Asianet Suvarna News Asianet Suvarna News

ಸಾಲ-ಸುಳ್ಳು ಬಿಟ್ಟರೆ ಏನೂ ಇಲ್ಲ, ಸಿದ್ದು ಬಜೆಟ್‌ ಮಂಡನೆಗೂ ಮುನ್ನ ಕಾರ್ಟೂನ್‌ ಮೂಲಕ ಬಿಜೆಪಿ ಅಣಕು

15ನೇ ಬಜೆಟ್‌ ಮಂಡನೆಗೂ ಮುನ್ನ ರಾಜ್ಯ ಬಿಜೆಪಿ ಟ್ವೀಟ್‌ ಮೂಲಕ ಕಾಂಗ್ರೆಸ್ ಸರ್ಕಾರಕ್ಕೆ ಟಾಂಗ್‌ ಕೊಟ್ಟಿದೆ.  ಈ ಬಜೆಟ್‌ನಲ್ಲಿ ಸಾಲ ಮತ್ತು ಸುಳ್ಳು ಹೇಳೋದು ಬಿಟ್ಟರೆ ಬೇರೆ ಏನೂ ಇರುವುದಿಲ್ಲ ಎಂದಿದೆ.

There is nothing except debt and lies BJP Mocking CM siddaramaiah budget gow
Author
First Published Feb 16, 2024, 9:19 AM IST

ಬೆಂಗಳೂರು (ಫೆ.16): ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸುತ್ತಿರುವ ರಾಜ್ಯ ಬಜೆಟ್‌ ಅಭಿವೃದ್ಧಿಯ ದೃಷ್ಟಿಕೋನದ ಜೊತೆಗೆ ರಾಜಕೀಯ ಲೆಕ್ಕಾಚಾರಕ್ಕು ಹಾದಿ ಮಾಡಿ ಕೊಟ್ಟಿದೆ. ಪ್ರಸಕ್ತ ಸಾಲಿನಲ್ಲಿ ಲೋಕಸಭೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಆಡಳಿತರೂಢ ಕಾಂಗ್ರೆಸ್‌ ಬಜೆಟ್‌ನಲ್ಲಿ ಹತ್ತು ಹಲವು ಘೋಷಣೆಗಳನ್ನು ಮಾಡುವ ನಿರೀಕ್ಷೆ ಗರಿಗೆದರಿದ್ದು, ಇತ್ತ ವಿರೋಧ ಪಕ್ಷ ಬಿಜೆಪಿ ಸಹ ಬಜೆಟ್‌ನ್ನು ಮುಂದಿಟ್ಟುಕೊಂಡು ಬೇಳೆ ಬೇಯಿಸಿಕೊಳ್ಳುವ ಚಿಂತನೆ ನಡೆಸಿದೆ.

ಸಿದ್ದು ಬಜೆಟ್‌ , ಬೆಂಗಳೂರಿನ ವಿವಿಧ ವಲಯಗಳಲ್ಲಿ ಭಾರಿ ನಿರೀಕ್ಷೆ

15ನೇ ಬಜೆಟ್‌ ಮಂಡನೆಗೂ ಮುನ್ನ ರಾಜ್ಯ ಬಿಜೆಪಿ ಟ್ವೀಟ್‌ ಮೂಲಕ ಕಾಂಗ್ರೆಸ್ ಸರ್ಕಾರಕ್ಕೆ ಟಾಂಗ್‌ ಕೊಟ್ಟಿದೆ.  ಈ ಬಜೆಟ್‌ನಲ್ಲಿ ಸಾಲ ಮತ್ತು ಸುಳ್ಳು ಹೇಳೋದು ಬಿಟ್ಟರೆ ಬೇರೆ ಏನೂ ಇರುವುದಿಲ್ಲ. ಎಂದು ಎಂದು ಈಗ ಟ್ರೆಂಡಿಗ್‌ನಲ್ಲಿರುವ ಕರಿಮಣಿ ಮಾಲೀಕ ನಾನಲ್ಲ ಹಾಡಿನ ಥರಾನೆ ಏನು ಇರೋದಿಲ್ಲಾ, ಏನು ಇರೋದಿಲ್ಲಾ ಎಂದು ಕಾರ್ಟೂನ್ ಒಂದನ್ನು ಮಾಡಲಾಗಿದೆ. ಅದರಲ್ಲಿ ಸಿದ್ದರಾಮಯ್ಯ ಈ ವರ್ಷ ರಾಜ್ಯ ಅತೀ ಹೆಚ್ಚು ಸಾಲ ಮಾಡಲಿ ಎಂಬುದು ನನ್ನ ಬಜೆಟ್‌ ಸ್ಪೆಷಾಲಿಟಿ ಕಣೋ ಎಂದು ಹೇಳುವಂತಿದೆ.


 

Follow Us:
Download App:
  • android
  • ios