Asianet Suvarna News Asianet Suvarna News

ಗುಡ್‌ ನ್ಯೂಸ್ ಕೊಟ್ಟ ಬಿಸಿಸಿಐ: ರಾಹುಲ್ ದ್ರಾವಿಡ್ ಟೀಂ ಇಂಡಿಯಾ ಹೆಡ್‌ ಕೋಚ್ ಆಗಿ ಮುಂದುವರಿಕೆ..!

ರಾಹುಲ್ ದ್ರಾವಿಡ್ 2021ರ ನವೆಂಬರ್‌ನಲ್ಲಿ ಎರಡು ವರ್ಷಗಳ ಅವಧಿಗೆ ಟೀಂ ಇಂಡಿಯಾ ಹೆಡ್ ಕೋಚ್ ಆಗಿ ನೇಮಕವಾಗಿದ್ದರು. ಈ ಒಪ್ಪಂದಾವಧಿ 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯವರೆಗೆ ನಿಗದಿಯಾಗಿತ್ತು. ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ಟೀಂ ಇಂಡಿಯಾ ಮೂರು ಮಾದರಿಯ ಕ್ರಿಕೆಟ್‌ನಲ್ಲೂ ನಂ.1 ಸ್ಥಾನದಲ್ಲಿ ಭದ್ರವಾಗಿದೆ.

Rahul Dravid to continue as Team India head coach kvn
Author
First Published Nov 29, 2023, 3:47 PM IST

ಮುಂಬೈ(ನ.29): ಐಸಿಸಿ ಏಕದಿನ ವಿಶ್ವಕಪ್ ಫೈನಲ್ ಸೋತು ನಿರಾಸೆಯಲ್ಲಿರುವ ಟೀಂ ಇಂಡಿಯಾ ಅಭಿಮಾನಿಗಳಿಗೆ ಬಿಸಿಸಿಐ ಇದೀಗ ಗುಡ್‌ ನ್ಯೂಸ್ ನೀಡಿದೆ. ಮುಂಬರುವ ಟಿ20 ವಿಶ್ವಕಪ್ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ರಾಹುಲ್ ದ್ರಾವಿಡ್ ಅವರನ್ನೇ ಟೀಂ ಇಂಡಿಯಾ ಹೆಡ್ ಕೋಚ್ ಆಗಿ ಮುಂದುವರೆಸುವ ತೀರ್ಮಾನವನ್ನು ತೆಗೆದುಕೊಂಡಿದೆ. ಬಿಸಿಸಿಐ ಎಲ್ಲಿಯವರೆಗೆ ರಾಹುಲ್ ದ್ರಾವಿಡ್ ಟೀಂ ಇಂಡಿಯಾ ಹೆಡ್ ಕೋಚ್ ಆಗಿರಲಿದ್ದಾರೆ ಎನ್ನುವ ಕುರಿತಂತೆ ಸ್ಪಷ್ಟನೆ ನೀಡಿಲ್ಲವಾದರೂ, ಕನಿಷ್ಠ 2024ರ ಜೂನ್‌ನಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯವರೆಗೆ ರಾಹುಲ್ ದ್ರಾವಿಡ್ ಹೆಡ್‌ ಕೋಚ್ ಆಗಿರಲಿದ್ದಾರೆ ಎನ್ನಲಾಗುತ್ತಿದೆ.

ರಾಹುಲ್ ದ್ರಾವಿಡ್ 2021ರ ನವೆಂಬರ್‌ನಲ್ಲಿ ಎರಡು ವರ್ಷಗಳ ಅವಧಿಗೆ ಟೀಂ ಇಂಡಿಯಾ ಹೆಡ್ ಕೋಚ್ ಆಗಿ ನೇಮಕವಾಗಿದ್ದರು. ಈ ಒಪ್ಪಂದಾವಧಿ 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯವರೆಗೆ ನಿಗದಿಯಾಗಿತ್ತು. ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ಟೀಂ ಇಂಡಿಯಾ ಮೂರು ಮಾದರಿಯ ಕ್ರಿಕೆಟ್‌ನಲ್ಲೂ ನಂ.1 ಸ್ಥಾನದಲ್ಲಿ ಭದ್ರವಾಗಿದೆ. ಕಳೆದ ಟಿ20 ವಿಶ್ವಕಪ್‌ನಲ್ಲಿ ದ್ರಾವಿಡ್ ಮಾರ್ಗದರ್ಶನದ ಟೀಂ ಇಂಡಿಯಾ ಸೆಮೀಸ್‌ನಲ್ಲಿ ಮುಗ್ಗರಿಸಿದರೆ, ಇತ್ತೀಚೆಗಷ್ಟೇ ತವರಿನಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಅಜೇಯವಾಗಿ ಫೈನಲ್ ಪ್ರವೇಶಿಸಿತ್ತು. ಆದರೆ ಫೈನಲ್‌ನಲ್ಲಿ ಆಸ್ಟ್ರೇಲಿಯಾ ಎದುರು ಸೋಲು ಕಾಣುವ ಮೂಲಕ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು, 

ಮುಂಬೈನಲ್ಲಿ ಪಾಂಡ್ಯ ಆಗಮನದಿಂದ ಅಂತರ್ಯುದ್ಧ..! ಕ್ಯಾಪ್ಟನ್ ಆಗೋ ಬುಮ್ರಾ ಕನಸು ನುಚ್ಚುನೂರಾಯ್ತಾ..?

ಮುಂದಿನ ತಿಂಗಳು 10ರಿಂದ ದಕ್ಷಿಣ ಆಫ್ರಿಕಾ ಪ್ರವಾಸದೊಂದಿಗೆ ಟೀಂ ಇಂಡಿಯಾ ಜತೆಗಿನ ಎರಡನೇ ಹಂತದ ದ್ರಾವಿಡ್ ಕೋಚ್ ಪಯಣ ಆರಂಭವಾಗಲಿದೆ. ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಟೀಂ ಇಂಡಿಯಾ ಮೂರು ಟಿ20, ಮೂರು ಏಕದಿನ ಹಾಗೂ ಎರಡು ಪಂದ್ಯಗಳ ಟಿ20 ಸರಣಿಯನ್ನಾಡಲಿದೆ. ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್‌ ಅಗರ್‌ಕರ್, ರಾಹುಲ್ ದ್ರಾವಿಡ್ 2024ರವರೆಗೆ ಟೀಂ ಇಂಡಿಯಾ ಹೆಡ್‌ಕೋಚ್ ಆಗಿರಲಿ ಎಂದು ಬಯಸಿದ್ದರಿಂದಾಗಿ ಬಿಸಿಸಿಐ ಈ ನಿರ್ಧಾರ ಕೈಗೊಂಡಿದೆ.

ಮ್ಯಾಕ್‌ವೆಲ್‌ ಅಬ್ಬರದ ಎದುರು 223 ರನ್‌ ಬಾರಿಸಿಯೂ ಸೋಲು ಕಂಡ ಭಾರತ

ಈ ಕುರಿತಂತೆ ಪ್ರತಿಕ್ರಿಯಿಸಿರುವ ರಾಹುಲ್ ದ್ರಾವಿಡ್, "ಈ ಅವಧಿಯಲ್ಲಿ ನನ್ನ ಮೇಲೆ ನಂಬಿಕೆಯಿಟ್ಟಿದ್ದಕ್ಕೆ ಹಾಗೂ ನನ್ನ ದೃಷ್ಟಿಕೋನಕ್ಕೆ ಸಮ್ಮತಿ ಸೂಚಿಸಿದ್ದಕ್ಕೆ ಬಿಸಿಸಿಐ ಹಾಗೂ ಪದಾಧಿಕಾರಿಗಳಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಈ ಹುದ್ದೆಯೂ ಸಾಕಷ್ಟು ಮನೆಯಿಂದ ಹೊರಗೆ ಇರುವಂತೆ ಮಾಡುತ್ತದೆ, ನನಗಾಗಿ ಈ ತ್ಯಾಗವನ್ನು ಮಾಡಿದ ನನ್ನ ಕುಟುಂಬಕ್ಕೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ತೆರೆಮರೆಯಲ್ಲಿ ಅವರು ನೀಡುತ್ತಿರುವ ಸಹಕಾರವು ಅನನ್ಯವಾದದ್ದು. ವಿಶ್ವಕಪ್ ನಂತರ ನಾವು ಹೊಸ ಸವಾಲಿಗೆ ಸಜ್ಜಾಗಿದ್ದೇವೆ ಎಂದು ರಾಹುಲ್ ದ್ರಾವಿಡ್ ಹೇಳಿದ್ದಾರೆ.

Follow Us:
Download App:
  • android
  • ios