ಕ್ರಿಕೆಟ್ ಬ್ಯಾಟ್ ಕೆಳಗಿಟ್ಟು ರಾಜಕೀಯದಾಟದಲ್ಲಿ ಈಜುತ್ತಿರುವ ಗೌತಮ್ ಗಂಭೀರ್ ಇದೀಗ ಡೆಲ್ಲಿ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷಗಾದಿ ಮೇಲೆ ಕಣ್ಣಿಟ್ಟಿದ್ದರು. ಆದರೆ DDCA ಅಧ್ಯಕ್ಷರಾಗಲೂ ಗಂಭೀರ್ ’ಮಹಾತ್ಯಾಗ’ ಮಾಡಬೇಕಿದೆ. ಏನದು? ಈ ಸ್ಟೋರಿ ಓದಿ.. 

ನವದೆಹಲಿ[ಡಿ.31]: ದೆಹಲಿ ಕ್ರಿಕೆಟ್‌ ಸಂಸ್ಥೆ ಚುನಾವಣಾ ಅಖಾಡ ರಂಗೇರುತ್ತಿದ್ದು, ಸಂಸ್ಥೆ ಪದಾಧಿಕಾರಿಗಳು ಚುನಾವಣೆ ನಡೆಸಲು ಫೆಬ್ರವರಿವರೆಗೂ ಕಾಲಾವಕಾಶ ನೀಡಬೇಕೆಂದು ಸಾರ್ವಜನಿಕ ತನಿಖಾಧಿಕಾರಿ ದೀಪಕ್‌ ವರ್ಮಾ ಅವರನ್ನು ಕೋರಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ದೆಹಲಿ ಕ್ರಿಕೆಟ್ ಸಂಸ್ಥೆಯಲ್ಲಿ ರಾಜಕೀಯ; ಅಧ್ಯಕ್ಷ ಸ್ಥಾನಕ್ಕೆ ರಜತ್ ಶರ್ಮಾ ರಾಜೀನಾಮೆ!

ಇದೇ ವೇಳೆ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಇಚ್ಛಿಸಿದ್ದ ಮಾಜಿ ಕ್ರಿಕೆಟಿಗ ಗೌತಮ್‌ ಗಂಭೀರ್‌ಗೆ ಹಿನ್ನಡೆಯಾಗಿದೆ. ನ್ಯಾ. ಲೋಧಾ ಸಮಿತಿ ಶಿಫಾರಸ್ಸಿನ ಪ್ರಕಾರ, ಗಂಭೀರ್‌ ಚುನಾವಣೆಯಲ್ಲಿ ಸ್ಪರ್ಧಿಸಲು ಅರ್ಹರಲ್ಲ ಎಂದು ದೀಪಕ್‌ ವರ್ಮಾ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ದೆಹಲಿ ಕ್ರಿಕೆಟ್‌ ಸಂಸ್ಥೆ ಪ್ರಧಾನ ಕಾರ್ಯದರ್ಶಿ ವಿನೋದ್‌ ತಿಹಾರ, ‘ದೆಹಲಿ ಕ್ರಿಕೆಟ್‌ಗಾಗಿ ಸೇವೆ ಸಲ್ಲಿಸಲು ಗಂಭೀರ್‌ಗೆ ಮುಕ್ತ ಅವಕಾಶವಿದೆ. ಆದರೆ ಅದಕ್ಕಾಗಿ ಅವರು ತಮ್ಮ ಸಂಸದ ಹುದ್ದೆಯನ್ನು ತ್ಯಜಿಸಬೇಕಾಗುತ್ತದೆ’ ಎಂದಿದ್ದಾರೆ.

ಡೆಲ್ಲಿ ಕ್ರಿಕೆಟ್ ವಾರ್ಷಿಕ ಸಭೆಯಲ್ಲಿ ಬಡಿದಾಟ; ಬ್ಯಾನ್‌ಗೆ ಆಗ್ರಹಿಸಿದ ಗಂಭೀರ್!

ಕಳೆದ ತಿಂಗಳಷ್ಟೇ ಡಿಡಿಸಿಎ ಅಧ್ಯಕ್ಷ ಸ್ಥಾನದಿಂದ ರಜತ್ ಶರ್ಮಾ ಕೆಳಗಿಳಿದಿದ್ದರು. 2018ರ ಜುಲೈನಲ್ಲಿ ನಡೆದ ಡಿಡಿಸಿಎ ಚುನಾವಣೆಯಲ್ಲಿ 1983ರ ಏಕದಿನ ವಿಶ್ವಕಪ್ ವಿಜೇತ ತಂಡದ ಸದಸ್ಯ ಮದನ್ ಲಾಲ್ ಅವರನ್ನು ಮಣಿಸಿ ರಜತ್ ಶರ್ಮಾ ಅಧ್ಯಕ್ಷ ಸ್ಥಾನಕ್ಕೇರಿದ್ದರು.