Asianet Suvarna News Asianet Suvarna News

INDvSL: ಅಂತಿಮ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ

ಭಾರತ ಹಾಗೂ ಶ್ರೀಲಂಕಾ ನಡುವಿನ 3ನೇ ಹಾಗೂ ಅಂತಿಮ ಪಂದ್ಯ ಅಭಿಮಾನಿಗಳ ಕುತೂಹಲ ಇಮ್ಮಡಿಗೊಳಿಸಿದೆ. 3ನೇ ಪಂದ್ಯ ಗೆದ್ದು ಸರಣಿ ಗೆಲುವಿಗೆ ಭಾರತ ಹೊಂಚು ಹಾಕಿದೆ. ಈಗಾಗಲೇ ಟಾಸ್ ಪ್ರಕ್ರಿಯೆ ಮುಗಿದಿದ್ದು ಶ್ರೀಲಂಕಾ ಟಾಸ್ ಗೆದ್ದುಕೊಂಡಿದೆ.

Pune t20 Srilanka won toss elected to field first against Team India
Author
Bengaluru, First Published Jan 10, 2020, 6:35 PM IST

ಪುಣೆ(ಜ.10): ಭಾರತ ಹಾಗೂ ಶ್ರೀಲಂಕಾ ನಡುವಿನ 3 ಪಂದ್ಯಗಳ ಟ20 ಸರಣಿ ಅಂತಿಮ ಘಟ್ಟ ತಲುಪಿದೆ. ಪುಣೆಯಲ್ಲಿ ನಡೆಯುತ್ತಿರುವ ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಭಾರತ ತಂಡದಲ್ಲಿ 3 ಬದಲಾವಣೆ ಮಾಡಲಾಗಿದೆ. ಮನೀಶ್ ಪಾಂಡೆ, ಸಂಜು ಸಾಮ್ಸನ್ ಹಾಗೂ ಯಜುವೇಂದ್ರ ಚಹಾಲ್ ತಂಡ ಸೇರಿಕೊಂಡಿದ್ದಾರೆ.ಶಿವಂ ದುಬೆ , ಕುಲ್ದೀಪ್ ಹಾಗೂ ರಿಷಪ್ ಪಂತ್ ತಂಡದಿಂದ ಹೊರಗುಳಿದಿದ್ದಾರೆ. ಹಲವು ದಿನಗಳ ಬಳಿಕ ಮನೀಶ್ ಪಾಂಡೆ ಹಾಗೂ ಸಂಜು ಸಾಮ್ಸನ್‌ಗೆ ಅವಕಾಶ ನೀಡಲಾಗಿದೆ.  

ಶ್ರೀಲಂಕಾ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು, ಸಂದಕನ ಹಾಗೂ ಎಂಜೋಲೋ ಮ್ಯಾಥ್ಯೂಸ್ ತಂಡ ಸೇರಿಕೊಂಡಿದ್ದಾರೆ. 

ಇದನ್ನೂ ಓದಿ: ಧೋನಿ ನಿವೃತ್ತಿ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ರವಿಶಾಸ್ತ್ರಿ..!.

ಶ್ರೀಲಂಕಾ ನಡುವಿನ ಮೊದಲ ಟಿ20 ಪಂದ್ಯ ಮಳೆಯಿಂದ ರದ್ದಾಗಿತ್ತು. 2ನೇ ಪಂದ್ಯದಲ್ಲಿ ಟೀಂ ಇಂಡಿಯಾ 7 ವಿಕೆಟ್ ಗೆಲುವು ಸಾಧಿಸಿತು. ಈ ಮೂಲಕ ಸರಣಿಯಲ್ಲಿ 1-0 ಅಂತರದ ಮುನ್ನಡೆ ಕಾಯ್ದುಕೊಂಡಿದೆ. ಇದೀಗ ಅಂತಿಮ ಪಂದ್ಯ ಗೆದ್ದು ಸರಣಿ ಕೈವಶ ಮಾಡಲು ಮುಂದಾಗಿದೆ. ಇತ್ತ ಲಂಕಾ ಸರಣಿ ಉಳಿಸಿಕೊಳ್ಳಲು ಸಜ್ಜಾಗಿದೆ.
 

Follow Us:
Download App:
  • android
  • ios