Published : Mar 04 2022, 11:47 AM IST| Updated : Mar 04 2022, 05:26 PM IST
Share this Liveblog
FB
TW
Linkdin
Whatsapp
Karnataka Budget 2022 Live: ಮೇಕೆದಾಟು ಯೋಜನೆಗೆ ಅನುದಾನ, ಕಾಂಗ್ರೆಸ್ಗೆ ಬೊಮ್ಮಾಯಿ ಏಟು?
ಸಾರಾಂಶ
ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಾಲಯಗಳಿಗೆ ಸ್ವಾಯತ್ತತೆ ನೀಡುವುದಾಗಿ ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಮ್ಮ ಮೊದಲ ಬಜೆಟ್ನಲ್ಲಿ ಘೋಷಿಸಿದ್ದು, ಅಭಿವೃದ್ದಿ ಕಾಮಗಾರಿ ವಿಜವೇಚನೆಯನ್ನು ದೇವಾಲಯಗಳಿಗೆ ನೀಡಲು ತೀರ್ಮಾನಿಸಿದ್ದಾರೆ. ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯ ಹೊಸ್ತಿಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿರುವ ಚೊಚ್ಚಲ ಬಹಳಷ್ಟು ಮಹತ್ವ ಪಡೆದಿದೆ. ಇಲಾಖೆ ಹಾಗೂ ಸಮುದಾಯಗಳಿಗೆ ಅಳೆದು, ತೂಗಿ ಅನುದಾನ ಘೋಷಿಸಿದ್ದು, ತೆರಿಗೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಇನ್ನು ಮೇಕೆದಾಟು ಯೋಜನೆಗೂ ಅನುದಾನ ಘೋಚಿಸಿದ್ದು, ಈ ವಿಚಾರದ ಲಾಭ ಪಡೆಯಲು ಯೋಜನೆ ರೂಪಿಸಿದ್ದ ಕಾಂಗ್ರೆಸ್ಗೂ ಬಹುದೊಡ್ಡ ಏಟು ಕೊಟ್ಟಿದ್ದಾರೆ. ಬಜೆಟ್ನಲ್ಲಿ ಇನ್ನಿತರ ಕ್ಷೇತ್ರಗಳಿಗೆ ಏನೆಲ್ಲಾ ಸಿಕ್ಕಿದೆ? ಇಲ್ಲಿದೆ ಕರ್ನಾಟಕ ಬಜೆಟ್ 2022ರ ಲೈವ್ ಅಪ್ಡೇಟ್ಸ್
04:17 PM (IST) Mar 04
ಬೊಮ್ಮಾಯಿ ಘೋಷಿಸಿದ ಹೊಸ ಯೋಜನೆಗಳು ಇಂತಿವೆ
ಸವಾಲಿನ ನಡುವೆ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಕರ್ನಾಟಕ ಬಜೆಟ್ 2022ನ್ನು (Karnataka Budget 2022) ಮಂಡಿಸಿದ್ದಾರೆ. ಕನ್ನಡ (Kannada) ಭಾಷೆ ಸಂರಕ್ಷಣೆ ಮತ್ತು ಬೆಳವಣಿಗೆಗೆ ಮೊದಲ ಆದ್ಯತೆ ನೀಡಲಾಗಿದ್ದು ಸಿಕ್ಕ ಕೊಡುಗೆಗಳ ಪಟ್ಟಿ ಇಲ್ಲಿದೆ.
ಬಜೆಟ್ ಭಾಷಣ ಓದುತ್ತ ಸಿಎಂ ಬಸವರಾಜ ಬೊಮ್ಮಾಯಿ ಕವಿ ಚನ್ನವೀರ ಕಣವಿ ಅವರ ಸಾಲುಗಳನ್ನು ಉಲ್ಲೇಖ ಮಾಡಿದರು. ಕನ್ನಡ ನಾಡಿನ ಸಾಹಿತ್ಯ ಹಾಗೂ ಸಂಸ್ಕೃತಿಯ ರಕ್ಷಣೆ, ಅಭಿವೃದ್ಧಿಯ ಜೊತೆಗೆ ಸಮೃದ್ಧ ನೈಸರ್ಗಿಕ ಸಂಪನ್ಮೂಲವನ್ನೂ ಕಾಪಾಡುವುದು ನಮ್ಮ ಗುರಿಯಾಗಿದೆ. ಈಗಾಗಲೇ ಪರಿಸರ ಮಾಲಿನ್ಯದಿಂದಾದ ಕೊರತೆಯನ್ನು ಸರಿದೂಗಿಸಿ, ಪರಿಸರ ಸಂರಕ್ಷಿಸುವ ಉದ್ದೇಶದಿಂದ ನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.
