Asianet Suvarna News Asianet Suvarna News

ರೈತರ ಪ್ರತಿಭಟನೆಗೆ ಕೈ ಜೋಡಿಸಿದ ಟೀಂ ಇಂಡಿಯಾ ಕ್ರಿಕೆಟಿಗ..!

ಕೇಂದ್ರ ಸರ್ಕಾರದ ವಿರುದ್ಧ ರೈತರ ಪ್ರತಿಭಟನೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದೀಗ ರೈತರ ಪ್ರತಿಭಟನೆಗೆ ಟೀಂ ಇಂಡಿಯಾ ಆಟಗಾರ ಕೈ ಜೋಡಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ 

Team Indian Cricket Mandeep Singh joins farmers protest at Singhu Border kvn
Author
Chandigarh, First Published Dec 9, 2020, 1:35 PM IST

ಚಂಡೀಘಡ(ಡಿ.09): ಕೇಂದ್ರ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ವಿವಾದಾತ್ಮಕ ಕೃಷಿ ಕಾಯ್ದೆಯ ವಿರುದ್ದ ದೇಶಾದ್ಯಂತ ಪ್ರತಿಭಟನೆಗಳು ಜೋರಾಗಿದೆ. ಇದೀಗ ಟೀಂ ಇಂಡಿಯಾ ಹಾಗೂ ಪಂಜಾಬ್ ರಣಜಿ ತಂಡದ ನಾಯಕ ಮನ್ದೀಪ್ ಸಿಂಗ್ ರೈತರ ಪ್ರತಿಭಟನೆಗೆ ಕೈಜೋಡಿಸಿದ ಮೊದಲ ಸಕ್ರಿಯ ಕ್ರಿಕೆಟಿಗ ಎನಿಸಿದ್ದಾರೆ.

ಮನ್ದೀಪ್ ಸಿಂಗ್ ಹಾಗೂ ಅವರ ಹಿರಿಯ ಸಹೋದರ ಹರ್ವೀಂದರ್ ಸಿಂಗ್ ಜೊತೆಗೂಡಿ ಸಿಂಗೂ ಗಡಿ ಭಾಗಕ್ಕೆ ಭೇಟಿ ನೀಡಿ ರೈತರ ಪ್ರತಿಭಟನೆಗೆ ಸಾಥ್ ನೀಡಿದ್ದಾರೆ. 28 ವರ್ಷದ ಮನ್ದೀಪ್ ಸಿಂಗ್ ಈ ಸಮಸ್ಯೆ ಆದಷ್ಟು ಬೇಗ ಬಗೆಹರಿಯುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೈ ಕೊರೆಯುವ ಚಳಿಯ ನಡುವೆಯೂ ಹಿರಿಯ ನಾಗರೀಕರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಘಟನೆ ನೋಡಿದರೆ ಹೃದಯ ಕಂಪಿಸುತ್ತದೆ. ಹಲವರ ಪಾಲಿಗೆ ಟ್ರ್ಯಾಕ್ಟರ್‌ಗಳೇ ಮನೆಗಳಾಗಿವೆ. ಆದರೆ ಅವರು ಅದರಲ್ಲೇ ಖುಷಿಯಿಂದ ಉತ್ಸಾಹಭರಿತವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ಉತ್ಸಾಹಕ್ಕೆ ನನ್ನದೊಂದು ಸಲ್ಯೂಟ್ ಎಂದು ಮನ್ದೀಪ್ ಸಿಂಗ್ ಹೇಳಿದ್ದಾರೆ.

ಇಡೀ ಜಗತ್ತೇ ರೈತರ ಕೆಲಸವನ್ನು ಅವಲಂಭಿಸಿದೆ. ಈ ಗೊಂದಲ ಆದಷ್ಟು ಬೇಗ ಬಗೆಹರಿಯುವುದು ಒಳ್ಳೆಯದ್ದು ಎಂದು ಟೈಮ್ಸ್‌ ಅಫ್‌ ಇಂಡಿಯಾಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ರೈತರ ಪ್ರತಿಭಟನೆಗೆ ಕೈ ಜೋಡಿಸಿ ಮೋದಿ ವಿರುದ್ದ ಗುಡುಗಿದ ಯುವಿ ತಂದೆ..!

ಒಂದು ವೇಳೆ ನನ್ನ ತಂದೆ ಜೀವಂತವಾಗಿದ್ದರೆ, ಅವರು ಸಹಾ ಈ ರೈತರ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದರು. ನಾನು ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಕ್ಕೆ ತಮ್ಮ ತಂದೆ ಕೊಂಚವಾದರು ಹೆಮ್ಮೆ ಪಡುತ್ತಾರೆ. ಸರ್ಕಾರ ರೈತರ ಬೇಡಿಕೆಗಳನ್ನು ಆದಷ್ಟು ಬೇಗ ಈಡೇರಿಸಲಿ, ಈ ಸಮಸ್ಯೆ ಬಗೆಹರಿಸಲಿ ಎಂದು ಮನ್ದೀಪ್ ಸಿಂಗ್ ಹೇಳಿದ್ದಾರೆ.

13ನೇ ಆವೃತ್ತಿಯ ಐಪಿಎಲ್ ಟೂರ್ನಿ ನಡೆಯುವ ವೇಳೆ ಮನ್ದೀಪ್ ಸಿಂಗ್ ತಂದೆ ಕೊನೆಯಸಿರೆಳೆದಿದ್ದರು. ಕಿಂಗ್ಸ್‌ ಇಲೆವನ್ ಪಂಜಾಬ್ ತಂಡದ ಆಟಗಾರನಾಗಿರುವ ಮನ್ದೀಪ್ ಸಿಂಗ್ ತಂದೆಯ ಸಾವಿನ ಸುದ್ದಿ ತಿಳಿದರೂ ಯುಎಇಯಿಂದ ತವರಿಗೆ ವಾಪಾಸಾಗಿರಲಿಲ್ಲ. ಇದಾದ ಬಳಿಕ ಕೋಲ್ಕತ ನೈಟ್‌ ರೈಡರ್ಸ್‌ ವಿರುದ್ದ 66 ರನ್ ಬಾರಿಸುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.
 

Follow Us:
Download App:
  • android
  • ios