ಲಾಕ್ಡೌನ್ ನಡುವೆಯೇ ಕೊರೋನಾ ಬಗ್ಗೆ ಜಾಗೃತಿ ಮೂಡಿಸಿದ್ದ ಕೋಲಾರದ ತಹಸೀಲ್ದಾರ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಕೋಲಾರ(ಮಾ.27): ಲಾಕ್ಡೌನ್ ನಡುವೆಯೇ ಕೋಲಾರದ ತಹಸೀಲ್ದಾರ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹೃದಯಾಘಾತದಿಂದ ಮಾಲೂರು ತಹಶಿಲ್ದಾರ್ ನಿಧನರಾಗಿದ್ದಾರೆ.
Add Asianetnews Kannada as a Preferred Source

ಮಾಲೂರು ತಹಸೀಲ್ದಾರ್ ಕೆ. ಮುನಿರಾಜು (58) ಮೃತರು. ಇಂದು ಬೆಳಗಿನ ಜಾವ ಹೃದಯಾಘಾತದಿಂದ ಬೆಂಗಳೂರಿನ ನಿವಾಸದಲ್ಲಿ ನಿಧನರಾಗಿದ್ದಾರೆ. ಕಳೆದ 3 ತಿಂಗಳ ಹಿಂದೆ ಕೆ. ಮುನಿರಾಜು ಮಾಲೂರಿಗೆ ತಹಶಿಲ್ದಾರ್ ಆಗಿ ನೇಮಕವಾಗಿದ್ದರು.
ಗನ್ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಶರಣಾದ KSRP ಪೇದೆ
ಮಾರ್ಚ್ 25 ರಂದು ಶಾಸಕ ಕೆ.ವೈ. ನಂಜೇಗೌಡ ಜೂತೆಗೂಡಿ ಕರೋನಾ ಸೋಂಕಿನ ಕುರಿತು ಪ್ರಚಾರ ಮಾಡಿದ್ದ ತಹಶಿಲ್ದಾರ್ ದಕ್ಷ ಅಧಿಕಾರಿಯಾಗಿದ್ದರು. ನಿಧನಕ್ಕೆ ಶಾಸಕ ಕೆ.ವೈ. ನಂಜೇಗೌಡ, ಸಂಸದ ಎಸ್. ಮುನಿಸ್ವಾಮಿ, ಜಿಲ್ಲಾಧಿಕಾರಿ ಸಿ ಸತ್ಯಭಾಮ ಸಂತಾಪ ವ್ಯಕ್ತಪಡಿಸಿದ್ದಾರೆ.