ಕಲ್ಯಾಣ ಕರ್ನಾಟಕಕ್ಕೆ ಹಲವು ಯೋಜನೆಗಳು, ಅಂಜನಾದ್ರಿ ಬೆಟ್ಟಕ್ಕೆ ಬಂಪರ್
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರು 2022-23ನೇ ಸಾಲಿನ ಕರ್ನಾಟಕ ಬಜೆಟ್ನಲ್ಲಿ (karnataka Budget 2022-23) ಹಿಂದುಳಿದ ಭಾಗ ಎಂದೇ ಹಣೆಪಟ್ಟಿ ಕಟ್ಟಿರುವ ಕಲ್ಯಾಣ ಕರ್ನಾಟಕ (kalyana karnataka) (ಹೈದರಾಬಾದ್ ಕರ್ನಾಟಕ) ಭಾಗಕ್ಕೆ ಅನೇಕ ಕೊಡುಗೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ಪ್ರಮುಖವಾಗಿ ಕೊಪ್ಪಳದ ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ಕೋಟಿ ರೂ. ಮೀಸಲು ನೀಡಲಾಗಿದೆ.
ಹೌದು... ತಮ್ಮ ಚೊಚ್ಚಲ ಬಜೆಟ್ನಲ್ಲಿ ನಾವಿನ್ಯತೆಯುಳ್ಳ ಕಲ್ಯಾಣ ಕರ್ನಾಟಕ ಭಾಗದ 25 ನವೋದ್ಯಮಗಳನ್ನು ಉತ್ತೇಜಿಸಲು Elevate Kalyana Karnataka ಕಾರ್ಯಕ್ರಮವನ್ನು ಘೋಷಣೆ ಮಾಡಿದ್ದು, ಕಲ್ಯಾಣ ಕರ್ನಾಟಕದ ಅಮೃತ ಮಹೋತ್ಸವದ ಹಿನ್ನೆಲೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ 3000 ಕೋಟಿ ರೂ. ಅನುದಾನ ನೀಡಿದ್ದಾರೆ.
ಮಹಿಳಾ ಸಬಲೀಕರಣಕ್ಕೆ ಒತ್ತು; ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಣೆಗೆ ಹಲವು ಕ್ರಮ
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ (Basavaraj Bommai) ಶುಕ್ರವಾರ (ಮಾ.4) ಮಂಡಿಸಿದ ಕರ್ನಾಟಕ ರಾಜ್ಯದ 2022-23ನೇ ಆರ್ಥಿಕ ಸಾಲಿನ ಬಜೆಟ್ ನಲ್ಲಿ( (karnataka budget 2022-23) ಮಹಿಳಾ ಸಬಲೀಕರಣ ಮತ್ತು ಮಕ್ಕಳ ಕಲ್ಯಾಣಕ್ಕೆ ಹೆಚ್ಚಿನ ಒತ್ತು ನೀಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಒಟ್ಟು 4,713 ಕೋಟಿ ರೂ. ಅನುದಾನವನ್ನು ಬಜೆಟ್ ನಲ್ಲಿ ಮೀಸಲಿಡಲಾಗಿದೆ.
ಸೆಮಿಕಂಡಕ್ಟರ್ ಉದ್ಯಮಕ್ಕೆ ಪ್ರೋತ್ಸಾಹ: ರಾಜ್ಯದಲ್ಲಿ 7 ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ!
ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯ ಹೊಸ್ತಿಲಿನಲ್ಲಿ ನಿಂತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ರಾಜ್ಯ ಆಯವ್ಯಯವನ್ನು ಶುಕ್ರವಾರ ಮಧ್ಯಾಹ್ನ ಮಂಡಿಸಿದ್ದಾರೆ. ಬೊಮ್ಮಾಯಿ ಬಜೆಟ್ನಲ್ಲಿ ವಿಜ್ಞಾನ ಹಾಗೂ ತಂತ್ರಜ್ಞಾನ ಅಭಿವೃದ್ಧಿಗೆ ರಾಜ್ಯದ ಏಳು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳನ್ನು Karnataka Institue of Technology ಗಳನ್ನಾಗಿ ಉನ್ನತೀಕರಿಸುವುದು, ಸೆಮಿಕಂಡಕ್ಟರ್ಉದ್ಯಮಕ್ಕೆ ಪ್ರೋತ್ಸಾಹ ಸೇರಿದಂತೆ ಹಲವು ಯೋಜನೆಗಳನ್ನು ಘೋಷಿಸಲಾಗಿದೆ.
"ಏಪ್ರಿಲ್ - ಡಿಸೆಂಬರ್ 2021ರ ಅವಧಿಯಲ್ಲಿ ಭಾರತದ ಒಟ್ಟು ವಿದೇಶಿ ನೇರ ಹೂಡಿಕೆಯ (ಎಫ್ಡಿಐ) ಹರಿವಿನ ಪ್ರಮಾಣದಲ್ಲಿ ಕರ್ನಾಟಕವು ಶೇ.40ರಷ್ಟನ್ನು (1.27 ಲಕ್ಷ ಕೋಟಿ ರೂ.) ಆಕರ್ಷಿಸಿದ್ದು, ರಾಷ್ಟ್ರದಲ್ಲಿಯೇ ಅಗ್ರಸ್ಥಾನದಲ್ಲಿದೆ. ಅಲ್ಲದೇ ಬೆಂಗಳೂರು ಮೂಲದ 34 ನವೋದ್ಯಮಗಳು ಬಿಲಿಯನ್ ಡಾಲರ್ ಅಥವಾ ಹೆಚ್ಚಿನ ಮೌಲ್ಯವನ್ನು ಹೊಂದಿವೆ ಎಂಬುದು ರಾಜ್ಯದ ಸ್ಪಾರ್ಟ್ಅಪ್ ಉತ್ತೇಜಕ ವಾತಾವರಣಕ್ಕೆ ಸಾಕ್ಷಿಯಾಗಿದೆ" ಎಂದು ಬೊಮ್ಮಾಯಿ ತಿಳಿಸಿದ್ದಾರೆ. ಬೊಮ್ಮಾಯಿ ಬಜೆಟ್ನಲ್ಲಿ ತಂತ್ರಜ್ಞಾನ ಮತ್ತು ನವೋದ್ಯಮ ಕ್ಷೇತ್ರಕ್ಕೆ ಸಿಕ್ಕ ಯೋಜನೆಗಳ ಹೈಲೈಟ್ಸ್ ಇಲ್ಲಿದೆ.
