ಡೆಡ್ಲಿ ಕೊರೋನಾಗೆ ರಾಜ್ಯದಲ್ಲಿ ಮತ್ತೊಂದು ಬಲಿ| ಗದಗದ ವೃದ್ಧೆ ಸಾವು| ರಾಜ್ಯದಲ್ಲಿ 6ಕ್ಕೇರಿದ ಸಾವಿನ ಸಂಖ್ಯೆ

ಗದಗ(ಏ.09): ವಿಶ್ವವನ್ನೇ ಕಂಗೆಡಿಸಿರುವ ಕೊರೋನಾ ಕರ್ನಾಟಕದಲ್ಲಿ ತನ್ನ ಹಾವಳಿ ಆರಂಭಿಸಿ ಇಂದಿಗೆ ಒಂದು ತಿಂಗಳು ಪೂರ್ಣಗೊಂಡಿದೆ. ದಿನಗಳೆದಂತೆ ಸೋಂಕಿತರ ಹಾಗೂ ಮೃತರ ಸಂಖ್ಯೆ ಹೆಚ್ಚುತ್ತಿದ್ದು, ರಾಜ್ಯದಲ್ಲಿ ಈ ಮಹಾಮಾರಿಗೆ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ. ಗದಗದ 80 ವರ್ಷದ ವೃದ್ಧೆ ಮಾರಕ ಕೊರೋನಾಗೆ ಮೃತಪಟ್ಟಿದ್ದು, ಈ ಮೂಲಕ ರಾಜ್ಯದಲ್ಲಿ ಈ ಡೆಡ್ಲಿ ವೈರಸ್‌ಗೆ ಬಲಿಯಾದವರ ಸಂಖ್ಯೆ 6ಕ್ಕೆ ಏರಿದೆ. 

Add Asianetnews Kannada as a Preferred SourcegooglePreferred

ಹೌದು ಗದಗ ಜಿಲ್ಲೆಯಯಲ್ಲಿ ಕೊರೋನಾ ವೈರಸ್‌ಗೆ ಮೊದಲಲ ಬಲಿಯಾಗಿದ್ದು, ಇಲ್ಲಿನ ರಂಗನವಾಡಿ ಗಲ್ಲಿಯ ನಿವಾಸಿ, 80 ವರ್ಷದ ವೃದ್ಧೆ ಮೃತಪಟ್ಟಿದ್ದಾರೆ. ಮಧ್ಯರಾತ್ರಿ ಸುಮಾರು 12.55ರ ವೇಳೆ ಅವರಿಗೆ ವ್ಯಕ್ತಿಗೆ ಹೃದಯಾಘಾತವಾಗಿತ್ತು ಎಂದು ಜಿಲ್ಲಾಧಿಕಾರಿ ಎಂ. ಜಿ. ಹಿರೇಮಠ್​ ದೃಢಪಡಿಸಿದ್ದಾರೆ.

ಕೊರೋ​ನಾಗೆ ರಾಜ್ಯ​ದಲ್ಲಿ ಮತ್ತೊಂದು ಬಲಿ, 65 ವರ್ಷದ ವೃದ್ಧ ಸಾವು!

ಇನ್ನು ಈ ವೃದ್ಧನನ್ನು ಕೊರೋನಾ ಸೋಂಕು ತಗುಲಿರುವ ಹಿನ್ನೆಲೆ ಏಪ್ರಿಲ್​ 4ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಏಪ್ರಿಲ್ 7ರಂದು ಅವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢವಾಗಿತ್ತು. ಅದರೆ ತಡರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಬುಧವಾರವೂ ಓರ್ವ ಸಾವು

ಇನ್ನು ನಿನ್ನೆ ಬುಧವಾರ ಕಲಬುರಗಿಯಲ್ಲಿ ಇಬ್ಬರಿಗೆ ಸೋಂಕು ದೃಢಪಟ್ಟಿತ್ತು. ಈ ಪೈಕಿ ಸೋಂಕು ದೃಢಪಡುವ ವರದಿ ಬರುವ ಮುನ್ನವೇ 65 ವರ್ಷದ ವ್ಯಕ್ತಿಯು ಮಂಗಳವಾರವೇ ಮೃತಪಟ್ಟಿದ್ದರು. ಮೃತ ವ್ಯಕ್ತಿಯು ಕಲಬುರಗಿ ಬಸ್ಸು ನಿಲ್ದಾಣದಲ್ಲಿ ಹಣ್ಣಿನ ವ್ಯಾಪಾರಿಯಾಗಿದ್ದು, ಏ.4 ರಂದು ತೀವ್ರ ಉಸಿರಾಟ ತೊಂದರೆ (ಎಸ್‌ಎಆರ್‌ಐ) ಹಿನ್ನೆಲೆಯಲ್ಲಿ ಅಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಸರ್ಕಾರಿ ಕೊರೋನಾ ಆಸ್ಪತ್ರೆಗೆ ಶಿಫಾರಸು ಮಾಡಿದ ಆಸ್ಪತ್ರೆ ವೈದ್ಯರು, ಏ.6ರ ಸಂಜೆ ಕಲಬುರಗಿಯ ಇಎಸ್‌ಐ ಆಸ್ಪತ್ರೆಗೆ ಕಳುಹಿಸಿದ್ದರು. ಇಲ್ಲಿ ದಾಖಲಾದ ನಂತರ ನೀಡಲಾದ ಚಿಕಿತ್ಸೆ ಫಲಕಾರಿಯಾಗದೆ ಹಣ್ಣಿನ ವ್ಯಾಪಾರಿ ಮಂಗಳವಾರ ಮೃತಪಟ್ಟರು. ಬುಧವಾರ ಈ ವ್ಯಕ್ತಿಯ ಗಂಟಲಿನ ದ್ರವದ ವರದಿ ಬಂದಿದ್ದು, ಅವರಿಗೆ ಕೊರೋನಾ ಸೋಂಕು ಇದ್ದದ್ದು ಖಚಿತಪಟ್ಟಿತ್ತು.

ಲಾಕ್‌ಡೌನ್ ತೆರವುಗೊಳಿಸುವುದು ಅಸಾಧ್ಯ: ಸರ್ವಪಕ್ಷ ಸಭೆಯಲ್ಲಿ ಮೋದಿ ಸುಳಿವು!

"