ರಾಯ್ಪುರದಲ್ಲಿ ನಡೆಯುತ್ತಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ, ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿರುವ ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ರಾಯ್ಪುರ: ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡದ ನಾಯಕ ತೆಂಬಾ ಬವುಮಾ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. 3 ಪಂದ್ಯಗಳ ಸರಣಿಯಲ್ಲಿ ಈಗಾಗಲೇ ಭಾರತ ಮೊದಲ ಪಂದ್ಯವನ್ನು ಜಯಿಸುವ ಮೂಲಕ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಇಲ್ಲಿನ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಮತ್ತೊಮ್ಮೆ ಭಾರತ ಟಾಸ್ ಸೋಲು ಅನುಭವಿಸಿದೆ. 2023ರ ಏಕದಿನ ವಿಶ್ವಕಪ್ ಫೈನಲ್‌ನಿಂದ ಭಾರತ ಇದುವರೆಗೂ ಆಡಿದ ಎಲ್ಲಾ 20 ಏಕದಿನ ಪಂದ್ಯದಲ್ಲೂ ಟಾಸ್ ಗೆಲ್ಲಲು ವಿಫಲವಾಗಿದೆ. ಇದು ಅಚ್ಚರಿಯೆನಿಸಿದರೂ ಸತ್ಯ. ಇನ್ನು ಭಾರತ ತಂಡದಲ್ಲಿ ಈ ಪಂದ್ಯಕ್ಕೆ ಯಾವುದೇ ಬದಲಾವಣೆಗಳಾಗಿಲ್ಲ.

Scroll to load tweet…

ದಕ್ಷಿಣ ಆಫ್ರಿಕಾ ತಂಡದಲ್ಲಿ ಮೂರು ಮಹತ್ವದ ಬದಲಾವಣೆ:

ಮೊದಲ ಪಂದ್ಯದ ಸೋಲಿನ ಬಳಿಕ ಎಚ್ಚೆತ್ತುಕೊಂಡಿರುವ ದಕ್ಷಿಣ ಆಫ್ರಿಕಾ ತಂಡವು ಎರಡನೇ ಪಂದ್ಯದಲ್ಲಿ ಪ್ರಮುಖ 3 ಬದಲಾವಣೆಗಳೊಂದಿಗೆ ಕಣಕ್ಕಿಳಿದಿದೆ. ತೆಂಬಾ ಬವುಮಾ ತಂಡ ಕೂಡಿಕೊಂಡಿದ್ದು, ಇದರ ಜತೆಗೆ ಅನುಭವಿ ಸ್ಪಿನ್ನರ್ ಕೇಶವ್ ಮಹರಾಜ್ ಹಾಗೂ ವೇಗಿ ಲುಂಗಿ ಎಂಗಿಡಿ ಕೂಡಾ ಹರಿಣಗಳ ಆಡುವ ಹನ್ನೊಂದರ ಬಳಗ ಕೂಡಿಕೊಂಡಿದ್ದಾರೆ.

ಉಭಯ ತಂಡಗಳು ಹೀಗಿವೆ ನೋಡಿ

ಭಾರತ: ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಋತುರಾಜ್ ಗಾಯಕ್ವಾಡ್, ವಾಷಿಂಗ್ಟನ್ ಸುಂದರ್, ಕೆ ಎಲ್ ರಾಹುಲ್(ನಾಯಕ&ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಅರ್ಶದೀಪ್ ಸಿಂಗ್, ಪ್ರಸಿದ್ದ್ ಕೃಷ್ಣ.

ದಕ್ಷಿಣ ಆಫ್ರಿಕಾ: ಕ್ವಿಂಟನ್ ಡಿ ಕಾಕ್(ವಿಕೆಟ್ ಕೀಪರ್), ಏಯ್ಡನ್ ಮಾರ್ಕ್‌ರಮ್, ತೆಂಬಾ ಬವುಮಾ(ನಾಯಕ), ಮ್ಯಾಥ್ಯೂ ಬ್ರೆಟ್‌ಕೀ, ಟೋರ್ನಿ ಡಿ ಜಾರ್ಝಿ, ಡೆವಾಲ್ಡ್ ಬ್ರೆವೀಸ್, ಮಾರ್ಕೊ ಯಾನ್ಸನ್, ಕಾರ್ಬಿನ್ ಬೋಷ್, ಕೇಶವ್ ಮಹರಾಜ್, ನಂದ್ರೆ ಬರ್ಗರ್, ಲುಂಗಿ ಎಂಗಿಡಿ.