ರಾಜಕಾರಣಿ ವಿರುದ್ಧ ಏಳು ಬಾರಿ ಗರ್ಭಪಾತದ ಆರೋಪ ಹೊರಿಸಿದ್ದ ನಟಿ ವಿಜಯಲಕ್ಷ್ಮಿಗೆ ಎದುರಾಯ್ತು ಸಂಕಷ್ಟ!
ರಾಜಕಾರಣಿ ವಿರುದ್ಧ ಏಳು ಬಾರಿ ಗರ್ಭಪಾತದ ಆರೋಪ ಹೊರಿಸಿದ್ದ ನಟಿ ವಿಜಯಲಕ್ಷ್ಮಿಗೆ ಈಗ ಸಂಕಷ್ಟ ಎದುರಾಗಿದೆ. ಮದ್ರಾಸ್ ಹೈಕೋರ್ಟ್ನಿಂದ ಸಮನ್ಸ್ ಜಾರಿಯಾಗಿದೆ.

ಕನ್ನಡ, ತಮಿಳು ಹಾಗೂ ತೆಲುಗು ಸಿನಿಮಾಗಳಲ್ಲಿ ನಟಿಸಿರುವ ಜನಪ್ರಿಯ ನಟಿ ವಿಜಯಲಕ್ಷ್ಮಿ ಅವರು ರಾಜಕಾರಣಿ, ನಟ, ನಿರ್ದೇಶಕ ಸೀಮನ್ ವಿರುದ್ಧ ಏಳು ಬಾರಿ ಗರ್ಭಪಾತ ಮಾಡಿಸಿರುವ ಗಂಭೀರ ಆರೋಪವನ್ನು ಹೊರಿಸಿದ್ದು ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇವರಿಗೆ ಮದ್ರಾಸ್ ಹೈಕೋರ್ಟ್ ಸಮನ್ಸ್ ಜಾರಿಗೊಳಿಸಿದೆ. ಸೀಮನ್ ಅವರು, ನಾಮ್ ತಮಿಳರ್ ಕಟ್ಚಿ (ಎನ್ಟಿಕೆ) ಪಕ್ಷದ ನಾಯಕ ಕೂಡ. ಇವರ ವಿರುದ್ಧ ಇದಾಗಲೇ ವಿಜಯಲಕ್ಷ್ಮಿ ಅವರು ಮಾಧ್ಯಮಗಳ ಎದುರೂ ನೋವು ತೋಡಿಕೊಂಡಿದ್ದರು. ನ್ಯಾಯ ಕೊಡಿಸಿ ಎಂದು ಬೇಡಿಕೊಂಡಿದ್ದರು. ಅವರ ಜೊತೆ ತಮಗೆ ಮದುವೆಯಾಗಿದ್ದು, ಏಳು ಬಾರಿ ಗರ್ಭಪಾತ ಮಾಡಿಸಿದ್ದಾರೆ ಎಂಬ ಆರೋಪವನ್ನು ಮಾಡಿದ್ದರು ನಟಿ. 2008ರಲ್ಲಿ ಸೀಮನ್ ಹಾಗೂ ತಮಗೆ ಮದುವೆಯಾಗಿದೆ ಎಂದಿದ್ದ ವಿಜಯಲಕ್ಷ್ಮಿ. ಸೀಮನ್ ತಮಗೆ ಮೋಸ ಮಾಡಿದಲ್ಲದೆ ಅವರ ಕಡೆಯವರಿಂದ ಬೆದರಿಕೆ ಹಾಕಲಾಗುತ್ತಿದೆ ಎಂದಿದ್ದರು. ನಟಿ ಕೆಲ ದಿನಗಳ ಹಿಂದೆ ಈ ಮೋಸದ ಕುರಿತು ಗ್ರೇಟರ್ ಚೆನ್ನೈ ಪೊಲೀಸ್ ಆಯುಕ್ತರ ಸಹಾಯ ಪಡೆದುಕೊಂಡು ದೂರು ದಾಖಲಿಸಿದ್ದರು. ವಂಚನೆ ಮತ್ತು ಮಹಿಳೆಯರ ಮೇಲಿನ ಅತ್ಯಾಚಾರ ನಿಷೇಧ ಸೇರಿದಂತೆ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಸೀಮನ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.
ಈ ಹಿಂದೆ, ನಟಿ ಲೈಂಗಿಕ ದೌರ್ಜನ್ಯದ ಆರೋಪ ಮಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಸೀಮನ್ ಅವರಿಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದರು. ನಾಗಮಂಗಲ, ಸ್ವಸ್ತಿಕ್, ಕನಕಾಂಬರಿ ಹಾಗೂ ಸೂರ್ಯವಂಶ ಸೇರಿದಂತೆ ಹಲವು ಹಿಟ್ ಚಿತ್ರಗಳನ್ನು ನೀಡಿರುವ ಬಹುಭಾಷಾ ತಾರೆ ವಿಜಯಲಕ್ಷ್ಮಿ ಅವರ ಆರೋಪವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದರು. ಇದೇ ಆರೋಪವನ್ನು ವಿಜಯಲಕ್ಷ್ಮಿ ಕೂಡ ಇತ್ತೀಚೆಗೆ ತಿರುವಳ್ಳೂರಿನಲ್ಲಿ ಮ್ಯಾಜಿಸ್ಟ್ರೇಟ್ ಮುಂದೆ ಕೂ ಮಾಡಿದ್ದರು. ಸೀಮನ್ ಅವರು, ಹಣ ಹಾಗೂ ಚಿನ್ನಾಭರಣ ಪಡೆದು ವಂಚಿಸಿರುವುದಲ್ಲದೆ, ಲೈಂಗಿಕ ದೌರ್ಜನ್ಯ ಎಸಗಿ, ಬಲವಂತವಾಗಿ 7 ಬಾರಿ ಗರ್ಭಪಾತ ಮಾಡಿಸಿದ್ದಾರೆ ಎಂದು ವಿಜಯಲಕ್ಷ್ಮೀ, ಸೀಮನ್ ವಿರುದ್ಧ ಗಂಭೀರ ಆರೋಪ ಮಾಡಿದ್ದರು.
ಶಾರುಖ್ ಖಾನ್ ಮೈ ಪರಿಮಳ ಎಂದ್ರೆ ಹೆಂಗಸರಿಗೆ ಇಷ್ಟವಂತೆ! ನಟಿಯರೇನು ಹೇಳಿದ್ರು ಕೇಳಿ
ಈ ಆರೋಪದ ನಂತರ, ಜಯಲಕ್ಷ್ಮೀ ನೀಡಿದ ದೂರಿನ ಆಧಾರದ ಮೇರೆಗೆ ಪೊಲೀಸರು 4 ಮಂದಿ ಸ್ತ್ರೀ ರೋಗ ತಜ್ಞರಿಂದ ವಿಜಯಲಕ್ಷ್ಮೀ ಗರ್ಭಕೋಶಕ್ಕೆ ಅಲ್ಟ್ರಾಸೌಂಡ್ ವೈದ್ಯಕೀಯ ಪರೀಕ್ಷೆ ಮಾಡಿಸಿದ್ದರು. ಇವನ್ನೆಲ್ಲಾ ನೋಡಿ ಹೆದರಿದ್ದ ವಿಜಯಲಕ್ಷ್ಮೀ, ಸೀಮನ್ ವಿರುದ್ಧ ನೀಡಿದ್ದ ದೂರನ್ನು ವಾಪಸ್ ಪಡೆದುಕೊಂಡಿದ್ದರು. ಸೀಮನ್ ಪವರ್ಫುಲ್ ವ್ಯಕ್ತಿ. ನಾನು ಮತ್ತೆ ಇಲ್ಲಿಗೆ ಬರುವುದಿಲ್ಲ, ಬೆಂಗಳೂರಿಗೆ ವಾಪಸ್ ಹೋಗುತ್ತಿದ್ದೇನೆ. ನಾನು ಸೋಲನ್ನು ಒಪ್ಪಿಕೊಳ್ಳುತ್ತಿದ್ದೇನೆ. ಅವರು ರಾಜಕೀಯದಲ್ಲಿ ಮುಂದೆ ಬರಬೇಕು ಎಂದು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದರು. ಇದೇ ಇವರನ್ನು ಈಗ ಪೇಚಿಗೆ ಸಿಲುಕಿಸಿದೆ.
ದೂರು ವಾಪಸ್ ಅರ್ಜಿಯನ್ನು ಸ್ವೀಕರಿಸಿದ್ದ ಪೊಲೀಸರು ಅದನ್ನು ಕೋರ್ಟ್ಗೆ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಮದ್ರಾಸ್ ಹೈ ಕೋರ್ಟ್ ವಿಜಯಲಕ್ಷ್ಮೀಗೆ ಸಮನ್ಸ್ ನೀಡಿದ್ದು ಸೆಪ್ಟೆಂಬರ್ 29ರಂದು ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸೂಚಿಸಿದೆ. ತಮಿಳರ್ ಮುನ್ನೇಟ್ರ ಪಡೈ ವ್ಯವಸ್ಥಾಪಕ ಅಧ್ಯಕ್ಷೆ ವೀರಲಕ್ಷ್ಮಿ ಅವರು ನಟಿಗೆ ಈ ಹಿಂದೆ ಸಹಕಾರ ನೀಡಿದ್ದರು. ಕೆಲವು ವರ್ಷಗಳಿಂದ ನಾನು ವಿಜಯಲಕ್ಷ್ಮಿ ಪರ ನಿಂತು ಸೀಮನ್ ವಿರುದ್ಧ ಹೋರಾಟ ಮಾಡುತ್ತಿದ್ದೇನೆ ಆದರೆ ಯಾರೂ ಇದನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಈಗ ತಮಿಳು ನಾಡು ಸರ್ಕಾರ ಹಾಗೂ ಪೊಲೀಸ್ ವ್ಯವಸ್ಥೆಯ ಮೇಲೆ ಅಪಾರ ನಂಬಿಕೆ ಇರಿಸಿದ್ದೇನೆ. ಆತನನ್ನು ಬಂಧಿಸಿ ನಮಗೆ ನ್ಯಾಯ ಕೊಡಿಸಬೇಕು ಎಂದು ವೀರಲಕ್ಷ್ಮಿ ಹೇಳಿದ್ದರು. ಆದರೆ ಈಗ ಎಲ್ಲವೂ ಉಲ್ಟಾ ಆಗಿದೆ.
ರಿಷಬ್ ಶೆಟ್ಟಿ ಮೇಲೆ ಬಿತ್ತು ರಾಖಿ ಸಾವಂತ್ ಕಣ್ಣು! ನಟನ ಮುಂದೆ ಇಟ್ರು ಬಹುದೊಡ್ಡ ಬೇಡಿಕೆ