Asianet Suvarna News Asianet Suvarna News

ಚಾಮರಾಜನಗರ ಯುವಕನ ಸ್ಟೇಟಸ್ ಹುಚ್ಚಾಟ,ಇಂತವರ ಮೇಲೂ ಮಾಡ್ಬೇಕು ಸರ್ಜಿಕಲ್ ದಾಳಿ

ಪಾಕಿಸ್ತಾನ ಪರ ವಾಟ್ಸಾಪ್ ಸ್ಟೇಟಸ್...!ಮಹಮದ್ ನೌಷದ್ ಎಂಬ ಯುವಕನಿಂದ ದೇಶದ್ರೋಹಿ ದುಷ್ಕೃತ್ಯ! ಚಾಮರಾಜನಗರ ಜಿಲ್ಲೆ ಹನೂರು ತಾಲೊಕಿನ ಕೌದಳ್ಳಿ ಯುವಕ!

Surgical Strike The Boy Kept  anti-national WhatsApp status chamarajanagar district
Author
Bengaluru, First Published Feb 26, 2019, 9:42 PM IST

ಚಾಮರಾಜನಗರ, [ಫೆ.26]: ಪುಲ್ವಾಮಾ ದಾಳಿಗೆ ಭಾರತ ಪ್ರತಿದಾಳಿ ನಡೆಸಿ ಸೇಡು ತೀರಿಸಿಕೊಂಡಿದೆ. ಭಾರತೀಯ ವಾಯುಸೇನೆ ಪಾಕ್ ಗಡಿ ನಿಯಂತ್ರಣ ರೇಖೆ ದಾಟಿ ಉಗ್ರರ ಕ್ಯಾಂಪ್ ಗಳನ್ನು ಧ್ವಂಸಗೊಳಿಸಿದೆ.

ಈ ಏರ್ ಸರ್ಜಿಕಲ್ ಸ್ಟ್ರೈಕ್ ಗೆ ಇಡೀ ದೇಶಾದ್ಯಂತ ಸಂಭ್ರಮಾಚರಣೆ ವ್ಯಕ್ತವಾಗುತ್ತಿದೆ. ಹೀಗಿರುವಾಗ ಚಾಮರಾಜನಗರ ಜಿಲ್ಲೆಯಲ್ಲಿ ಯುವಕನೊಬ್ಬ ಉದ್ಧಟತನ ಮೆರೆದಿದ್ದಾನೆ.

‘ಕಾಂಗ್ರೆಸ್ ಸಹ ಸರ್ಜಿಕಲ್ ದಾಳಿ ಮಾಡಿತ್ತು, ಆದ್ರೆ ಹೇಳಿಕೊಂಡಿರಲಿಲ್ಲ!‘

ಚಾಮರಾಜನಗರ ಜಿಲ್ಲೆ ಹನೂರು ತಾಲೊಕಿನ ಕೌದಳ್ಳಿ ಗ್ರಾಮದ ಮೊಹಮ್ಮದ್ ನೌಷದ್ ಎಂಬ ದೇಶದ್ರೋಹಿ, ಕಾದು ನೋಡಬೇಕು, ಭಾರತಕ್ಕೆ ಕೇಡುಗಾಲ ಪ್ರಾರಂಭವಾಗಿದ್ದು, ಪಾಕ್ ಪ್ರತೀಕಾರ ತೀರಿಸಲಿದೆ ಎಂಬ ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡಿದ್ದಾನೆ.

ಇದರಿಂದ ಕೆರಳಿದ ಗ್ರಾಮಸ್ಥರು ಯುವಕನ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Follow Us:
Download App:
  • android
  • ios