ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ್‌ ದಾಸ್‌ಗೆ ಕೊರೋನಾ| ಟ್ವೀಟ್ ಮಾಡಿ ಮಾಹಿತಿ ನೀಡಿದ ಗವರ್ನರ್| ಆರ್‌ಬಿಐ ಕೆಲಸ ಕಾರ್ಯಗಳು ಎಂದಿನಂತೆ ನಡೆಯಲಿವೆ ಎಂದ ಆರ್‌ಬಿಐ ಗವರ್ನರ್

ನವದೆಹಲಿ(ಅ.26): ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ್‌ ದಾಸ್‌ಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಭಾನುವಾರ ಈ ಸಂಬಂಧ ಟ್ವೀಟ್ ಮಾಡುವ ಮೂಲಕ ಖುದ್ದು ಅವರೇ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಟ್ವೀಟ್ ಮಾಡಿರುವ ಶಕ್ತಿಕಾಂತ್ ದಾಸ್ 'ನನ್ನ ಕೊರೋನಾ ವರದಿ ಪಾಸಿಟಿವ್ ಬಂದಿದೆ. ಹೀಗಿದ್ದರೂ ಯಾವುದೇ ಕೊರೋನಾ ಲಕ್ಷಣಗಳು ಕಂಡು ಬಂದಿಲ್ಲ. ನಾನು ಸಂಪೂರ್ಣವಾಗಿ ಆರೋಗ್ಯವಂತನಾಗಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರೆಲ್ಲರಿಗೂ ಈ ಬಗ್ಗೆ ಮಾಹಿತಿ ನೀಡಿದ್ದೇನೆ. ಐಸೋಲೇಟ್ ಆಗಿ ನನ್ನ ಕೆಲಸ ಕಾರ್ಯ ಮುಂದುವರೆಸುತ್ತೇನೆ. ಆರ್‌ಬಿಐನಲ್ಲಿ ಎಂದಿನಂತೆ ಕೆಲಸ ಕಾರ್ಯಗಳು ನಡೆಯಲಿವೆ. ನಾನು ಎಲ್ಲಾ ಸಹೋದ್ಯೋಗಿಗಳ ಸಂಪರ್ಕದಲ್ಲಿದ್ದೇನೆ' ಎಂದಿದ್ದಾಋಎ.

Scroll to load tweet…

ದೇಶದಲ್ಲಿ ಕೊರೋನಾದಿಂದ ಚೇತರಿಸಿಕೊಳ್ಳುತ್ತಿರುವವರ ಸಂಖ್ಯೆ ಗಣನೀಯವಾಗಿ ಏರುತ್ತಿದ್ದು, ಈ ಪ್ರಮಾಣ ಶೇ. 90ರಷ್ಟಾಗಿದೆ. ಈ ಬಗ್ಗೆ ಮಾಹಿತಿ ನೀಡಿದ್ದ ಕೇಂದ್ರ ಇಲಾಖೆ ಭಾನುವಾರ 62,077 ಮಂದಿ ಈ ಮಹಾಮಾರಿಯಿಂದ ಗುಣಮುಖರಾಗಿದ್ದಾರೆಂದು ತಿಳಿಸಿದ್ದಾರೆ. ಸದ್ಯ ಸಕ್ರಿಯ ಪ್ರಕರಣಗಳಿಗಿಂತಕೊರೋನಾದಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಿದೆ.