರುತ್ತದೆ. 

ಪ್ರಸಕ್ತ ವರ್ಷ NIMHANS ಸಂಸ್ಥೆಯ ಆವರಣದಲ್ಲಿ 146 ಕೋಟಿ ರೂ. ಗಳ ವೆಚ್ಚದಲ್ಲಿ ಅಂಗಾಂಗ ಜೋಡಣೆಗೆ ಮೀಸಲಾದ ದೇಶದ ಪ್ರಥಮ ಸಾರ್ವಜನಿಕ ಆಸ್ಪತ್ರೆಯನ್ನು ಸ್ಥಾಪಿಸಲು ಕ್ರಮ ವಹಿಸಲಾಗುವುದು.

10:52 AM IST:

ಕಾರವಾರದಲ್ಲಿ ಪ್ರಗತಿಯಲ್ಲಿರುವ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳ ನಿರ್ಮಾಣವನ್ನು ಪ್ರಸಕ್ತ ವರ್ಷದಲ್ಲಿ ಪೂರ್ಣಗೊಳಿಸಲಾಗುವುದು. ಬೆಂಗಳೂರಿನ ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ 500 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣಕ್ಕೆ ಅನುಮೋದನೆ.

ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಉನ್ನತ ತಂತ್ರಜ್ಞಾನ ಆಧಾರಿತ ಹೈಟೆಕ್ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಹೈಪರ್ OF CHOKE B2, CADCAM, Cone Beam, CT scan ದಂತ ಚಿಕಿತ್ಸೆಗೆ ಸಂಬಂಧಿಸಿದಂತೆ Piezosurgery ಮುಂತಾದ ಹೈಟೆಕ್ ಚಿಕಿತ್ಸಾ ಸೌಲಭ್ಯಗಳನ್ನು ವೈದ್ಯಕೀಯ ಕಾಲೇಜು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಒದಗಿಸಲಾಗುತ್ತಿದೆ. ಜೊತೆಗೆ ಮಾನವ ಹಾಲು ಬ್ಯಾಂಕ್‌ ಮತ್ತು ಚರ್ಮ ಬ್ಯಾಂಕ್, ಕಿಮೋಥೆರಪಿ Infusion ಕೇಂದ್ರಗಳನ್ನು ಹಾಗೂ ಜಿನೋಮಿಕ್ ಸೀಕ್ವೆನ್ಸಿಂಗ್ ಲ್ಯಾಬ್ ಗಳನ್ನು ಸ್ಥಾಪಿಸಲಾಗಿದೆ.

- ಸಾರ್ವಜನಿಕರಿಗೆ ದ್ವಿತೀಯ ಹಾಗೂ ತೃತೀಯ ಆರೈಕೆ ಸೇವೆಗಳನ್ನು ಒದಗಿಸಲು 2022-23ನೇ ಸಾಲಿನಲ್ಲಿ ಶ್ರೀ ಜಯದೇವ ಸಂಸ್ಥೆಯ ಅಡಿಯಲ್ಲಿ 263 ಕೋಟಿ ರೂ. ವೆಚ್ಚದಲ್ಲಿ, ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ 50 ಹಾಸಿಗೆ ಸಾಮರ್ಥ್ಯ ಹಾಗೂ ಹುಬ್ಬಳ್ಳಿಯಲ್ಲಿ 430 ಹಾಸಿಗೆ ಸಾಮರ್ಥ್ಯದ ಹೃದ್ರೋಗ ಚಿಕಿತ್ಸಾ ಆಸ್ಪತ್ರೆಗಳ ಆರಂಭ.

10:49 AM IST:

ಸಂತ ಸೇವಾಲಾಲ್ ಜನ್ಮಸ್ಥಳದಲ್ಲಿ ಪ್ರವಾಸಿ ಸೌಲಭ್ಯಕ್ಕೆ 5 ಕೋಟಿ ರೂ. 
ಷಹಾಜಿ ಮಹಾರಾಜ್ ಸಮಾಧಿ ಸ್ಥಳದ ಅಭಿವೃದ್ಧಿ 5 ಕೋಟಿ ರೂ. 
ದಾವಣಗೆರೆ ಜಿಲ್ಲೆ ಚನ್ನಗಿರಿ ತಾ. ಹೊದಿಗೆರೆಯಲ್ಲಿ ಸಮಾಧಿ ಅಭಿವೃದ್ಧಿ
ಹಾವೇರಿ ಜಿಲ್ಲೆ ಬಂಕಾರಪುದ ನಗರವೇಶ್ವರ ದೇವಾಲಯದ ಅಭಿವೃದ್ಧಿ

ಅಂಜನಾದ್ರಿ ಅಭಿವೃದ್ಧಿಗೂ ಆದ್ಯತೆ
ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದ ಮೂಲಸೌಲಭ್ಯಕ್ಕೆ 100 ಕೋಟಿ ರೂ. ಅನುದಾನ
ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಯಾದ C.R.Z ಮಾನದಂಡಗಳನ್ನು ಸಡಿಲ
ಮಂತ್ರಾಲಯದ 'ಪ್ರಸಾದ್' ಯೋಜನೆ ಅಡಿಯಲ್ಲಿ ಚಾಮುಂಡಿಬೆಟ್ಟ ಅಭಿವೃದ್ಧಿ
ಸ್ವದೇಶ್‌ ದರ್ಶನ್ 2.0 ಅಡಿಯಲ್ಲಿ ಹಂಪಿಯ ಸ್ಮಾರಕ ಅಭಿವೃದ್ಧಿ ಮತ್ತು ಮೈಸೂರಿನ ಕರ್ನಾಟಕ ವಸ್ತು ಪ್ರದರ್ಶನ
24 ಸಾವಿರ ಪೌರಕಾರ್ಮಿಕರ ನೇರ ನೇಮಕಾತಿಗೆ ನಿರ್ಧಾರ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವಿಭಜನೆ
ಮಕ್ಕಳ ಪೌಷ್ಟಿಕತೆಗೆ ಪ್ರತ್ಯೇಕ ಇಲಾಖೆ ರಚನೆ
ತುಮಕೂರಿನಲ್ಲಿ ತೋಟಗಾರಿಕೆ ವಿಶ್ವವಿದ್ಯಾಲಯ

10:47 AM IST:

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತವರು ಜಿಲ್ಲೆ ರಾಮನಗರದಲ್ಲಿ ರಾಮ ಮಂದಿರ ಸ್ಥಾಪಸುವುದಾಗಿ ಘೋಷಿಸಿದ ಬೊಮ್ಮಾಯಿ. ಆ ಮೂಲಕ ಸದಾ ಅಲ್ಪಸಂಖ್ಯಾತರ ಓಲೈಕೆಗೆ ಯತ್ನಿಸುವ ಜೆಡಿಎಸ್‌ಗೆ ಟಾಂಗ್ ನೀಡಿದ ಸಿಎಂ.

