ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಜೆಡಿಎಸ್‌ ನಾಯಕ ಎಚ್‌.ಡಿ. ಕುಮಾರಸ್ವಾಮಿ ಕ್ಷೇತ್ರಗಳಲ್ಲಿ ಹಲವು ಯೋಜನೆಗಳನ್ನು ನೀಡಿದ್ದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಪ್ರಸಕ್ತ ಬಜೆಟ್‌ನಲ್ಲಿ ತಲಾ ಒಂದೊಂದು ಯೋಜನೆಯನ್ನು ಮಾತ್ರ ನೀಡಿದ್ದಾರೆ.

ಬೆಂಗಳೂರು (ಮಾ.09):  ಕಳೆದ 2020-21ನೇ ಸಾಲಿನ ಬಜೆಟ್‌ನಲ್ಲಿ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಜೆಡಿಎಸ್‌ ನಾಯಕ ಎಚ್‌.ಡಿ. ಕುಮಾರಸ್ವಾಮಿ ಕ್ಷೇತ್ರಗಳಲ್ಲಿ ಹಲವು ಯೋಜನೆಗಳನ್ನು ನೀಡಿದ್ದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಪ್ರಸಕ್ತ ಬಜೆಟ್‌ನಲ್ಲಿ ತಲಾ ಒಂದೊಂದು ಯೋಜನೆಯನ್ನು ಮಾತ್ರ ನೀಡಿದ್ದಾರೆ.

Add Asianetnews Kannada as a Preferred SourcegooglePreferred

ಬಾಗಲಕೋಟೆ ಜಿಲ್ಲೆ ಬಾದಾಮಿ ಶಾಸಕ ಸಿದ್ದರಾಮಯ್ಯ ಅವರು ತಮ್ಮ ಕ್ಷೇತ್ರದ ಗುಳೇದಗುಡ್ಡದಲ್ಲಿ ’ಜವಳಿ ಪಾರ್ಕ್’ ಸ್ಥಾಪನೆ ಮಾಡಿ 50 ಕೋಟಿ ರು. ಅನುದಾನ ಮೀಸಲಿಡುವಂತೆ ಜ.11 ರಂದು ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದರು.

ಕರ್ನಾಟಕ ಬಜೆಟ್ 2021: ನಿಮ್ಮ ಜಿಲ್ಲೆಗೆ ಏನು ಸಿಕ್ಕಿದೆ? ಇಲ್ಲಿದೆ ನೋಡಿ .

ಇದರಂತೆ ಗುಳೇದಗುಡ್ಡದಲ್ಲಿ ಜವಳಿ ಪಾರ್ಕ್ ಸ್ಥಾಪಿಸುವುದಾಗಿ ಘೋಷಿಸಿದ್ದು, ನೇಕಾರರ ಜೀವನೋಪಾಯ ಉತ್ತೇಜಿಸಲು ಮತ್ತು ಸ್ಥಳೀಯವಾಗಿ ಉದ್ಯೋಗವಕಾಶಗಳನ್ನು ನೀಡಿ ಗುಳೆ ಹೋಗುವುದನ್ನು ತಡೆಯಲು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಡಿ ಜವಳಿ ಪಾರ್ಕ್ ಸ್ಥಾಪಿಸುವುದಾಗಿ ತಿಳಿಸಿದ್ದಾರೆ.

ಇನ್ನು ಎಚ್‌.ಡಿ. ಕುಮಾರಸ್ವಾಮಿ ಅವರ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡ ಹೈ-ಟೆಕ್‌ ರೇಷ್ಮೆಗೂಡು ಮಾರುಕಟ್ಟೆಯನ್ನು ನಬಾರ್ಡ್‌ ಸಹಯೋಗದಲ್ಲಿ 75 ಕೋಟಿ ರು. ವೆಚ್ಚದಲ್ಲಿ ನಿರ್ಮಿಸುವುದಾಗಿ ಘೋಷಿಸಲಾಗಿದೆ.