ಇಂದಿನಿಂದ ರಾಜ್ಯ ಸಮ್ಮಿಶ್ರ ಸರ್ಕಾರದ ಬಜೆಟ್ ಅಧಿವೇಶನ| ವಿಧಾನಮಂಡಲದ ಉಭಯ ಸದನ ಉದ್ದೇಶಿಸಿ ರಾಜ್ಯಪಾಲರ ಭಾಷಣ| ಸಮ್ಮಿಶ್ರ ಸರ್ಕಾರದ ಕೈಗಾರಿಕಾ ನೀತಿ ಬಿಚ್ಚಿಟ್ಟ ರಾಜ್ಯಪಾಲರು| ಕೈಗಾರಿಕೆ ಅಭಿವೃದ್ಧಿಗಾಗಿ ‘ಕಾಂಪೀಟ್‌ ವಿತ್‌ ಚೀನಾ’ಎಂಬ ನೂತನ ಯೋಜನೆ| ಬಂಡವಾಳ ಹೂಡಿಕೆ ಆಕರ್ಷಿಸುವುದರಲ್ಲಿ ರಾಷ್ಟ್ರದಲ್ಲಿಯೇ ಕರ್ನಾಟಕಕ್ಕೆ ಪ್ರಥಮ ಸ್ಥಾನ| 

ಬೆಂಗಳೂರು(ಫೆ.06): ರಾಜ್ಯ ಸಮ್ಮಿಶ್ರ ಸರ್ಕಾರ 2019ರ ಬಜೆಟ್ ಮಂಡನೆಗೆ ಸಿದ್ಧವಾಗಿದ್ದು, ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇಂದು ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ರಾಜ್ಯಪಾಲ ವಜೂಬಾಯಿ ವಾಲಾ, ವಿಧಾನಮಂಡಲದ ಉಭಯ ಸದನವನ್ನು ಉದ್ದೇಶಿಸಿ ಭಾಷಣ ಮಾಡಿದರು.

ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರ್ಕಾರ ಜಿಲ್ಲಾ ಮಟ್ಟದಲ್ಲಿ ಕೈಗಾರಿಕೆ ಅಭಿವೃದ್ಧಿಗಾಗಿ ‘ಕಾಂಪೀಟ್‌ ವಿತ್‌ ಚೀನಾ’ಎಂಬ ನೂತನ ಯೋಜನೆಯನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಲಿದೆ ಎಂದು ರಾಜ್ಯಪಾಲ ವಜೂ ಭಾಯಿವಾಲಾ ಹೇಳಿದ್ದಾರೆ.

ರಾಜ್ಯದಲ್ಲಿನ ಕೈಗಾರಿಕೆ ಅಭಿವೃದ್ಧಿಗಾಗಿ 9 ಜಿಲ್ಲೆಗಳಲ್ಲಿ ಕೈಗಾರಿಕೆ ಕ್ಲಸ್ಟರ್‌ ಸ್ಥಾಪನೆಗೆ ಮೈತ್ರಿ ಸರ್ಕಾರ ಮುಂದಾಗಿದೆ. ಇದಕ್ಕಾಗಿ ‘ಕಾಂಪೀಟ್‌ ವಿತ್‌ ಚೀನಾ’ಎಂಬ ನೂತನ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿರುವುದಾಗಿ ರಾಜ್ಯಪಾಲರು ತಿಳಿಸಿದರು.

ಕರ್ನಾಟಕ 2018ನೇ ಸಾಲಿನ ಬಂಡವಾಳ ಹೂಡಿಕೆ ಆಕರ್ಷಿಸುವುದರಲ್ಲಿ ರಾಷ್ಟ್ರದಲ್ಲಿಯೇ ಪ್ರಥಮ ಸ್ಥಾನ ಪಡೆದಿದ್ದು, ಕೈಗಾರಿಕೆ ನೀತಿ 2014-19ರ ಅಡಿಯಲ್ಲಿ 3.49 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ ಹೊಂದಿದೆ.

2.5 ಲಕ್ಷ ಯುವಕರಿಗೆ ತರಬೇತಿ ಯುವಜನತೆಗೆ ಉದ್ಯೋಗಾವಕಾಶ ಸೃಷ್ಟಿಸಲು ಶ್ರಮಿಸುತ್ತಿದ್ದು, 2018-19ರಲ್ಲಿ ತರಬೇತಿ ನೀಡುವ ಮಹತ್ವಾಕಾಂಕ್ಷಿ ಯೋಜನೆಯನ್ನು ಅನುಷ್ಠಾನಗೊಳಿಸಿದೆ ಎಂದು ರಾಜ್ಯಪಾಲರು ಉಲ್ಲೇಖಿಸಿದರು.

ಬಜೆಟ್ ಅಧಿವೇಶನ: ರಾಜ್ಯಪಾಲ ಬಿಚ್ಚಿಟ್ಟರು ರಾಜ್ಯದ ಆರ್ಥಿಕ ‘ಸತ್ಯ’!