10:45 AM IST:

 ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಯಾದ CRZ ಮಾನದಂಡಗಳನ್ನು ಸಡಿಲಗೊಳಿಸುವುದಕ್ಕೆ ಕೇಂದ್ರ ಸರ್ಕಾರವು ಒಪ್ಪಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ವಲಯ ನಿರ್ವಹಣೆ ಯೋಜನೆಯನ್ನು ಜಾರಿಗೊಳಿಸುವ ಮೂಲಕ ಧಾರ್ಮಿಕ, ಸಾಹಸ ಮತ್ತು ಪರಿಸರ ಸ್ನೇಹಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ರೂಪುರೇಷೆಗಳನ್ನು ತಯಾರಿಸಲಾಗುವುದು.

ಮಂತ್ರಾಲಯದ 'ಪ್ರಸಾದ್'

ಕೇಂದ್ರ ಪ್ರವಾಸೋದ್ಯಮ ಯೋಜನೆಯಡಿ ಮೈಸೂರು ನಗರದ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಹಾಗೂ ಸ್ವದೇಶ್‌ ದರ್ಶನ್ 2.0 ಅಡಿಯಲ್ಲಿ ಹಂಪಿಯ ಸ್ಮಾರಕ ಅಭಿವೃದ್ಧಿ ಮತ್ತು ಮೈಸೂರಿನ ಕರ್ನಾಟಕ ವಸ್ತು ಪ್ರದರ್ಶನ

24 ಸಾವಿರ ಪೌರಕಾರ್ಮಿಕರ ನೇರ ನೇಮಕಾತಿಗೆ ನಿರ್ಧಾರ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವಿಭಜನೆ
ಮಕ್ಕಳ ಪೌಷ್ಟಿಕತೆಗೆ ಪ್ರತ್ಯೇಕ ಇಲಾಖೆ ರಚನೆ
ತುಮಕೂರಿನಲ್ಲಿ  ತೋಟಗಾರಿಕೆ ವಿಶ್ವವಿದ್ಯಾಲಯ

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿರಿಗೆ ಬಂಪರ್
ಗ್ರಾಚುಯಿಟಿ ನೀಡಲು 40 ಕೋಟಿ ರೂ. ಅನುದಾನ
20 ವರ್ಷ ಸೇವೆ ಪೂರೈಸಿ, ಮಾರಣಾಂತಿಕ ಕಾಯಿಲೆಯಿಂದ ಬಳಲುವ ಕಾರ್ಯಕರ್ತೆರಿಗೆ 50 ಸಾವಿರ ರೂ. ಸಹಾಯಧನ
ಸಹಾಯಕರಿಯರಿಗೆ 30 ಸಾವಿರ ರೂ.  ಸಹಾಯಧನ
ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿರಿಗೆ ಸ್ವಯಂ ನಿವೃತ್ತಿಗೆ ಅವಕಾಶ

ಮೈಸೂರು, ಬೆಳಗಾವಿ ಹುಬ್ಬಳ್ಳಿ-ಧಾರವಾಡ
ಕಲಬುರಗಿ, ಮಂಗಳೂರಿನಲ್ಲಿ ಉನ್ನತ ವ್ಯಾಸಂಗಕ್ಕೆ ಪ್ರತ್ಯೇಕ ಹಾಸ್ಟೆಲ್
ತಲಾ 1000 ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ

10:44 AM IST:

- ವಿಜ್ಞಾನ ಮತ್ತು ತಂತ್ರಜ್ಞಾನದ ವೃತ್ತಿಪರ ಕೋರ್ಸ್‌ಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸುವುದಕ್ಕೆ ರಾಜ್ಯದಲ್ಲಿ 100 ಆಯ್ದ ಪದವಿ ಕಾಲೇಜುಗಳಲ್ಲಿ ಪ್ರೊ, ಸಿ.ಎನ್.ಆರ್. ರಾವ್ ವಿಜ್ಞಾನ ಕಾರ್ಯಕ್ರಮದಡಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿ ವಿಜ್ಞಾನ ವಿಭಾಗವನ್ನು ಪ್ರಾರಂಭಿಸಲಾಗುವುದು.

- 'ಹಳ್ಳಿ ಮುತ್ತು' ಎಂಬ ಯೋಜನೆಯಡಿ ಗ್ರಾಮೀಣ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಶಾಲಾ ಶಿಕ್ಷಣವನ್ನು ಪೂರೈಸುವ 500 ಅತ್ಯುತ್ತಮ ವಿದ್ಯಾರ್ಥಿಗಳಿಗೆ ಅವರು CET ಮೂಲಕ ಸರ್ಕಾರಿ ಕೋಟಾದಲ್ಲಿ ಆಯ್ಕೆಯಾದ ವೃತ್ತಿಪರ ಶಿಕ್ಷಣದ ಸಂಪೂರ್ಣ ಶುಲ್ಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಭರಿಸಲಾಗುವುದು.

- ಸಾರ್ವಜನಿಕ ವಿಶ್ವವಿದ್ಯಾಲಯಗಳ ಆಡಳಿತ ವ್ಯವಸ್ಥೆಯನ್ನು ಉತ್ತಮ ಪಡಿಸಲು 10 ಸುಶಾಸನ ಸೂಚ್ಯಂಕಗಳನ್ನು ರಚಿಸಲಾಗಿದೆ. ಇದರನ್ವಯ ಅತ್ಯುತ್ತಮ ಸಾಧನೆ ಮಾಡುವ ವಿಶ್ವವಿದ್ಯಾಲಯಗಳಿಗೆ ತಲಾ 50 ಲಕ್ಷ ರೂ. ಗಳಂತೆ ಪ್ರೋತ್ಸಾಹಧನ ನೀಡಲಾಗುವುದು.

- ಬೆಂಗಳೂರು ನಗರದ ಕೇಂದ್ರ ಭಾಗದ 5 ಕಿ.ಮೀ. ವ್ಯಾಪ್ತಿಯೊಳಗಿರುವ ಪಾರಂಪರಿಕ ಮತ್ತು ಶೈಕ್ಷಣಿಕ ಸಂಸ್ಥೆಗಳನ್ನು ಹೊಂದಿರುವ ಪ್ರದೇಶವನ್ನು ಪಾರಂಪರಿಕ ಮತ್ತು ಶೈಕ್ಷಣಿಕ ಜಿಲ್ಲೆಯಾಗಿ ಘೋಷಿಸುವ ನಿಟ್ಟಿನಲ್ಲಿ ಕಾರ್ಯಸಾಧ್ಯತೆ ಅಧ್ಯಯನ ಮಾಡಲಾಗುವುದು.

10:42 AM IST:

ಮೈಸೂರು, ಬೆಳಗಾವಿ ಹುಬ್ಬಳ್ಳಿ-ಧಾರವಾಡ
ಕಲಬುರಗಿ, ಮಂಗಳೂರಿನಲ್ಲಿ ಉನ್ನತ ವ್ಯಾಸಂಗಕ್ಕೆ ಪ್ರತ್ಯೇಕ ಹಾಸ್ಟೆಲ್
ತಲಾ 1000 ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ

10:41 AM IST:

ಆ್ಯಸಿಡ್ ದಾಳಿಗೊಳಗಾದ ಮಹಿಳೆಯರಿಗೆ ಮಾಸಾಶನ ಹೆಚ್ಚಳ
ಮಾಸಾಶನ 3 ಸಾವಿರ ದಿಂದ 10 ಸಾವಿರ ರೂ. ಏರಿಕೆ
ರಾಜೀವ್ ವಸತಿ ನಿಗಮದಿಂದ ವಸತಿ ಸೌಲಭ್ಯ
ಆ್ಯಸಿಡ್ ಸಂತ್ರಸ್ತೆಯರಿಗೆ ಬಡ್ಡಿ ರಹಿತ ಸಾಲ ಸೌಲಭ್ಯ

ಕಾಂಗ್ರೆಸ್ ಗೃಹ ಲಕ್ಷ್ಮೀ ಯೋಜನೆಗೆ ಬಿಜೆಪಿ ಠಕ್ಕರ್
ಮಹಿಳೆಯರಿಗಾಗಿ ‘ಗೃಹಿಣಿ ಶಕ್ತಿ’ ಯೋಜನೆ ಘೋಷಣೆ
ಗೃಹ ಲಕ್ಷ್ಮೀಯರಿಗೆ ಬಂಪರ್ ಕೊಡುಗೆ..!

ಪ್ರಾಣಿಗಳ ಹಿಂಸೆ ತಡೆಯಲು- ಪ್ರಾಣಿ ಕಲ್ಯಾಣ ಮಂಡಳಿಗೆ 5 ಕೋಟಿ ರೂ. ಅನುದಾನ 
ನೀಡಲಾಗುವುದು. ಮಂಡಳಿಯ ವತಿಯಿಂದ ಬೆಂಗಳೂರಿನಲ್ಲಿ ನಿರ್ಲಕ್ಷಿತ ಪ್ರಾಣಿಗಳ ಸೂಕ್ತ ಚಿಕಿತ್ಸೆಗಾಗಿ ಸಂಚಾರಿ ಚಿಕಿತ್ಸಾಲಯಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು.

- ರಾಷ್ಟ್ರೀಯ ಪ್ರಾಣಿ ತಳಿ ಸಂಪನ್ಮೂಲ ಬ್ಯೂರೋದಿಂದ ಭಾರತೀಯ ದೇಶಿ ಶ್ವಾನ ತಳಿ ಎಂದು ಮಾನ್ಯತೆ ಪಡೆದ ಮುಧೋಳ ಹೌಂಡ್ ಶ್ವಾನ ತಳಿಯ ಅಭಿವೃದ್ಧಿಗಾಗಿ 5 ಕೋಟಿ ರೂ. ಅನುದಾನ ನೀಡಲಾಗುವುದು.

-ಬೀದಿನಾಯಿಗಳ ಆರೈಕೆ ಮತ್ತು ಪೋಷಣೆಗಾಗಿ ಸಾರ್ವಜನಿಕರು ದತ್ತು ತೆಗೆದುಕೊಳ್ಳಲು ಒಂದು ಆನ್-ಲೈನ್ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗುವುದು. ಇದರಿಂದ ಆಸಕ್ತ ಶ್ವಾನ ಪ್ರೇಮಿಗಳು ತಮ್ಮ ಹೆಸರು ನೋಂದಾಯಿಸಿಕೊಂಡು ದತ್ತು ಪಡೆಯಲು ಅವಕಾಶ ಕಲ್ಪಿಸಿದಂತಾಗುತ್ತದೆ.

- 2022-23ನೇ ಸಾಲಿನಲ್ಲಿ ನಮ್ಮ ಕರ್ನಾಟಕ ರಾಜ್ಯವನ್ನು ಅತ್ಯುತ್ತಮ ಕರಾವಳಿ ರಾಜ್ಯವೆಂದು ಕೇಂದ್ರ ಸರ್ಕಾರವು

ಎಸ್ಸಿ/ಎಸ್ಟಿ ಮನೆ ನಿರ್ಮಾಣದ ಅನುದಾನ ಹೆಚ್ಚಳ
1.75 ಲಕ್ಷದಿಂದ 2 ಲಕ್ಷರೂ.ಗೆ ಏರಿಕೆ
ಎಸ್ಸಿ/ಎಸ್ಟಿ 133 ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ವ್ಯಾಸಂಗಕ್ಕೆ ಧನಸಹಾಯ
ಎಸ್ಸಿ/ಎಸ್ಟಿ/ ಒಬಿಸಿ ವಿದ್ಯಾರ್ಥಿನಿಯರಿಗೆ ಆತ್ಮ ರಕ್ಷಣೆ ತರಬೇತಿ
ಮೆಟ್ರಿಕ್ ನಂತರದ ವಸತಿ ಶಾಲೆಗಳಲ್ಲಿ 30 ಸಾವಿರ ಹೆಚ್ಚುವರಿ ಸೀಟ್
ಜಮೀನಿನಲ್ಲಿ ಆನಧಿಕೃತವಾಗಿ ಸಾಗುವಳಿ ಸಕ್ರಮದ ಅವಧಿ
ಒಂದು ವರ್ಷದ ಅವಧಿಯವರೆಗೆ ವಿಸ್ತರಣೆ

10:40 AM IST:

ಕಳೆದ ಆಯವ್ಯಯದಲ್ಲಿ ಘೋಷಿಸಿದಂತೆ ಮುಂದಿನ 5 ವರ್ಷಗಳಲ್ಲಿ ಐಐಟಿ ಮಾದರಿಯಲ್ಲಿ ಕರ್ನಾಟಕ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ (KIT) ಗಳಾಗಿ ಉನ್ನತೀಕರಿಸಲು ಬೆಂಗಳೂರು, ಹಾವೇರಿ, ಹಾಸನ, ಕೆ.ಆರ್.ಪೇಟೆ, ತಳ್ಳಲ್, ರಾಮನಗರ ಹಾಗೂ ಕಾರವಾರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳನ್ನು ಗುರುತಿಸಲಾಗಿದೆ. ಪ್ರೊ. ಸಡಗೋಪನ್ ನೇತೃತ್ವದ ತಜ್ಞರ ಸಮಿತಿಯು ಕೆಐಟಿಗಳಾಗಿ ಅಭಿವೃದ್ಧಿಪಡಿಸಲು ಅಗತ್ಯವಿರುವ ಸೌಲಭ್ಯಗಳು ಮತ್ತು ಮೂಲಸೌಕರ್ಯಗಳ ಕುರಿತು ವರದಿ ಸಲ್ಲಿಸಿದೆ. ಸದರಿ ಸಮಿತಿಯ ಶಿಫಾರಸ್ಸಿನ ಅನ್ವಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಉದ್ದೇಶಕ್ಕಾಗಿ 50 ಕೋಟಿ ರೂ. ಗಳನ್ನು ನೀಡಲಾಗಿದೆ.

ಉನ್ನತ ಶಿಕ್ಷಣ ಪಡೆಯಲು ಇರುವ ಭಾಷೆಯ ತೊಡಕು ನಿವಾರಿಸಲು ಕರ್ನಾಟಕದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಹಾಗೂ ವೃತ್ತಿಪರ ಕೋರ್ಸುಗಳಲ್ಲಿ ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅನುವಾಗುವಂತೆ ವ್ಯಾಪಕ ಬಳಕೆಯಲ್ಲಿರುವ ರೆಫರೆನ್ಸ್ ಪುಸ್ತಕಗಳು ಹಾಗೂ ಪಠ್ಯ ವಿಷಯಗಳನ್ನು ಮುಂದಿನ ಒಂದು ವರ್ಷದಲ್ಲಿ ಭಾಷಾಂತರಿಸಲು ಕ್ರಮ ಕೈಗೊಳ್ಳಲಾಗುವುದು.

10:38 AM IST:

ನಿರ್ಮಿಸಲು ಮತ್ತು ಕಾರ್ಯನಿರ್ವಹಿಸುತ್ತಿರುವ 46 ಶಾಲೆಗಳ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ ಒದಗಿಸಲಾಗುವುದು.

ಪ್ರಚಲಿತ ವಿದ್ಯಮಾನಗಳ ಕುರಿತು ಆಸಕ್ತಿ ಹಾಗೂ ಅರಿವು ಹೊಂದಲು ಅನುವಾಗುವಂತೆ 24,347 ಶಾಲೆಗಳಲ್ಲಿ 20 ಕೋಟಿ ರೂ. ಅನುದಾನದಲ್ಲಿ ಪುಸ್ತಕ, ಪತ್ರಿಕೆ ಹಾಗೂ ನಿಯತಕಾಲಿಕೆಗಳನ್ನು ಒದಗಿಸುವ ಮೂಲಕ ಗಂಥಾಲಯಗಳ ಬಲವರ್ಧನೆ ಹಾಗೂ ರೀಡಿಂಗ್‌ ಕಾರ್ನ‌್ರಗಳನ್ನು ಸ್ಥಾಪಿಸಲಾಗುವುದು.

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯುವ ಉದ್ದೇಶದಿಂದ 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಜೆ-ಪಾಲ್ ಸಹಯೋಗದೊಂದಿಗೆ ಪರಿಹಾರಾತ್ಮಕ ಚಟುವಟಿಕೆ 'ಅಭ್ಯುದಯ' ಕಾರ್ಯಕ್ರಮ ಅನುಷ್ಠಾನ.

ಬೀದರ್, ಹಾವೇರಿ, ಚಾಮರಾಜನಗರ, ಬಾಗಲಕೋಟೆ, ಕೊಡಗು, ಕೊಪ್ಪಳ - ಮತ್ತು ಹಾಸನ ಜಿಲ್ಲೆಗಳಲ್ಲಿ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗಿದೆ 7 ಮತ್ತು ಮಂಡ್ಯ ವಿಶ್ವವಿದ್ಯಾಲಯವನ್ನು ಸಂಯೋಜಿತ ವಿಶ್ವವಿದ್ಯಾಲಯವನ್ನಾಗಿ ಪರಿವರ್ತಿಸಲಾಗಿದೆ. ಈ ವರ್ಷದಲ್ಲಿ ಚಿಕ್ಕಮಗಳೂರಿನಲ್ಲಿ ಹೊಸ ವಿಶ್ವವಿದ್ಯಾಲಯವನ್ನು ತಂತ್ರಜ್ಞಾನದ ಗರಿಷ್ಠ ಬಳಕೆಗೆ ಒತ್ತು ನೀಡಲಾಗುವುದು. 

10:36 AM IST:

ಗ್ರಾಮ ಸಹಾಯಕರ ಹುದ್ದೆಯನ್ನು ಜನಸೇವಕ' ಎಂದು ಮರುನಾಮಕರಣ 
ಗ್ರಾಮ ಸಹಾಯಕರ ಮಾಸಿಕ ಗೌರವಧನ ಹೆಚ್ಚಳ
13,000 ರೂ. ಗಳಿಂದ 14,000 ರೂ. ಗಳಿಗೆ ಗೌರವ ಧನ ಹೆಚ್ಚಳ
ಅಂಗನವಾಡಿ, ಆಶಾ ಕಾರ್ಯಕರ್ತೆಯರ ಸಹಾಯಧನ ಏರಿಕೆ
1000 ರೂ.ನಿಂದ 1500 ರೂಗೆ ಸಹಾಯಧನ ಏರಿಕೆ

10:35 AM IST:

*2022-23ರಲ್ಲಿ ರಾಜ್ಯದ ಆರ್ಥಿಕ ಬೆಳವಣಿಗೆ ಶೇ.7.9 
*ಕೃಷಿ ವಲಯದ ಬೆಳವಣಿಗೆ ಶೇ.5.5
*2022-23ರಲ್ಲಿ ರಾಜ್ಯದ ಹಣಕಾಸು ಸ್ಥಿತಿ ಸದೃಢವಾಗಿದೆ. 
*ತೆರಿಗೆ ಸಂಗ್ರಹದಲ್ಲಿ ಹೆಚ್ಚಳ
*ರಾಜ್ಯ ಸ್ವಂತ ತೆರಿಗೆಗಳ ಸಂಗ್ರಹ ಶೇ.20ರಷ್ಟು ಹೆಚ್ಚಳ

10:33 AM IST:

ದೇವಸ್ಥಾನಗಳ ಮತ್ತು ಮಠಗಳ ಜೀರ್ಣೋದ್ಧಾರ ಕಾಮಗಾರಿಗಳಿಗೆ ಒಟ್ಟು 425 ಕೋಟಿ ರೂ. ಅನುದಾನ ನೀಡಲಾಗಿದೆ. ಮುಂದಿನ 2 ವರ್ಷಗಳಲ್ಲಿ ರಾಜ್ಯದಲ್ಲಿನ ವಿವಿಧ ದೇವಸ್ಥಾನ ಮತ್ತು ಮಠಗಳ ಜೀರ್ಣೋದ್ಧಾರಕ್ಕಾಗಿ ನಮ್ಮ ಸರ್ಕಾರ 1,000 ಕೋಟಿ ರೂ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು.

. ಜಗತ್ತಿಗೆ ಸಂಸತ್ತಿನ ಪರಿಕಲ್ಪನೆಯನ್ನು ಪರಿಚಯಿಸಿದ ಬಸವಾದ ಶರಣರು ಸ್ಥಾಪಿಸಿದ ಅನುಭವ ಮಂಟಪದ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಶೀಘ್ರದಲ್ಲಿಯೇ ಪೂರ್ಣಗೊಳಿಸಲಾಗುವುದು. ಧಾರ್ಮಿಕ ದತ್ತಿ ಇಲಾಖೆಯ ಜಮೀನುಗಳ ವರ್ಷಾಶನವನ್ನು 48,000 ರೂ. ಗಳಿಂದ 60,00 ರೂ. ಗಳಿಗೆ ಹೆಚ್ಚಿಸಲಾಗುವುದು. ಈ ಸೌಲಭ್ಯದಿಂದ 3,71 ಸಂಸ್ಥೆಗಳಿಗೆ ಅನುಕೂಲವಾಗಲಿದೆ.

