ಬಡವರು ಹಾಗೂ ಹಸಿದವರ ಹೊಟ್ಟೆ ತುಂಬಿಸಲು ಕಾಂಗ್ರೆಸ್‌ ಪಕ್ಷದಿಂದ ಆಹಾರ ವಿತರಣೆ| ಬಿಟಿಎಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಲಕ್ಕಸಂದ್ರದ ಚೌಡೇಶ್ವರಿ ಕಲ್ಯಾಣ ಮಂಟಪದಲ್ಲಿ ಆಹಾರ ಸಿದ್ಧಪಡಿಸಲಾಗುತ್ತಿದೆ|

ಬೆಂಗಳೂರು(ಏ.03): ಕೊರೋನಾ ವೈರಸ್‌ ಹರಡದಿರಲು ಲಾಕ್‌ಡೌನ್‌ ಜಾರಿಗೊಳಿಸಿರುವುದರಿಂದ ಸಂಕಷ್ಟದಲ್ಲಿರುವ ನಗರದ ಬಡವರು ಹಾಗೂ ಹಸಿದವರ ಹೊಟ್ಟೆ ತುಂಬಿಸಲು ಕಾಂಗ್ರೆಸ್‌ ಆಹಾರ ಸಿದ್ಧಪಡಿಸಿ ಹಂಚುತ್ತಿದೆ.

Add Asianetnews Kannada as a Preferred SourcegooglePreferred

ಬಿಟಿಎಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಲಕ್ಕಸಂದ್ರದ ಚೌಡೇಶ್ವರಿ ಕಲ್ಯಾಣ ಮಂಟಪದಲ್ಲಿ ಆಹಾರ ಸಿದ್ಧಪಡಿಸಲಾಗುತ್ತಿದೆ. ಇಲ್ಲಿ ಸಿದ್ಧವಾದ ಆಹಾರವನ್ನು ಪೊಟ್ಟಣ ಮಾಡಿ ಬಳಿಕ ಬಡವರು, ನಿರ್ಗತಿಕರು ಹಾಗೂ ಹಸಿದವರಿಗೆ ವಿತರಿಸಲಾಗುತ್ತಿದೆ. 

ಭಾರತ್‌ ಲಾಕ್‌ಡೌನ್‌: ಒಂದೊತ್ತಿನ ಊಟಕ್ಕೂ ಬಡವರ ಪರದಾಟ, ಕಾಂಗ್ರೆಸ್‌ನಿಂದ ಆಹಾರ ವಿತರಣೆ

ಕೊರೋನಾ ಲಾಕ್‌ಡೌನ್‌: RSS ರೀತಿ ಕಾಂಗ್ರೆಸ್ಸಿಂದಲೂ ಬಡವರಿಗೆ ನೆರವು

ಗುರುವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹಾಗೂ ಸ್ಥಳೀಯ ಶಾಸಕ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅವರು ಕಲ್ಯಾಣ ಮಂಟಪಕ್ಕೆ ಭೇಟಿ ನೀಡಿ, ಆಹಾರ ತಯಾರಿಕೆಯನ್ನು ಪರಿಶೀಲಿಸಿದರಲ್ಲದೇ, ಖುದ್ದು ಆಹಾರ ಸೇವಿಸಿ ಗುಣಮಟ್ಟ ಪರೀಕ್ಷಿಸಿದ್ದಾರೆ.