ಬುಧವಾರ ರಾಜ್ಯದಲ್ಲಿ ನಾಲ್ವರಲ್ಲಿ ಕೊರೋನಾ ಸೋಂಕು ಪ್ರಕರಣ ದೃಢಪಟ್ಟಿದೆ. ಸೋಂಕಿನಿಂದ ಮೂವರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳ ಅವಧಿಯಲ್ಲಿ 2,228 ಜನರಿಗೆ ಕೊರೋನಾ ಪರೀಕ್ಷೆ ನಡೆಸಿದ್ದು, 8 ಸಕ್ರಿಯ ಸೋಂಕಿತರು ಮನೆ ಹಾಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಬೆಂಗಳೂರು(ಆ.31): ರಾಜ್ಯದಲ್ಲಿ ಐದು ತಿಂಗಳ ಬಳಿಕ ಮತ್ತೆ ಕೊರೋನಾ ಸೋಂಕಿನಿಂದ ಮೃತಪಟ್ಟವರದಿಯಾಗಿದೆ. ಕಳೆದ ಮಾ.9 ರಂದು ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟ ವರದಿಯಾಗಿತ್ತು. ಇದೀಗ ಬೆಂಗಳೂರಿನ 94 ವರ್ಷದ ವೃದ್ಧ ಮೃತಪಟ್ಟಿದ್ದಾರೆ. 

Add Asianetnews Kannada as a Preferred SourcegooglePreferred

ಕಳೆದ ಆ.26 ರಂದು ಜ್ವರದಿಂದ ಬಳಲುತ್ತಿದ್ದ ಸೋಂಕಿತ ವೃದ್ಧರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆ.29ರ ರಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. 

ಕೋವಿಡ್‌ ಉಪಕರಣ ಖರೀದಿ ಕುರಿತು ತನಿಖೆ: ಸಚಿವ ದಿನೇಶ್‌ ಗುಂಡೂರಾವ್‌

ಬುಧವಾರ ರಾಜ್ಯದಲ್ಲಿ ನಾಲ್ವರಲ್ಲಿ ಕೊರೋನಾ ಸೋಂಕು ಪ್ರಕರಣ ದೃಢಪಟ್ಟಿದೆ. ಸೋಂಕಿನಿಂದ ಮೂವರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳ ಅವಧಿಯಲ್ಲಿ 2,228 ಜನರಿಗೆ ಕೊರೋನಾ ಪರೀಕ್ಷೆ ನಡೆಸಿದ್ದು, 8 ಸಕ್ರಿಯ ಸೋಂಕಿತರು ಮನೆ ಹಾಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರು ನಗರದಲ್ಲಿ ನಾಲ್ಕು ಪ್ರಕರಣ ದಾಖಲಾಗಿದೆ. ಉಳಿದ ಜಿಲ್ಲೆಯಲ್ಲಿ ಯಾವುದೇ ಸೋಂಕು ಪ್ರಕರಣ ದಾಖಲಾಗಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.