ನಟ ಸಲ್ಮಾನ್ ಖಾನ್ ಅವರ ಮುಂಬೈನ ಬಾಂದ್ರಾದಲ್ಲಿರುವ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ ಇಬ್ಬರನ್ನು ಬಂಧಿಸಲಾಗಿದೆ. 

ಮುಂಬೈ: ಬಾಲಿವುಡ್‌ ನಟ ಸಲ್ಮಾನ್ ಖಾನ್ ಅವರಿಗೆ ಜೀವ ಬೆದರಿಕೆಗಳ ನಡುವೆ ಮುಂಬೈನ ಬಾಂದ್ರಾದಲ್ಲಿರುವ ನಟನ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ ಆರೋಪದಲ್ಲಿ ಇಬ್ಬರನ್ನು ಬಂಧಿಸಲಾಗಿದೆ.ಇವು 2 ಪ್ರತ್ಯೇಕ ಘಟನೆಗಳಾಗಿವೆ. ಮಂಗಳವಾರ, ಬುಧವಾರ ಘಟನೆ ನಡೆದಿದ್ದು, ಘಟನೆ ಸಂಬಂಧ ಛತ್ತೀಸ್‌ಗಢ ಮೂಲದ ಜಿತೇಂದ್ರ ಕುಮಾರ್ ಸಿಂಗ್ ಮತ್ತು ಓರ್ವ ಮಹಿಳೆಯನ್ನು ಬಾಂದ್ರಾ ಪೊಲೀಸರು ಬಂಧಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆಗಿದ್ದೇನು?:

ಸಿಂಗ್ ನಟನ ಮನೆ ಸುತ್ತ ಸುತ್ತಾಟ ನಡೆಸುತ್ತಿರುವುದು ಕಂಡು ಬಂದಿತ್ತು, ಭದ್ರತೆಗೆ ನಿಯೋಜಿಸಿದ ಸಿಬ್ಬಂದಿ ಅಲ್ಲಿಂದ ಹೋಗುವಂತೆ ಹೇಳಿದ್ದರು. ಆಗ ಸಿಟ್ಟಿಗೆದ್ದು ಆತ ತನ್ನ ಮೊಬೈಲ್‌ ಪುಡಿಗಟ್ಟಿದ್ದ. ಅದರೆ ಬಳಿಕ ಕಾರೊಂದರ ಹಿಂದೆ ಅವಿತು ಅದೇ ದಿನ ಸಂಜೆ ಆತ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ಗೆ ನುಗ್ಗಲು ಯತ್ನಿಸಿದ್ದ. ಈ ವೇಳೆ ಆತನನ್ನು ಭದ್ರತಾ ಸಿಬ್ಬಂದಿ ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಆದರೆ ಸಲ್ಮಾನ್‌ರನ್ನು ಭೇಟಿಯಾಗಲು ಅವರ ಅಪಾರ್ಟ್‌ಮೆಂಟ್‌ಗೆ ಹೋಗಿದ್ದಾಗಿ ಸಿಂಗ್ ವಿಚಾರಣೆ ವೇಳೆ ಹೇಳಿದ್ದಾನೆ.

ಇನ್ನೊಂದು ಪ್ರಕರಣದಲ್ಲಿ ಇಶಾ ಛಾಬ್ರಿಯಾ (36) ಎಂಬಾಕೆ ಬುಧವಾರ ಮುಂಜಾನೆ ಕಟ್ಟಡವನ್ನು ಪ್ರವೇಶಿಸಿ, ನಟನಿಂದ ಆಹ್ವಾನ ಬಂದಿದೆ ಎಂದು ಹೇಳಿಕೊಂಡಳು ಹಾಗೂ ಮನೆ ಬಾಗಿಲು ಕೂಡ ತಟ್ಟಿದಳು. ಆಗ ಭದ್ರತಾ ಸಿಬ್ಬಂದಿ ಆಕೆಯನ್ನು ಪ್ರಶ್ನಿಸಿದಾಗ ಸುಳ್ಳು ಎಂದು ಗೊತ್ತಾಗಿ ಪೊಲೀಸ್‌ ವಶಕ್ಕೆ ಒಪ್ಪಿಸಿದ್ದಾರೆ. ಪಾತಕಿ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್‌ನಿಂದ ಹಲವಾರು ಬೆದರಿಕೆಗಳನ್ನು ಎದುರಿಸುತ್ತಿರುವ ಖಾನ್‌ಗೆ ಮುಂಬೈ ಪೊಲೀಸರು ‘ವೈ-ಪ್ಲಸ್’ ಭದ್ರತೆಯನ್ನು ಒದಗಿಸಿದ್ದಾರೆ.

ಜೂ.9ಕ್ಕೆ ಮೋದಿ 3.0 ಸರ್ಕಾರಕ್ಕೆ ವರ್ಷದ ಸಂಭ್ರಮ

ನವದೆಹಲಿ: ನರೇಂದ್ರ ಮೋದಿ 3.0 ಸರ್ಕಾರ ಮುಂದಿನ ತಿಂಗಳ 9 ರಂದು ಒಂದು ವರ್ಷ ಪೂರೈಸಲಿದೆ. ಈ ಸಂಭ್ರಮದಲ್ಲಿ ಕೇಂದ್ರ ಒಂದು ವರ್ಷದಲ್ಲಿನ ಸರ್ಕಾರ ಸಾಧನೆ, ಆಪರೇಷನ್ ಸಿಂದೂರ ಕಾರ್ಯಾಚರಣೆ ಸೇರಿದಂತೆ ಎನ್‌ಡಿಎ ಸರ್ಕಾರದ ಹಲವು ಕ್ರಮಗಳ ಬಗ್ಗೆ ಜನರಿಗೆ ತಲುಪಿಸಲು ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಾಧ್ಯತೆಯಿದೆ.

ಬಿಜೆಪಿ ವರ್ಷಾಚರಣೆ ಕಾರ್ಯಕ್ರಮದ ರೂಪುರೇಷೆಗಳನ್ನು ಸಿದ್ಧಪಡಿಸುತ್ತಿದ್ದು, ಸಾರ್ವಜನಿಕ ಸಭೆ, ಮೆರವಣಿಗೆ ಮೂಲಕ ಆಪರೇಷನ್ ಸಿಂದೂರ, ವಕ್ಪ್‌ ತಿದ್ದುಪಡಿ ಕಾಯ್ದೆ, ಆದಾಯ ತೆರಿಗೆ ವಿನಾಯಿತಿ ಸೇರಿದಂತೆ ಸರ್ಕಾರದ ಮಹತ್ವದ ಕಾರ್ಯಗಳನ್ನು ಜನರಿಗೆ ತಲುಪಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಿದೆ.

 ಇದರಲ್ಲಿ ಕೇಂದ್ರ ಸಚಿವರು ಸೇರಿದಂತೆ ಪಕ್ಷದ ಹಿರಿಯ ನಾಯಕರು ಇದರಲ್ಲಿ ಭಾಗಿಯಾಗಿದ್ದಾರೆ. ದೇಶ ಈಗಷ್ಟೇ ಸಮರ ಪರಿಸ್ಥಿತಿಯಿಂದ ಸಹಜ ಸ್ಥಿತಿಗೆ ಮರಳುತ್ತಿರುವ ಕಾರಣದಿಂದ ಸರಳವಾಗಿ ಆಯೋಜನೆ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ.