ಕೊರೋನಾ ಮಧ್ಯೆ ಆರ್ಥಿಕತೆಗೆ ಟಾನಿಕ್ ನೀಡುವ ಸವಾಲು| ನಿರ್ಮಲಾ ಸೀತಾರಾಮನ್ ಲೆಕ್ಕಾಚಾರಕ್ಕೆ ಭೇಷ್ ಎಂದ ಪಿಎಂ ಮೋದಿ| ಭಾರತ ಎದುರಿಸಬೇಕಾಗಿರುವ ಎಲ್ಲಾ ಸವಾಲುಗಳನ್ನು ಈ ಬಜೆಟ್ ಸ್ವೀಕರಿಸುವ ಸಾಮರ್ಥ್ಯ ಪ್ರದರ್ಶಿಸಿದೆ

ನವದೆಹಲಿ(ಫೆ. 01): ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಸಂಸತ್ತಿನಲ್ಲಿ 2021ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದಾರೆ. ಕೊರೋನಾದಿಂದಾಗಿ ನಲುಗಿದ್ದ ದೇಶದ ಆರ್ಥಿಕತೆಗೆ ಬಜೆಟ್ ಮೂಲಕ ಟಾನಿಕ್ ನೀಡಿರುವ ನಿರ್ಮಲಾ ಲೆಕ್ಕಾಚಾರವನ್ನು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

"

ಕೊರೋನಾ ಸೇರಿ ಪ್ರಸ್ತುತ ಭಾರತ ಎದುರಿಸಬೇಕಾಗಿರುವ ಎಲ್ಲಾ ಸವಾಲುಗಳನ್ನು ಈ ಬಜೆಟ್ ಸ್ವೀಕರಿಸುವ ಸಾಮರ್ಥ್ಯ ಪ್ರದರ್ಶಿಸಿದೆ. ಬಜೆಟ್ ಮಂಡಿಸುವ ಸವಾಲು ಸ್ವೀಕರಿಸಿ, ಅದನ್ನು ನಿಭಾಯಿಸುವಲ್ಲಿ ಯಶಸ್ವಿಯಾಗಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಕೇಂದ್ರ ಹಣಕಾಸು ಸಚಿವಾಲಯ ನಿಜಕ್ಕೂ ಅಭಿನಂನೆಗೆ ಅರ್ಹ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Scroll to load tweet…

ಈ ಬಜೆಟ್ ಆತ್ಮನಿರ್ಭರ್ ಭಾರತದತ್ತ ದೃಢ ಹೆಜ್ಜೆಯನ್ನಿಟ್ಟಿದ್ದು, ಭಾರತೀಯರ ಅಭಿವೃದ್ಧಿಗೆ ಪೂರಕವಾದ ಬಜೆಟ್ ಮಂಡಿಸಿದ್ದಕ್ಕೆ ನಿರ್ಮಲಾ ಸೀತಾರಾಮನ್ ತಂಡಕ್ಕೆ ಅಭಿನಂದನೆ. ಕೊರೋನಾನಾ ಹಾವಳಿ ನಡುವೆ ದೇಶದ ಅರ್ಥವ್ಯವಸ್ಥೆಯನ್ನು ನಿಗದಿತ ಮಾರ್ಗದಲ್ಲಿ ಮುನ್ನಡೆಸುವುದು ಸುಲಭದ ವಿಚಾರವಲ್ಲ. ಹೀಗಿದ್ದರೂ ಈ ಬಾರಿಯ ಬಜೆಟ್ ಈ ನಿಟ್ಟಿನಲ್ಲಿ ನಮ್ಮನ್ನು ಪ್ರೆರೇಪಿಸುವ ಕೆಲಸ ಮಾಡಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಕಷ್ಟ ಎದುರಿಸುತ್ತಿರುವ ಉದ್ಯಮಗಳನ್ನು ಮೇಲೆಕ್ಕೆತ್ತಲು ಈಗಾಗಲೇ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗಿದ್ದು, ಈ ಬಜೆಟ್ ಈ ಹಿಂದೆ ಘೋಷಣೆ ಮಾಡಲಾದ ಪ್ಯಾಕೇಜ್‌ಗೆ ಪೂರಕವಾಗಿ ಕೆಲಸ ಮಾಡಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.