15 ಕೋಟಿ ತೆರಿಗೆ ವಂಚಿಸಿದ ವ್ಯವಸ್ಥಾಪಕ ನಿರ್ದೇಶಕಬೆಂಗಳೂರಿನ ಆಟೋಮೊಟಿವ್ ಕಂಪನಿ ವ್ಯವಸ್ಥಾಪಕ ನಿರ್ದೇಶಕಜಿಎಸ್‌ಟಿ ಅಡಿ ತೆರಿಗೆ ವಂಚನೆ ಆರೋಪದಡಿ ಬಂಧನಕೇಂದ್ರ ಹಣಕಾಸು ಇಲಾಖೆ ಮಾಹಿತಿ

ಬೆಂಗಳೂರು(ಜು.8): ಜಿಎಸ್‌ಟಿ ಅನ್ವಯ ಸುಮಾರು ೧೫ ಕೋಟಿ ತೆರಿಗೆ ಪಾವತಿಸದ ಆರೋಪದಡಿಯಲ್ಲಿ ಬೆಂಗಳೂರಿನ ಆಟೋಮೊಟಿವ್ ಕಂಪನಿಯೊಂದರ ವ್ಯವಸ್ಥಾಪಕ ನಿರ್ದೇಶಕರನ್ನು ಬಂಧಿಸಲಾಗಿದೆ. ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಪಾವತಿಸದ ಹಿನ್ನೆಲೆಯಲ್ಲಿ ಕೇಂದ್ರ ಸರಕು ಮತ್ತು ಸೇವಾ ತೆರಿಗೆ ಕಾಯ್ದೆ 2017 ರ ನಿಬಂಧನೆಗಳ ಅಡಿಯಲ್ಲಿ ವ್ಯವಸ್ಥಾಪಕ ನಿರ್ದೇಶಕರನ್ನು ಬಂಧಿಸಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೇಂದ್ರೀಯ ತೆರಿಗೆ ಇಲಾಖೆಯ ಪ್ರಿವೆಂಟಿವ್ ಯುನಿಟ್‌ನಿಂದ ಸಂಗ್ರಹಿಸಲಾದ ನಿರ್ದಿಷ್ಟ ಗುಪ್ತಚರ ಮಾಹಿತಿ ಆಧಾರದಲ್ಲಿ ತೆರಿಗೆ ವಂಚನೆ ಪ್ರಕರಣ ಪತ್ತೆಯಾಗಿದೆ ಎಂದು ಹಣಕಾಸು ಸಚಿವಾಲಯ ಹೇಳಿಕೆ ನೀಡಿದೆ. ಆರೋಪಿಯು 2017 ರ ಆಗಸ್ಟ್‌್‌ನಿಂದ 2018 ರ ಮೇ ವರೆಗೆ ಜಿಎಸ್‌ಟಿ ಪಾವತಿ ಮಾಡದೆ ವಂಚಿಸಿದರು.

ಕೇಂದ್ರೀಯ ಸರಕು ಮತ್ತು ಸೇವಾ ತೆರಿಗೆ ಸೆಕ್ಷನ್ 132 ರ ಅನುಸಾರ ಅಪರಾಧಿಗೆ ಕನಿಷ್ಟ 5 ವರ್ಷಗಳ ವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ. ಅಲ್ಲದೇ ಈ ಅಪರಾಧವು ಜಾಮೀನು ರಹಿತ ಪ್ರಕರಣ ಎಂದು ಗುರುತಿಸಲ್ಪಡಲಿದೆ. ಸದ್ಯ ಆರೊಪಿ ತಾನು ತೆರಿಗೆ ವಂಚನೆ ಮಾಡಿರುವುದನ್ನು ಒಪ್ಪಿಕೊಂಡಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹಣಕಾಸು ಸಚಿವಾಲಯ ಸ್ಪಷ್ಟಪಡಿಸಿದೆ.