RBI ನಿರ್ಧಾರಕ್ಕೆ ಬ್ಯಾಂಕ್ ಗ್ರಾಹಕರಲ್ಲಿ ಮನೆ ಮಾಡಿದ ಆತಂಕ| ಗರಿಷ್ಠ 1 ಸಾವಿರ ರೂ. ವಿತ್ ಡ್ರಾಗೆ RBI ಆದೇಶ| ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್ ಗ್ರಾಹರಕರಿಗೆ ಆತಂಕ| ಪಿಎಂಸಿ ಬ್ಯಾಂಕ್ ಗ್ರಾಹಕರು ಇನ್ಮುಂದೇ ಕೇವಲ 1 ಸಾವಿರ ರೂ. ವಿತ್ ಡ್ಾ ಮಾಡಬಹುದು| ಬಹು-ರಾಜ್ಯ ಸಹಕಾರಿ ಬ್ಯಾಂಕ್ ಎಂದೇ ಖ್ಯಾತಿ ಪಡೆದಿರುವ ಪಿಎಂಸಿ ಬ್ಯಾಂಕ್| ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಶಾಖೆ ಹೊಂದಿರುವ ಪಿಎಂಸಿ ಬ್ಯಾಂಕ್| 

ಮುಂಬೈ(ಸೆ.24): ಮಹತ್ವದ ಬೆಳವಣಿಗೆಯೊಂದರಲ್ಲಿ ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್(ಪಿಎಂಸಿ) ಮೇಲೆ RBI ವಿಧಿಸಿರುವ ನಿರ್ಬಂಧ ಉದ್ಯಮ ವಲಯವನ್ನು ತೀವ್ರ ಆತಂಕಕ್ಕೆ ಗುರಿ ಮಾಡಿದೆ.

Add Asianetnews Kannada as a Preferred SourcegooglePreferred

RBI ಸೂಚನೆಯ ಪ್ರಕಾರ, ಯಾವುದೇ ಉಳಿತಾಯ, ಚಾಲ್ತಿ ಖಾತೆ ಮತ್ತು ಇತರೆ ಠೇವಣಿ ಖಾತೆಗಳಿಂದ ಗ್ರಾಹಕರು ಗರಿಷ್ಠ 1 ಸಾವಿರ ರೂ. ಮಾತ್ರ ವಿತ್ ಡ್ರಾ ಮಾಡಬುಹುದಾಗಿದೆ.ಇದು ಬ್ಯಾಂಕ್ ಗ್ರಾಹಕರನ್ನು ಅಕರಶಃ ಹೈರಾಣು ಮಾಡಿದೆ. 

 ಕುರಿತು ಮಾಹಿತಿ ನೀಡಿರುವ ಪಿಎಂಸಿ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ಯೋಗೇಶ್ ದಯಾಳ್, RBI ಹೊಸ ನಿಯಮದ ಅನ್ವಯ ಪಿಎಂಸಿ ಗ್ರಾಹಕರು ಇನ್ನು ಮುಂದೆ ಕೇವಲ 1 ಸಾವಿರ ರೂ. ಮಾತ್ರ ವಿತ್ ಡ್ರಾ ಮಾಡಬಹುದು ಎಂದು ತಿಳಿಸಿದ್ದಾರೆ.

ಬಹು-ರಾಜ್ಯ ಸಹಕಾರಿ ಬ್ಯಾಂಕ್ ಎಂದೇ ಖ್ಯಾತಿ ಪಡೆದಿರುವ ಪಿಎಂಸಿ ಬ್ಯಾಂಕ್, ಕರ್ನಾಟಕ, ಮಹಾರಾಷ್ಟ್ರ ದೆಹಲಿ, ಗೋವಾ, ಗುಜರಾತ್, ಆಂಧ್ರ ಪ್ರದೇಶ ಮತ್ತು ಮಧ್ಯ ಪ್ರದೇಶ ರಾಜ್ಯಗಳಲ್ಲಿ ತನ್ನ ಶಾಖೆಗಳನ್ನು ಹೊಂದಿದೆ.

1984ರಲ್ಲಿ ಮುಂಬೈನಲ್ಲಿ ಸ್ಥಾಪನೆಯಾದ ಈ ಸಹಕಾರಿ ಬ್ಯಾಂಕ್ ಈಗ ಆರು ರಾಜ್ಯಗಳಲ್ಲಿ ಒಟ್ಟು 137 ಶಾಖೆಗಳನ್ನು ಹೊಂದಿದೆ ಮತ್ತು ದೇಶದ ಟಾಪ್ 10 ಸಹಕಾರಿ ಬ್ಯಾಂಕ್’ಗಳಲ್ಲಿ ಒಂದಾಗಿರುವುದು ವಿಶೇಷ.