RCB ನೂತನ ನಾಯಕನ ಘೋಷಣೆ ಬೆನ್ನಲ್ಲೇ ಮಹತ್ವದ ಅಪ್ಡೇಟ್ ಕೊಟ್ಟ ವಿರಾಟ್ ಕೊಹ್ಲಿ!
2025ರ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ರಜತ್ ಪಾಟೀದಾರ್ ಮುನ್ನಡೆಸಲಿದ್ದಾರೆ. ಮಾಜಿ ನಾಯಕ ವಿರಾಟ್ ಕೊಹ್ಲಿ ಪಾಟೀದಾರ್ಗೆ ಶುಭ ಹಾರೈಸಿದ್ದಾರೆ ಮತ್ತು ತಂಡದ ಬೆಂಬಲವನ್ನು ಭರವಸೆ ನೀಡಿದ್ದಾರೆ. ಪಾಟೀದಾರ್ಗೆ ಮಧ್ಯಪ್ರದೇಶ ತಂಡವನ್ನು ಮುನ್ನಡೆಸಿದ ಅನುಭವವಿದ್ದು, ಆರ್ಸಿಬಿಗೆ ಚೊಚ್ಚಲ ಐಪಿಎಲ್ ಕಪ್ ಗೆಲ್ಲಿಸಿಕೊಡುವ ಜವಾಬ್ದಾರಿ ಹೊತ್ತಿದ್ದಾರೆ.

ಬೆಂಗಳೂರು: ಮುಂಬರುವ 2025 ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮುನ್ನಡೆಸುವವರು ಯಾರು ಎನ್ನುವ ಕುತೂಹಲಕ್ಕೆ ಇಂದು ತೆರೆ ಬಿದ್ದಿದೆ. ಮಧ್ಯಪ್ರದೇಶ ಮೂಲದ ಪ್ರತಿಭಾನ್ವಿತ ಬ್ಯಾಟರ್ ರಜತ್ ಪಾಟೀದಾರ್ ಆರ್ಸಿಬಿ ತಂಡದ ನೂತನ ನಾಯಕರಾಗಿ ನೇಮಕವಾಗಿದ್ದಾರೆ. ಇದರ ಬೆನ್ನಲ್ಲೇ ಆರ್ಸಿಬಿ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಮಹತ್ವದ ಅಪ್ಡೇಟ್ ನೀಡಿದ್ದಾರೆ.
ಹೌದು, ಈ ಕುರಿತಂತೆ ಆರ್ಸಿಬಿ ಫ್ರಾಂಚೈಸಿ ತಮ್ಮ ಅಧಿಕೃತ ಸೋಷಿಯಲ್ ಮೀಡಿಯಾ ಅಕೌಂಟ್ಗಳಿಂದ ವಿಡಿಯೋ ಬಿಡುಗಡೆ ಮಾಡಿದೆ. ಇದರಲ್ಲಿ ವಿರಾಟ್ ಕೊಹ್ಲಿ,'ರಜತ್ ಪಾಟೀದಾರ್ ಆರ್ಸಿಬಿ ತಂಡದ ನಾಯಕರಾಗಿದ್ದಾರೆ. ನಾಯಕರಾದ ರಜತ್ ಅವರಿಗೆ ಮೊದಲಿಗೆ ನಾನು ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ನೀವು ಆರ್ಸಿಬಿ ತಂಡದ ಜತೆಗೆ ಆಡಿದ ಆಟ ಬೆಳೆದುಬಂದ ರೀತಿ ನಿಜಕ್ಕೂ ಆರ್ಸಿಬಿ ಅಭಿಮಾನಿಗಳ ಹೃದಯದಲ್ಲಿ ಸ್ಥಾನ ಸಿಗುವಂತೆ ಮಾಡಿದೆ. ನೀವು ಆರ್ಸಿಬಿ ತಂಡದ ನಾಯಕರಾಗುವುದಕ್ಕೆ ಅರ್ಹವಾದ ವ್ಯಕ್ತಿ' ಎಂದು ಹೇಳಿದ್ದಾರೆ.
ಆರ್ಸಿಬಿ ತಂಡಕ್ಕೆ ಹೊಸ ಕ್ಯಾಪ್ಟನ್ ಘೋಷಣೆ! ಇನ್ನಾದ್ರೂ ಐಪಿಎಲ್ ಕಪ್ ಗೆಲ್ಲುತ್ತಾ ಬೆಂಗಳೂರು?
𝐊𝐢𝐧𝐠 𝐊𝐨𝐡𝐥𝐢 𝐀𝐩𝐩𝐫𝐨𝐯𝐞𝐬! 💌
— Royal Challengers Bengaluru (@RCBTweets) February 13, 2025
“Myself and the other team members will be right behind you, Rajat”: Virat Kohli
“The way you have grown in this franchise and the way you have performed, you’ve made a place in the hearts of all RCB fans. This is very well deserved.”… pic.twitter.com/dgjDLm8ZCN
ಮಾತು ಮುಂದುವರೆಸಿದ ಕೊಹ್ಲಿ, 'ನಾನು ಸೇರಿದಂತೆ ಇಡೀ ತಂಡ ನಿಮ್ಮ ಜತೆಗೆ ನಿಲ್ಲಲಿದೆ. ಖಂಡಿತವಾಗಿಯೂ ನಾಯಕರಾದ ಮೇಲೆ ನಿಮ್ಮ ಜವಾಬ್ದಾರಿ ಹೆಚ್ಚಿರಲಿದೆ. ನಾನು ಅದನ್ನು ಈ ಹಿಂದೆ ನಿಭಾಯಿಸಿದ್ದೇನೆ. ಇದು ನಿಮಗೆ ಸಿಕ್ಕ ದೊಡ್ಡ ಗೌರವ ಎಂದು ಭಾವಿಸುತ್ತೇನೆ. ನಾನು ರಜತ್ ಅವರು ಐಪಿಎಲ್, ಭಾರತ ಹಾಗೂ ಅವರ ರಾಜ್ಯ ತಂಡಕ್ಕಾಗಿ ಆಡುತ್ತಾ ಬಂದಿದ್ದನ್ನು ನೋಡಿದ್ದೇನೆ. ಅವರಿಗೆ ಒಳ್ಳೆಯದಾಗಲಿ. ಹಾಗೂ ಇದೇ ವೇಳೆ ಅಭಿಮಾನಿಗಳು ಕೂಡಾ ರಜತ್ ಪಾಟೀದಾರ್ಗೆ ಸಂಪೂರ್ಣವಾದ ಬೆಂಬಲವನ್ನು ನೀಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಏಷ್ಯಾದಲ್ಲಿ ಹಾಗೂ ಇಂಗ್ಲೆಂಡ್ ವಿರುದ್ಧ ಅಪರೂಪದ ದಾಖಲೆ ಬರೆದ ವಿರಾಟ್ ಕೊಹ್ಲಿ!
ರಜತ್ ಪಾಟೀದಾರ್ಗೆ ಈ ಹಿಂದೆ ಮಧ್ಯಪ್ರದೇಶ ಕ್ರಿಕೆಟ್ ತಂಡವನ್ನು ನಾಯಕನಾಗಿ ಮುನ್ನಡೆಸಿದ ಅನುಭವವಿದೆ. ಇದೀಗ ಇದೇ ಮೊದಲ ಬಾರಿಗೆ ಪಾಟೀದಾರ್ ಐಪಿಎಲ್ನಲ್ಲಿ ನಾಯಕರಾಗಿ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. ಆರ್ಸಿಬಿಗೆ ಚೊಚ್ಚಲ ಕಪ್ ಗೆಲ್ಲಿಸಿಕೊಡಬೇಕಾದ ಗುರುತರವಾದ ಜವಾಬ್ದಾರಿ ರಜತ್ ಪಾಟೀದಾರ್ ಅವರ ಮೇಲಿದೆ.
ಚೊಚ್ಚಲ ಆವೃತ್ತಿಯ ಐಪಿಎಲ್ ನಿಂದಲೂ ಟೂರ್ನಿಯಲ್ಲಿ ಪಾಲ್ಗೊಳ್ಳುತ್ತಾ ಬಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು 17 ಆವೃತ್ತಿಗಳ ಪೈಕಿ ಒಮ್ಮೆಯೂ ಕಪ್ ಗೆಲ್ಲಲು ಸಾಧ್ಯವಾಗಿಲ್ಲ. ಮೂರು ಬಾರಿ ಫೈನಲ್ ಪ್ರವೇಶಿಸಿದ್ದೇ ಇಲ್ಲಿಯವರೆಗಿನ ಶ್ರೇಷ್ಠ ಸಾಧನೆ ಎನಿಸಿಕೊಂಡಿದೆ. ಇನ್ನು ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಆರ್ಸಿಬಿ ಪ್ಲೇ ಆಫ್ ಪ್ರವೇಶಿಸಿತ್ತಾದರೂ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ತಾನ ರಾಯಲ್ಸ್ ಎದುರು ಮುಗ್ಗರಿಸುವ ಮೂಲಕ ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು.
ಈ ಹಿಂದಿನ ಆರ್ಸಿಬಿ ನಾಯಕರು ಯಾರ್ಯಾರು?
2008- ರಾಹುಲ್ ದ್ರಾವಿಡ್
2009- ಕೆವಿನ್ ಪೀಟರ್ಸನ್
2009-10- ಅನಿಲ್ ಕುಂಬ್ಳೆ
2011-12- ಡೇನಿಯಲ್ ವೆಟೋರಿ
2017- ಶೇನ್ ವಾಟ್ಸನ್(ಹಂಗಾಮಿ)
2013-21- ವಿರಾಟ್ ಕೊಹ್ಲಿ
2022-24- ಫಾಫ್ ಡು ಪ್ಲೆಸಿಸ್
2025- ರಜತ್ ಪಾಟೀದಾರ್