Asianet Suvarna News Asianet Suvarna News

ಸಾಯಿ ಪಲ್ಲವಿ V/s ಜಾಹ್ನವಿ ಕಪೂರ್​: ಯಾರಿಗೆ ಒಲಿಯಲಿದ್ದಾಳೆ ಸೀತಾಮಾತೆ?

ಸಾಯಿ ಪಲ್ಲವಿ V/s  ಜಾಹ್ನವಿ ಕಪೂರ್​: ನಿತೇಶ್ ತಿವಾರಿಯವರ ರಾಮಾಯಣದಲ್ಲಿ ಯಾರಿಗೆ ಒಲಿಯಲಿದ್ದಾಳೆ ಸೀತಾಮಾತೆ?
 

Did Janhvi Kapoor replace Sai Pallavi as Seeta in Nitesh Tiwaris Ramayana
Author
First Published Feb 7, 2024, 12:00 PM IST

ರಾಮಾಯಣವನ್ನು ಆಧರಿಸಿ ಇದಾಗಲೇ ಕೆಲವು ಚಿತ್ರಗಳು ಬಂದಿದ್ದು, ಇದೀಗ ಮತ್ತೊಂದು ರಾಮಾಯಣ ಚಿತ್ರದ  ಶೂಟಿಂಗ್​ ನಡೆಯುತ್ತಿದೆ. ಕೆಲವು ತಿಂಗಳುಗಳಿಂದ ಭಾರಿ ಸದ್ದು ಮಾಡುತ್ತಿರುವ ರಾಮಾಯಣ ಚಿತ್ರದ ಬಿಗ್​ ಅಪ್ಡೇಟ್​ ಒಂದು ಹೊರಬಿದ್ದಿದೆ. ನಿತೇಶ್ ತಿವಾರಿ ಮಹಾಗ್ರಂಥವನ್ನು ತೆರೆಮೇಲೆ ತರುವುದಕ್ಕೆ ಹೊರಟಿರುವುದು ಅನೇಕ ತಿಂಗಳುಗಳಿಂದ ಸದ್ದು ಮಾಡುತ್ತಲೇ ಇತ್ತು. ರಣ್‌ಬೀರ್ ಕಪೂರ್ ರಾಮನಾಗಿ ನಟಿಸುತ್ತಿದ್ದರೆ, ಸಾಯಿ ಪಲ್ಲವಿ ಸೀತೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಎಂದೂ ಸುದ್ದಿಯಾಗಿತ್ತು. ಈ ಚಿತ್ರದ ಬಿಡುಗಡೆ  ಕನ್ನಡಿಗರ ಪಾಲಿಗೆ ಬಹುನಿರೀಕ್ಷಿತವಾಗಿದೆ. ಇದಕ್ಕೆ ಕಾರಣ, ಚಿತ್ರದಲ್ಲಿ ರಾವಣನ ಪಾತ್ರದಲ್ಲಿ ಯಶ್​ ಅವರು ನಟಿಸುತ್ತಿದ್ದಾರೆ ಎನ್ನುವ ಸುದ್ದಿ. ಇವರು ನಟಿಸುತ್ತಿದ್ದಾರೆಯೇ ಇಲ್ಲವೇ ಎಂಬ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆಯುತ್ತಿತ್ತು. ಆದರೆ ರಾಮಾಯಣದಲ್ಲಿ ರಾವಣನಾಗಿ ತೆರೆ ಮೇಲೆ ಯಶ್​ ಬರುತ್ತಿರುವುದು ಬಹುತೇಕ ಖಚಿತವಾಗಿದೆ ಎಂಬ ಸುದ್ದಿಯೂ ಇದೆ. 

  ಈ ಚಿತ್ರದ ಕುರಿತು ನಿರ್ದೇಶಕ ನಿತೇಶ್​ ತಿವಾರಿ ಇದುವರೆಗೂ ಸೀಕ್ರೇಟ್​ ಮೆಂಟೇನ್​ ಮಾಡುತ್ತಲೇ ಬಂದಿದ್ದಾರೆ. ಚಿತ್ರದ ಶೂಟಿಂಗ್​ ಬಗ್ಗೆಯೂ ಅವರು ಯಾವುದೇ ಮಾಹಿತಿ ಕೊಡಲಿಲ್ಲ.  ಆದರೆ ರಾಮನಾಗಿ ಕಾಣಿಸಿಕೊಳ್ಳುತ್ತಿರುವ  ರಣ್‌ಬೀರ್ ಕಪೂರ್ ಫ್ಯಾನ್​ ಅಕ್ಷಯ್ ಚತುರ್ವೇದಿ ಎನ್ನುವವರು ಮಾಡಿರುವ ಟ್ವೀಟ್​ನಿಂದ ಕೆಲ ದಿನಗಳಿಂದ ಇದು  ಮತ್ತೆ ಸದ್ದು ಮಾಡುತ್ತಿದೆ.  'ರಾಮಾಯಣ' 2024ರ ಬೇಸಿಗೆಯಲ್ಲಿ ಶುರುವಾಗಲಿದೆ ಎಂದು ಅವರು ತಮ್ಮ ಎಕ್ಸ್​ ಖಾತೆಯಲ್ಲಿ ಬರೆದುಕೊಂಡಿದ್ದರು. ವಿಮಾನ ನಿಲ್ದಾಣದಲ್ಲಿ ಇಮಿಗ್ರೇಷನ್ ವೇಳೆ ನಿಂತಿದ್ದ ಸಂದರ್ಭದಲ್ಲಿ  ರಣ್‌ಬೀರ್ ಕಪೂರ್ ಜೊತೆ ಮಾತನಾಡುತ್ತಿದ್ದೆ. ಆ ಸಮಯದಲ್ಲಿ ಈ ವಿಷಯ ತಿಳಿದಿದೆ.   ರಾಮಾಯಣ 2024 ಬೇಸಿಗೆಯಿಂದ ಶುರುವಾಗುತ್ತೆ ಎಂದು ಅವರೇ ಹೇಳಿದರು ಎಂದು ಅಕ್ಷಯ್​ ಅವರು ಬರೆದುಕೊಂಡಿದ್ದರು. 

ಅಪ್ಪಂಗೂ ಇಬ್ಬರು, ಅಣ್ಣಂಗೂ ಇಬ್ಬರು... ಸಲ್ಮಾನ್​ ಖಾನ್​ ಮದ್ವೆ ಯಾವಾಗ? ಕೊನೆಗೂ ಮೌನ ಮುರಿದ ನಟ!

ಆದರೆ ಇದೀಗ ಮತ್ತೊಂದು ಅಪ್​ಡೇಟ್​ ಬಂದಿದೆ. ಅದೇನೆಂದರೆ, ಸೀತೆಯ ಪಾತ್ರಕ್ಕೆ ಸಾಯಿ ಪಲ್ಲವಿ (Sai Pallavi) ಜಾಗದಲ್ಲಿ  ಜಾಹ್ನವಿ ಕಪೂರ್​ ಅವರನ್ನು ಆಯ್ಕೆ ಮಾಡಲಾಗುತ್ತಿದೆ ಎನ್ನುವುದು.  ಇಲ್ಲಿಯರೆಗೆ  ಸೀತೆಯಾಗಿ ಸಾಯಿ ಪಲ್ಲವಿ ಕಾಣಿಸಿಕೊಳ್ಳುತ್ತಾರೆ ಎಂದು ಹೇಳಲಾಗುತ್ತಿತ್ತು. ಆದರೆ ಈಗ ಆ ಜಾಗವನ್ನು ಜಾಹ್ನವಿ ತುಂಬಲಿದ್ದಾರೆ ಎನ್ನಲಾಗುತ್ತಿದೆ. ಸಾಯಿ ಪಲ್ಲವಿ ಬದಲಿಗೆ ಜಾಹ್ನವಿ ಈ ಪಾತ್ರಕ್ಕೆ ಸೂಕ್ತರು ಎಂದು  ನಿರ್ದೇಶಕ ನಿತೇಶ್​ ತಿವಾರಿ ನಿರ್ಧರಿಸಿರುವುದಾಗಿ ಹೇಳಲಾಗುತ್ತಿದೆ.  ಅಂದಹಾಗೆ ಇವರಿಬ್ಬರೂ ಇದಾಗಲೇ  ‘ಬವಾಲ್​’ ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದಾರೆ. ಇದರಿಂದ ಹೊಂದಾಣಿಕೆ ಚೆನ್ನಾಗಿದೆ ಎಂದು ‘ಪಿಂಕ್​ ವಿಲ್ಲಾ’ ವರದಿ ಮಾಡಿದೆ. ಈ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಹೊರಬರಬೇಕಿದೆ. 

 ಇನ್ನುಳಿದಂತೆ,  ವಿಭೀಷಣನ ಪಾತ್ರದಲ್ಲಿ ವಿಜಯ್​ ಸೇತುಪತಿ, ಆಂಜನೇಯನಾಗಿ ಸನ್ನಿ ಡಿಯೋಲ್​, ಕೈಕೇಯಿ ಪಾತ್ರದಲ್ಲಿ ಲಾರಾ ದತ್ತ ನಟಿಸುತ್ತಾರೆ ಎಂದು ಸುದ್ದಿ ಹಬ್ಬಿದೆ.   ತಾವು ರಾಮನಾಗಿ ಮಿಂಚುತ್ತಿರುವ ಕಾರಣ, ಮದ್ಯ, ಮಾಂಸಾಹಾರ ಸೇವನೆಯನ್ನು ಬಿಟ್ಟಿರುವುದಾಗಿ ರಣಬೀರ್​ ತಿಳಿಸಿದ್ದರು.  ಇವರು  ರಾಮನ ಪಾತ್ರ ಮಾಡುತ್ತಿರುವ ಬಗ್ಗೆ ಸಾಕಷ್ಟು ಅಪಸ್ವರ ಕೇಳಿ ಬಂದ ಬೆನ್ನಲ್ಲೇ ಇದನ್ನು ಅವರು ಘೋಷಿಸಿದ್ದರು. ನಟಿ ಕಂಗನಾ ರಣಾವತ್​ ಕೂಡ ರಣಬೀರ್​ ಅವರ ಈ ಪಾತ್ರದ ಬಗ್ಗೆ ಟೀಕಿಸಿದ್ದರು. ಇದೀಗ ರಣಬೀರ್​ ಅವರು, ರಾಮಾಯಣದ ಶೂಟಿಂಗ್ ಮುಗಿಯುವವರೆಗೂ ತಾವು ಮದ್ಯ ಮತ್ತು ಮಾಂಸ ಸೇವನೆ ಮಾಡುವುದಿಲ್ಲ ಎಂದಿದ್ದರು.  

ಕಂಗನಾ ರಣಾವತ್​ ಬ್ರೇಕಪ್​ಗೆ ಕಾರಣವಾಯ್ತಾ ಕಪ್ಪೆ? ಮಾಜಿ ಲವರ್​ ಬಗ್ಗೆ ನಟಿ ಹೇಳಿದ್ದೇನು?

Follow Us:
Download App:
  • android
  • ios