ಚಿಕ್ಕಮಗಳೂರಿನಲ್ಲಿ ದೇವಾಲಯದ ಮುಂದುವರಿದ ತೆಂಗಿನ ಮರಕ್ಕೆ ಬೆಂಕಿ ಹೊತ್ತಿದ್ದು ಜನರಲ್ಲಿ ಆತಂಕ ಎದುರಾಗಿದೆ. 

ಚಿಕ್ಕಮಗಳೂರು (ಅ.07) : ಮಳೆಗಾಲ ಮುಕ್ತಾಯವಾದರೂ ಕೂಡ ರಾಜ್ಯದಲ್ಲಿ ಮಳೆಯ ಅಬ್ಬರ ಮಾತ್ರ ನಿಂತಿಲ್ಲ. ಹಲವೆಡೆ ಇನ್ನೂ ವರುಣ ಅಬ್ಬರಿಸುತ್ತಿದ್ದಾನೆ. 

Add Asianetnews Kannada as a Preferred SourcegooglePreferred

ಚಿಕ್ಕಮಗಳೂರು ಜಿಲ್ಲೆಯಲ್ಲಿಯೂ ಮಳೆಯಾಗುತ್ತಿದ್ದು, ತರೀಕೆರೆ ಅಜ್ಜಂಪುರ ತಾಲೂಕಿನಲ್ಲಿ ಸಿಡಿಲು ಬಡಿದು ತೆಂಗಿನ ಮರವೊಂದು ಹೊತ್ತಿ ಉರಿದಿದೆ. 

ಇಲ್ಲಿನ ಕಿರಾಳಮ್ಮ ದೇವಾಲಯದ ಬಳಿ ಇರುವ ತೆಂಗಿನಮರಕ್ಕೆ ಸಿಡಿಲು ಬಡಿದು ಬೆಂಕಿ ಹೊತ್ತಿ ಉರಿದಿದೆ. ಈ ವೇಳೆ ಮರವು ಸಂಪೂರ್ಣ ಸುಟ್ಟು ಕರಕಲಾಗಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ದೇವಾಲಯದ ಬಳಿ ಇರುವ ತೆಂಗಿನಮರ ಹೊತ್ತಿ ಉರಿದಿದ್ದು, ಜನರಲ್ಲಿ ಆತಂಕ ಮೂಡಿಸಿದೆ.