ನಿರೀಕ್ಷೆಯಂತೆಯೇ ಬಜೆಟ್ನಲ್ಲಿ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (basavaraj bommai) ಇಂದು ತಮ್ಮ ಚೊಚ್ಚಲ ಬಜೆಟ್ ಅನ್ನು ಮಂಡಿಸಿದ್ದು, ನಿರೀಕ್ಷೆಯಂತೆಯೇ ಅಂಗನವಾಡಿ ಕಾರ್ಯಕರ್ತೆಯರು (Anganwadi Workers)ಮತ್ತು ಅಂಗನವಾಡಿ ಸಹಾಯಕಿಯರ (Anganwadi helper) ವೇತನ ಹಾಗೂ ಭತ್ಯೆಯನ್ನು ಹೆಚ್ಚಳ ಮಾಡಲಾಗಿದೆ. ಮಾತ್ರವಲ್ಲ ಆಶಾ ಕಾರ್ಯಕರ್ತರು (asha workers), ಗ್ರಾಮ ಸಹಾಯಕರು ಮತ್ತು ಬಿಸಿಯೂಟ ತಯಾರಕರಿಗೂ ಗೌರವ ಧನ ಹೆಚ್ಚಿಸಲಾಗಿದೆ.
20 ವರ್ಷಕ್ಕಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆಯರಿಗೆ 1,500 ರೂ. 15 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿದವರಿಗೆ 1,200 ರೂ. ಹಾಗೂ 15 ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ 1,000 ರೂ. ಗೌರವಧನ ಹೆಚ್ಚಳ ಮಾಡಲಾಗಿದೆ.
Karnataka Budget 2022: ರೈತರ ಜೀವನಾಡಿ ನೀರಾವರಿಗೆ ಬೊಮ್ಮಾಯಿ ಬಂಪರ್ ಕೊಡುಗೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ತಮ್ಮ ಚೊಚ್ಚಲ ಬಜೆಟ್ ಮಂಡಿಸಿದ್ದು, ರೈತರ ಜೀವನಾಡಿ ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ಜಲ ಸಂಪನ್ಮೂಲ ಇಲಾಖೆಗೆ ಒಟ್ಟು 20,601 ಕೋಟಿ ರೂ ಘೋಷಣೆ ಮಾಡಿದ್ದಾರೆ.
ಅದರಲ್ಲೂ ಪ್ರಮುಖವಾಗಿ ಪ್ರಸ್ತುತ ರಾಜ್ಯಾದ್ಯಂತ ಸಂಚಲನ ಮೂಡಿಸಿದ ಮೇಕೆದಾಟು ಯೋಜನೆಗೆ (Mekedatu) ಕರ್ನಾಟಕ ಸರ್ಕಾರ 2022ನೇ ಸಾಲಿನಲ್ಲಿ ಭಾರೀ ಮೊತ್ತದ ಅನುದಾನ ಘೋಷಣೆ ಮಾಡಿದೆ. ಅಲ್ಲದೇ ಎತ್ತಿನಹೊಳೆ ಯೋಜನೆ, ಕೃಷ್ಣ ಮೇಲ್ದಂಡೆ ಹಾಗೂ ಳಸಾ ಬಂಡೂರಿ ಯೋಜನೆಗೆ ಅನುದಾನ ನೀಡಿದ್ದಾರೆ. ಹಾಗಾದ್ರೆ, ಯಾವುದಕ್ಕೆ ಎಷ್ಟು ನೀಡಿದ್ದಾರೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ.
