ಕೊರೋನಾದಿಂದ ಸಮಸ್ಯೆಗೆ ಈಡಾಗಿರುವ ನಿರ್ಗತಿಕರಿಗೆ, ಹಸಿದವರಿಗೆ ಸಿದ್ಧಗಂಗಾ ಮಠದಿಂದ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರತಿ ದಿನ 200ಕ್ಕೂ ಹೆಚ್ಚು ಮಂದಿಗೆ ಮಠದ ವತಿಯಿಂದ ದಾಸೋಹ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.
ತುಮಕೂರು(ಮಾ.31): ಕೊರೋನಾದಿಂದ ಸಮಸ್ಯೆಗೆ ಈಡಾಗಿರುವ ನಿರ್ಗತಿಕರಿಗೆ, ಹಸಿದವರಿಗೆ ಸಿದ್ಧಗಂಗಾ ಮಠದಿಂದ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರತಿ ದಿನ 200ಕ್ಕೂ ಹೆಚ್ಚು ಮಂದಿಗೆ ಮಠದ ವತಿಯಿಂದ ದಾಸೋಹ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.
Add Asianetnews Kannada as a Preferred Source

ಹಸಿದವರಿಗೆ ಊಟ ತಲುಪಿಸಲು ಸ್ವಯಂ ಸೇವಕರಿಗೆ ಶ್ರೀಮಠದ ವತಿಯಿಂದ ಆಹಾರದ ಪೊಟ್ಟಣಗಳನ್ನು ನೀಡಲಾಗಿದೆ. ಕೊರೋನಾ ಭೀತಿ ಹಿನ್ನೆಲೆಯಲ್ಲಿ ಈಗಾಗಲೇ ಭಕ್ತರಿಗೆ ಮಠಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ.
7 ರಾಜ್ಯಗಳಲ್ಲಿ 28 ಸಾವಿರ ಕೈದಿಗಳಿಗೆ ಬಿಡುಗಡೆ ಭಾಗ್ಯ
ಅಲ್ಲದೇ ಶಿವೈಕ್ಯ ಡಾ. ಶಿವಕುಮಾರ ಸ್ವಾಮೀಜಿ ಅವರ ಗುರುವಂದನೆಯನ್ನು ಸಹ ರದ್ದುಪಡಿಸಲಾಗಿದೆ. ದಿನೇ ದಿನೇ ಹಸಿದವರ ಸಂಖ್ಯೆ ಹೆಚ್ಚುತ್ತಿರುವುದರಿಂದ ಮಠದ ವತಿಯಿಂದ ನಿರ್ಗತಿಕರಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ.