ಉಪನೋಂದಣ ಕಛೇರಿಗಳಾಗಿ ರಾಜ್ಯದ ಎಲ್ಲಾ ಉಪನೋಂದಣಿ ಕಛೇರಿಗಳನ್ನು ಪರಿವರ್ತಿಸಲಾಗುವುದು. ಮೊದಲನೇ ಹಂತದಲ್ಲಿ ಪ್ರಸಕ್ತ ಸಾಲಿನಲ್ಲಿ 8 ಕಛೇರಿಗಳ ಅಭಿವೃದ್ಧಿಪಡಿಸಲಾಗುವುದು.ರಾಷ್ಟ್ರೀಯ ಚಂಡಮಾರುತ ಅಪಾಯ ಉಪಶಮನ ಯೋಜನೆ ಹಂತ-3 ನ್ನು ಅನುಷ್ಠಾನಗೊಳಿಸಲಾಗುವುದು

10:31 AM IST:

ಮಹಿಳಾ ಕಾರ್ಮಿಕರಿಗೆ 500 ರೂ. ಸಹಾಯಧನ
30 ಲಕ್ಷ ಮಹಿಳೆಯರಿಗೆ ಉಚಿತ ಪಾಸ್
ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್
1 ಲಕ್ಷ ಮಹಿಳೆಯರಿಗೆ ಉಚಿತ ಕೌಶಲ್ಯ ತರಬೇತಿ
ಬೊಮ್ಮಾಯಿ ಬಜೆಟ್ನಲ್ಲಿ ಸ್ತ್ರೀ ಸಬಲೀಕರಣಕ್ಕೆ ಬಂಪರ್

10:31 AM IST:

ಕಿಸಾನ್ ಕ್ರಿಡಿಟ್ ಕಾರ್ಡ್ ಹೊಂದಿರುವ ರೈತರಿಗೆ ಭೂ ಸಿರಿ ಯೋಜನೆ
ಭೂ ಸಿರಿ ಯೋಜನೆಯಡಿ 10 ಸಾವಿರ ರೂ. ಹೆಚ್ಚುವರಿ ಪ್ರೋತ್ಸಾಹ
ಬೀಜ, ರಸಗೊಬ್ಬರ, ಕ್ರಿಮಿನಾಶಕ ಖರೀದಿಸಲು ಪ್ರೋತ್ಸಾಹ
ಮಹಿಳಾ ಕಾರ್ಮಿಕರಿಗೆ 500 ರೂ. ಸಹಾಯಧನ
30 ಲಕ್ಷ ಮಹಿಳೆಯರಿಗೆ ಉಚಿತ ಪಾಸ್
ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್

10:30 AM IST:

ಬಿಜೆಪಿ ಸರಕಾರದಲ್ಲಿ ಮಠ ಮಾನ್ಯ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುತ್ತಿದ್ದು. ಈ ವರ್ಶವೂ ಸಾವಿರ ಕೋಟಿ ಅನುದಾನವನ್ನು ಮೀಸಲಿಡಲಾಗಿದೆ. ದತ್ತಿ ಇಲಾಖೆಗಳ ವರ್ಷದ ಅನುದಾನ 60 ಸಾವಿರಕ್ಕೆ ಹೆಚ್ಚಿಸಲಾಗಿದೆ. 

10:29 AM IST:

ಅರೆ ಮಲೆನಾಡು ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ನೀರು ಸಂರಕ್ಷಣೆಗಾಗಿ ಬಾವಿ ಕಿಂಡಿ ಅಣೆ, ನಾಲಾ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಈ ಎರಡೂ ಯೋಜನೆಗಳಿಗೆ 75 ಕೋಟಿ ರೂ. ಅನುದಾನವನ್ನು ಮೀಸಲಿಡಲಾಗಿದೆ.

ರೈತರ ಜಮೀನುಗಳಲ್ಲಿ ಜಲಹೊಂಡ ನಿರ್ಮಿಸಿ ನೀರು ಸಂರಕ್ಷಣಾ ಕಾಮಗಾರಿಗಳಿಂದ ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಜಲನಿಧಿ ಹೊಸ ಯೋಜನೆಯನ್ನು ಪ್ರಾರಂಭಿಸಲಾಗುವುದು. ಇದರಡಿಯಲ್ಲಿ ನರೇಗಾ ಯೋಜನೆಯ ಸಮನ್ವಯದೊಂದಿಗೆ ಎಲ್ಲಾ ರೈತರಿಗೆ ತಮ್ಮ ಜಮೀನಿನಲ್ಲಿ ಜಲಹೊಂಡವನ್ನು ನಿರ್ಮಿಸಲು ಪ್ರೋತ್ಸಾಹಿಸಲಾಗುವುದು. ಕರ್ನಾಟಕವು ತೋಟಗಾರಿಕೆ ವಲಯದಲ್ಲಿ ಅಪಾರ ಸಾಧನೆ ಮಾಡಿ ದೇಶದಲ್ಲಿಯೇ ಅತ್ಯುತ್ತಮ ತೋಟಗಾರಿಕೆ ರಾಜ್ಯ ಎಂದು ಪ್ರಶಸ್ತಿ ಪಡೆದಿದೆ. ರಾಜ್ಯದ 26.21 ಲಕ್ಷ ಹೆಕ್ಟೇರ್ ವಿಸ್ತೀರ್ಣ ಪ್ರದೇಶದ ತೋಟಗಾರಿಕೆ ಬೆಳೆಗಳಿಂದ ಲಭಿಸುವ 242 ಲಕ್ಷ ಮೆಟ್ರಿಕ್‌ ಟನ್‌ ವಾರ್ಷಿಕ ಉತ್ಪನ್ನದ ಮೌಲ್ಯವು 66,263 ಕೋಟಿ ರೂ. ಗಳಾಗಿದ್ದು, ಇದು ರಾಜ್ಯದಲ್ಲಿನ ಸಮಗ್ರ ಕೃಷಿ ವಲಯದ ಒಟ್ಟಾರೆ ಆದಾಯದ ಶೇ.30 ರಷ್ಟಿದೆ.

10:27 AM IST:

ಮಹಿಳಾ ಸಬಲೀಕರಣಕ್ಕೆ ಹೆಚ್ಚು ಆದ್ಯತೆ ನೀಡಿದ ಬೊಮ್ಮಾಯಿ. ವಿದ್ಯಾರ್ಥಿನಿಯರಿಗೆ ಉಚಿತ ಪಾಸ್ ಘೋಷಿಸಿದ ಸಿಎಂ.

10:27 AM IST:

ಮಣ್ಣಿನ ಕೊಡುಗೆಗೆ ನೋವಿಗೆ ನಲಿವಿಗೆ ಕನ್ನಡಿ ಹಿಡಿವಾಸ ಮಾನವ ಹೃದಯದ ಕರುಣೆಗೆ ಒಲವಿಗೆ ದನಿಗೂಡಿಸುವಾಸೆ

- ಕೆ. ಎಸ್‌. ನರಸಿಂಹಸ್ವಾಮಿ

ಕೃಷಿ ಕ್ಷೇತ್ರದಲ್ಲಿ ನಮ್ಮ ಸರ್ಕಾರ ಹಲವು ಮಹತ್ವಪೂರ್ಣ ಕ್ರಮಗಳನ್ನು ಕೈಗೊಂಡಿದೆ. ತಂತ್ರಜ್ಞಾನ ಹಾಗೂ ವೈಜ್ಞಾನಿಕ ಪದ್ಧತಿಗಳ ಅಳವಡಿಕೆಯೊಂದಿಗೆ ರೈತರು ಮಾಹಿತಿಪೂರ್ಣ ನಿರ್ಧಾರ ಕೈಗೊಳ್ಳಲು ಪೂರಕ ಕ್ರಮಗಳನ್ನು ನಮ್ಮ ಸರ್ಕಾರ ಜಾರಿಗೊಳಿಸಲಿದೆ. ಇದಲ್ಲದೆ, ಕೃಷಿಯನ್ನು ಲಾಭದಾಯಕವಾಗಿಸಲು ಕೃಷಿ ಉತ್ಪನ್ನಗಳ ಮೌಲ್ಯ ವರ್ಧನೆ ಮತ್ತು ರಪ್ತಿಗೆ ಒತ್ತು ನೀಡಲಾಗುತ್ತಿದೆ. ಸಮಗ್ರ ಕೃಷಿ ಪದ್ಧತಿಯನ್ನು ಪ್ರೋತ್ಸಾಹಿಸುವ ಮೂಲಕ ರೈತರ ಆದಾಯದಲ್ಲಿ ಸ್ಥಿರತೆಯನ್ನು ತರಲು ನಮ್ಮ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.
 

