ಭಾರತೀಯ ರಿಸರ್ವ್ ಬ್ಯಾಂಕ್ ಕೇಂದ್ರೀಯ ಮಂಡಳಿ! ಅರೆಕಾಲಿಕ ನಿರ್ದೇಶಕರ ಸ್ಥಾನಕ್ಕೆ ನೇಮಕಾತಿ! ಎಸ್. ಗುರುಮೂರ್ತಿ ಹಾಗೂ ಸತೀಶ್ ಮರಾಠೆ! ಕ್ಯಾಬಿನೆಟ್ ನೇಮಕಾತಿ ಸಮಿತಿ ಅನುಮೋದನೆ 

ನವದೆಹಲಿ(ಆ.8): ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಕೇಂದ್ರೀಯ ಮಂಡಳಿ ಅರೆಕಾಲಿಕ ನಿರ್ದೇಶಕರಾಗಿ ಎಸ್. ಗುರುಮೂರ್ತಿ ಹಾಗೂ ಸತೀಶ್ ಮರಾಠೆ ನೇಮಕಗೊಂಡಿದ್ದಾರೆ.

Add Asianetnews Kannada as a Preferred SourcegooglePreferred

ಆರ್‌ಬಿಐ ಕೇಂದ್ರೀಯ ಮಂಡಳಿ ಅರೆಕಾಲಿಕ ನಿರ್ದೇಶಕರಾಗಿ ಎಸ್. ಗುರುಮೂರ್ತಿ ಹಾಗೂ ಸತೀಶ್ ಮರಾಠೆ ನೇಮಕಕ್ಕೆ ಕ್ಯಾಬಿನೆಟ್ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ.

ಗುರುಮೂರ್ತಿ ತಮಿಳು ನಿಯತಕಾಲಿಕೆ ‘ತುಘಲಕ್’ ನ ಸಂಪಾದಕರು ಮಾತ್ರವಲ್ಲದೆ ಚಾರ್ಟರ್ಡ್ ಅಕೌಂಟೆಂಟ್, ಹಾಗೂ ಆರ್ಥಿಕ ಮತ್ತು ರಾಜಕೀಯ ಅಂಕಣಕಾರರೂ ಆಗಿದ್ದಾರೆ. ಹಣಕಾಸು ಸಚಿವಾಲಯದ ಹಣಕಾಸು ಸೇವೆಗಳ ಇಲಾಖೆಯಿಂದ ಈ ನೇಮಕಾತಿಗಳ ಪ್ರಸ್ತಾವನೆ ಬಂದಿತ್ತು. ಈ ಪ್ರಸ್ತಾವನೆಗೆ ಕ್ಯಾಬಿನೆಟ್ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ.

15 ಸದಸ್ಯರನ್ನು ಒಳಗೊಂಡಿರುವ ಕೇಂದ್ರ ಬ್ಯಾಂಕ್ ನ ಉನ್ನತ ನಿರ್ದೇಶಕರ ಸಮಿತಿಗೆ ಇದೀಗ ಇಬ್ಬರು ಹೊಸ ನಿರ್ದೇಶಕರು ನೇಮಕವಾಗಿದ್ದು, ಒಟ್ಟು ನಾಲ್ಕು ವರ್ಷಗಳ ಕಾಲ ಇಬ್ಬರೂ ಈ ಹುದ್ದೆಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ.