ರೈತರೇ ಆತ್ಮಹತ್ಯೆ ಮಾಡ್ಕೊಳ್ಬೇಡಿ, ನಿಮ್ಮ ಬೆಳೆ ಮಾರುಕಟ್ಟೆಗೆ ಸಾಗಿಸಲು ಹೀಗ್ ಮಾಡಿ
ಇಂದು (ಬುಧವಾರ) ರಾಜ್ಯ ಸರ್ಕಾರ ಮಹತ್ವದ ತೀರ್ಮಾನಗಳನ್ನು ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಪ್ರಿಯಾ ರೈತ ಬಾಂಧವರೇ ದುಡುಕಿ ಆತ್ಮಹತ್ಯೆ ಮಾಡಿಕೊಳ್ಳಬೇಡಿ.
ರೈತರ ನೆರವಿಗೆ ಧಾವಿಸಿದ ಸಿಎಂ: ಇಂದಿನ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನಗಳು ಇಂತಿವೆ
ಕೇಂದ್ರ ಮತ್ತು ರಾಜ್ಯ ಸರ್ಕಾರವು ಕರೋನಾ ಪರಿಣಾಮದಿಂದ ಉಂಟಾದ ಲಾಕ್ ಡೌನ್ ನಿಂದ ಕೃಷಿ ಚಟುವಟಿಕೆ ಮತ್ತು ರಸಗೊಬ್ಬರ, ಕೀಟನಾಶಕ ಹಾಗೂ ಬಿತ್ತನೆ ಬೀಜಗಳ ಸರಬರಾಜಿಗೆ ವಿನಾಯಿತಿ ನೀಡಿದೆ.
ಕೃಷಿಕರು, ಕೃಷಿಕಾರ್ಮಿಕರು ಕೈಗೊಳ್ಳುವ ಕೃಷಿಕಾರ್ಯಕ್ಕೆ ಯಾವುದೇ ದಿಗ್ಬಂಧನ ಅನ್ವಯಿಸುವುದಿಲ್ಲ. ಬೆಳೆಕೊಯ್ಲು ಯಂತ್ರೋಪಕರಣಗಳ ಸಾಗಣೆಗೆ ಅಡಚಣೆ ಇಲ್ಲ. ಕೃಷಿ ಉತ್ಪನ್ನ ಮಾರಾಟ, ಖರೀದಿ, ಸಾಗಣೆಗೆ ನಿರ್ಬಂಧ ಇಲ್ಲ.
ರಾಜ್ಯದ ಕೃಷಿಕರಿಗೆ ಸರ್ಕಾರದ ವತಿಯಿಂದ ಕೃಷಿ ಚಟುವಟಿಕೆ, ಕೃಷಿ ಉತ್ಪನ್ನ, ಉಪಕರಣಗಳ ಸಾಗಣೆಗೆ ಪ್ರತ್ಯೇಕ ಗ್ರೀನ್ ಪಾಸ್ ನೀಡಲಾಗುವುದು.
ಪಾಸ್ ಎಲ್ಲೆಲ್ಲಿ ಸಿಗುತ್ತವೆ?
ಗ್ರೀನ್ ಪಾಸ್ ಗಳನ್ನು ಪಡೆಯಲು ರೈತರು, ಕೃಷಿ ಸಂಬಂಧಿತ ಉತ್ಪಾದಕರು ಆಯಾ ಪ್ರದೇಶಗಳಿಗೆ ಅನ್ವಹಿಸುವಂತೆ ಜಿಲ್ಲಾಧಿಕಾರಿಗಳು, ತಹಶೀಲ್ದಾರ್, ಪೊಲೀಸ್ ವರಿಷ್ಠಾಧಿಕಾರಿ, ಉಪ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಕೃಷಿ ಅಧಿಕಾರಿಗಳ ಕಛೇರಿಗಳನ್ನು ಸಂಪರ್ಕಿಸಬಹುದು.
ಮತ್ತೊಮ್ಮೆ ಮನವಿ ಮಾಡಿಕೊಳ್ಳುತ್ತೇವೆ ದಯವಿಟ್ಟು ರೈತರು ಆತ್ಮಹತ್ಯೆಯೇ ಒಂದೇ ಹಾದಿ ಎನ್ನುವುದನ್ನು ಮೊದಲು ಮನಸ್ಸಿನಿಂದ ತೆಗೆದು ಹಾಕಬೇಕು. ನಿಮ್ಮ ಕಷ್ಟಕ್ಕೆ ಸಾವು ಒಂದೇ ಪರ್ಯಾಯವಲ್ಲ. ನಿಮ್ಮನ್ನು ನಂಬಿದ ಕುಟುಂಬ ಇದೆ ಎನ್ನುವುದನ್ನು ಆತ್ಮಹತ್ಯೆ ಮಾಡಿಕೊಳ್ಳುವ ಮುಂಚೆ ಒಮ್ಮೆ ಯೋಚಿಸಿ.