10:25 AM IST:

*ರಾಜ್ಯದ ಮಾನವ ಅಭಿವೃದ್ಧಿ ಹಾಗೂ ಆರ್ಥಿಕ ಅಭಿವೃದ್ಧಿಗೆ ಸಮಾನ ಆದ್ಯತೆ
*ಅಲ್ಪಸಂಖ್ಯಾತ, ಮಹಿಳೆ ಹಾಗೂ ದುರ್ಬಲ ವರ್ಗದ ಮಹಿಳೆಯರ ಅಭಿವೃದ್ಧಿಗೆ ಒತ್ತು
*24 ಸಾವಿರ ಪೌರಕಾರ್ಮಿಕರ ಉದ್ಯೋಗ ಕಾಯಂ 
*ವಿವಿಧ ಮಾಸಾಶನ ಹೆಚ್ಚಳ

10:24 AM IST:

ರೈತರಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷ ರೂ. ಸಾಲ
3 ಲಕ್ಷದವರೆಗಿನ  ಶೂನ್ಯ ಬಡ್ಡಿದರದ ಸಾಲದ ಮೊತ್ತ 5 ಲಕ್ಷಕ್ಕೆ ಏರಿಕೆ
ಪಿಎಂ-ಕಿಸಾನ್ ಯೋಜನೆಯಡಿ ಕೇಂದ್ರ 10,930 ಕೋಟಿ ರೂ. ಹಾಗೂ ರಾಜ್ಯ ಸರ್ಕಾರದಿಂದ 4,822 ಕೋಟಿ ರೂ. ಒಟ್ಟಾರೆ 15,752 ಕೋಟಿ ರೂ. ಗಳನ್ನು ರೈತರ ಖಾತೆಗೆ ನೇರ ಜಮೆ ಮಾಡಲಾಗಿದೆ.
* ಕಳೆದ ವರ್ಷ ಘೋಷಿಸಿದ ಡೀಸೆಲ್ ಸಬ್ಸಿಡಿ ನೀಡುವ ರೈತ ಶಕ್ತಿ ಯೋಜನೆಗೆ ಒದಗಿಸಲಾಗಿದೆ. 400 ಕೋಟಿ
ಕೃಷಿ ಯಾಂತ್ರೀಕರಣವನ್ನು ಉತ್ತೇಜಿಸಲು 2,037 ಕೋಟಿ ರೂ., ಒದಗಿಸಲಾಗಿದೆ.
* ಕೃಷಿ ಮತ್ತು ತೋಟಗಾರಿಕೆಯಲ್ಲಿ ಹನಿ ನೀರಾವರಿಗಾಗಿ 2,900 ಕೋಟಿ ರೂ., ಮಾರುಕಟ್ಟೆ ನೆರವು ನೀಡಲಾಗಿದೆ.
- ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕ ಮುಂತಾದ ಪರಿಕರಗಳಿಗೆ 962 ಕೋಟಿ ರೂ. ವೆಚ್ಚ ಮಾಡಲಾಗಿದೆ

10:24 AM IST:

ಕುವೆಂಪು ಕವನ ವಾಚನದೊಂದಿಗೆ ಬಜೆಟ್ ಮಂಡನೆ ಆರಂಭಿಸಿದ ಸಿಎಂ ಬೊಮ್ಮಾಯಿ ವಿರುದ್ಧ ಸದನದಲ್ಲಿ ಘೋಷಣೆಗಳು ಮೊಳಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ಕಿವಿ ಮೇಲೆ ಹೂವಿಟ್ಟುಕೊಂಡು ಬಂದು, ವಿರೋಧ ವ್ಯಕ್ತಪಡಿಸಿದರು. 

10:47 AM IST:

ಸದನದಲ್ಲಿ ಕಿವಿ ಮೇಲೆ ಹೂವಿಟ್ಟು ಕುಳಿತುಕೊಂಡ ಕಾಂಗ್ರೆಸ್ ಸದಸ್ಯರಿಗೆ ಬಜೆಟ್ ಮಂಡನೆ ವೇಳೆ ಸಿಎಂ ಟಾಂಗ್‌ ನೀಡಿದರು. ಕಾಂಗ್ರೆಸ್‌ನವರು ಕಿವಿ ಮೇಲೆ ಹೂವಿಟ್ಟುಕೊಳ್ಳುವುದು ಬೇಡ. ಹೂವಿಟ್ಟುಕೊಳ್ಳುತ್ತೇನೆ ಎಂದರೆ ಬೇಡ ಎನ್ನುವುದಿಲ್ಲ. ಜನರ ಮೇಲೆ ಕಿವಿ ಮೇಲೆ ಹೂವಿಡುತ್ತಿದ್ದರು. ಈ ಜನರೇ ಕಾಂಗ್ರೆಸ್ ಕಿವಿ ಮೇಲೆ ಹೂವಿಡುತ್ತಿದ್ದಾರೆ.

ಬಜೆಟ್‌ ಮಂಡನೆ ವೇಳೆ ಕಿವಿ ಮೇಲೆ ಹೂವಿಟ್ಟುಕೊಂಡ ಬಂದ ಕಾಂಗ್ರೆಸ್ ನಾಯಕರು!

10:20 AM IST:

ಕುವೆಂಪು ಅವರ 'ಹಳೆ ಕಾಲ ಹೋಗುತಿದೆ..' ಕವನ ವಾಚನದೊಂದಿಗೆ ಬಜೆಟ್‌ ಮಂಡನೆ ಆರಂಭಿಸಿದ ಬಸವರಾಜ್‌ ಬೊಮ್ಮಾಯಿ. ಬಜೆಟ್‌ನ ಆರಂಭದಲ್ಲಿಯೇ ವಿಪಕ್ಷಗಳಿಂದ ಗಲಾಟೆ

10:18 AM IST:

ಬಿಜೆಪಿ ಸರ್ಕಾರದ ಕೊನೆ ಬಜೆಟ್‌ ಮಂಡನೆ ಆರಂಭಿಸಿದ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ. ಬೊಮ್ಮಾಯಿ ಅವರು ಮಂಡನೆ ಮಾಡುತ್ತಿರುವ 2ನೇ ಬಜೆಟ್‌ ಇದಾಗಿದೆ.

