Asianet Suvarna News Asianet Suvarna News

Karnataka Budget 2023: ಜನಸ್ನೇಹಿ ಬಜೆಟ್ ಎಂಬುದು ಸಾಬೀತಾಗಿದೆ: ಸಚಿವ ಗೋಪಾಲಯ್ಯ

ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿ ಸಿಇಟಿ ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ಉನ್ನತ ಶಿಕ್ಷಣ ಒದಗಿಸುವ ಐತಿಹಾಸಿಕ ಕ್ರಾಂತಿಕಾರಕ ಕ್ರಮವು ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಉನ್ನತ ಶಿಕ್ಷಣವನ್ನು ಉಚಿತವಾಗಿ ಒದಗಿಸುವ ಮೊದಲ ರಾಜ್ಯ ಸರ್ಕಾರವಾಗಿದೆ: ಸಚಿವ ಕೆ. ಗೋಪಾಲಯ್ಯ 

Minister K Gopalaiah React to Karnataka Budget 2023-24 grg
Author
First Published Feb 17, 2023, 2:08 PM IST

ಬೆಂಗಳೂರು(ಫೆ.17):  2023-24ನೇ ಸಾಲಿನ ಬಜೆಟ್ ಜನಸ್ನೇಹಿ ಬಜೆಟ್ ಎಂಬುದು ಸಾಬೀತಾಗಿದೆ ಎಂದು ಅಬಕಾರಿ ಸಚಿವ ಕೆ. ಗೋಪಾಲಯ್ಯ ತಿಳಿಸಿದ್ದಾರೆ.  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್‌ ಬಗ್ಗೆ ಪ್ರತಕ್ರಿಯೆ ನೀಡಿದ ಸಚಿವ ಕೆ. ಗೋಪಾಲಯ್ಯ ಅವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಬಡವರ ಮಕ್ಕಳಿಗೆ ನಿಗಮಗಳ ಮೂಲಕ ಸ್ವಯಂ ಉದ್ಯೋಗ ಸೃಷ್ಟಿಗೆ ಹೆಚ್ಚಿನ ಅನುದಾನ ಒದಗಿಸಿರುವುದು ಉದ್ಯೋಗ ಸೃಷ್ಟಿಗೆ ಅನುಕೂಲ ಕಲ್ಪಿಸಿದೆ ಅಂತ ತಿಳಿಸಿದ್ದಾರೆ. 

ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ಬೆಂಗಳೂರು ಮತ್ತು ಇತರ ದೊಡ್ಡ ನಗರಗಳಿಗೆ ತಾರತಮ್ಯ ರಹಿತವಾದ ಅಭಿವೃದ್ಧಿ ಚಟುವಟಿಕೆಗಳಿಗೆ ಅನುವು ಮಾಡಿಕೊಡಲಾಗಿದೆ. ಮಹಿಳೆಯರಿಗೆ ಗೃಹಿಣಿ ಶಕ್ತಿ ಯೋಜನೆ, ವಿದ್ಯಾರ್ಥಿನಿಯರಿಗೆ ಉಚಿತ ಬಸ್ಪಾಸ್ ಸೌಲಭ್ಯ, ನಿರುದ್ಯೋಗಿಗಳಿಗೆ 2,000 ರೂ. ಮಾಶಾಸನ ನೀಡುವ ಯೋಜನೆಗಳು ಕಾರ್ಮಿಕರು ಮತ್ತು ಮಹಿಳಾ ಕಾರ್ಮಿಕರಿಗೆ 500 ರೂ. ಮಾಶಾಸನ, ರೈತರ ಪರವಾಗಿ ʼಭೂ ಸಿರಿ” ಯೋಜನೆ, ಕ್ರಮಗಳನ್ನು ಈ ಮುಂಗಡ ಪತ್ರದಲ್ಲಿ ಘೋಷಿಸಲಾಗಿದೆ. ನೇಕಾರರು ಮತ್ತು ಇತರ ಉದ್ಯಮಿಗಳಿಗೆ ಪ್ರೋತ್ಸಾಹ ಧನವನ್ನು ವಿಸ್ತರಿಸುವುದು ಅವರೆಲ್ಲರ ಬದುಕಿನಲ್ಲಿ ಅತ್ಯಂತ ಗುಣಾತ್ಮಕ ಬದಲಾವಣೆಗಳನ್ನು ತರಲಿದೆ ಅಂತ ಹೇಳಿದ್ದಾರೆ. 

