ಮುಷ್ತಾಕ್ ಅಲಿ: ಟಾಸ್ ಗೆದ್ದ ಬಿಹಾರ ಬ್ಯಾಟಿಂಗ್ ಆಯ್ಕೆ
ಸಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಕರ್ನಾಟಕ ವಿರುದ್ಧ ಟಾಸ್ ಗೆದ್ದ ಬಿಹಾರ ಬ್ಯಾಟಿಂಗ್ ಆಯ್ದುಕೊಂಡಿದೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ..
ವಿಶಾಖಪಟ್ಟಣಂ[ನ.15]: ಸಯ್ಯದ್ ಮುಷ್ತಾಕ್ ಅಲಿ ರಾಷ್ಟ್ರೀಯ ಟಿ20 ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ಕರ್ನಾಟಕ ತಂಡ ಬಿಹಾರ ತಂಡವನ್ನು ಎದುರಿಸಲಿದ್ದು, ಟಾಸ್ ಗೆದ್ದ ಬಿಹಾರ ಬ್ಯಾಟಿಂಗ್ ಆಯ್ದುಕೊಂಡಿದೆ.
‘ಎ’ ಗುಂಪಿನಲ್ಲಿರುವ ಕರ್ನಾಟಕ 4 ಪಂದ್ಯಗಳನ್ನಾಡಿದ್ದು 3 ಗೆಲುವು, 1 ಸೋಲಿನೊಂದಿಗೆ 12 ಅಂಕಗಳಿಸಿದ್ದು ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಈ ಪಂದ್ಯದಲ್ಲಿ ಗೆದ್ದರೆ ತಂಡ ಮತ್ತೆ ಅಗ್ರಸ್ಥಾನಕ್ಕೆ ಮರಳಲಿದ್ದು, ಸೂಪರ್ ಲೀಗ್ ಹಂತಕ್ಕೆ ಪ್ರವೇಶ ಪಡೆಯುವುದು ಬಹುತೇಕ ಖಚಿತವಾಗಲಿದೆ.
ಮುಷ್ತಾಕ್ ಅಲಿ ಟ್ರೋಫಿ: ರಾಜ್ಯ ತಂಡಕ್ಕೆ ರಾಹುಲ್ ಸೇರ್ಪಡೆ
ಸದ್ಯ ಬರೋಡಾ 5 ಪಂದ್ಯಗಳಲ್ಲಿ 4 ಗೆಲುವುಗಳೊಂದಿಗೆ 16 ಅಂಕ ಗಳಿಸಿ ಅಗ್ರಸ್ಥಾನದಲ್ಲಿದೆ. ಪಟ್ಟಿಯಲ್ಲಿ ಅಗ್ರ 2 ಸ್ಥಾನ ಪಡೆಯುವ ತಂಡಗಳು ಸೂಪರ್ ಲೀಗ್ ಹಂತಕ್ಕೇರಲಿವೆ. ಮತ್ತೊಂದೆಡೆ ಬಿಹಾರ ಆಡಿರುವ 4 ಪಂದ್ಯಗಳಲ್ಲೂ ಸೋಲುಂಡಿದ್ದು, ಕರ್ನಾಟಕವೇ ಗೆಲ್ಲುವ ನೆಚ್ಚಿನ ತಂಡ ಎನಿಸಿಕೊಂಡಿದೆ.
ಕಳೆದೆರಡು ಪಂದ್ಯದಲ್ಲಿ ಕರ್ನಾಟಕ ಬ್ಯಾಟ್ಸ್ಮನ್ಗಳಾದ ದೇವದತ್ ಪಡಿಕ್ಕಲ್ ಹಾಗೂ ನಾಯಕ ಮನೀಶ್ ಪಾಂಡೆ ಅಜೇಯ ಶತಕ ಸಿಡಿಸಿದ್ದರು. ಇಂದು ಯಾರು ಮೂರಂಕಿ ಮೊತ್ತ ದಾಖಲಿಸುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.
ಪಂದ್ಯ ಆರಂಭ: ಮಧ್ಯಾಹ್ನ 1ಕ್ಕೆ
ನೇರ ಪ್ರಸಾರ: ಹಾಟ್ ಸ್ಟಾರ್