ದೇಶದಲ್ಲಿ ಮಾತ್ರವಲ್ಲದೇ ಕರ್ನಾಟಕದಲ್ಲೂ ಕೊರೋನಾ ವೈರಸ್ ಸೋಂಕು ಸುಂಟರಗಾಳಿಯಂತೆ ವ್ಯಾಪಿಸುತ್ತಿದೆ. ಈ ಹಿನ್ನೆಯಲ್ಲಿ 21 ದಿನಗಳ ಜನತಾ ಕಫ್ರ್ಯೂವನ್ನು ಎಲ್ಲರೂ ಪಾಲಿಸಬೇಕು. ಅನಗತ್ಯವಾಗಿ ಯಾರೂ ಮನೆಯಿಂದ ಹೊರಗಡೆ ಬರಬೇಡಿ ಎಂದು ಸಾಕಷ್ಟು ಮನವಿ, ಜಾಗೃತಿ ಮೂಡಿಸಿದ್ರೂ ಜನರು ಕೇಳುತ್ತಿಲ್ಲ. ಹೀಗೆ ಆದೇಶ ಮೀರಿ ಯುವಕರಿಬ್ಬರು ಹೊರಗಡೆ ಹೋಗಿ ಪ್ರಾಣ ಕಳೆದುಕೊಂಡಿದ್ದಾರೆ.

ಮಂಡ್ಯ, (ಮಾ.29): ಕೊರೊನಾ ವೈರಸ್ ಹರಡುವುದನ್ನು ತಪ್ಪಿಸುವುದಕ್ಕೆ ಲಾಕ್‍ಡೌನ್ ಮಾಡಲಾಗಿದೆ. ಇದರಿಂದ ಎಲ್ಲಿಗೂ ಹೋಗದ ಮನೆಯಲ್ಲೇ ಸೇಫ್ ಆಗಿರಿ ಎಂದು ಸರ್ಕಾರ ಮತ್ತು ಮಾಧ್ಯಮಗಳು ಬೊಬ್ಬೆ ಹೊಡೆಯುತ್ತಿವೆ.

Add Asianetnews Kannada as a Preferred SourcegooglePreferred

ಆದರೂ ಇದನ್ನು ಕೇಳದ ಯುವಕರು ಕೆರೆಯಲ್ಲಿ ಆಟ ಆಡಲು ಹೋಗಿ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ವಡೇರಹಳ್ಳಿಯಲ್ಲಿ ನಡೆದಿದೆ.

ಕೊರೋನಾ ಭೀತಿ: ಬೆಂಗ್ಳೂರು ಬಿಟ್ಟು ಹಳ್ಳಿಕಡೆ ಹೊರಟವರು ಮಸಣ ಸೇರಿದ್ರು...!

ವಡೇರಹಳ್ಳಿಯಲ್ಲಿ ಭರತ್ (18) ಮತ್ತು ಅವಿನಾಶ್ (20) ಮೃತ ಯುವಕರು. ಇಬ್ಬರು ಯುವಕರು ತೂತಾಗಿರುವ ತೆಪ್ಪವನ್ನು ತೆಗೆದುಕೊಂಡು ಕೆರೆಯಲ್ಲಿ ಆಟವಾಡಲು ಹೋಗಿದ್ದಾರೆ.

ಈ ವೇಳೆ ತೆಪ್ಪದಲ್ಲಿ ನೀರು ತುಂಬಿಕೊಂಡ ಪರಿಣಾಮ ತೆಪ್ಪ ಮುಳುಗಿದ್ದು, ಯುವಕರಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಯುವಕರು ಬೆಂಗಳೂರಿನಿಂದ ಸಂಬಂಧಿಕರ ಮನೆಗೆ ಬಂದಿದ್ದರು.

ಕೊರೋನಾ ಲಾಕ್‌ಡೌನ್: ಎಣ್ಣೆ ಸಿಗದೇ ಕರ್ನಾಟಕದಲ್ಲಿ 6 ಜನರು ಆತ್ಮಹತ್ಯೆ

ಮನೆಯವರು ಕೊರೋನಾ ವೈರಸ್‍ನಿಂದ ಲಾಕ್‍ಡೌನ್ ಮಾಡಿದ್ದಾರೆ. ಎಲ್ಲೂ ಹೋಗಬೇಡಿ ಎಂದು ಹೇಳಿದ್ದರು. ಆದಾಗ್ಯೂ ದೊಡ್ಡವರ ಮಾತು ಮೀರಿ ಹೋಗಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಬಗ್ಗೆ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.