ಸಿಎಂ ಬೊಮ್ಮಾಯಿ ಉತ್ತಮ ಬಜೆಟ್ ಮಂಡಿಸಿದ್ದಾರೆ: ಅರಗ ಜ್ಞಾನೇಂದ್ರ
ಸಿಎಂ ಬೊಮ್ಮಾಯಿ ಉತ್ತಮ ಬಜೆಟ್ ಮಂಡಿಸಿದ್ದಾರೆ. ವಿಶೇಷವಾಗಿ ಗೃಹ ಇಲಾಖೆಗೆ ಉತ್ತಮ ಅನುದಾನ ನೀಡಿದ್ದಾರೆ. ಕೊರೋನಾ ವಾರಿಯರ್ಸ್ ಆಗಿ ಕಾರ್ಯ ನಿರ್ವಹಿಸಿದ ಅಂಗನವಾಡಿ ಕಾರ್ಯಕರ್ತೆಯರಿಗೆ ಒಂದು ಸಾವಿರ ಹಣ ಹೆಚ್ಚಳ. ವಿಶೇಷವಾಗಿ ಪೌರಕಾರ್ಮಿಕರಿಗೆ ವೇತನ ಹೆಚ್ಚಳ ಮಾಡಲಾಗಿದೆ. ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿಕೆ
03:55 PM (IST) Mar 04
ರಾಜ್ಯದ ಅಭಿವೃದ್ಧಿಗೆ ಪೂರಕವಾದ ಬಜೆಟ್: ಬಿಎಸ್ವೈ
ಬೊಮ್ಮಾಯಿಯವರು ಮಂಡಿಸಿರುವ ಬಜೆಟ್ ರಾಜ್ಯದ ಅಭಿವೃದ್ಧಿಗೆ ಪೂರಕವಾದ ಬಜೆಟ್. ಕೃಷಿ, ಶಿಕ್ಷಣ , ಗ್ರಾಮೀಣ ಅಭಿವೃದ್ಧಿ , ನೇಕಾರರಿಗೆ ಒತ್ತು ನೀಡಲಾಗಿದೆ. ಸಾಮಾಜಿಕ ಸಮತೋಲನ ತರುವ ನಿಟ್ಟಿನಲ್ಲಿ ಒತ್ತು ನೀಡಲಾಗಿದೆ. ಕೃಷಿ ಹಾಗೂ ಕಾರ್ಮಿಕ ವರ್ಗಕ್ಕೆ ಉತ್ತಮ ಯೋಜನೆಗಳನ್ನು ಒಳಗೊಂಡಿರುವ ಬಜೆಟ್ ಆಗಿ ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಬಜೆಟ್ ಸಹಕಾರಿಯಾಗಿದೆ. ಹೈನುಗಾರಿಕೆ ಪ್ರೋತ್ಸಾಹಕ್ಕೆ ಯೋಜನೆ ರೂಪಿಸಲಾಗಿದೆ. ರೈತರ ಆರೋಗ್ಯ ಅಭಿವೃದ್ಧಿಗಾಗಿ ಯಶಸ್ವಿನಿ ಯೋಜನೆಗೆ ಅನುದಾನ ಮೀಸಲಿಡಲಾಗಿದೆ. ನೀರಾವರಿಗೆ ಹೆಚ್ಚಿನ ಅನುದಾನ ನೀಡಲಾಗಿದೆ
03:31 PM (IST) Mar 04
ಇದು ಅತೀ ನೀರಸವಾದ ಬಜೆಟ್: ಈಶ್ವರ್ ಖಂಡ್ರೆ
ಇದು ಅತೀ ನೀರಸವಾದ ಬಜೆಟ್. ಯಾವುದೇ ಮುಂದಿನ ಭವಿಷ್ಯ ಚಿಂತನೆಯಾಗ್ಲಿ, ಅಭಿವೃದ್ಧಿಯ ಚಿಂತನೆಯಾಗ್ಲೀ ಇಲ್ಲದೆ ಮಾಡಿರುವ ಬಜೆಟ್. ಕೋವಿಡ್ ಹಾಗೂ ಪ್ರಕೃತಿ ವಿಕೋಪ ನಿರ್ವಾಹಣೆ ಬಹಳ ಯಶಸ್ವಿಯಾಗಿ ಮಾಡಿದ್ವೀ ಅಂತ ಹೇಳಿದ್ದಾರೆ. ಆದರೆ ಕೋವಿಡ್ನಲ್ಲಿ ಮೃತಪಟ್ಟ ಕೆಲವು ಕೆಲವು ಜನರಿಗೆ ಮಾತ್ರ ಪರಿಹಾರ ನೀಡಲಾಗಿದೆ. ಕಲ್ಯಾಣ ಕರ್ನಾಟಕ್ಕಾಗಿ ಕಳೆದ ಬಾರಿ ನೀಡಿದ ಅನುದಾನದಲ್ಲಿ ಕೇವಲ 300 ಕೋಟಿ ಮಾತ್ರ ಖರ್ಚು ಆಗಿದೆ. ಕಲ್ಯಾಣ ಕರ್ನಾಟಕದಲ್ಲಿ ಕೆರೆ ತುಂಬುವಂತಹ ಕಾರ್ಯಕ್ರಮ ಘೋಷಣೆಗೆ ಸೀಮಿತವಾಗಿದೆ. ನೀರಾವರಿ ಯೋಜನೆಗಳಲ್ಲಿ ಹಂಚಿಕೆಯಾಗಿರುವ ನೀರನು ಬಳಕೆ ಮಾಡಿಕೊಳ್ಳಲು ಬೇಕಾದ ಅನುದಾನ ಘೋಷಣೆಯಾಗಿಲ್ಲ. ಐದು ಲಕ್ಷ ಮನೆ ಕೊಟ್ಟಿದ್ದೇವೆ ಅಂತ ಹೇಳಿಕೊಂಡಿದ್ದಾರೆ. ಮೂರು ವರ್ಷಗಳಿಂದ ಬಡವರಿಗೆ ಒಂದೇ ಒಂದು ಮನೆ ಸಹ ಸಿಕ್ಕಿಲ್ಲ. ಎಲ್ಲರ ನಿರೀಕ್ಷೆ ಭ್ರಮ ನಿರಸನವಾಗಿದೆ. ಬಡವರನ್ನು ಸಬಲಿಕರಣಗೊಳಿಸುವ ನಿಟ್ಟಿನಲ್ಲಿ ಯಾವುದೇ ರೀತಿಯ ವಿಷಯ ಮಂಡನೆಯಾಗಿಲ್ಲ ಎಂದಿದ್ದಾರೆ.
03:27 PM (IST) Mar 04
Karnataka Budget 2022: ಕೃಷಿ ಕ್ಷೇತ್ರಕ್ಕೆ ಬಂಪರ್, 33,700 ಕೋಟಿ ಘೋಷಣೆ, ರೈತರಿಗೆ ಏನೆಲ್ಲಾ ಸಿಕ್ಕಿದೆ?
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಚೊಚ್ಚಲ ಬಜೆಟ್ ಮಂಡಿಸಿದ್ದು, ಬಜೆಟ್ ಮಂಡನೆಯಲ್ಲಿ ಮೊದಲಿಗೆ ಕೃಷಿ ಕ್ಷೇತ್ರದ ಅನುದಾನವನ್ನು ಘೋಷಿಸಿದರು. 2022-23ನೇ ಸಾಲಿನಲ್ಲಿ ಕೃಷಿ ಕ್ಷೇತ್ರಕ್ಕೆ 33,700 ಕೋಟಿ ರುಪಾಯಿ ನೀಡಿದ್ದಾರೆ.
ಕೃಷಿ ಕ್ಷೇತ್ರಕ್ಕೆ 33,700 ಕೋಟಿ ರೂಪಾಯಿ ಘೋಷಣೆ ಮಾಡಿದ ಸಿಎಂ ಬಿಎಸ್ ಬಸವರಾಜ ಬೊಮ್ಮಾಯಿ ಅವರು, ರೈತ ಶಕ್ತಿ ಹೊಸ ಯೋಜನೆಯನ್ನು ಘೋಷಿಸಿದ್ದಾರೆ. ರಾಜ್ಯದಲ್ಲಿ ರೈತ ಶಕ್ತಿ ಹೊಸ ಯೋಜನೆ ಘೋಷಣೆ ಮಾಡಲಾಗಿದ್ದು,ಈ ಯೋಜನೆ ಮೂಲಕ ರೈತರಿಗೆ ಯಂತ್ರೋಪಕರಣ ಉಪಯೋಗಕ್ಕೆ ಸಹಾಯಧನ, 250 ರೂ. ಡೀಸೆಲ್ ಸಹಾಯಧನ ನೀಡಲಾಗುವುದು. 500 ಕೋಟಿ ರೂ. ಯೋಜನೆಗೆ ಒದಗಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮೊದಲ ಬಾರಿಗೆ ಇಂದು (ಮಾರ್ಚ್ 4) ವಿಧಾನಸೌಧದಲ್ಲಿ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. 2,53,165 ಕೋಟಿ ಗಾತ್ರದ ಬಜೆಟ್ ಮಂಡಿಸುತ್ತಿರುವ ಸಿಎಂ ಬೊಮ್ಮಾಯಿ ಅವರು ವಿವಿಧ ಇಲಾಖೆಗಳ ಅಭಿವೃದ್ಧಿ ಅನುದಾನ ಹಂಚಿಕೆ ಮಾಡಿದ್ದಾರೆ.
ರಾಜ್ಯದ ಅಭಿವೃದ್ಧಿಗೆ ಪಂಚಸೂತ್ರಗಳ ಆಧಾರದಲ್ಲಿ ಬಜೆಟ್ ಮಂಡನೆ ಮಾಡಲಾಗಿದೆ. ಸಮಗ್ರ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿ, ದುರ್ಬಲ ವರ್ಗದ ರಕ್ಷಣೆ ಮತ್ತು ಏಳಿಗೆ , ಶಿಕ್ಷಣ, ಉದ್ಯೋಗ, ಆರೋಗ್ಯ ಹಾಗೂ ಸಬಲೀಕರಣ ಕಾರ್ಯಕ್ರಮ, ಹಿಂದುಳಿದ ಪ್ರದೇಶಗಳನ್ನು ವೈಜ್ಞಾನಿಕವಾಗಿ ಗುರುತಿಸಿ ಅಭಿವೃದ್ಧಿಗೆ ಸಂಘಟಿತ ಕಾರ್ಯಕ್ರಮ, ಕೃಷಿ, ಕೈಗಾರಿಕೆ ಹಾಗೂ ಸೇವಾ ವಲಯ – ಪಾಲುದಾರಿಕೆಯೊಂದಿಗೆ ಅಭಿವೃದ್ಧಿ ಹಾಗೂ ನವಭಾರತಕ್ಕಾಗಿ ನವ ಕರ್ನಾಟಕ ಹೊಸ ಚಿಂತನೆ, ಹೊಸ ಚೈತನ್ಯದ ಜತ ಹೊಸ ಮುನ್ನೋಟ ಎಂಬ ನೆಲೆಯಲ್ಲಿ ಪಂಚಸೂತ್ರಗಳ ಆಧಾರದಲ್ಲಿ ಬಜೆಟ್ ಇದೆ.ಇನ್ನು ಯಾವ ಇಲಾಖೆಗೆ ಎಷ್ಟು ಎನ್ನುವ ಮಾಹಿತಿ ಈ ಕೆಳಗಿನಂತಿದೆ ನೋಡಿ..
