* ಗ್ಲೆನ್ ಮ್ಯಾಕ್ಸ್ವೆಲ್-ವಿನಿ ರಾಮನ್ ವಿವಾಹ ಆಮಂತ್ರಣ ಪತ್ರಿಕೆ ವೈರಲ್* ತಮಿಳಿನಲ್ಲಿರುವ ಮದುವೆ ಆಮಂತ್ರಣ ಪತ್ರ ಸಾಮಾಜಿಕ ತಾಣದಲ್ಲಿ ಭಾರೀ ವೈರಲ್ * ಹಿಂದೂ ಸಂಪ್ರದಾಯದಂತೆ ಮಾರ್ಚ್ 27ರಂದು ಮೆಲ್ಬರ್ನ್ನಲ್ಲಿ ಮದುವೆಯಾಗಲಿದ್ದಾರೆ
ಮೆಲ್ಬರ್ನ್(ಫೆ.14): ಆಸ್ಪ್ರೇಲಿಯಾದ ತಾರಾ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ (Glenn Maxwell) ಚೆನ್ನೈನ ಬ್ರಾಹ್ಮಣ ಹುಡುಗಿ ಮಿನಿ ರಾಮನ್ (Vini Raman) ಜೊತೆ ದಾಂಪತ್ಯ ಜೀವನಕ್ಕೆ ಕಾಲಿರಿಸಲು ಸಜ್ಜಾಗಿದ್ದು, ತಮಿಳಿನಲ್ಲಿರುವ ಮದುವೆ ಆಮಂತ್ರಣ ಪತ್ರ ಸಾಮಾಜಿಕ ತಾಣದಲ್ಲಿ ಭಾರೀ ವೈರಲ್ ಆಗಿದೆ. 2 ವರ್ಷಗಳ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಅವರು ಹಿಂದೂ ಸಂಪ್ರದಾಯದಂತೆ ಮಾರ್ಚ್ 27ರಂದು ಮೆಲ್ಬರ್ನ್ನಲ್ಲಿ ಮದುವೆಯಾಗಲಿದ್ದಾರೆ ಎನ್ನಲಾಗಿದೆ.
ವಿನಿ ರಾಮನ್ ಔಷಧ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಮಾರ್ಚ್ 27ರಿಂದಲೇ 2022ನೇ ಸಾಲಿನ 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League) ಟೂರ್ನಿಯು ಆರಂಭವಾಗುವ ಸಾಧ್ಯತೆ ಇದ್ದು, ಆರಂಭಿಕ ಕೆಲ ಪಂದ್ಯಗಳಿಗೆ ಗ್ಲೆನ್ ಮ್ಯಾಕ್ಸ್ವೆಲ್ ಗೈರಾಗಬಹುದು ಎನ್ನಲಾಗಿದೆ. ಗ್ಲೆನ್ ಮ್ಯಾಕ್ಸ್ವೆಲ್ 2021ರ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಂಡದ ಅಮೋಘ ಪ್ರದರ್ಶನ ತೋರುವ ಮೂಲಕ ಮಿಂಚಿದ್ದರು.
ಇದರ ಬೆನ್ನಲ್ಲೇ 15ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಮೆಗಾ ಹರಾಜಿಗೂ (IPL Mega Auction) ಮುನ್ನ ಗ್ಲೆನ್ ಮ್ಯಾಕ್ಸ್ವೆಲ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ರೀಟೈನ್ ಮಾಡಿಕೊಂಡಿತ್ತು. ಗ್ಲೆನ್ ಮ್ಯಾಕ್ಸ್ವೆಲ್ ಜತೆಗೆ ವಿರಾಟ್ ಕೊಹ್ಲಿ (Virat Kohli) ಹಾಗೂ ಮೊಹಮ್ಮದ್ ಸಿರಾಜ್ ಅವರನ್ನು ಸಹಾ ಆರ್ಸಿಬಿ ರೀಟೈನ್ ಮಾಡಿಕೊಂಡಿದೆ.
ಟಿ20: ಲಂಕಾ ವಿರುದ್ಧ ಆಸೀಸ್ಗೆ ಸೂಪರ್ ಜಯ
ಸಿಡ್ನಿ: ಶ್ರೀಲಂಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಆತಿಥೇಯ ಆಸ್ಪ್ರೇಲಿಯಾ ಸೂಪರ್ ಓವರ್ನಲ್ಲಿ ಗೆಲುವು ಸಾಧಿಸಿದ್ದು, 5 ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಮೊದಲು ಬ್ಯಾಟ್ ಮಾಡಿದ ಆಸೀಸ್ 6 ವಿಕೆಟ್ ನಷ್ಟಕ್ಕೆ 164 ರನ್ ಗಳಿಸಿತು.
IPL Auction 2022 ಬ್ಯಾಲೆನ್ಸ್ ತಂಡ ಕಟ್ಟಿದ್ದ ಸಿಎಸ್ಕೆ, ಹೀಗಿದೆ ಹರಾಜಿನ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ಟೀಮ್!
