Asianet Suvarna News Asianet Suvarna News

ನಟ ವಿಶಾಲ್ ಮನೆ ಮೇಲೆ ಕಲ್ಲು ತೂರಾಟ; ಕಿಟಕಿ ಗಾಜು ಪುಡಿ ಪುಡಿ

ತಮಿಳಿನ ಖ್ಯಾತ ನಟ ವಿಶಾಲ್ ಮನೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡಿಸಿದ್ದಾರೆ. ಚೆನ್ನೈನ ಅಣ್ಣಾ ನಗರದಲ್ಲಿರುವ ನಿವಾಸದ ಮೇಲೆ ದಾಳಿ ನಡೆದಿದೆ. 

Tamil Actor Vishal residence gets attacked with stones by unidentified people sgk
Author
First Published Sep 28, 2022, 3:39 PM IST

ತಮಿಳಿನ ಖ್ಯಾತ ನಟ ವಿಶಾಲ್ ಮನೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡಿಸಿದ್ದಾರೆ. ಚೆನ್ನೈನ ಅಣ್ಣಾ ನಗರದಲ್ಲಿರುವ ನಿವಾಸದ ಮೇಲೆ ದಾಳಿ ನಡೆದಿದೆ. ಈ ಮನೆಯಲ್ಲಿ ವಿಶಾಲ್ ತನ್ನ ತಂದೆ-ತಾಯಿ ಜೊತೆ ವಾಸವಾಗಿದ್ದಾರೆ. ಕಿಡಿಗೇಡಿಗಳ ಕೃತ್ಯಕ್ಕೆ ವಿಶಾಲ್ ಮನೆಯ ಕಿಟಕಿ ಗಾಜು ಪುಡಿ ಪುಡಿಯಾಗಿದೆ. ವಿಶಾಲ್ ಮನೆ ಮೇಲೆ ದಾಳಿ ನಡೆಸಿದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.ಈ ಘಟನೆ ವಿಶಾಲ್ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಕಠಿಣ ಕ್ರಮ ಕೈಗೊಳ್ಳುವಂತೆ ಅಭಿಮಾನಿಗಳು ಒತ್ತಾಯ ಮಾಡುತ್ತಿದ್ದಾರೆ. 

ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿರುವ ದೃಶ್ಯದಲ್ಲಿ ಕೆಂಪು ಬಣ್ಣದ ಕಾರಿನಲ್ಲಿ ಬಂದ ಕೆಲವು ಅಪರಿಚಿತ ದುಷ್ಕರ್ಮಿಗಳು ವಿಶಾಲ್ ಮನೆ ಮೇಲೆ ಕಲ್ಲು ತೂರಾಟ ನಡೆಸಿ ಎಸ್ಕೇಪ್ ಆಗಿದ್ದಾರೆ. ದಾಳಿಯಿಂದಾಗಿ ವಿಶಾಲ್ ಮನೆಯ ಬಾಲ್ಕನಿ ಗ್ಲಾಸ್‌ಗಳು ಮತ್ತು ಮನೆಯ ಇತರ ಕೆಲವು ಸ್ಥಳಗಳಿಗೆ ಹಾನಿಯಾಗಿದೆ. ಈ ಬಗ್ಗೆ ವಿಶಾಲ್ ತಮ್ಮ ಮ್ಯಾನೇಜರ್ ಹರಿಕೃಷ್ಣನ್ ಮೂಲಕ ಅಣ್ಣಾ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ದೂರಿನ ಜೊತೆಗೆ ವಿಶಾಲ್ ಅವರ ಮ್ಯಾನೇಜರ್ ಮನೆಗೆ ಅಳವಡಿಸಲಾಗಿದ್ದ ಸಿಸಿಟಿವಿ ವಿಡಿಯೋ ರೆಕಾರ್ಡಿಂಗ್ ಅನ್ನು ಲಗತ್ತಿಸಿದ್ದಾರೆ. ಮ್ಯಾನೇಜರ್ ದೂರಿನ ಆಧಾರದ ಮೇರೆಗೆ ಪೊಲೀಸ್ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ವಿಶಾಲ್ ಮನೆ ಮೇಲೆ ದಾಳಿ ನಡೆಸಲು ಕಾರಣವೇನು ಎಂದು ತನಿಖೆ ಮಾಡುತ್ತಿದ್ದಾರೆ. ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆನೀಡುವ ಬರವಸೆ ನೀಡಿದ್ದಾರೆ ಎನ್ನಲಾಗಿದೆ. ಇದುವರೆಗೂ ವಿಶಾಲ್ ಮನೆ ಮೇಲೆ ನಡೆದ ದಿಢೀರ್ ದಾಳಿಗೆ ಕಾರಣವೇನು ಎನ್ನುವುದು ಬಹಿರಂಗವಾಗಿಲ್ಲ.  

ಪುನೀತ್‌ ರಾಜ್‌ಕುಮಾರ್ ನಿಧನದ ವೇಳೆ ಕೊಟ್ಟ ಮಾತು ಉಳಿಸಿಕೊಂಡ ತಮಿಳು ನಟ

ಈ ಘಟನೆ ವಿಶಾಲ್ ಅಭಿಮಾನಿಗಳಿಗೆ ದೊಡ್ಡ ಆಘಾತವನ್ನುಂಟು ಮಾಡಿದೆ. ಅನೇಕರು ಸಾಮಾಜಿಕ ಜಾಲತಾಣದಲ್ಲಿ ಬೆಂಬಲ ಸೂಚಿಸಿದ್ದಾರೆ. ಕಠಿಣ ಶಿಕ್ಷೆ ನೀಡುವಂತೆ ಒತ್ತಾಯ ಮಾಡುತ್ತಿದ್ದಾರೆ. ಕೃತ್ಯದ ಹಿಂದೆ ತಲೆಮರೆಸಿಕೊಂಡಿರುವ ಈ ವ್ಯಕ್ತಿಗಳ ಗುರುತು ಇನ್ನು ಪತ್ತೆಯಾಗಿಲ್ಲ.

ನಾನು ಶಕ್ತಿಧಾಮದ ಸ್ವಯಂ ಸೇವಕನಾಗಿರ್ತೀನಿ, ರಾಜ್ ಕುಟುಂಬ ಅನುಮತಿ ನೀಡಲಿ; ಶಕ್ತಿಧಾಮ ಭೇಟಿ ಬಳಿಕ ವಿಶಾಲ್ ಮಾತು

ಇನ್ನು ನಟ ವಿಶಾಲ್ ಅವರ ಸಿನಿಮಾಗಳ ಬಗ್ಗೆ ಹೇಳುವುದಾದರೆ ವಿಶಾಲ್ ಸದ್ಯ ಲಾಠಿ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾದ ಬಿಡುಗಡ ದಿನಾಂಕ ಇನ್ನು ಬಹಿರಂಗವಾಗಿಲ್ಲ. ಈ ಸಿನಿಮಾ ಜೊತೆಗೆ ಮಾರ್ಕ್ ಆಂಟನಿ, ತುಪ್ಪರಿವಾಲನ್ 2 ನಲ್ಲಿ ಬ್ಯುಸಿಯಾಗಿದ್ದಾರೆ. ವಿಶಾಲ್ ಕೊನೆಯದಾಗಿ ವೀರಮೆ ವಾಗೈ ಸೂಡುಂ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಆದರೆ ಈ ಸಿನಿಮಾ ಹೇಳಿಕೊಳ್ಳುವಷ್ಟು ಸಕ್ಸಸ್ ಕಂಡಿಲ್ಲ. 

Follow Us:
Download App:
  • android
  • ios