ಹುಬ್ಬಳ್ಳಿಯಲ್ಲಿ 250 ಕೋಟಿ ರೂ. ವೆಚ್ಚದಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ಬೆಳಗಾವಿಯಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ 10 ಮೆಡಿಕಲ್ ಕಾಲೇಜುಗಳಲ್ಲಿ ಕ್ಯಾನ್ಸರ್ ರೋಗಿಗಳಿಗೆ ಕಿಮೋಥೆರಪಿ ಸೆಂಟರ್ ದೆಹಲಿ ಮಾದರಿಯಲ್ಲಿ ಬೆಂಗಳೂರಿನ ಎಲ್ಲ ವಾರ್ಡ್, ರಾಜ್ಯದ ಪ್ರಮುಖ ನಗರಗಳಲ್ಲಿ 438 ನಮ್ಮ ಕ್ಲಿನಿಕ್ 300 ಮಹಿಳಾ ಸ್ವಾಸ್ಥ್ಯ ಕೇಂದ್ರ ಸ್ಥಾಪನೆ 7 ತಾಲೂಕು ಆಸ್ಪತ್ರೆಗಳನ್ನು 100 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ತುಮಕೂರಿನಲ್ಲಿ 20 ಕೋಟಿ ವೆಚ್ಚದಲ್ಲಿ ಟ್ರಾಮಾ ಕೇರ್ ಸೆಂಟರ್ ಜಯದೇವ ಸಂಸ್ಥೆ ಸಹಕಾರದಲ್ಲಿ 75 ತಾಲೂಕು ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಚಿಕಿತ್ಸೆ 200 ಹಾಸಿಗೆ ಸಾಮರ್ಥ್ಯದ ಸರ್ಕಾರಿ ಆಸ್ಪತ್ರೆಗಳಲ್ಲೂ ಪಿಜಿ ಮೆಡಿಕಲ್ ಕಾಲೇಜು ಮೈಸೂರು ಕೆ ಆರ್ ಆಸ್ಪತ್ರೆ ನವೀಕರಣಕ್ಕೆ 89 ಕೋಟಿ ತುಮಕೂರು ಸರ್ಕಾರಿ ಆಸ್ಪತ್ರೆಯಲ್ಲಿ ಪಿಜಿ ಕೋರ್ಸ್ ಆರಂಭ ಸಿಎಂ ಆರೋಗ್ಯವಾಹಿನಿ ಯೋಜನೆಯಡಿ ಬೀದರ್, ಚಾಮರಾಜನಗರ, ಹಾವೇರಿ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಂಚಾರಿ ಕ್ಲಿನಿಕ್ ಸವಣೂರಿನಲ್ಲಿ ಹೊಸ ಆಯುರ್ವೇದ ಕಾಲೇಜು ಎಲ್ಲ ತಾಲೂಕುಗಳಲ್ಲಿ ಬಡ ವಿದ್ಯಾರ್ಥಿಗಳಿಗೆ ನೀಟ್ ತರಬೇತಿ ಮೆಡಿಕಲ್ ಓದುವ ಬಡ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ ಸೌಲಭ್ಯ ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಶುಲ್ಕ ನಿಗದಿಗೆ ಶುಲ್ಕ ನಿಯಂತ್ರಣ ಸಮಿತಿ ರಚನೆ
02:43 PM (IST) Mar 04
ನೀರಾವರಿ ಕ್ಷೇತ್ರಕ್ಕೆ ಸಿಕ್ಕ ಕೊಡುಗೆ ಹೀಗಿದೆ
ನೀರಾವರಿಗೆ 33,700 ಕೋಟಿ ರೂಪಾಯಿ ಅನುದಾನ ಎತ್ತಿನ ಹೊಳೆ ಯೋಜನೆಯ ಅನುಷ್ಠಾನಕ್ಕೆ 3 ಸಾವಿರ ಕೋಟಿ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ 1 ಸಾವಿರ ಕೋಟಿ ತುಂಗಭದ್ರಾದ ನವಲೆ ಬಳಿ ಸಮತೋಲನ ಜಲಾಶಯಕ್ಕೆ 1 ಸಾವಿರ ಕೋಟಿ ಕಾಳಿ ನದಿಯಿಂದ ಉತ್ತರ ಕರ್ನಾಟಕ ಐದು ಜಿಲ್ಲೆಗಳಿಗೆ ಕುಡಿಯುವ ನೀರಿನ ಯೋಜನೆ ನೀರಾವರಿ ಪ್ರದೇಶ ಹೆಚ್ಚಿಸಲು 8,774 ಕೋಟಿ ರೂ. ಯೋಜನೆಗೆ ಅನುಮೋದನೆ ಪಶ್ಚಿಮಾಭಿಮುಖವಾಗಿ ಹರಿಯುವ ನದಿಗಳಿಗೆ ಕಿಂಡಿ ಆಣೆಕಟ್ಟು ನಿರ್ಮಾಣ ಕೃಷಿ ಚಟುವಟಿಕೆಗೆ ಉಪಯೋಗಿಸಲು 500 ಕೋಟಿ ರೂಗಳ ಕಾಮಗಾರಿ ಉಪ್ಪು ನೀರನ್ನು ತಡೆಗಟ್ಟಲು ಖಾರ್ ಲ್ಯಾಂಡ್ ಯೋಜನೆಯಡಿ 1500 ಕೋಟಿ ಯೋಜನೆ ರಾಜ್ಯದ ಕೆರೆಗಳ ಸಮಗ್ರ ಅಭಿವೃದ್ಧಿಗೆ 500 ಕೋಟಿ ರೂ ಕ್ರಿಯಾ ಯೋಜನೆ 308 ದಶಲಕ್ಷ ಲೀಟರ್ ನೀರನ್ನು 234 ಕೆರೆಗಳಿಗೆ ತುಂಬಿಸುವ ಯೋಜನೆಗೆ 865 ಕೋಟಿ ಕೆಸಿ ವ್ಯಾಲಿ ಯೋಜನೆಯ 2ನೇ ಹಂತಕ್ಕೆ 455 ಕೋಟಿ ರೂ. ಅನುಮೋದನೆ ಅಂತರ್ಜಲ ಸಂಪನ್ಮೂಲ ನಿರ್ವಹಣೆ ಅನುಷ್ಠಾನಕ್ಕೆ 1,202 ಕೋಟಿ ರೂಪಾಯಿ
02:34 PM (IST) Mar 04
ತೆರಿಗೆ ಬರೆ ಇಲ್ಲ, ವಾಣಿಜ್ಯ ತೆರಿಗೆ ಹೆಚ್ಚಳ ಪ್ರಸ್ತಾಪ ಇಲ್ಲ
ಯಾವುದೇ ಹೆಚ್ಚಿನ ತೆರಿಗೆ ವಿಧಿಸಿಲ್ಲ ತೆರಿಗೆ ಸಂಗ್ರಹ ಇಲಾಖೆಗಳಲ್ಲಿ ದಕ್ಷತೆ ತರಲು ಕ್ರಮ ಪೆಟ್ರೋಲ್, ಡೀಸೆಲ್ ಮೇಲಿನ ಮಾರಾಟ ದರದ ಮೇಲೆ ತೆರಿಗೆ ಹೆಚ್ಚಿಸಿಲ್ಲ ಕಳೆದ ಸಲ ಪೆಟ್ರೋಲ್, ಡೀಸೆಲ್ ಮಾರಾಟ ಮೇಲಿನ ತೆರಿಗೆ ಇಳಿಸಲಾಗಿತ್ತು.. ಪಿಎಂ ಸ್ವನಿಧಿ ಯೋಜನೆಯಡಿ ಮುದ್ರಾಂಕ ಶುಲ್ಕಗಳಿಗೆ ವಿನಾಯ್ತಿ ಬೀದಿ ವ್ಯಾಪಾರಿಗಳಿಗೆ ವಿತರಿಸಿದ ಸಾಲಗಳ ಒಪ್ಪಂದಗಳ ಮೇಲಿನ ಮುದ್ರಾಂಕ ಶುಲ್ಕ ಇಳಿಕೆ 2 ಲಕ್ಷ ಬೀದಿ ಬದಿ ವ್ಯಾಪಾರಿಗಳಿಗೆ ಅನುಕೂಲ ಅಬಕಾರಿ ತೆರಿಗೆಯಲ್ಲೂ ಹೆಚ್ಚಳ ಪ್ರಸ್ತಾಪ ಮಾಡದ ಸರ್ಕಾರ ನೋಂದಣಿ ಮತ್ತು ಮುದ್ರಾಂಕ ಶುಲ್ಕದಲ್ಲೂ ಹೆಚ್ಚಳ ಇಲ್ಲ
02:32 PM (IST) Mar 04
ಕರ್ನಾಟಕ ಬಜೆಟ್ 2022: ಇಲ್ಲಿದೆ ಬಜೆಟ್ ಸಂಪೂರ್ಣ ಪ್ರತಿ
02:26 PM (IST) Mar 04
ಹುಬ್ಬಳ್ಳಿಯಲ್ಲಿ 250 ಕೋಟಿ ರೂ. ವೆಚ್ಚದಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ
ಬೆಳಗಾವಿಯಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ ಆಯ್ದ 10 ಮೆಡಿಕಲ್ ಕಾಲೇಜುಗಳಲ್ಲಿ ಕ್ಯಾನ್ಸರ್ ರೋಗಿಗಳಿಗೆ ಕಿಮೋಥೆರಪಿ ಸೆಂಟರ್ ಸ್ಥಾಪನೆ ಬೆಂಗಳೂರಿನ ಎಲ್ಲ ವಾರ್ಡ್, ರಾಜ್ಯದ ಪ್ರಮುಖ ನಗರಗಳಲ್ಲಿ 438 ನಮ್ಮ ಕ್ಲಿನಿಕ್ ಸ್ಥಾಪನೆ
02:25 PM (IST) Mar 04
ಬಾಗಲಕೋಟೆಯಲ್ಲಿ ವಿನೂತನ 7 ವಿಶ್ವವಿದ್ಯಾಲಯ ಸ್ಥಾಪನೆ