10:06 AM IST:

ಬಡವರಿಗೆ ವಿಶೇಷ ಕೊಡುಗೆಗಳು ಇರುತ್ತವೆ ಎನ್ನಲಾದ ಕರ್ನಾಟಕ ಬಜೆಟ್ 2023-24 ಮಂಡನೆಗೆ ಬೊಮ್ಮಾಯಿ ಸಕಲ ಸಿದ್ಧರಾಗಿದ್ದು, ವಿಶೇಷ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದಿದ್ದಾರೆ. ಇನ್ನೇನು ಕೆಲವೇ ನಿಮಿಷಗಳಲ್ಲಿ ಬಜೆಟ್ ಮಂಡನ್ ಆರಂಭವಾಗಲಿದೆ. 

10:03 AM IST:

ಚುನಾವಣಾ ಬೆನ್ನಲ್ಲೇ ವಿವಿಧ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಅನಿವಾರ್ಯತೆ ಬೊಮ್ಮಾಯಿ ನೇತೃತ್ವದ ಬೊಮ್ಮಾಯಿ ಸರಕಾರಕ್ಕಿದ್ದು, ಅನೇಕ ಯೋಜನೆಗಳನ್ನು ಪ್ರಕಟಿಸುವ ನಿರೀಕ್ಷೆ ಇದೆ. ಆದ್ದರಿಂದ ನಾನಾ ಜಾತಿಗಳ ಅಭಿವೃದ್ಧಿ ನಿಗಮಗಳ ರಚನೆಗೆ ಅಸ್ತು ಎನ್ನಬಹುದು. ಅಲ್ಲದೇ ದೇಶದ ನಾನಾ ರಾಜ್ಯಗಳ ಪೈಕಿ ಬಜೆಟ್ ಗಾತ್ರದಲ್ಲಿ ಮೂರನೇ ದೊಡ್ಡ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮುವ ನಿರೀಕ್ಷೆಯೂ ಇದೆ. ಈ ಸಾಲಿನಲ್ಲಿ ಉತ್ತರ ಪ್ರದೇಶ, ಮಹಾರಾಷ್ಟ್ರ, ತಮಿಳುನಾಡು ಮೊದಲ ಮೂರು ಸ್ಥಾನಗಳಿದ್ದು, ಕರ್ನಾಟಕ ಮೂರನೇ ಸ್ಥಾನಕ್ಕೇರುವ ಲಕ್ಷಣಗಳಿವೆ.

9:47 AM IST:

ಕರ್ನಾಟಕ ವಿಧಾನಸಭೆ ಚುನಾವಣೆ  ಇದೇ ಮೇನಲ್ಲಿ ನಡೆಯುತ್ತಿದ್ದು, ಬಹು ನಿರೀಕ್ಷೆಗಳೊಂದಿಗೆ ಮುಖ್ಯಮಂತ್ರಿ ಬೊಮ್ಮಾಯಿ ಬಜೆಟ್ ಮಂಡಿಸುತ್ತಿದ್ದಾರೆ. ಈ ಮೊದಲು ಬಜೆಟ್ ಹೇಗಿದೆ ಎಂದು ಕೇಳಿದಾಗ, ಸ್ವಲ್ಪ ಹೊತ್ತು ಕಾಯಿರಿ ಎಂದಿದ್ದ ಬೊಮ್ಮಾಯಿ, ಇದೀಗ ಜನಸ್ನೇಹಿ ಬಜೆಟ್ ಎಂಬ ಸುಳಿವು ನೀಡಿದ್ದಾರೆ. 

9:40 AM IST:

ರಾಜ್ಯ ಸರ್ಕಾರ ಪ್ರಸಕ್ತ ಅವಧಿಯ ಕೊನೆಯ ಬಜೆಟ್‌ನ್ನು ಶುಕ್ರವಾರ ಮಂಡಿಸುತ್ತಿದ್ದು, ಜಿಲ್ಲೆಯ ಜನರಲ್ಲಿ ಈ ಬಾರಿಯ ಬಜೆಟ್‌ನಲ್ಲಾದರೂ ಜಿಲ್ಲೆಗೆ ಹಲವಾರು ಯೋಜನೆಗಳು ಘೋಷಣೆಯಾಗುತ್ತವೆ ಎನ್ನುವ ನಿರೀಕ್ಷೆ ಇದೆ. ಜಿಲ್ಲೆಯ ನಾಲ್ಕೈದು ದಶಕಗಳ ಹೋರಾಟವಾದ ಕಳಸಾ- ಬಂಡೂರಿ ಯೋಜನೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿರುವ ಹಿನ್ನೆಲೆಯಲ್ಲಿ ಈ ಯೋಜನೆಗೆ ಹೆಚ್ಚಿನ ಅನುದಾನ ಘೋಷಣೆಯತ್ತ ಎಲ್ಲರ ಚಿತ್ತ ನೆಟ್ಟಿದೆ.

9:36 AM IST:

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಸರಕಾರದ ಕಡೆಯ ಬಜೆಟ್ ಮಂಡಿಸುತ್ತಿದ್ದು, ಈಗಾಗಲೇ ವಿಧಾನಸೌದ ತಲಪಿದ್ದಾರೆ. 10.15 ರಿಂದ ಬಜೆಟ್ ಮಂಡಿಸಲು ಆರಂಭಿಸು ಬೊಮ್ಮಾಯಿಗೆ ವಿತ್ತ ಅಧಿಕಾರಿಗಳು ಬಜೆಟ್ ಕಾಪಿಯನ್ನು ಹಸ್ತಾಂತರಿಸದ್ದಾರೆ. ಈ ಬಾರಿ 3 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡಿಸುತ್ತಿದ್ದು, ಬಜೆಟ್ ಬಗ್ಗೆ ಸಹಜವಾಗಿಯೇ ಶ್ರೀಸಾಮಾನ್ಯನಿಗೆ ಸಾಕಷ್ಟು ನಿರೀಕ್ಷೆಗಳಿವೆ. 

 

9:19 AM IST:

ಜನಪ್ರಿಯ ಘೋಷಣೆಗಳಿವೆಯ ಎಂಬ ಪ್ರಶ್ನಗೆ ಇನ್ನೊಂದು ಗಂಟೆ ಕಾಯಿರಿ ಎಂದ ಸಿಎಂ. ರಾಜ್ಯದ ಜನತೆ ಹೆಸರಿನಲ್ಲಿ ಆರ್ಚನೆ ಮಾಡಿಸಿದ್ದೇನೆ. ಇಡಿ ರಾಜ್ಯದ ಜನರಿಗೆ ಒಳ್ಳಯದ್ ಅಗಲಿ ಎಂದು ಪ್ರಾರ್ಥನೆ ಮಾಡಿದ್ದೇನೆ. ಬಹಳಷ್ಟು ನಿರೀಕ್ಷೆಗಳಿವೆ ಎಂಬ ಪ್ರಶ್ನೆಗೆ, ಕಾದು ನೋಡಿ ಎಂದಷ್ಟೇ ಹೇಳಿ ತೆರಳಿದ ಸಿಎಂ. 

ಕೆಲವು ಸಚಿವ ಸಂಪುಟದ ಸಹೋದ್ಯೋಗಿಗಳು ಹಾಗೂ ಅಧಿಕಾರಿಗಳನ್ನು ತಮ್ಮ ಮನೆಯಲ್ಲಿ ಭೇಟಿಯಾದ ಬೊಮ್ಮಾಯಿ. 