Karnataka budget 2023-24: ನೀರಾವರಿಗೆ 11,236 ಕೋಟಿ ಕೊಡುಗೆ: 38 ಯೋಜನೆಗಳಿಗೆ ಅನುಮೋದನೆ

ಇಂದು ಮಂಡಿಸಲಾಗಿರುವ ಕರ್ನಾಟಕ ಸರ್ಕಾರದ ಮುಂಗಡ ಪತ್ರ ರೈತರು, ಮಹಿಳೆಯರು ಮತ್ತು ಎಲ್ಲಾ ವರ್ಗದ ಜನರ ಹಿತಕಾಯುವ ಜನಪರ ಜನಸ್ನೇಹಿ ಮುಂಗಡಪತ್ರವಾಗಿದ್ದು, ಸಾಮಾಜಿಕ ನ್ಯಾಯ ಒದಗಿಸುವ ಭಾರತೀಯ ಜನತಾ ಪಾರ್ಟಿಯ ಬದ್ದತೆಯ ದಿಗ್ವಿಜಯವನ್ನು ಮುಂದುವರೆಸಿದ ಅರ್ಥವ್ಯವಸ್ಥೆಯನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವ ಪ್ರಗತಿಪರ ಮುಂದಾಲೋಚನೆಯ ಬಜೆಟ್ ಆಗಿದೆ ಅಂತ ತಿಳಿಸಿದ್ದಾರೆ. 

ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿ ಸಿಇಟಿ ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ಉನ್ನತ ಶಿಕ್ಷಣ ಒದಗಿಸುವ ಐತಿಹಾಸಿಕ ಕ್ರಾಂತಿಕಾರಕ ಕ್ರಮವು ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಉನ್ನತ ಶಿಕ್ಷಣವನ್ನು ಉಚಿತವಾಗಿ ಒದಗಿಸುವ ಮೊದಲ ರಾಜ್ಯ ಸರ್ಕಾರವಾಗಿದೆ. ವಿದ್ಯಾದಾನವನ್ನು ಕಲ್ಪನೆಯನ್ನು ನೈಜ ರೂಪದಲ್ಲಿ ಅನ್ವರ್ಥಕಗೊಳಿಸಲಾಗಿದೆ ಎಂದಿದ್ದಾರೆ. 

ಈ ಮುಂಗಡ ಪತ್ರದ ಅನುಷ್ಟಾನದಿಂದ ಉದ್ಯೋಗ ಸೃಷ್ಟಿ ಸಮಾನತೆಯ ಕಲ್ಪನೆಗಳನ್ನು ನೈಜ ರೂಪದಲ್ಲಿಯ ಅನುಷ್ಟಾನ ಜನರ ಬದುಕಿನಲ್ಲಿ ಗುಣಾತ್ಮಕವಾದ ಬದಲಾವಣೆ ಮತ್ತು ಸಮಗ್ರ ಅಭಿವೃದ್ಧಿಯ ಚಿಂತನೆಗಳನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ಚಿಕಿತ್ಸಕ ಬುದ್ದಿಯಿಂದ ವಿನ್ಯಾಸಗೊಳಿಸಿರುವ 2023-24ನೇ ಸಾಲಿನ ದೂರದೃಷ್ಟಿ ಮುಂಗಡ ಪತ್ರ ಮಂಡಿಸಿದ ನಮ್ಮೆಲ್ಲರ ನೆಚ್ಚಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ  ಧನ್ಯವಾದಗಳು ಅಂತ ಸಚಿವ ಕೆ. ಗೋಪಾಲಯ್ಯ ತಿಳಿಸಿದ್ದಾರೆ. 

Follow Us:
Download App:
  • android
  • ios