ಸತತ ಮೂರನೇ ಬಾರಿ ಕಾಲಿವುಡ್‌ ಸೂಪರ್ ಸ್ಟಾರ್ ತಲಾ ಅಜಿತ್ ಮನೆಯಲ್ಲಿ ಬಾಂಬ್‌ ಇರುವುದಾಗಿ ಬೆದರಿಕೆ ಕರೆ ಬಂದಿದ್ದು ಆತಂಕಕ್ಕೆ ಕಾರಣವಾಗಿದೆ. 

ತಮಿಳು ಚಿತ್ರರಂಗದ ಬಾಕ್ಸ್ ಆಫೀಸ್‌ ಸುಲ್ತಾನ್‌ ತಲಾ ಅಜಿತ್ ಮನೆಯಲ್ಲಿ ಬಾಂಬ್‌ ಇರುವುದಾಗಿ ರಾತ್ರೋ ರಾತ್ರಿ ಬೆದರಿಕೆ ಕರೆ ಬಂದಿದೆ. ನಿಜಕ್ಕೂ ಇದೆಲ್ಲಾ ಮಾಡುತ್ತಿರುವುದು ಯಾರು? ಇದರ ಹಿಂದಿರುವ ಉದ್ದೇಶವಾದರೂ ಏನು ? 

Add Asianetnews Kannada as a Preferred SourcegooglePreferred

ಕೊರೋನಾ ತಡೆಗೆ ಕರ್ನಾಟಕಕ್ಕೆ ಬಂದ ಸೂಪರ್ ಸ್ಟಾರ್ ಅಜಿತ್ 'ದಕ್ಷ'

ಲಾಕ್‌ಡೌನ್‌ ಇರುವ ಕಾರಣ ಕುಟುಂಬಸ್ಥರ ಜೊತೆ ಮನೆಯಲ್ಲಿ ಸಮಯ ಕಳೆಯುತ್ತಿರುವ ಅಜಿತ್‌ಗೆ ತಮ್ಮ ಇಂಜಮ್‌ಬಕ್ಕಮ್‌ ನಿವಾಸದಲ್ಲಿ ಬಾಂಬ್‌ ಇಟ್ಟಿರುವುದಾಗಿ ಬೆದರಿಕೆ ಕರೆ ಬಂದಿದೆ. ಈ ವಿಚಾರದ ಬಗ್ಗೆ ತಕ್ಷಣವೇ ಪೊಲೀಸರಿಗೆ ಅಜಿತ್ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

ಪೊಲೀಸರು, ಬಾಂಬ್‌ ನಿಷ್ಕ್ರಿಯ ದಳ ಮತ್ತು ಶ್ವಾನ ದಳಗಳು ಕೆಲವೇ ನಿಮಿಷಗಳಲ್ಲಿ ಅಜಿತ್‌ ನಿವಾಸ ತಲುಪಿದ್ದು ಪರಿಶೀಲನೆ ನಡೆಸಿದ್ದಾರೆ. ಯಾವುದೇ ಬಾಂಬ್ ಪತ್ತೆಯಾಗದ ಕಾರಣ ಹುಸಿಕರೆ ಮಾಡಿದವರು ಯಾರೆಂದು ಪತ್ತೆ ಮಾಡುತ್ತಿದ್ದಾರೆ.

ಅಜಿತ್ ಮನೆಯಲ್ಲಿ ಬಾಂಬ್‌ ಇಡುವುದಾಗಿ ಹೆದರಿಸಿರುವುದು ಇದೇ ಮೊದಲೇನಲ್ಲ ಈ ಹಿಂದೆ 2014ರಲ್ಲಿ ಮತ್ತು 2017ರಲ್ಲಿ ಇದೇ ರೀತಿಯ ಸುಳ್ಳು ಕರೆ ಬಂದಿತ್ತು. ರಿಸ್ಕ್‌ ತೆಗೆದುಕೊಳ್ಳಬಾರದು ಎಂಬ ಕಾರಣಕ್ಕೆ ಅಜಿತ್ ಪೊಲೀಸರಿಗೆ ತಿಳಿಸಿದ್ದರು.

ಕಾಲಿವುಡ್‌ 'ವೀರಂ' ಸಾಲ್ಟ್ ಆ್ಯಂಡ್ ಪೆಪ್ಪರ್ ನಟ ಅಜಿತ್‌ ಬಗ್ಗೆ ಕುತೂಹಲಕಾರಿ ಸಂಗತಿಗಳು!

ವಿಜಯ್ ದಳಪತಿ - ರಜನಿಕಾಂತ್:

ಇದೇ ವರ್ಷ ಇನ್ನಿಬ್ಬರು ಕಾಲಿವುಡ್‌ ಸ್ಟಾರ್‌ಗಳಾದ ವಿಜಯ್ ದಳಪತಿ ಮತ್ತು ಸೂಪರ್ ಸ್ಟಾರ್ ರಜನಿಕಾಂತ್ ನಿವಾಸಕ್ಕೆ ಬಾಂಬ್ ಕರೆ ಬಂದಿದೆ. ವಿಜಯ್ ದಳಪತಿ ಮತ್ತು ರಜನಿಕಾಂತ್‌ ನಿವಾಸಕ್ಕೆ ಬಾಂಬ್ ಇಟ್ಟಿರುವದಾಗಿ ಕರೆ ಬಂದಿತ್ತು ಆದರೆ ಅದೊಂದು ಹುಸಿಕರೆ ಎಂದು ಪೊಲೀಸರ ವಿಚಾರಣೆಯ ನಂತರ ತಿಳಿಯಿತು. ಈ ರೀತಿಯ ಘಟನೆಗಳು ಪದೇ ಪದೇ ಮರುಕಳಿಸುತ್ತಿರುವುದರಿಂದ ತಮಿಳು ಚಿತ್ರರಂಗದ ನಟರು ಬೇಸತ್ತಿದ್ದಾರೆ.