LKG, UKG, ಪ್ರಾಥಮಿಕ, ಪ್ರೌಢ ಶಿಕ್ಷಣ, ಶಿಕ್ಷಕರ ಶಿಕ್ಷಣ, ವಯಸ್ಕರ ಶಿಕ್ಷಣ ಕ್ಷೇತ್ರಕ್ಕೆ ಹೊಸ ಸಿಲಬಸ್ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ 500 ಕೋಟಿ ರೂ. ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಪೀಠೋಪಕರಣಕ್ಕೆ 100 ಕೋಟಿ ರೂ. 169 ಬಾಲಕಿಯರ ಪ್ರೌಢಶಾಲೆಗಳಿಗೆ ಲ್ಯಾಬ್ ಇನ್ ಎ ಕಿಟ್ ವಿತರಣೆ ರಾಜ್ಯದ 7 ಎಂಜಿನಿಯರಿಂಗ್ ಉನ್ನತೀಕರಣ, ಪ್ರತಿಷ್ಠಿತ ವಿದೇಶಿ ವಿವಿ ಜತೆ ಒಪ್ಪಂದ ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಬಾಗಲಕೋಟೆಯಲ್ಲಿ ವಿನೂತನ 7 ವಿಶ್ವವಿದ್ಯಾಲಯ ಸ್ಥಾಪನೆ
02:25 PM (IST) Mar 04
ಶೈಕ್ಷಣಿಕ ಕ್ಷೇತ್ರದಲ್ಲಿ ಮೊದಲ ಬಾರಿಗೆ ಸರಕಾರಿ ಶಾಲೆಗಳ ಅಭಿವೃದ್ದಿಗೆ 500 ಕೋಟಿ ಘೋಷಣೆ
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ (Basavaraj Bommai) ಶುಕ್ರವಾರ ಮಂಡಿಸಿರುವ ಕರ್ನಾಟಕ ಬಜೆಟ್ 2022-23ರಲ್ಲಿ (karnataka budget 2022-23) ಶಿಕ್ಷಣ ಕ್ಷೇತ್ರಕ್ಕೆ (Education sector) ಹಲವು ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಸರಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ದಿಗೆ 500 ಕೋಟಿ ರೂ ಅನುದಾನ ಮೀಸಲಿಡಲಾಗಿದ್ದು, ಇದು ರಾಜ್ಯದಲ್ಲಿ ಮೊದಲ ಬಾರಿಗೆ ಎಂದು ಬೊಮ್ಮಾಯಿ ಬಜೆಟ್ ವೇಳೆ ತಿಳಿಸಿದ್ದಾರೆ.
ರಾಷ್ಟ್ರೀಯ ಶಿಕ್ಷಣ ನೀತಿ 2022ರ ಪ್ರಕಾರ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢ ಶಿಕ್ಷಣ, ಶಿಕ್ಷಕರ ಶಿಕ್ಷಣ ಮತ್ತು ವಯಸ್ಕ ಶಿಕ್ಷಣ ಕ್ಷೇತ್ರಗಳಿಗೆ ನೂತನ ಪಠ್ಯಕ್ರಮ ರಚನೆ ಮಾಡಲು ಯೋಜನೆ ಹಾಕಿಕೊಳ್ಳಲಾಗಿದೆ.
ಪ್ರಗತಿಯಲ್ಲಿರುವ 14 ನೀರಾವರಿ ಯೋಜನೆ ಪೂರ್ಣಗೊಳಿಸಿ, 35,319 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ.
ಪ್ರಗತಿಯಲ್ಲಿರುವ 14 ನೀರಾವರಿ ಯೋಜನೆ ಪೂರ್ಣಗೊಳಿಸಿ, 35,319 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ. 2021-23ನೇ ಸಾಲಿನಲ್ಲಿ ಅನುಮೋದಿಸಿದ 8,774 ಕೋಟಿ ರೂ.ಗಳ ಹೊಸ ನೀರಾವರಿ ಯೋಜನೆಗಳಿಗೆ ರೂಪುರೇಷೆ ನದಿಗಳಿಗೆ ಹಿಮ್ಮುಖವಾಗಿ ನುಗ್ಗುವ ಉಪ್ಪು ನೀರು ತಡೆಗಟ್ಟಲು ಖಾರ್ಲ್ಯಾಂಡ್ ಯೋಜನೆ ದಕ್ಷಿಣ ಕನ್ನಡ ಮತ್ತು ಉಡುಪಿಗೂ ವಿಸ್ತರಣೆ