ಅನಾರೋಗ್ಯದಿಂದ ಬಳಲುತ್ತಿರುವ ನಟಿ ಸಮಂತಾ ಅವರನ್ನು ಮಾಜಿ ಪತಿ ನಾಗ ಚೈತನ್ಯಾ ಹಾಗೂ ಮಾಜಿ ಮಾವ ನಾಗಾರ್ಜುನ ಭೇಟಿಯಾಗಿ ಆರೋಗ್ಯ ವಿಚಾರಿಸಲಿದ್ದಾರೆ ಎನ್ನಲಾಗಿದೆ.
ದಕ್ಷಿಣ ಭಾರತದ ಖ್ಯಾತ ನಟಿ ಸಮಂತಾ ಅಪರೂಪದ ಕಾಯಿಲೆಯಿಂದ ಬಳಲುತ್ತಿರುವುದಾಗಿ ಬಹಿರಂಗ ಪಡಿಸಿದ್ದಾರೆ. Myositis ಎನ್ನುವ ಅಪರೂಪದ ಕಾಯಿಲೆಗೆ ತುತ್ತಾಗಿರುವುದಾಗಿ ಸಮಂತಾ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ. ಈ ಬಗ್ಗೆ ಸಮಂತಾ ಬಹಿರಂಗ ಪಡಿಸುತ್ತಿದ್ದಂತೆ ಅಭಿಮಾನಿಗಳಲ್ಲಿ ಆತಂಕ ಹೆಚ್ಚಾಗಿದೆ. ನೆಚ್ಚಿನ ನಟಿ ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತಿದ್ದಾರೆ. ಅಭಿಮಾನಿಗಳು ಮಾತ್ರವಲ್ಲದೇ ಅನೇಕ ಸ್ಟಾರ್ ಕಲಾವಿದರು ಸಹ ಶೀಘ್ರ ಗುಣುಮುಖರಾಗುವಂತೆ ವಿಶ್ ಮಾಡುತ್ತಿದ್ದಾರೆ. ತೆಲುಗು ಸ್ಟಾರ್ ಚಿರಂಜೀವಿ, ಜೂ.ಎನ್ ಟಿ ಆರ್ ಹಾಗೂ ಬಾಲಿವುಡ್ ಅನೇಕ ಕಲಾವಿದರು ಸಹ ಸಮಂತಾಗೆ ವಿಶ್ ಮಾಡಿ ಬೇಗ ಗುಣಮುಖರಾಗುವಂತೆ ಹಾರೈಸಿದ್ದಾರೆ. ಸಮಂತಾ ಅವರ ಮಾಜಿ ಪತಿ ನಾಗಚೈತನ್ಯ ಅವರ ಸಹೋದರ ಅಕಿಲ್ ಅಕ್ಕಿನೇನಿ ಕೂಡ ಬೇಗ ಗುಣಮುಖರಾಗುವಂತೆ ಹಾರೈಸಿದ್ದಾರೆ.
ಇದೀಗ ಕೇಳಿಬರುತ್ತಿರುವ ಮಾಹಿತಿ ಪ್ರಕಾರ ಸಮಂತಾ ಅವರ ಮಾಜಿ ಮಾವ, ಖ್ಯಾತ ನಟ ನಾಗಾರ್ಜುನ್ ಅವರು ಸಮಂತಾ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ನಾಗಾರ್ಜುನ್ ಜೊತೆ ಸಮಂತಾ ಮಾಜಿ ಪತಿ ನಾಗ ಚೈತನ್ಯ ಕೂಡ ಭೇಟಿ ಮಾಡಲಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ. ಆದರೆ ಈ ಬಗ್ಗೆ ಅಕ್ಕಿನೇನಿ ಕುಟುಂಬದಿಂದ ಆಗಲಿ ಅಥವಾ ಸಮಂತಾ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ರಿವೀಲ್ ಆಗಿಲ್ಲ.
