ಭಾರತ ಕ್ರಿಕೆಟ್ ತಂಡದ ಥ್ರೋಡೌನ್ ತಜ್ಞ ರಾಘವೇಂದ್ರ ಅವರನ್ನು ನಾಗ್ಪುರ ಹೋಟೆಲ್‌ಗೆ ಪೊಲೀಸರು ತಡೆದ ಘಟನೆ ನಡೆಯಿತು. ಮಾಧ್ಯಮದವರ ಹಸ್ತಕ್ಷೇಪದ ನಂತರ ಬಿಡುಗಡೆ ಮಾಡಲಾಯಿತು. ಭಾರತ ತಂಡ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಸಜ್ಜಾಗಿದೆ. 

ನಾಗ್ಪುರ: ಥ್ರೋಡೌನ್‌ ತಜ್ಞ (ಸಹಾಯಕ ಸಿಬ್ಬಂದಿ)ರಾಗಿ ಕಳೆದ 15 ವರ್ಷದಿಂದ ಭಾರತ ಕ್ರಿಕೆಟ್‌ ತಂಡದೊಂದಿಗೆ ಇರುವ ಕರ್ನಾಟಕದ ರಾಘವೇಂದ್ರ (ರಘು) ಅವರನ್ನು ಅಭಿಮಾನಿಗಳು ಎಂದುಕೊಂಡು ತಂಡದ ಹೋಟೆಲ್‌ವೊಳಗೆ ಬಿಡಲು ಪೊಲೀಸರು ನಿರಾಕರಿಸಿದ ಘಟನೆ ಸೋಮವಾರ ನಡೆದಿದೆ. 

Add Asianetnews Kannada as a Preferred SourcegooglePreferred

ಇಲ್ಲಿನ ರ್‍ಯಾಡಿಸನ್‌ ಬ್ಲೂ ಹೋಟೆಲ್‌ನಲ್ಲಿ ಭಾರತ ತಂಡ ಉಳಿದುಕೊಂಡಿತ್ತು, ರಘು ಹೋಟೆಲ್‌ನೊಳಕ್ಕೆ ಹೋಗಲು ಮುಂದಾದಾಗ ಮೂವರು ಪೊಲೀಸರು ಅವರನ್ನು ತಡೆದರು. ಆಗ ಅಲ್ಲೇ ಇದ್ದ ಮಾಧ್ಯಮವರು, ‘ಅವರು ಭಾರತ ತಂಡದ ಕೋಚ್‌. ತಂಡದ ಸದಸ್ಯ. ಆಟಗಾರರಿದ್ದ ಬಸ್‌ನಿಂದಲೇ ಕೆಳಗಿಳಿದರು’ ಎಂದು ಕೂಗಿದರು. ಆ ಬಳಿಕ ರಘುರನ್ನು ಪೊಲೀಸರು ಬಿಟ್ಟರು. ಸದಾ ಹಸನ್ಮುಖಿಯಾಗಿರುವ ರಘು, ನಗುತ್ತಲೇ ಈ ಸನ್ನಿವೇಶವನ್ನು ಎದುರಿಸಿದರು. ಈ ಘಟನೆಯ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್‌ ಆಗಿದೆ.

Scroll to load tweet…

ಇಂಗ್ಲೆಂಡ್ ಎದುರಿನ 5 ಪಂದ್ಯಗಳ ಟಿ20 ಸರಣಿಯನ್ನು 4-1 ಅಂತರದಲ್ಲಿ ಗೆದ್ದು ಬೀಗಿರುವ ಭಾರತ, ಇದೀಗ ಆಂಗ್ಲರ ಎದುರು ಮೂರು ಪಂದ್ಯಗಳ ಏಕದಿನ ಸರಣಿಯನ್ನಾಡಲು ಸಜ್ಜಾಗಿದೆ. ಮೊದಲ ಪಂದ್ಯ ಫೆಬ್ರವರಿ 6ಕ್ಕೆ ನಾಗ್ಪುರದಲ್ಲಿ ನಡೆಯಲಿದೆ. 2ನೇ ಏಕದಿನ ಫೆಬ್ರವರಿ 9ಕ್ಕೆ ಕಟಕ್‌ನಲ್ಲೂ, 3ನೇ ಏಕದಿನ ಫೆಬ್ರವರಿ 12ಕ್ಕೆ ಅಹಮದಾಬಾದ್‌ನಲ್ಲೂ ನಡೆಯಲಿವೆ.

ಭಾರತ vs ಇಂಗ್ಲೆಂಡ್ ಏಕದಿನ ಸರಣಿ: ಸಂಪೂರ್ಣ ವೇಳಾಪಟ್ಟಿ, ಎಲ್ಲಿ ನೋಡಬೇಕು? ಎಷ್ಟು ಗಂಟೆಯಿಂದ ಪಂದ್ಯ ಆರಂಭ?

ಏಕದಿನ ಸರಣಿಗೆ ಭಾರತ ತಂಡ ಹೀಗಿದೆ:

ರೋಹಿತ್ ಶರ್ಮಾ(ನಾಯಕ), ಶುಭ್‌ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ ಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಭ್ ಪಂತ್, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.

ಸಂಜು ಕೈಬೆರಳು ಮುರಿತ: 5-6 ವಾರ ಕ್ರಿಕೆಟಿಂದ ದೂರ

ನವದೆಹಲಿ: ಭಾರತ ತಂಡದ ಬ್ಯಾಟರ್‌ ಸಂಜು ಸ್ಯಾಮ್ಸನ್‌, ಇಂಗ್ಲೆಂಡ್‌ ವಿರುದ್ಧದ 5ನೇ ಟಿ20 ಪಂದ್ಯದ ವೇಳೆ ಕೈಬೆರಳಿನ ಗಾಯಕ್ಕೆ ತುತ್ತಾಗಿದ್ದು, ಕನಿಷ್ಠ 5-6 ವಾರ ಕಾಲ ಕ್ರಿಕೆಟ್‌ನಿಂದ ದೂರ ಉಳಿಯಲಿದ್ದಾರೆ. ರಣಜಿ ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಕೇರಳ ಪರ ಆಡಬೇಕಿದ್ದ ಸಂಜು, ಗಾಯದಿಂದಾಗಿ ಆಯ್ಕೆಗೆ ಲಭ್ಯರಿರುವುದಿಲ್ಲ ಎಂದು ತಿಳಿದುಬಂದಿದೆ.

ವಿರಾಟ್ ಕೊಹ್ಲಿ ಮತ್ತೆ ಕ್ಯಾಪ್ಟನ್ ಆಗ್ತಾರಾ? ಕುತೂಹಲ ಮೂಡಿಸಿದ ಆರ್‌ಸಿಬಿ ಫ್ರಾಂಚೈಸಿ

ಐಪಿಎಲ್‌ ಆರಂಭಗೊಳ್ಳುವ ವೇಳೆಗೆ ಸ್ಯಾಮ್ಸನ್‌ ಫಿಟ್‌ ಆಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ವಾಂಖೇಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದ ವೇಳೆ ಇಂಗ್ಲೆಂಡ್‌ ವೇಗಿ ಜೋಫ್ರಾ ಆರ್ಚರ್‌ರ ಎಸೆತದಲ್ಲಿ ಸ್ಯಾಮ್ಸನ್‌ರ ಬಲಗೈನ ತೋರು ಬೆರಳು ಮುರಿಯಿತು. ಸಂಜು ಸದ್ಯದಲ್ಲೇ ಬೆಂಗಳೂರಲ್ಲಿರುವ ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿಗೆ ಆಗಮಿಸಿ ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ.