Asianet Suvarna News Asianet Suvarna News

ಕೊರೋನಾ ಆತಂಕ: 'ಜಮಾತ್‌ ಸಭೆಯಲ್ಲಿ ಭಾಗಿಯಾಗಿದ್ದ ಗಂಗಾವತಿ ವ್ಯಕ್ತಿಗೆ ಸೋಂಕು ಇಲ್ಲ'

ಹಜರತ್‌ ನಿಜಾಮುದ್ದೀನ್‌ ದರ್ಗಾ ತಬ್ಲಿಘಿ ಜಮಾತ್‌ ಪ್ರವಚನ ಸಭೆ| ಧರ್ಮಸಭೆಯಲ್ಲಿ ಭಾಗವಹಿಸಿದ್ದ ಗಂಗಾವತಿ ತಾಲೂಕಿನ ವ್ಯಕ್ತಿಗೆ ಕೊರೋನಾ ಸೋಂಕು ಇಲ್ಲ| ವ್ಯಕ್ತಿಯ ಮೇಲೆ ನಿಗಾ ವಹಿಸಿದ ಆರೋಗ್ಯ ಇಲಾಖೆ| 

Taluka Health Officer Dr Sharanappa Says Gangavati Based person Attend Nijamuddin Masid
Author
Bengaluru, First Published Apr 2, 2020, 9:04 AM IST

ಗಂಗಾವತಿ(ಏ.02): ದೆಹಲಿಯಲ್ಲಿ ಈಚೆಗೆ ಜರುಗಿದ ಹಜರತ್‌ ನಿಜಾಮುದ್ದೀನ್‌ ದರ್ಗಾ ತಬ್ಲಿಘಿ ಜಮಾತ್‌ ಪ್ರವಚನ ಸಭೆಯಲ್ಲಿ ಭಾಗವಹಿಸಿದ್ದ ಗಂಗಾವತಿ ತಾಲೂಕಿನ ಸಿದ್ಧಾಪುರ ಗ್ರಾಮದ ಭಾಷ (30) ಎನ್ನುವ ವ್ಯಕ್ತಿಗೆ ಕೊರೋನಾ ವೈರಸ್‌ ಲಕ್ಷಣಗಳು ಇಲ್ಲ ಎಂದು ಇಲ್ಲಿಯ ಆರೋಗ್ಯ ಇಲಾಖೆಯ ತಾಲೂಕು ಆರೋಗ್ಯಾಧಿಕಾರಿ ಡಾ.ಶರಣಪ್ಪ ಚೆಕೋಟಿ ದೃಢಪಡಿಸಿದ್ದಾರೆ.

ಸಿದ್ಧಾಪುರ ಭಾಷ ಎನ್ನುವ ವ್ಯಕ್ತಿ ಶ್ರೀರಾಮನರದಲ್ಲಿ ದನದ ವ್ಯಾಪಾರಿಯಾಗಿದ್ದು, ಈತನು ದೆಹಲಿಯಲ್ಲಿ ನಡೆದ ಪ್ರವಚನ ಸಭೆಯಲ್ಲಿ ಭಾಗವಹಿಸಿದ್ದ. 14 ದಿನದ ನಂತರ ಮಾಹಿತಿ ಬಂದಿದ್ದರಿಂದ ಭಾಷನನ್ನು ಪೊಲೀಸರು ವಿಚಾರಣೆ ನಡೆಸಿ ಬುಧವಾರ ಗಂಗಾವತಿ ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಿದಾಗ ಯಾವುದೇ ರೀತಿಯ ಕೊರೋನಾ ಸೋಂಕು ಲಕ್ಷಣಗಳು ಇಲ್ಲ ಎಂದು ವೈದ್ಯರು ದೃಢಪಡಿಸಿದ್ದಾರೆ.

ಕೊರೋನಾ ಮಧ್ಯೆಯೂ ಧರ್ಮಸಭೆ: ದೆಹಲಿ ನಿಜಾಮುದ್ದೀನ್‌ ವ್ಯಾಪ್ತಿಯಲ್ಲಿ ಕೊಪ್ಪಳದ 14 ಜನ

ಆದರೂ ಭಾಷಾನನ್ನು ಮನೆಯಿಂದ ಹೊರಗೆ ಬಾರದಂತೆ ನಿಗಾವಹಿಸಲಾಗಿದೆ ಎಂದು ತಹಸೀಲ್ದಾರ ಎಲ್‌.ಡಿ. ಚಂದ್ರಕಾಂತ್‌ ತಿಳಿಸಿದ್ದಾರೆ.
 

Follow Us:
Download App:
  • android
  • ios