ಆರ್‌ಬಿಐ ಗರ್ವನರ್ ಸ್ಥಾನಕ್ಕೆ ಊರ್ಜಿತ್ ಪಟೇಲ್ ರಾಜೀನಾಮೆ| ಊರ್ಜಿತ್ ಪಟೇಲ್ ರಾಜೀನಾಮೆ ಬಳಿಕ ಪ್ರಧಾನಿ ಮೋದಿ ಶುಭಾಶಯ| ಊರ್ಜಿತ್ ಓರ್ವ ಪ್ರಾಮಾಣಿಕ ಮತ್ತು ಅದ್ಭುತ ಅರ್ಥಶಾಸ್ತ್ರಜ್ಞ| ಟ್ವಿಟ್ಟರ್ ಮೂಲಕ ಊರ್ಜಿತ್ ಪಟೇಲ್ ಅವರಿಗೆ ಮೋದಿ ಶುಭಾಶಯ 

ನವದೆಹಲಿ(ಡಿ.10): ಆರ್‌ಬಿಐ ಗರ್ವನರ್ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿರುವ ಊರ್ಜಿತ್ ಪಟೇಲ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
Scroll to load tweet…

ಕೇಂದ್ರ ಸರ್ಕಾರ ದರಲ್ಲೂ ವಿಶೇಷವಾಗಿ ಕೇಂದ್ರ ಹಣಕಾಸು ಇಲಾಖೆ ಜೊತೆಗಿನ ಆರ್‌ಬಿಐ ತಿಕ್ಕಾಟ, ಆರ್ ಬಿಐ ಸ್ವಾಯತತ್ತೆ ಮೇಲೆ ಕೇಂದ್ರದ ಪ್ರಹಾರ ಇಂತಹ ಮಾತುಗಳೇ ಕೇಳಿ ಬರುತ್ತಿರುವ ಈ ಸಂದರ್ಭದಲ್ಲಿ ಊರ್ಜಿತ್ ಪಟೇಲ್ ಅವರಿಗೆ ಪ್ರಧಾನಿ ಮೋದಿ ಶುಭಾಶಯ ನಿಜಕ್ಕೂ ಅಚ್ಚರಿ ಮೂಡಿಸುವಂತಿದೆ.

Scroll to load tweet…

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಊರ್ಜಿತ್ ಪಟೇಲ್ ಓರ್ವ ಪ್ರಾಮಾಣಿಕ ಮತ್ತು ಅದ್ಭುತ ಅರ್ಥಶಾಸ್ತ್ರಜ್ಞ ಎಂದು ಬಣ್ಣಿಸಿದ್ದಾರೆ. ಊರ್ಜಿತ್ ಪಟೇಲ್ ಅವಧಿಯಲ್ಲೇ ಆರ್‌ಬಿಐ ಮತ್ತು ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಶಿಸ್ತು ಕಾಣಿಸಿಕೊಂಡಿದ್ದು ಎಂದು ಮೋದಿ ಹೊಗಳಿಕೆಯ ಮಾತುಗಳನ್ನಾಡಿದ್ದಾರೆ.