ಮೋದಿ ಸರ್ಕಾರದ ವಿರುದ್ಧ ಮನಮೋಹನ್ ಸಿಂಗ್ ವಾಗ್ದಾಳಿ| ‘ಆರ್ಥಿಕ ಕುಸಿತಕ್ಕೆ ಮೋದಿ ಸರ್ಕಾರದ ಕೆಟ್ಟ ನಿರ್ವಹಣೆ ಕಾರಣ’|‘ರಾಜಕೀಯ ಹಗೆತನ ಬಿಟ್ಟು ಬಿಕ್ಕಟ್ಟಿನಿಂದ ಹೊರಬರಲು ಪ್ರಯತ್ನಿಸಲಿ’|ದೇಶದ ಆರ್ಥಿಕ ಸ್ಥಿತಿಗತಿ ತೀವ್ರ ಚಿಂತಾಜನಕ ಎಂದ ಮಾಜಿ ಪ್ರಧಾನಿ|

ನವದೆಹಲಿ(ಸೆ.01): ದೇಶದ ಆರ್ಥಿಕ ಕುಸಿತಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ಕೆಟ್ಟ ನಿರ್ವಹಣೆಯೇ ಕಾರಣ ಎಂದು ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ. 

Add Asianetnews Kannada as a Preferred SourcegooglePreferred
Scroll to load tweet…

ಆರ್ಥಿಕ ಕುಸಿತಕ್ಕೆ ಮೋದಿ ಸರ್ಕಾರದ ಕಳಪೆ ನಿರ್ವಹಣೆ ಕಾರಣವಾಗಿದ್ದು, ರಾಜಕೀಯ ಹಗೆತನವನ್ನು ಬದಿಗಿಟ್ಟು ಈ ಬಿಕ್ಕಟ್ಟಿನಿಂದ ಹೊರಬರುವ ಪ್ರಯತ್ನಗಳನ್ನು ಕೇಂದ್ರ ಸರ್ಕಾರ ಮಾಡಬೇಕಿದೆ ಎಂದು ಡಾ. ಸಿಂ.ಗ್ ಅಭಿಪ್ರಾಯಪಟ್ಟಿದ್ದಾರೆ.

Scroll to load tweet…

ದೇಶದ ಆರ್ಥಿಕ ಸ್ಥಿತಿಗತಿ ತೀವ್ರ ಚಿಂತಾಜನಕವಾಗಿದ್ದು, ತ್ರೈಮಾಸಿಕ ಜಿಡಿಪಿ ಬೆಳವಣಿಗೆಯ ದರ ಶೇ.5 ರಷ್ಟಕ್ಕೆ ಕುಸಿದಿರುವುದು ಅಪಾಯದ ಮುನ್ಸೂಚನೆ ಎಂದು ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

Scroll to load tweet…

Scroll to load tweet…