ಆಂಗ್ಲ ಮಾಧ್ಯಮಗಳು ವರದಿ ಮಾಡಿರುವ ಪ್ರಕಾರ, ಸಮಂತಾ ಅನಾರೋಗ್ಯದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ ನಂತರ ನಾಗಾರ್ಜುನ್ ಅವರು ಭೇಟಿಯಾಗಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಸಮಂತಾ ಜೊತೆ ಮಾಜಿ ಮಾವ ನಾಗಾರ್ಜುನ ಉತ್ತಮ ಸ್ನೇಹ ಬಾಂಧವ್ಯ ಇಟ್ಟುಕೊಂಡಿದ್ದಾರೆ. ಹಾಗಾಗಿ ಮಾಜಿ ಸೊಸೆಯ ಆರೋಗ್ಯ ವಿಚಾರಿಸಲು ತೆರಳಿದ್ದಾರೆ ಎನ್ನಲಾಗಿದೆ. ನಾಗಾರ್ಜುನ್ ಜೊತೆ ನಾಗ ಚೈತನ್ಯ ಕೂಡ ತೆರಲುವ ಸಾಧ್ಯತೆ ಇದೆ ಎನ್ನಲಾಗಿದೆ.
ಸವಾಲುಗಳು ಬರುತ್ತವೆ, ನೀವು ಗೆದ್ದು ಬರುತ್ತೀರಿ ಎನ್ನುವ ಖಾತ್ರಿ ಇದೆ; ಸಮಂತಾಗೆ ಚಿರಂಜೀವಿ ಪತ್ರ
ಅನಾರೋಗ್ಯದ ಬಗ್ಗೆ ಸಮಂತಾ ಪೋಸ್ಟ್,
‘ಯಶೋದಾ ಚಿತ್ರದ ಟ್ರೇಲರ್ಗೆ ನಿಮ್ಮ ಪ್ರತಿಕ್ರಿಯೆ ನೋಡಿ ಖುಷಿ ಆಯಿತು. ನಿಮ್ಮ ಪ್ರೀತಿ ನನಗೆ ಸವಾಲುಗಳನ್ನು ಎದುರಿಸಲು ಶಕ್ತಿ ನೀಡಿದೆ. ಕೆಲ ತಿಂಗಳ ಹಿಂದೆ ನನ್ನಲ್ಲಿ Myositis ಹೆಸರಿನ ಸಮಸ್ಯೆ ಇರುವುದು ಪತ್ತೆ ಆಯಿತು. ಇದು ಕಡಿಮೆ ಆದ ನಂತರದಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಳ್ಳಬೇಕು ಎಂದುಕೊಂಡಿದ್ದೆ. ಆದರೆ, ನಾವು ಅಂದುಕೊಂಡಿದ್ದಕ್ಕಿಂತಲೂ ಹೆಚ್ಚಿನ ಸಮಯವನ್ನು ಇದು ತೆಗೆದುಕೊಳ್ಳುತ್ತಿದೆ’. ಎಂದಿದ್ದರು.
ನಟಿ ಸಮಂತಾ ರುತ್ ಪ್ರಭುಗೆ Myositis ಕಾಯಿಲೆ: ಈ ರೋಗದ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಮಾಹಿತಿ ಇಲ್ಲಿದೆ..
‘ಶೀಘ್ರದಲ್ಲೇ ನಾನು ಸಂಪೂರ್ಣ ಗುಣಮುಖ ಆಗುತ್ತೇನೆ ಎಂಬ ಭರವಸೆಯನ್ನು ವೈದ್ಯರು ನೀಡಿದ್ದಾರೆ. ನನ್ನ ಜೀವನದಲ್ಲಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ಒಳ್ಳೆಯ ಹಾಗೂ ಕೆಟ್ಟ ದಿನ ಎರಡೂ ಇದ್ದವು. ಇದನ್ನು ನಿರ್ವಹಿಸಲು ಸಾಧ್ಯವೇ ಇಲ್ಲ ಎಂದುಕೊಂಡ ಪರಿಸ್ಥಿತಿಗಳೂ ಕಳೆದು ಹೋಗಿವೆ. ಚೇತರಿಕೆ ಕಾಣಲು ಇನ್ನೂ ಹತ್ತಿರವಾಗುತ್ತಿದ್ದೇನೆ ಅನಿಸುತ್ತದೆ. ಐ ಲವ್ ಯೂ. ಈ ಸಮಯ ಕಳೆಯುತ್ತದೆ’ಎಂದು ಸಮಂತಾ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು.
