ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಪಿಂಕ್ ಬಾಲ್ ಟೆಸ್ಟ್ ಪಂದ್ಯದ ಮೊದಲ ದಿನವೇ ಅಭಿಮಾನಿಗಳ ಸಂಭ್ರಮ ಡಬಲ್ ಮಾಡಿದೆ. ಒಂದೆಡೆ ದಿಗ್ಗಜ ಮಾಜಿ ಕ್ರಿಕೆಟಿಗರು ಮೈದಾನದಲ್ಲಿ ಹಾಜರಿದ್ದರೆ, ಮತ್ತೊಂದೆಡೆ ಹಾಲಿ ಕ್ರಿಕೆಟಿಗರು ನವ ಉತ್ಸಾಹದಲ್ಲಿದ್ದರು. ಮೊದಲ ದಿನದ ಹೋರಾಟದಲ್ಲಿ ಭಾರತದ ಬೌಲಿಂಗ್ ದಾಳಿಗೆ ಬಾಂಗ್ಲಾದೇಶ ತತ್ತರಿಸಿದೆ. 

ಕೋಲ್ಕತಾ(ನ.22): ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಐತಿಹಾಸಿಕ ಪಿಂಕ್ ಬಾಲ್ ಟೆಸ್ಟ್‌ಗೆ ಅದ್ದೂರಿ ಚಾಲನೆ ಸಿಕ್ಕಿದೆ. ಬಾಂಗ್ಲಾದೇಶ ಪ್ರಧಾನಿ ಶೇಕ್ ಹಸಿನಾ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್, ಬಿಸಿಸಿಐ ನೂತನ ಅಧ್ಯಕ್ಷ ಸೌರವ್ ಗಂಗೂಲಿ ಸೇರಿದಂತೆ ಹಲವು ಗಣ್ಯರು ಪಿಂಕ್ ಬಾಲ್ ಟೆಸ್ಟ್ ಪಂದ್ಯಕ್ಕೆ ಸಾಕ್ಷಿಯಾಗಿದ್ದಾರೆ. ಈ ಮಹತ್ವದ ಪಂದ್ಯದ ಮೊದಲ ದಿನವೇ ಭಾರತಕ್ಕೆ ಮೇಲಗೈ ಸಿಕ್ಕಿದೆ. ಬಾಂಗ್ಲಾ ತಂಡ ಪ್ರಮುಖ 6 ವಿಕೆಟ್ ಕಬಳಿಸುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಗಿದೆ. 

Add Asianetnews Kannada as a Preferred SourcegooglePreferred

ಇದನ್ನೂ ಓದಿ: ವಿಂಡೀಸ್ ಸರಣಿಗೆ ಭಾರತ ತಂಡ ಪ್ರಕಟ; ಇಬ್ಬರು ಕನ್ನಡಿಗರಿಗೆ ಚಾನ್ಸ್!

ಇದೇ ಮೊದಲ ಬಾರಿಗೆ ಆಯೋಜಿಸಿರುವ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿಗೆ ಟಾಸ್ ಗೆಲ್ಲೋ ಅದೃಷ್ಠ ಇರಲಿಲ್ಲ. ಬಾಂಗ್ಲಾ ತಂಡ ಬ್ಯಾಟಿಂಗ್ ಆಯ್ಕೆಮಾಡಿಕೊಂಡು, ಬೃಹತ್ ಮೊತ್ತ ಪೇರಿಸೋ ಲೆಕ್ಕಾಚಾರದಲ್ಲಿತ್ತು. ಆದರೆ ಟೀಂ ಇಂಡಿಯಾ ವೇಗಿಗಳ ದಾಳಿಗೆ ಸಿಲುಕಿದ ಬಾಂಗ್ಲಾ, ವಿಕೆಟ್ ಉಳಿಸಿಕೊಳ್ಳು ಪರದಾಡಿತು.

ಇದನ್ನೂ ಓದಿ: 762 ರನ್ ಟಾರ್ಗೆಟ್; ಗುರಿ ಬೆನ್ನಟ್ಟಿದ ತಂಡ ಕೇವಲ 7 ರನ್‌ಗೆ ಆಲೌಟ್!

ಇಮ್ರುಲ್ ಕೈಸ್ 4 ರನ್ ಸಿಡಿಸಿದರೆ, ನಾಯಕ ಮೊಮಿನಲ್ ಹಕ್, ಮೊಹಮ್ಮದ್ ಮಿಥುನ್, ಮುಶ್ಫಿಕರ್ ರಹೀಮ್ ಡೌಕೌಟ್ ಆದರು. ಆರಂಭಿಕ ಶದ್ಮನ್ ಇಸ್ಲಾಂ ತಿರುಗೇಟು ನೀಡೋ ಪ್ರಯತ್ನ ಮಾಡಿದರು. ಆದರೆ ಶದ್ಮನ್ ಹೋರಾಟ 29 ರನ್‌ಗಳಿಗೆ ಅಂತ್ಯವಾಯಿತು. ಲಿಟ್ಟನ್ ದಾಸ್ ಅಜೇಯ 24 ರನ್ ಸಿಡಿಸಿ ಕ್ರೀಸ್ ಕಾಯ್ದುಕೊಂಡಿದ್ದಾರೆ. ಭೋಜನ ವಿರಾಮದ ವೇಳೆ ಬಾಂಗ್ಲಾದೇಶ 6 ವಿಕೆಟ್ ನಷ್ಟಕ್ಕೆ 73 ರನ್ ಸಿಡಿಸಿದೆ.

ಭಾರತದ ಪರ ಉಮೇಶ್ ಯಾದವ್ 3, ಇಶಾಂತ್ ಶರ್ಮಾ 2 ಹಾಗೂ ಮೊಹಮ್ಮದ್ ಶಮಿ 1 ವಿಕೆಟ್ ಕಬಳಿಸಿದರು.