Asianet Suvarna News Asianet Suvarna News

ಕರ್ನಾಟಕ ಬಜೆಟ್ 2024: ಅಂಜನಾದ್ರಿ ಬೆಟ್ಟ, ಕಪ್ಪತ್ತಗುಡ್ಡ ಪ್ರವಾಸಿ ಸೌಲಭ್ಯ ಅಭಿವೃದ್ಧಿಗೆ ಭರ್ಜರಿ ಘೋಷಣೆ

ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 15ನೇ ಬಜೆಟ್ ಮಂಡಿಸಿದ್ದಾರೆ. ಹಲವು ಸವಾಲುಗಳ ನಡುವೆ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನಲ್ಲಿ ಕೆಲ ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಪ್ರವಾಸೋದ್ಯಮಕ್ಕೆ ನೀಡಿರುವ ಕೊಡುಗೆಯೇನು ತಿಳಿಯೋಣ..

Karnataka Budget 2024, CM Siddaramaiah announces Bumper projects for Toursim Vin
Author
First Published Feb 16, 2024, 12:13 PM IST

ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 15ನೇ ಬಜೆಟ್ ಮಂಡಿಸಿದ್ದಾರೆ. ರಾಜ್ಯದ ಪ್ರವಾಸೋದ್ಯಮ ಕ್ಷೇತ್ರದಲ್ಲಿನ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಪ್ರಸ್ತುತ ಜಾರಿಯಲ್ಲಿರುವ ಕರ್ನಾಟಕ ಪ್ರವಾಸೋದ್ಯಮ ನೀತಿಯನ್ನು ಮತ್ತಷ್ಟು ಹೂಡಿಕೆದಾರರ ಹಾಗೂ ಪ್ರವಾಸಿಗರ ಸ್ನೇಹಿಯಾಗಿ ಮಾಡಲು, ಪರಿಷ್ಕೃತ ಪ್ರವಾಸೋದ್ಯಮ ನೀತಿ 2024-29 ಅನ್ನು ಜಾರಿಗೆ ತರಲಾಗಿದೆ. 