ಜೋಸ್ ಇಂಗ್ಲಿಸ್ 48 ರನ್ ಗಳಿಸಿದರು. ಗುರಿ ಬೆನ್ನತ್ತಿದ ಲಂಕಾ 8 ವಿಕೆಟ್ ನಷ್ಟಕ್ಕೆ 168 ರನ್ ಗಳಿಸಿತು. ಕೊನೆ ಓವರಲ್ಲಿ 19 ರನ್ ಬೇಕಿದ್ದಾಗ ಲಂಕಾ 18 ರನ್ ಸಿಡಿಸಿ ಪಂದ್ಯ ಟೈ ಮಾಡಿತು. ಬಳಿಕ ಸೂಪರ್ ಓವರ್ನಲ್ಲಿ ಲಂಕಾ 1 ವಿಕೆಟ್ಗೆ 5 ರನ್ ಗಳಿಸಿದರೆ, ಆಸೀಸ್ 3 ಎಸೆತಗಳಲ್ಲಿ ಗುರಿ ತಲುಪಿತು. 3ನೇ ಪಂದ್ಯ ಮಂಗಳವಾರ ನಡೆಯಲಿದೆ.
ಲಂಕಾ ಟಿ20 ಲೀಗ್ನಲ್ಲಿ ಫಿಕ್ಸಿಂಗ್ ಯತ್ನ: ತನಿಖೆ
ಕೊಲಂಬೊ: ಇತ್ತೀಚೆಗೆ ಮುಕ್ತಾಯಗೊಂಡ ಲಂಕಾ ಪ್ರೀಮಿಯರ್ ಲೀಗ್(ಎಲ್ಪಿಎಲ್) ಟಿ20 ಟೂರ್ನಿಯಲ್ಲಿ ಮ್ಯಾಚ್ ಫಿಕ್ಸಿಂಗ್ ಪ್ರಯತ್ನ ನಡೆದಿತ್ತು ಎಂಬ ಆರೋಪದ ಬಗ್ಗೆ ಕ್ರೀಡಾ ಸಚಿವಾಲಯದ ಭ್ರಷ್ಟಾಚಾರ ನಿಗ್ರಹ ಘಟಕ ತನಿಖೆ ಆರಂಭಿಸಿದೆ.
ಘಟಕದ ಮುಖ್ಯಸ್ಥ ಜಗತ್ ಫೊನ್ಸೆಕಾ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ‘ಫಿಕ್ಸಿಂಗ್ಗಾಗಿ ತಮಗೆ ಬೇಡಿಕೆ ಇದ್ದ ಬಗ್ಗೆ ರಾಷ್ಟ್ರೀಯ ತಂಡದ ಬ್ಯಾಟರ್ ಒಬ್ಬರು ದೂರು ನೀಡಿದ್ದಾರೆ. ಉದ್ಯಮಿಯ ಮಗ ಹಾಗೂ ಆತನ ಸ್ನೇಹಿತ ಭೇಟಿ ಮಾಡಿ ಫಿಕ್ಸಿಂಗ್ ಮಾಡಲು ಬೇಡಿಕೆ ಇರಿಸಿದ ಬಗ್ಗೆ ದೂರು ಸ್ವೀಕರಿಸಿದ್ದೇವೆ. ಈ ಬಗ್ಗೆ ತನಿಖೆ ಆರಂಭಿಸಲಾಗಿದೆ’ ಎಂದಿದ್ದಾರೆ. 2ನೇ ಆವೃತ್ತಿಯ ಎಲ್ಪಿಎಲ್ ಕಳೆದ ಡಿಸೆಂಬರ್ನಲ್ಲಿ ನಡೆದಿತ್ತು.
ರಣಜಿ: ಕರ್ನಾಟಕ ತಂಡಕ್ಕೆ ಪ್ರಸಿದ್ಧ್, ಕರುಣ್ ಅಲಭ್ಯ
ಬೆಂಗಳೂರು: ರಣಜಿ ಟ್ರೋಫಿ (Ranji Trophy) ಕ್ರಿಕೆಟ್ ಟೂರ್ನಿಯ ಆಟಗಾರರ ಪಟ್ಟಿಯಲ್ಲಿ ಕರ್ನಾಟಕ ತಂಡ 2 ಬದಲಾವಣೆಗಳನ್ನು ಮಾಡಿದೆ. ವೇಗದ ಬೌಲರ್ ಪ್ರಸಿದ್ಧ್ ಕೃಷ್ಣ ಮೊದಲ ಪಂದ್ಯಕ್ಕೆ ಅಲಭ್ಯರಾಗಲಿದ್ದು, ವಿದ್ವತ್ ಕಾವೇರಪ್ಪ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
ಬ್ಯಾಟರ್ ಕರುಣ್ ನಾಯರ್ಗೆ (Karun Nair) ಕೊರೋನಾ ಸೋಂಕು ದೃಢಪಟ್ಟಿದ್ದರಿಂದ ಅವರು ತಂಡದಿಂದ ಹೊರಬಿದ್ದಿದ್ದಾರೆ. ರಾಜ್ಯ ತಂಡ ಎಲೈಟ್ ‘ಸಿ’ ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಗುಂಪು ಹಂತದ ಪಂದ್ಯಗಳನ್ನು ಚೆನ್ನೈನಲ್ಲಿ ಆಡಲಿದೆ. ಮೊದಲ ಪಂದ್ಯವು ಫೆಬ್ರವರಿ 17ರಿಂದ ರೈಲ್ವೇಸ್ ವಿರುದ್ಧ ನಡೆಯಲಿದೆ.
