ಟೀಂ ಇಂಡಿಯಾ ವೇಗಿಗಳು ಡೇ & ನೈಟ್ ಟೆಸ್ಟ್ ಪಂದ್ಯದಲ್ಲಿ ವಿಕೆಟ್‌ಗಳ ಬೇಟೆ ಮುಂದುವರೆಸಿದ್ದು, ಬಾಂಗ್ಲಾ ತಂಡದ ಮೊತ್ತ 40 ರನ್‌ಗಳಾಗುವಷ್ಟರಲ್ಲಿ ಅರ್ಧದಷ್ಟು ಬ್ಯಾಟ್ಸ್‌ಮನ್‌ಗಳನ್ನು ಪೆವಿಲಿಯನ್‌ಗೆ ಅಟ್ಟಿದ್ದಾರೆ. ಇದೀಗ ಬಾಂಗ್ಲಾ 38 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ..

ಕೋಲ್ಕತಾ[ನ.22]: ಟೀಂ ಇಂಡಿಯಾ ವೇಗಿಗಳ ಮಾರಕ ದಾಳಿಗೆ ತತ್ತರಿಸಿರುವ ಬಾಂಗ್ಲಾದೇಶ ತಂಡ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಕೇವಲ 12 ಓವರ್ ಮುಗಿಯುವುದರೊಳಗಾಗಿ 38 ರನ್’ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಉಮೇಶ್ ಯಾದವ್ ಒಂದೇ ಓವರ್’ನಲ್ಲಿ 2 ವಿಕೆಟ್ ಪಡೆದರೆ, ಇಶಾಂತ್ ಹಾಗೂ ಶಮಿ ತಲಾ ಒಂದೊಂದು ವಿಕೆಟ್ ಪಡೆದಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
Scroll to load tweet…

ಡೇ & ನೈಟ್ ಟೆಸ್ಟ್: ಟಾಸ್ ಗೆದ್ದ ಬಾಂಗ್ಲಾದೇಶ ಬ್ಯಾಟಿಂಗ್ ಆಯ್ಕೆ

ಹೌದು, ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಬಾಂಗ್ಲಾದೇಶ ಆರಂಭಿಕ ಆಘಾತ ಅನುಭವಿಸಿದೆ. 7ನೇ ಓವರ್’ನಲ್ಲಿ ಇಶಾಂತ್ ಶರ್ಮಾ ಭಾರತಕ್ಕೆ ಮೊದಲ ಯಶಸ್ಸು ತಂದಿತ್ತರು. 4 ರನ್ ಬಾರಿಸಿದ್ದ ಇಮ್ರಲ್ ಕಯೀಸ್ ಅವರನ್ನು ಎಲ್ ಬಿ ಬಲೆಗೆ ಕೆಡುವುದಕ್ಕೆ ಇಶಾಂತ್ ಯಶಸ್ವಿಯಾದರು. ಇದಾದ ಬಳಿಕ 11ನೇ ಓವರ್ ದಾಳಿಗಿಳಿದ ಉಮೇಶ್ ಯಾದವ್ ಒಂದೇ ಓವರ್’ನಲ್ಲಿ 2 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾದರು. ಮೊದಲ ಎಸೆತದಲ್ಲಿ ನಾಯಕ ಮೊಮಿ​ನುಲ್‌ ಹಕ್‌ ಬ್ಯಾಟ್ ಸವರಿದ ಚೆಂಡು ರೋಹಿತ್ ಶರ್ಮಾ ಹಿಡಿದ ಅಧ್ಭುತ ಕ್ಯಾಚ್’ಗೆ ಪೆವಿಲಿಯನ್ ಸೇರಬೇಕಾಯಿತು. ಆ ನಂತರ ಮೂರನೇ ಎಸೆತದಲ್ಲಿ ಮೊಹಮ್ಮದ್ ಮಿಥುನ್ ಅವರನ್ನು ಕ್ಲೀನ್ ಬೌಲ್ಡ್ ಮಾಡುವ ಮೂಲಕ ಪ್ರವಾಸಿಗರಿಗೆ ಎರಡೆರಡು ಆಘಾತ ನೀಡಿದರು. ಇದಾದ ಬಳಿಕ ಮೊಹಮ್ಮದ್ ಶಮಿ ಬಾಂಗ್ಲಾ ಅನುಭವಿ ಕ್ರಿಕೆಟಿಗ ಮುಷ್ಫೀಕುರ್ ರಹೀಮ್ ಅವರನ್ನು ಬೌಲ್ಡ್ ಮಾಡುವ ಮೂಲಕ ಮತ್ತೊಂದು ಹೊಡೆತ ನೀಡಿದರು. ಇನ್ನು 15ನೇ ಓವರ್‌ನಲ್ಲಿ ಶಾದಮನ್ ಇಸ್ಲಾಂ ಅವರನ್ನು ಬಲಿ ಪಡೆಯುವಲ್ಲಿ ಉಮೇಶ್ ಯಶಸ್ವಿಯಾಗಿದ್ದಾರೆ.

ನೀವೂ ಸಂಜು ಬ್ಯಾಟಿಂಗ್ ಪರೀಕ್ಷಿಸುತ್ತಿದ್ದಿರೋ ಇಲ್ಲಾ ಹೃದಯವನ್ನೋ..?

ಚೊಚ್ಚಲ ಹಗಲು-ರಾತ್ರಿ ಟೆಸ್ಟ್ ಪಂದ್ಯವನ್ನು ಕಣ್ತುಂಬಿಕೊಳ್ಳಲು ಈಡನ್ ಗಾರ್ಡನ್ಸ್ ಮೈದಾನದಲ್ಲಿ ಜಮೆಯಾಗಿದ್ದು, ಟೀಂ ಇಂಡಿಯಾಗೆ ಮತ್ತಷ್ಟು ಹುರುಪು ತುಂಬುತ್ತಿದ್ದಾರೆ. ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಟೀಂ ಇಂಡಿಯಾ ದಿಗ್ಗಜರಾದ ಸಚಿನ್ ತೆಂಡುಲ್ಕರ್, ಸೌರವ್ ಗಂಗೂಲಿ ಸೇರಿದಂತೆ ಹಲವು ಪ್ರಮುಖರು ಪಂದ್ಯವನ್ನು ವೀಕ್ಷಿಸುತ್ತಿದ್ದಾರೆ.