ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಸಂಘಟಿತ ಪ್ರದರ್ಶನ ತೋರಿದ ಕರ್ನಾಟಕ ತಂಡ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿದೆ. ಬೌಲಿಂಗ್‌ನಲ್ಲಿ ಮಿಥುನ್ 5 ವಿಕೆಟ್ ಪಡೆದರೆ, ರಾಹುಲ್ ಹಾಗೂ ಪಡಿಕ್ಕಲ್ ಅರ್ಧಶತಕ ಸಿಡಿಸಿ ಮಿಂಚಿದರು. ಈ ಕುರಿತಾದ ವರದಿ ಇಲ್ಲಿದೆ ನೋಡಿ..

ಸೂರತ್[ನ.29]: ಕೆ.ಎಲ್ ರಾಹುಲ್, ದೇವದತ್ ಪಡಿಕ್ಕಲ್ ಸಿಡಿಲಬ್ಬರದ ಅರ್ಧಶತಕಗಳ ನೆರವಿನಿಂದ ಕರ್ನಾಟಕ ತಂಡವು ಹರ್ಯಾಣ ತಂಡವನ್ನು 8 ವಿಕೆಟ್ ವಿಕೆಟ್’ಗಳಿಂದ ಮಣಿಸಿ ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿದೆ. ಈ ಸೋಲಿನೊಂದಿಗೆ ಹರ್ಯಾಣ ಗೆಲುವಿನ ನಾಗಾಲೋಟಕ್ಕೆ ತೆರೆಬಿದ್ದಿದೆ. 195 ರನ್‌ಗಳ ಗುರಿಯನ್ನು ಇನ್ನೂ 5 ಓವರ್ ಬಾಕಿ ಇರುವಂತೆಯೇ ಗೆಲುವು ದಾಖಲಿಸುವ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಮನೀಶ್ ಪಾಂಡೆ ಪಡೆ ಹೊಸ ದಾಖಲೆ ಬರೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
Scroll to load tweet…
Scroll to load tweet…

ಮುಷ್ತಾಕ್ ಅಲಿ ಟ್ರೋಫಿ: ಮಿಥುನ್ ಹ್ಯಾಟ್ರಿಕ್, ಆದರೂ ಕರ್ನಾಟಕಕ್ಕೆ ಕಠಿಣ ಗುರಿ

Scroll to load tweet…

ಹರ್ಯಾಣ ನೀಡಿದ್ದ 195 ರನ್’ಗಳ ಗುರಿ ಕರ್ನಾಟಕದ ಪಾಲಿಗೆ ಸವಾಲಾಗಲೇ ಇಲ್ಲ. ಕೆ.ಎಲ್. ರಾಹುಲ್[66] ಹಾಗೂ ದೇವದತ್ ಪಡಿಕ್ಕಲ್ ಮೊದಲ ವಿಕೆಟ್’ಗೆ 9.3 ಓವರ್’ಗಳಲ್ಲಿ 125 ರನ್’ಗಳ ಜತೆಯಾಟವಾಡುವ ಮೂಲಕ ಭರ್ಜರಿ ಆರಂಭ ಒದಗಿಸಿದರು. ರಾಹುಲ್-ಪಡಿಕ್ಕಲ್ ಜೋಡಿ ಹರ್ಯಾಣ ಬೌಲರ್’ಗಳನ್ನು ಇನ್ನಿಲ್ಲದಂತೆ ಕಾಡಿದರು. ರಾಹುಲ್ 31 ಎಸೆತಗಳಲ್ಲಿ 4 ಬೌಂಡರಿ ಹಾಗೂ 6 ಮನಮೋಹಕ ಸಿಕ್ಸರ್’ಗಳ ನೆರವಿನಿಂದ 66 ರನ್ ಬಾರಿಸಿ ಜಯಂತ್ ಯಾದವ್’ಗೆ ವಿಕೆಟ್ ಒಪ್ಪಿಸಿದರು. ಆ ಬಳಿಕ ಮಯಾಂಕ್ ಕೂಡಿಕೊಂಡ ದೇವದತ್ ಮಿಂಚಿನ ಬ್ಯಾಟಿಂಗ್ ಮುಂದುವರೆಸಿದರು. ವೃತ್ತಿಜೀವನದ ಅದ್ಭುತ ಫಾರ್ಮ್’ನಲ್ಲಿರುವ ದೇವದತ್ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು. ಆ ಬಳಿಕವೂ ಸ್ಫೋಟಕ ಬ್ಯಾಟಿಂಗ್ ಮುಂದುವರೆಸಿದರು. ಅಂತಿಮವಾಗಿ ಪಡಿಕ್ಕಲ್ 42 ಎಸೆತಗಳಲ್ಲಿ 11 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 87 ರನ್ ಬಾರಿಸಿ ಹರ್ಷಲ್ ಪಟೇಲ್’ಗೆ ವಿಕೆಟ್ ಒಪ್ಪಿಸಿದರು. ಅಂತಿಮವಾಗಿ ಮನೀಶ್ ಪಾಂಡೆ, ಮಯಾಂಕ್ ಅಗರ್’ವಾಲ್ ತಂಡವನ್ನು ಇನ್ನೂ 5 ಓವರ್ ಬಾಕಿ ಇರುವಂತೆಯೇ ಗೆಲುವಿನ ದಡ ಸೇರಿಸಿದರು.

ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ ಮಾಡಲಿಳಿದ ಹರ್ಯಾಣ ಚೈತನ್ಯ ಬಿಷ್ಣೋಯಿ[55], ಹಿಮಾಂಶು ರಾಣಾ[61] ಅರ್ಧಶತಕಗಳ ನೆರವಿನಿಂದ 194 ರನ್ ಬಾರಿಸಿತ್ತು. ಅಭಿಮನ್ಯು ಮಿಥುನ್ ಹ್ಯಾಟ್ರಿಕ್ ಸಹಿತ ಒಂದೇ ಓವರ್’ನಲ್ಲಿ 5 ವಿಕೆಟ್ ಪಡೆದು ಮಿಂಚಿದರು.

Scroll to load tweet…