ಇಂದಿರಾ ಕ್ಯಾಂಟೀನ್‌ನಲ್ಲಿ ಹೆಚ್ಚಿದ ಜನಜಂಗುಳಿ| ಹೆಚ್ಚುವರಿ ಹಣ ವಸೂಲಿ ಆರೋಪ| ಲಾಕ್‌ಡೌನ್‌ನಿಂದ ಕಾರ್ಮಿಕರಿಗೆ ಕೂಲಿ ಇಲ್ಲ| ಕೂಡಲೇ ಅಗತ್ಯ ಕ್ರಮಕ್ಕೆ ಕಾರ್ಮಿಕರ ಆಗ್ರಹ|  

ಗದಗ(ಮಾ.30): ಇಡೀ ದೇಶವೇ ಲಾಕ್‌ಡೌನ್‌ದಿಂದ ತತ್ತರಿಸಿದೆ. ಕೂಲಿ ಕಾರ್ಮಿಕರಿಗೆ, ನಿರ್ಗತಿಕರು ಊಟಕ್ಕೂ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಮಯದಲ್ಲಿ ಬಡವರ ಪಾಲಿಗೆ ಆಸರೆಯಾಗಿರುವುದು ಇಂದಿರಾ ಕ್ಯಾಂಟೀನ್‌. ಆದರೆ ಬೆಟಗೇರಿಯಲ್ಲಿನ ಇಂದಿರಾ ಕ್ಯಾಂಟೀನ್‌ ಮುಂದೆ ಜನಜಂಗುಳಿ ಹೆಚ್ಚುತ್ತಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುತ್ತಿಲ್ಲ. ಕ್ಯಾಂಟಿನ್‌ ನಡೆಸುವ ಸಿಬ್ಬಂದಿ ಹೆಚ್ಚಿನ ಬೆಲೆಗೆ ಊಟ ತಿಂಡಿ ಕೊಡುತ್ತಿದ್ದಾರೆ. 5 ರೂಪಾಯಿ ಇದ್ದ ಉಪಹಾರಕ್ಕೆ 10 ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪಗಳೂ ಕೇಳಿ ಬರುತ್ತಿವೆ. 

ಕೊರೋನಾ ಭೀತಿ: ಮುಸ್ಲಿಂ ಬಾಂಧವರಿಗೆ ದಾವಣಗೆರೆ ಡಿಸಿ ಮಹಾಂತೇಶ್ ಬೀಳಗಿ ಧನ್ಯವಾದ

ಲಾಕ್‌ಡೌನ್‌ ಹಿನ್ನೆಲೆ ಇಲ್ಲಿಗೆ ಬರುವವರ ಸಂಖ್ಯೆ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಹೆಚ್ಚಿನ ದರ ಪಡೆಯುತ್ತಿದ್ದಾರೆ ಎನ್ನುವ ಆರೋಪಗಳು ಕೇಳಿ ಬರುತ್ತಿವೆ. ಈ ಬಗ್ಗೆ ನಗರಸಭೆ ಅಧಿಕಾರಿಗಳು ಕೂಡಲೇ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕಿದೆ.