ರಣಜಿ ಟ್ರೋಫಿ ಫೈನಲ್ನಲ್ಲಿ ಪ್ರಶಸ್ತಿಗಾಗಿ ಬಂಗಾಳ ಹಾಗೂ ಸೌರಾಷ್ಟ್ರ ತಂಡಗಳು ಕಾದಾಡುತ್ತಿವೆ. ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿರುವ ಸೌರಾಷ್ಟ್ರ ದಿಟ್ಟ ಆರಂಭವನ್ನು ಪಡೆದಿದೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ.
ರಾಜ್ಕೋಟ್(ಮಾ.09): 2019-20ರ ರಣಜಿ ಟ್ರೋಫಿ ಫೈನಲ್ ಪಂದ್ಯ ಸೋಮವಾರದಿಂದ ಇಲ್ಲಿ ಆರಂಭವಾಗಿದ್ದು, ಬಂಗಾಳ ಎದುರು ಟಾಸ್ ಗೆದ್ದ ಸೌರಾಷ್ಟ್ರ ಬ್ಯಾಟಿಂಗ್ ಆಯ್ದುಕೊಂಡಿದೆ. 14 ಓವರ್ ಮುಕ್ತಾಯದ ವೇಳೆಗೆ ಸೌರಾಷ್ಟ್ರ ವಿಕೆಟ್ ನಷ್ಟವಿಲ್ಲದೇ 39 ರನ್ ಗಳಿಸಿದೆ.
ರಣಜಿ ಟ್ರೋಫಿ: ಕರ್ನಾಟಕ ಮಣಿಸಿ ಫೈನಲ್ಗೆ ಲಗ್ಗೆಯಿಟ್ಟ ಬಂಗಾಳ
1989-90ರಲ್ಲಿ ಕೊನೆ ಬಾರಿಗೆ ಪ್ರಶಸ್ತಿ ಜಯಿಸಿದ್ದ ಬಂಗಾಳ, ಸೆಮಿಫೈನಲ್ನಲ್ಲಿ ಕರ್ನಾಟಕ ವಿರುದ್ಧ ತೋರಿದ ಪ್ರದರ್ಶನವನ್ನೇ ಮುಂದುವರಿಸುವ ವಿಶ್ವಾಸದಲ್ಲಿದೆ. ಮತ್ತೊಂದೆಡೆ 2013-14ರಿಂದ ಈ ವರೆಗೂ 4 ಬಾರಿ ಫೈನಲ್ ಪ್ರವೇಶಿಸಿರುವ ಸೌರಾಷ್ಟ್ರ, ಈ ಬಾರಿ ಟ್ರೋಫಿ ಎತ್ತಿಹಿಡಿಯಲು ಕಾತರಿಸುತ್ತಿದೆ.
ಚೇತೇಶ್ವರ್ ಪೂಜಾರ ಸೌರಾಷ್ಟ್ರದ ಬಲ ಹೆಚ್ಚಿಸಲಿದ್ದು, ವೃದ್ಧಿಮಾನ್ ಸಾಹ ಸೇರ್ಪಡೆ ಬಂಗಾಳದ ಆತ್ಮವಿಶ್ವಾಸ ವೃದ್ಧಿಸಿದೆ. ಸೌರಾಷ್ಟ್ರ ನಾಯಕ ಜಯದೇವ್ ಉನಾದ್ಕತ್ ಸೆಮಿಫೈನಲ್ನಲ್ಲಿ 7 ವಿಕೆಟ್ ಕಬಳಿಸಿ ಮಿಂಚಿದ್ದರು. ತಂಡ ಅವರ ಮೇಲೆ ಹೆಚ್ಚಿನ ನಿರೀಕ್ಷೆ ಇರಿಸಿದೆ. ಬಂಗಾಳ ತನ್ನ ಹಿರಿಯ ಬ್ಯಾಟ್ಸ್ಮನ್ಗಳಾದ ಮನೋಜ್ ತಿವಾರಿ ಹಾಗೂ ಅನುಸ್ತೂಪ್ ಮಜುಂದಾರ್ರನ್ನು ನೆಚ್ಚಿಕೊಂಡಿದೆ.
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್
