ರಣಜಿ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡವು ಭರ್ಜರಿಯಾಗಿಯೇ ಆರಂಭಿಸಿದೆ. ಬಂಗಾಳ ಎದುರು ಕರ್ನಾಟಕ ತಂಡ ಡಿಆರ್‌ಎಸ್ ಮೂಲಕ ಮೊದಲ ವಿಕೆಟ್ ಕಬಳಿಸಿದೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ.

ಕೋಲ್ಕತಾ(ಫೆ.29): ಕರ್ನಾಟಕ- ಬಂಗಾಳ ನಡುವಿನ ರಣಜಿ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಕರ್ನಾಟಕ ಫೀಲ್ಡಿಂಗ್ ಆಯ್ದುಕೊಂಡಿದೆ. ಇನ್ನು ಇದೇ ಮೊದಲ ಬಾರಿಗೆ ರಣಜಿ ಟೂರ್ನಿಯಲ್ಲಿ ಡಿಆರ್‌ಎಸ್ ಬಳಸುತ್ತಿದ್ದು, ಕರ್ನಾಟಕ ಡಿಆರ್‌ಎಸ್‌ನ ಮೂಲಕ ಮೊದಲ ವಿಕೆಟ್ ಗಳಿಸಿದೆ.

Add Asianetnews Kannada as a Preferred SourcegooglePreferred

ರಣಜಿ ಟ್ರೋಫಿ: ಸೆಮಿಫೈನಲ್‌ ಫೈಟ್‌ಗೆ ಸಜ್ಜಾದ ಕರ್ನಾಟಕ

ಇಲ್ಲಿನ ಈಡನ್‌ಗಾರ್ಡನ್ ಮೈದಾನದಲ್ಲಿ ಆರಂಭವಾದ ಪಂದ್ಯದಲ್ಲಿ ಟಾಸ್ ಗೆದ್ದ ಕರುಣ್ ನಾಯರ್ ಫೀಲ್ಡಿಂಗ್ ಆಯ್ದುಕೊಂಡರು. ರಾಜ್ಯ ತಂಡ 7 ಜನ ಬ್ಯಾಟ್ಸ್‌ಮನ್ ಹಾಗೂ ನಾಲ್ಕು ಜನ ಬೌಲರ್‌ಗಳೊಂದಿಗೆ ಕಣಕ್ಕಿಳಿದಿದೆ. ಇದೇ ಮೊದಲ ಬಾರಿಗೆ ಡಿಆರ್‌ಎಸ್ ಬಳಸುತ್ತಿದ್ದು, ಮಿಥುನ್ ಮೊದಲ ವಿಕೆಟ್ ಕಬಳಿಸಿದ್ದಾರೆ. ಮೂರನೇ ಓವರ್‌ನಲ್ಲಿ ಅಭಿಮನ್ಯು ಮಿಥುನ್ ಬೌಲಿಂಗ್‌ನಲ್ಲಿ ಅಭಿಷೇಕ್ ರಾಮನ್ ಬ್ಯಾಟ್ ಸವರಿದ ಚೆಂಡು ಶರತ್ ಕೈಸೇರಿತು. ಆದರೆ ಅಂಪೈರ್ ಔಟ್ ನೀಡಲಿಲ್ಲ. ಬಳಿಕ ನಾಯಕ ಕರುಣ್ ನಾಯರ್ ಡಿಆರ್‌ಎಸ್ ಮೊರೆ ಹೋದರು. ಮೂರನೇ ಅಂಪೈರ್ ಔಟ್ ತೀರ್ಮಾನವಿತ್ತರು. ಈ ಮೂಲಕ ರಣಜಿ ಕ್ರಿಕೆಟ್ ಇತಿಹಾಸದಲ್ಲಿ ಮೊದಲ ಡಿಆರ್‌ಎಸ್ ಬಳಸಿ ಯಶಸ್ವಿಯಾದ ತಂಡ ಎನ್ನುವ ಗೌರವಕ್ಕೆ ಕರ್ನಾಟಕ ಭಾಜನವಾಗಿದೆ. 

Scroll to load tweet…

ಕರ್ನಾಟಕ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಜೆ ಸುಚಿತ್ ಬದಲಿಗೆ ಕೆ.ಎಲ್ ರಾಹುಲ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇನ್ನುಳಿದಂತೆ ಬಲಿಷ್ಠ ಏಳು ಜನ ಬ್ಯಾಟ್ಸ್‌ಮನ್‌ಗಳು, ಮೂವರು ವೇಗಿಗಳು ಹಾಗೂ ಒಬ್ಬರು ತಜ್ಞ ಸ್ಪಿನ್ನರ್‌ನೊಂದಿಗೆ ಕರ್ನಾಟಕ ಕಣಕ್ಕಿಳಿದಿದೆ.

ಕರ್ನಾಟಕ ತಂಡ ಹೀಗಿದೆ: 

Scroll to load tweet…