ಒಂದು ಕಡೆ ಲಾಕ್‌ ಡೌನ್ ಮತ್ತೊಂದೆಡೆ ಕರ್ನಾಟಕದಲ್ಲಿ ಕೊರೋನಾ ವೈರಸ್ ಪಾಸಿಟಿವ್ ಕೇಸ್‌ಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ. ಇವತ್ತು (ಗುರುವಾರ) ಮಧ್ಯಾಹ್ನದ ವೇಳೆ ನಾಲ್ಕು ಪ್ರಕರಣಗಳು ಪತ್ತೆಯಾಗಿವೆ. ಅದರಲ್ಲೂ ಮೈಸೂರು ಮೂಲದ ವ್ಯಕ್ತಿಯಲ್ಲಿ ಕಾಣಿಸಿಕೊಂಡಿರುವ ಸೋಂಕಿಗೆ ಇಡೀ ರಾಜ್ಯ ಇಲಾಖೆಯನ್ನೇ ಬೆಚ್ಚಿ ಬೀಳಿಸುವಂತೆ ಮಾಡಿದೆ.

ಬೆಂಗಳೂರು, (ಮಾ.26): ಈವರೆಗೂ ಕರ್ನಾಟಕದಲ್ಲಿ ವಿದೇಶದಿಂದ ಬಂದವರಲ್ಲಿ ಸೋಂಕು ತಗುಲಿರುವುದು ಕಂಡುಬಂದಿದೆ. ಅಷ್ಟೇ ಅಲ್ಲ ವಿದೇಶದಿಂದ ಬಂದವರಿಂದ ಮನೆಯವರಿಗೆ ಸೋಂಕು ತಗುಲಿರುವುದನ್ನು ಕೇಳಿದ್ವಿ. ಆದ್ರೆ, ಗುರುವಾರ ಬೆಳಕಿಗೆ ಬಂದ ಮೈಸೂರಿನ 52ನೇ ಕೇಸ್ ಬಾರೀ ಆತಂಕವನ್ನು ಸೃಷ್ಟಿಸಿದೆ.

Add Asianetnews Kannada as a Preferred SourcegooglePreferred

"

ಮೈಸೂರು ಜಿಲ್ಲೆಯ ನಂಜನಗೂಡಿನ 35 ವರ್ಷದ ವ್ಯಕ್ತಿ ಕೊರೋನಾ ವೈರಸ್ ಪಾಸಿಟಿವ್ ದೃಢವಾಗಿದೆ. ಆದ್ರೆ, ಈ ವ್ಯಕ್ತಿ ಯಾವುದೇ ವಿದೇಶಕ್ಕೆ ಹೋಗಿಲ್ಲ. ಹೊರ ರಾಜ್ಯಕ್ಕೂ ಕಾಲಿಟ್ಟಿಲ್ಲ. ಆದರೂ ಈತನಿಗೆ ಕೊರೋನಾ ವೈರಸ್ ಸೋಂಕು ತಗುಲಿರುವುದು ದೃಢವಾಗಿದೆ. 

ವ್ಯಾಪಿಸುತ್ತಲೇ ಇದೆ ಕೊರೋನಾ, ಮತ್ತೆ ನಾಲ್ವರಿಗೆ ಸೋಂಕು: ಒಟ್ಟು 55ಕ್ಕೇರಿಕೆ 

ಫಾರಿನ್‌ಗೂ ಹೋಗಿಲ್ಲ, ಹೋಗಿಬಂದವರ ಜೊತೆನೂ ಸಂಪರ್ಕವೂ ಇಲ್ಲ. ಊರಲ್ಲೇ ಇದ್ರೂ ಕೊರೋನಾ ತಗುಲಿರುವುದು ಭಯ ಹುಟ್ಟಿಸಿದೆ. ಅಷ್ಟೇ ಅಲ್ಲ ಇದು ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸುವಂತೆ ಮಾಡಿದೆ. 

ಈ ವ್ಯಕ್ತಿ ವೈದ್ಯಕೀಯ ತಂತ್ರಜ್ಞರೊಂದಿಗೆ ಸಂಪರ್ಕ ಹೊಂದಿದ್ದ ಎನ್ನುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಇನ್ನೂ ಈ ಬಗ್ಗೆ ವೈದ್ಯಕೀಯ ತನಿಖೆ ಪ್ರಗತಿಯಲ್ಲಿದೆ.

ಇದು ಕರ್ನಾಟಕದಲ್ಲಿ ಕೊರೋನಾ 3ನೇ ಸ್ಟೇಜ್‌ಗೆ ಕಾಲಿಟಿದ್ಯಾ ಎನ್ನುವ ಅನುಮಾನಗಳಿಗೆ ಉದ್ಭವಿಸಿದೆ. ಒಂದು ವೇಳೆ ಕೊರೋನಾ ಈ ರೀತಿಯಾಗಿ ಹರಡಿದ್ರೆ ರಾಜ್ಯದಲ್ಲಿ ಪರಿಸ್ಥಿತಿ ಕೈಮೀರುವುದು ಪಕ್ಕಾ. ಅದಕ್ಕೆ ಹೇಳುವುದು ಸಾರ್ವಜನಿಕರು ದಯವಿಟ್ಟು ಮನೆಯಲ್ಲೇ ಇರಿ. ಸೋಂಕು ಹರಡುವಿಕೆಯನ್ನು ತಪ್ಪಿಸಿ.