8:31 AM IST:

ಇಂದು ರಾಜ್ಯ ಬಜೆಟ್ ಹಿನ್ನೆಲೆ ಸಿಎಂ ಬೊಮ್ಮಾಯಿ ನಿವಾಸಕ್ಕೆ  ಆರ್ಥಿಕ ಇಲಾಖೆ ಅಧಿಕಾರಿಗಳು ಆಗಮಿಸಿ ಸಿಎಂ ಭೇಟಿ ಮಾಡಿದರು. ಬಜೆಟ್ ಪುಸ್ತಕದ ಜೊತೆಗೆ ಆಯವ್ಯಯ ಮತ್ತು ಸಂಪನ್ಮೂಲ ಕಾರ್ಯದರ್ಶಿ ಏಕ್ ರೂಪ್ ಕೌರ್ ಸಿಎಂ ನಿವಾಸಕ್ಕೆ ಆಗಮಿಸಿದ್ದಾರೆ. 

7:49 AM IST:

ಸಿಎಂ ಬಸವರಾಜ ಬೊಮ್ಮಾಯಿ‌ಯಿಂದ ಇಂದು ಬಜೆಟ್ ಮಂಡನೆ ಹಿನ್ನೆಲೆ ಸಿಎಂಗೆ ಶುಭಾಶಯ ಕೋರಲುಸಚಿವರು ಹಾಗೂ ಶಾಸಕರು  ಆಗಮಿಸಿದ್ದಾರೆ. ಆರ್. ಟಿ ನಗರದಲ್ಲಿರುವ ಸಿಎಂ ನಿವಾಸಕ್ಕೆ ಆಗಮಿಸಿದ ಸಚಿವ ಬೈರತಿ ಬಸವರಾಜ್ ಹಾಗೂ ಶಾಸಕ ರಾಮದಾಸ್ ಸಿಎಂಗೆ ಬಜೆಟ್ ಮಂಡನೆಗೆ ಶುಭ ಕೋರಿದ್ದಾರೆ. 

7:38 AM IST:

ಬೆಂಗಳೂರು: ಈ ಸರ್ಕಾರದ ಕೊನೆಯ ಬಜೆಟ್ ಮಂಡಿಸಲಿರುವ ಸಿಎಂ ಇಂದು ಬಜೆಟ್ ಮಂಡನೆಗೂ ಮೊದಲು ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ಶ್ರೀಕಂಠೇಶ್ವರ ದೇವಸ್ಥಾನ ಹಾಗೂ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಸಿಎಂ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಮೊದಲಿಗೆ ಆರ್. ಟಿ ನಗರ ನಿವಾಸದ ಪಕ್ಕದಲ್ಲಿ ಇರುವ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ,  ಬಳಿಕ ಅಲ್ಲಿಂದ ನೇರವಾಗಿ ಬಾಲು ಬ್ರೂಯಿ ಬಳಿ ಇರುವ ಆಂಜನೇಯ ದೇವಸ್ಥಾನಕ್ಕೆ ಸಿಎಂ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. 

Karnataka Budget 2023: ಸಿಎಂ ಬೊಮ್ಮಾಯಿ ಸರ್ಕಾರದ ಕಡೇ ಬಜೆಟ್‌ ಇಂದು ಬೆ.10.15ಕ್ಕೆ

7:13 AM IST:

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ತಮ್ಮ ಎರಡನೆಯ ಹಾಗೂ ಈ ಸರ್ಕಾರದ ಕೊನೆಯ ಬಜೆಟ್‌ ಮಂಡಿಸಲಿದ್ದಾರೆ. ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಮತದಾರರಿಗೆ ಸಾಕಷ್ಟು ಭರವಸೆಗಳನ್ನು ನೀಡುವಂಥ ಬೊಂಬಾಟ್‌ ಬಜೆಟ್‌ ಮಂಡಿಸುವುದು ಬಹುತೇಕ ಖಚಿತವಾಗಿದೆ. ರೈತರು, ಬಡವರು, ಮಹಿಳೆಯರು, ಸಾಮಾನ್ಯ ಜನರನ್ನು ದೃಷ್ಟಿಯಲ್ಲಿಟ್ಟುಕೊಂಡು ಜನಪ್ರಿಯ ಯೋಜನೆಗಳನ್ನು ಘೋಷಿಸುವ ಬಜೆಟ್‌ ಇದಾಗಲಿದೆ ಎನ್ನಲಾಗುತ್ತಿದೆ. ಇಂದಿನ ಬಜೆಟ್‌ ಬಗ್ಗೆ ಮತ್ತಷ್ಟು ಕುತೂಹಲಕಾರಿ ವಿಚಾರಗಳು ಇಲ್ಲಿವೆ...

7:03 AM IST:

- ರೈತರ ಶೂನ್ಯ ಬಡ್ಡಿದರ ಸಾಲ ಮಿತಿ 3 ಲಕ್ಷ ರು.ನಿಂದ 5 ಲಕ್ಷ ರು.ಗೆ ಹೆಚ್ಚಳ
- ಕುಟುಂಬ ನಿರ್ವಹಣೆ ಮಾಡುವ ಮಹಿಳೆಯರಿಗೆ ಗೌರವ ಧನ ನೀಡುವ ಸ್ಕಿಂ
- ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ವರದಿ ಅನುಷ್ಠಾನದ ಭರವಸೆ
- ಬೆಂಗಳೂರಲ್ಲಿ ಮೆಟ್ರೋ ವಿಸ್ತರಣೆ, ಸಂಚಾರದ ದಟ್ಟಣೆ ನಿಯಂತ್ರಣಕ್ಕೆ ಕ್ರಮ
- ಕುಲಕಸುಬು ಆಧಾರಿತ ವೃತ್ತಿ ಮಾಡುವವರಿಗೆ ಪ್ರೋತ್ಸಾಹ ಧನ ಘೋಷಣೆ
- ವಿವಿಧ ಸಮುದಾಯಗಳಿಗೆ ಪ್ರತ್ಯೇಕ ನಿಗಮ, ಅಡಕೆ ಬೆಳೆಗಾರರಿಗೆ ನೆರವು
- ಶಿಕ್ಷಣ, ಆರೋಗ್ಯ, ಮೂಲಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡಲು ಕ್ರಮಗಳು

7:00 AM IST:

ಬೆಳಗ್ಗೆ 10.15ಕ್ಕೆ 2023-24ನೇ ಸಾಲಿನ ಬಜೆಟ್‌ ಮಂಡನೆ ಆರಂಭವಾಗಲಿದೆ. ಬೊಮ್ಮಾಯಿ ಅವರು ಕಳೆದ 2022-23ನೇ ಸಾಲಿನಲ್ಲಿ 2.65 ಲಕ್ಷ ಕೋಟಿ ರು. ಗಾತ್ರದ ಬಜೆಟ್‌ ಮಂಡಿಸಿದ್ದರು. ಈ ಬಾರಿ ಗಾತ್ರ ಸುಮಾರು ಮೂರು ಲಕ್ಷ ಕೋಟಿ ರು.ಗಳಿಗೆ ಹಿಗ್ಗುವ ಸಾಧ್ಯತೆಯಿದೆ ಎನ್ನಲಾಗಿದೆ.