  • ಪೌರಾಣಿಕ ಹಾಗೂ ಐತಿಹಾಸಿಕವಾಗಿ ಪ್ರಖ್ಯಾತಿ ಹೊಂದಿರುವ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರವಾಸಿ ಸೌಲಭ್ಯ ಅಭಿವೃದ್ಧಿಪಡಿಸಲು 100 ಕೋಟಿ ರೂ.ಗಳನ್ನು ಒದಗಿಸಲಾಗಿದೆ.
  • ರಾಜ್ಯದ ಪ್ರಮುಖ ಜಲಾಶಯಗಳಲ್ಲಿನ ಹಿನ್ನೀರಿನಲ್ಲಿ ಮತ್ತು ಕಡಲ ತೀರಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಜಲಕ್ರೀಡೆಗಳು ಮತ್ತು ಜಲಸಾಹಸ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲಾಗುತ್ತದೆ.
  • ಸಾಹಸ ಪ್ರವಾಸೋದ್ಯವನ್ನು ಉತ್ತೇಜಿಸಲು ರಾಜ್ಯದ ಪ್ರಮುಖ 10 ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಕೇಬಲ್ ಕಾರ್/ ರೋಪ್ ವೇ ಸೌಲಭ್ಯ ಅಭಿವೃದ್ಧಿಪಡಿಸಲಾಗುತ್ತದೆ.
  • ಗೋಕಾಕ ಜಲಪಾತವನ್ನು ಪ್ರೇಕ್ಷಣೀಯ ಸ್ಥಳವಾಗಿ ಅಭಿವೃದ್ಧಿ ಪಡಿಸಲಾಗುತ್ತದೆ
  • ರಾಜ್ಯದ 530 ಸಂರಕ್ಷಿತ ಸ್ಮಾರಕಗಳನ್ನು 3ಡಿ ಲೇಸರ್ ಸ್ಕ್ಯಾನಿಂಗ್ ಮೂಲಕ ದಾಖಲೀಕರಣ ಮಾಡಲಾಗಿದೆ. ಈ ಕಾರ್ಯವನ್ನು ದೇಶದಲ್ಲಿಯೇ ಪ್ರಥಮವಾಗಿ ಕೈಗೊಂಡಿರುವ ಶ್ರೇಯಸ್ಸು ನಮ್ಮ ರಾಜ್ಯದ್ದಾಗಿದೆ. ಈ ಡಿಜಿಟಲ್ ಮಾಹಿತಿಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಮತ್ತು ಸಂವಾದಾತ್ಮಕವಾಗಿ ಅಭಿವೃದ್ಧಿಪಡಿಸಲು ಕ್ರಮವಹಿಸಲಾಗುತ್ತದೆ.
  • ರಾಷ್ಟ್ರಕೂಟರ ಕಾಲದಲ್ಲಿ ಕರ್ನಾಟಕದ ಮೊಟ್ಟ ಮೊದಲ ವಿಶ್ವ ವಿದ್ಯಾಲಯವನ್ನು ಕಲಬುರಗಿ ಜಿಲೆಯ ಚಿತ್ತಾಪುರ ತಾಲೂಕಿನ ನಾಗಾವಿಯಲ್ಲಿ ಸ್ಥಾಪಿಸಲಾಗಿತ್ತು ಎಂಬುದು ಸ್ಥಳೀಯರ ನಂಬಿಕೆ.
  • ಅಲ್ಲಿನ ಪ್ರಾಚ್ಯಾವೇಶಗಳ ಸಂಶೋಧನೆ ಮತ್ತು ಸಂರಕ್ಷಣೆಗಾಗಿ ನೆರವು ನೀಡಲು Archaeological Survey of India (ASI) ಶಿಫಾರಸ್ಸು ಮಾಡಲಾಗುತ್ತದೆ.
  • ಕೆ.ಎಸ್.ಟಿ.ಡಿ.ಸಿ ವತಿಯಿಂದ ಬಾಗಲಕೋಟೆಯ ಐಹೊಳೆಯಲ್ಲಿ ಸುಸಜ್ಜಿತವಾದ ಹೋಟೆಲ್ ನಿರ್ಮಿಸಲಾಗುವುದು ಹಾಗೂ ರೋರಿಚ್ ಮತ್ತು ದೇವಿಕಾರಾಣಿ ಎಸ್ಟೇಟ್ ಪ್ರದೇಶದಲ್ಲಿ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ.
  • ಬೀದರ್ ಹಾಗೂ ವಿಜಯಪುರದಲ್ಲಿ ಕರೇಜ್ ಎಂದು ಪ್ರಸಿದ್ಧವಾಗಿರುವ ಪುರಾತನ ನೀರು ಸರಬರಾಜು ವ್ಯವಸ್ಥೆಯನ್ನು ನುರಿತ ಸಂಸ್ಥೆಗಳ ತಾಂತ್ರಿಕ ನೆರವಿನೊಂದಿಗೆ 15 ಕೋಟಿ ರೂ. ವೆಚ್ಚದಲ್ಲಿ ಪುನಶ್ವೇತನಗೊಳಿಸಲಾಗುತ್ತದೆ.
  • ರಾಜ್ಯದಲ್ಲಿ ಪರಿಸರ ಪ್ರವಾಸೋದ್ಯಮವನ್ನು ಉತ್ತೇಜಿಸಲು ಬಂಡೀಪುರ, ದಾಂಡೇಲಿ ಮತ್ತು ಕಬಿನಿಯಲ್ಲಿ 25 ಕೋಟಿ ರೂ. I ವೆಚ್ಚದಲ್ಲಿ ಇಂಟರ್‌ಪ್ರಿಟೇಷನ್ ಸೆಂಟರ್‌ಗಳನ್ನು ಜೆ.ಎಲ್.ಆರ್ ಸಂಸ್ಥೆಯ ಮೂಲಕ ನಿರ್ಮಾಣ ಮಾಡಲಾಗುತ್ತದೆ.
  • ಗದಗ ಜಿಲ್ಲೆಯ ಕಪ್ಪತ್ತಗುಡ್ಡದಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಾಗುತ್ತದೆ.
  • ಶ್ರೀ ಕ್ಷೇತ್ರಾ ರೇಣುಕಾ ಯಲ್ಲಮ್ಮನ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳನ್ನು ಸಂರಕ್ಷಿಸಿ ಅಭಿವೃದ್ಧಿಗೊಳಿಸಲು ಶ್ರೀ ರೇಣುಕಾ ಕ್ಷೇತ್ರ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯನ್ನು ರಚಿಸಿ ಅಧಿಸೂಚನೆ ಹೊರಡಿಸಲಾಗುತ್ತದೆ.
Follow Us:
Download App:
  • android
  • ios